Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಅರಣ್ಯ ಒತ್ತುವರಿ ವಿಚಾರದಲ್ಲಿ ಸರ್ಕಾರದ ಶೂನ್ಯ ಸಹಿಷ್ಣತೆ: 3 ಎಕರೆಗಿಂತ ಹೆಚ್ಚು ಒತ್ತುವರಿಯಾದ ಭೂಮಿ ಶೀಘ್ರ ತೆರವು

by Bengaluru Wire Desk
May 26, 2026
in News Wire
Reading Time: 1 min read
0

ಉಡುಪಿ, ಮೇ.26 www.bengaluruwire.com: ರಾಜ್ಯ ಸರ್ಕಾರ ಅರಣ್ಯ ಭೂಮಿ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ (Zero Tolerance) ನೀತಿಯನ್ನು ಅಳವಡಿಸಿಕೊಂಡಿದ್ದು, 2015ರ ನಂತರ ಆಗಿರುವ ಎಲ್ಲ ಅರಣ್ಯ ಭೂಮಿ ಒತ್ತುವರಿಗಳನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಸೋಮವಾರ ಉಡುಪಿಯಲ್ಲಿ ನಡೆದ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ ಯಾವುದೇ ಅರಣ್ಯ ಒತ್ತುವರಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು. 2015ಕ್ಕೂ ಮೊದಲು ರಾಜ್ಯದಲ್ಲಿ ಒಟ್ಟು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಪ್ರಮಾಣ ಪತ್ರ ಸಲ್ಲಿಸಲಾಗಿದೆ. 

ಆದರೆ, ಜೀವನೋಪಾಯಕ್ಕಾಗಿ ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿರುವ ಬಡ ಕುಟುಂಬಗಳಿಗೆ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಮಾಡದಿರಲು ನಿರ್ಣಯಿಸಲಾಗಿದೆ. ಹೀಗಾಗಿ, 3 ಎಕರೆಗಿಂತ ಹೆಚ್ಚಿನ ಒತ್ತುವರಿಯನ್ನು ತಕ್ಷಣವೇ ತೆರವು ಮಾಡಲು ಕ್ರಮ ಕೈಗೊಳ್ಳಿ ಎಂದು ಸಚಿವರು ಆದೇಶಿಸಿದ್ದಾರೆ.

​ಪ್ರಮುಖ ಮುಖ್ಯಾಂಶಗಳು (Key Highlights)

​ಡೀಮ್ಡ್ ಅರಣ್ಯ ಸರ್ವೆ: ಉಡುಪಿ ಜಿಲ್ಲೆಯಲ್ಲಿ 1224 ಸರ್ವೆ ನಂಬರ್‌ಗಳಲ್ಲಿರುವ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದ ಸರ್ವೆ ಕಾರ್ಯವನ್ನು ಹೆಚ್ಚುವರಿ ಮೋಜಿಣಿದಾರರನ್ನು ನಿಯೋಜಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ.

​ವ್ಯವಸ್ಥಾಪನಾಧಿಕಾರಿ ನೇಮಕ: ಮಂಗಳೂರು ವೃತ್ತದಲ್ಲಿ ಸೆಕ್ಷನ್ 4 ಪ್ರಕ್ರಿಯೆ ಮುಗಿದು ಸೆಕ್ಷನ್ 17ರ ಅಡಿಯಲ್ಲಿ ಅಧಿಸೂಚಿತ ಅರಣ್ಯ ಎಂದು ಘೋಷಿಸಲು ಬಾಕಿ ಇರುವ 6144.99 ಹೆಕ್ಟೇರ್ ಪ್ರದೇಶದ (55 ಪ್ರಕರಣಗಳು) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ವ್ಯವಸ್ಥಾಪನಾಧಿಕಾರಿ ನೇಮಕ.

​ಫಿಷ್ ಮಿಲ್ ವಿರುದ್ಧ ಕ್ರಮ: ಮಾಲಿನ್ಯಕಾರಕ ಫಿಷ್ ಮಿಲ್ (Fish Mill) ಕಾರ್ಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಹಾಗೂ ನದಿ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಲು ನಿರ್ದೇಶನ.

​ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಕೆ

​ಪುತ್ತೂರು, ಹೆಬ್ರಿ, ಸುಳ್ಯ, ಉಪ್ಪಿನಂಗಡಿ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು. ರಾಜ್ಯವು 6,395 ಆನೆಗಳು ಹಾಗೂ 563 ಹುಲಿಗಳೊಂದಿಗೆ ದೇಶದಲ್ಲೇ ಮುಂಚೂಣಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷ ತಗ್ಗಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎಂದರು.

​ಇದೇ ವೇಳೆ, ಶಂಕರನಾರಾಯಣ ವಲಯದ ಹೆನ್ನಬಯಲು ಸೆಕ್ಷನ್‌ನಲ್ಲಿ ಚಿರತೆಯನ್ನು ಕೊಂದು ಕಾಲು ಕತ್ತರಿಸಿದ್ದ ದುಷ್ಕರ್ಮಿಗಳನ್ನು ಬಂಧಿಸಿದ ಅರಣ್ಯಾಧಿಕಾರಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿದರು.

​ಪೇಜಾವರ ಶ್ರೀಗಳ ಸ್ಮೃತಿವನ ಉದ್ಘಾಟನೆ: 1 ಕೋಟಿ ರೂ. ಅನುದಾನದ ಭರವಸೆ

​ಪ್ರಗತಿ ಪರಿಶೀಲನಾ ಸಭೆಯ ಬಳಿಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಚಿವರು, ಉಡುಪಿ ಬಳಿಯ ನೀಲಾವರದಲ್ಲಿ 33ನೇ ಯತಿಗಳಾಗಿದ್ದ ಕೀರ್ತಿಶೇಷ ಪೇಜಾವರ ಶ್ರೀಗಳ ‘ಸ್ಮೃತಿವನ’ವನ್ನು ಉದ್ಘಾಟಿಸಿದರು.

​”ಪೇಜಾವರ ಶ್ರೀಗಳು ಪ್ರಗತಿಪರ ಚಿಂತನೆಯ ಯತಿಗಳಾಗಿದ್ದರು. ನಕ್ಸಲರ ಮನವೊಲಿಸುವ ಮೂಲಕ ಶಾಂತಿ ಪ್ರತಿಪಾದಿಸಿದ್ದರು” ಎಂದು ಸ್ಮರಿಸಿದ ಸಚಿವರು, ನೀಲಾವರದ ಸ್ಮೃತಿವನದ ಸಮೀಪ 2 ಎಕರೆ ಪ್ರದೇಶದಲ್ಲಿ ಮತ್ತೊಂದು ವನ ನಿರ್ಮಿಸಲು ಮುಂದಾಗಿರುವ ಮಠಕ್ಕೆ 1 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

​ಬೆಂಗಳೂರು ಹಾಗೂ ರಾಜ್ಯದಲ್ಲಿ ಅರಣ್ಯ ರಕ್ಷಣೆ:

ತಾವು ಸಚಿವರಾದ ಬಳಿಕ ಬೆಂಗಳೂರಿನಲ್ಲಿ 10 ಸಾವಿರ ಕೋಟಿ ರೂ. ಬೆಲೆಬಾಳುವ 250 ಎಕರೆ ಸೇರಿದಂತೆ ರಾಜ್ಯಾದ್ಯಂತ ಒಟ್ಟು 12,500 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಲಾಗಿದೆ. 50 ಸಾವಿರ ಕೋಟಿ ರೂ. ಬೆಲೆಬಾಳುವ ಅರಣ್ಯ ಭೂಮಿಯ ಮರುವಶಕ್ಕೆ ಕಾನೂನು ಹೋರಾಟ ನಡೆಯುತ್ತಿದೆ ಎಂದು ಸಚಿವ ಖಂಡ್ರೆ ತಿಳಿಸಿದರು. ಜೊತೆಗೆ, ಬೆಂಗಳೂರಿನ ಯಲಹಂಕ ಬಳಿ 153 ಎಕರೆ ಪ್ರದೇಶದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ‘ವಿಶ್ವಗುರು ಬಸವಣ್ಣ ಬೃಹತ್ ಜೈವಿಕ ಉದ್ಯಾನ’ ನಿರ್ಮಿಸಲಾಗುತ್ತಿದೆ ಎಂಬ ಮಾಹಿತಿ ನೀಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವೈಫೈ ರೌಟರ್ ಹಿಂದೆ ಅಲ್ಯೂಮಿನಿಯಂ ಫಾಯಿಲ್: ಇದರಿಂದ ಸಿಗ್ನಲ್ ಹೆಚ್ಚಾಗುತ್ತದೆಯೇ? ತಜ್ಞರು ಹೇಳುವುದೇನು?

Next Post

ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

Next Post

ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d