Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

  • Bengaluru Focus

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

  • Bengaluru Focus

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ 25 ಸಾವಿರ ವಿದ್ಯಾರ್ಥಿಗಳ ಭಾಗಿ; ಆರ್ ಜಿಯುಎಚ್ ಎಸ್ ನ ವೈದ್ಯಕೀಯ ಕಾಲೇಜುಗಳ 7 ಸಾವಿರ ವಿದ್ಯಾರ್ಥಿಗಳಿಂದ ಅಂಗದಾನ ಪ್ರತಿಜ್ಞೆ

by Bengaluru Wire Desk
June 26, 2026
in Bengaluru Focus
Reading Time: 1 min read
0

ಬೆಂಗಳೂರು, ಜೂ.26 www.bengaluruwire.com: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ವತಿಯಿಂದ ಜೂನ್ 28ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ ‘ನಶಾಮುಕ್ತ ಭಾರತ ಸಂಕಲ್ಪ’ದೊಂದಿಗೆ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಾದಕವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯನ್ನು ಬೃಹತ್ ಮಟ್ಟದಲ್ಲಿ ಆಯೋಜಿಸಲಾಗಿದೆ.

​ಶುಕ್ರವಾರ ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಡಾ.ಭಗವಾನ್ ಬಿ.ಸಿ. ಅವರು ಈ ಕುರಿತು ಮಾಹಿತಿ ನೀಡಿದರು. “ಯುವಜನತೆಯಲ್ಲಿ ಮಾದಕ ವಸ್ತುಗಳ ಸೇವನೆ ತಡೆಗಟ್ಟುವ ಉದ್ದೇಶದಿಂದ ಈ ಅಭಿಯಾನವನ್ನು ರೂಪಿಸಲಾಗಿದ್ದು, ಜೂನ್ 28ರಂದು ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ 25 ಸಾವಿರಕ್ಕೂ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ,” ಎಂದು ಅವರು ತಿಳಿಸಿದರು.

​7 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಅಂಗದಾನ ಪ್ರತಿಜ್ಞೆ:

ಈ ಬೃಹತ್ ಕಾರ್ಯಕ್ರಮದ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ, ರಾಜ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 7000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂಗದಾನ ಮಾಡುವ ಮಹತ್ವದ ಪ್ರತಿಜ್ಞೆ ಮಾಡಿದ್ದಾರೆ. ಇದು ಸಮಾಜಕ್ಕೆ ದೊಡ್ಡ ಸಂದೇಶ ನೀಡಲಿದ್ದು, ಅಂಗದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಯ ಮಹತ್ವದ ಹೆಜ್ಜೆಯಾಗಿದೆ.

​ಗಣ್ಯರ ಉಪಸ್ಥಿತಿ:

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಭಾಗವಹಿಸಲಿದ್ದಾರೆ. ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲರಾದ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

​ಮಹತ್ವದ ಮೈಲಿಗಲ್ಲು:

ಕಳೆದ ಒಂದು ವರ್ಷದಲ್ಲಿ ನಶಾಮುಕ್ತ ಕ್ಯಾಂಪಸ್ ಹಾಗೂ ಅಂಗದಾನ ಜಾಗೃತಿ ಅಭಿಯಾನವು ರಾಜ್ಯದ 15 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದಿದ್ದು, 550ಕ್ಕೂ ಹೆಚ್ಚು ಕಾಲೇಜುಗಳು ಇದರಲ್ಲಿ ಕೈಜೋಡಿಸಿವೆ. 98,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡಿರುವುದು ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ವಿವಿಯ ಪ್ರಕಟಣೆ ತಿಳಿಸಿದೆ.

ಸದ್ಯದಲ್ಲೇ ವಿಶ್ವದರ್ಜೆಯ ಅತಿದೊಡ್ಡ ಬಯೋಬ್ಯಾಂಕ್ ಆರಂಭ:

ಅಕ್ಟೋಬರ್, ನವೆಂಬರ್ ನಲ್ಲಿ ನಗರದ ಭೀಮನಕುಪ್ಪೆಯಲ್ಲಿ 50 ಎಕರೆ ಪ್ರದೇಶದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಕ್ತ, ಕರುಳಬಳ್ಳಿ ರಕ್ತ, ಪ್ಲೆಸೆಂಟಾ, ಸಿಟಿ-ಸ್ಕ್ಯಾನ್, ರೆಡಿಯಾಲಜಿ ಹಾಗೂ ಕೋಶ ಮಾದರಿಗಳನ್ನು ಒಳಗೊಂಡ ಜೈವಿಕ ಮಾದರಿಗಳನ್ನು ವಿಶ್ವದರ್ಜೆಯ, ದೇಶದ ಅತಿದೊಡ್ಡ ಬಯೋಬ್ಯಾಂಕ್ ಆರಂಭವಾಗಲಿದೆ. 

ಇದು ದೇಶದ ಅತಿದೊಡ್ಡ ಆರೋಗ್ಯ ದತ್ತಾಂಶಗಳನ್ನು ಹೊಂದಿರುವ ಕೇಂದ್ರವಾಗಲಿದೆ. ಈ ದತ್ತಾಂಶ ಸಂಗ್ರಹಕ್ಕೆ 20-25 ಟೆರಾಬೈಟ್ ಮೆಮೊರಿ ಬೇಕಾಗುತ್ತದೆ. ಐಟಿ ಕಂಪನಿಗಳು ಉಚಿತವಾಗಿ 2 ರಿಂದ 3 ಟೆರಾಬೈಟ್ ಸಂಗ್ರಹ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದೆ ಎಂದು ಕುಲಪತಿ ಡಾ.ಭಗವಾನ್ ಬಿ.ಸಿ ತಿಳಿಸಿದರು.

ಈ ಬಯೋಬ್ಯಾಂಕ್ ಹಾಗೂ ದತ್ತಾಂಶ ಕೇಂದ್ರ ರಾಜ್ಯ ಸರ್ಕಾರದ ಯೋಜನೆ, ನೀತಿ ನಿರೂಪಣೆ, ವಿದ್ಯಾರ್ಥಿಗಳ ಶಿಕ್ಷಣಕ್ಕೆ, ವಿಶ್ವ ವ್ಯಾಪಿ ಆರೋಗ್ಯ ಕ್ಷೇತ್ರಗಳಿಗೆ ಎಐ ಆಧಾರಿತವಾಗಿ ನಮ್ಮ ಕೇಂದ್ರ ನೆರವು ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಿಜಿಸ್ಟ್ರಾರ್ ಅರ್ಜುನ್ ಒಡೆಯರ್‌ ಸೇರಿದಂತೆ ವಿವಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

WhatsApp Join our WhatsApp Channel
Previous Post

ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

Next Post

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

Next Post

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

Please login to join discussion

Like Us on Facebook

Follow Us on Twitter

Recent News

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026

ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

June 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group