Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರು: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು, ಅಪಾರ್ಟ್‌ಮೆಂಟ್ ನಿವಾಸಿಗಳ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಸಂವಾದ

ಕರ್ನಾಟಕ ಅಪಾರ್ಟ್‌ಮೆಂಟ್ ಕಾಯ್ದೆ 2026ರ ಕುರಿತು ಸಿಎಂ ಸಂವಾದ ನಡೆಸಿದ್ದು, ಇ-ಖಾತಾ ಕ್ರಾಂತಿ, ಐದು ಪಾಲಿಕೆಗಳ ಸೃಜನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ನಿವಾಸಿಗಳಿಗೆ ಭರವಸೆ ನೀಡಿದ್ದಾರೆ.

by Bengaluru Wire Desk
July 15, 2026
in Bengaluru Focus
Reading Time: 1 min read
0

ಬೆಂಗಳೂರು, ಜು.15 www.bengaluruwire.com: “ಆಸ್ತಿಯ ಸಂಪೂರ್ಣ ಹಕ್ಕು ಅದರ ಮಾಲೀಕರಿಗಿರಬೇಕು. ಆಸ್ತಿ ಖರೀದಿಸಿದ ಬಳಿಕ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದ್ದು, ಇದಕ್ಕೆ ಶಾಶ್ವತ ಮುಕ್ತಿ ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

​ಬುಧವಾರ ನಗರದಲ್ಲಿ ‘ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಕಾಯ್ದೆ-2026’ರ ಕುರಿತು ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

​ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು ಹಾಗೂ ಬೆಂಗಳೂರು ಭಾರತದ ಹೃದಯವಾಗಬೇಕು ಎಂಬ ಆಶಯದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಆರನೇ ಗ್ಯಾರಂಟಿಯಾದ ‘ಭೂ ಗ್ಯಾರಂಟಿ’ಗೆ ಜನರಿಂದ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.

ಅಪಾರ್ಟ್ ಮೆಂಟ್ ನಿವಾಸಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಮುಖಾಮುಖಿ ಸಂವಾದ ನಡೆಸಿದರು.

​ರಾಜ್ಯದಲ್ಲಿ ಇ-ಖಾತಾ ಕ್ರಾಂತಿ:

ಆಸ್ತಿ ಖರೀದಿಸುವಾಗ ಅದರ ಸಾಧಕ-ಬಾಧಕಗಳನ್ನು ಮಾಲೀಕರು ಪರಿಶೀಲಿಸಿಕೊಳ್ಳುವ ವ್ಯವಸ್ಥೆ ಇರಬೇಕು. ಒಪ್ಪಂದ, ನೋಂದಣಿ ಪ್ರಕ್ರಿಯೆ ಮುಗಿದು ಮನೆಯೊಳಗೆ ಕಾಲಿಟ್ಟ ನಂತರ ಡೆವಲಪರ್‌ಗಳು ಹಾಗೂ ಇತರೆ ಕಾರಣಗಳಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ಕಷ್ಟಪಟ್ಟು ಗಳಿಸಿದ ಆಸ್ತಿಯನ್ನು ಮಾಲೀಕರು ನೆಮ್ಮದಿಯಿಂದ ಅನುಭವಿಸಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಮನೆ ಬಾಗಿಲಿಗೆ ‘ಇ-ಖಾತಾ’ ತಲುಪಿಸುವ ಮೂಲಕ ರಾಜ್ಯದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಲಾಗಿದೆ. ಬೆಂಗಳೂರಿನ 40 ಲಕ್ಷ ಆಸ್ತಿಗಳ ಪೈಕಿ ಈಗಾಗಲೇ 26 ಲಕ್ಷ ಆಸ್ತಿಗಳಿಗೆ ಇ-ಖಾತಾ ಮಾಡಿಕೊಡಲಾಗಿದ್ದು, ಇಡೀ ದೇಶದಲ್ಲಿ ಇಂತಹ ಮತ್ತೊಂದು ವ್ಯವಸ್ಥೆ ಇಲ್ಲ ಎಂದು ಮುಖ್ಯಮಂತ್ರಿಗಳು ಹೆಮ್ಮೆಯಿಂದ ನುಡಿದರು.

​ಡೆವಲಪರ್‌ಗಳ ಸಮಸ್ಯೆ ಹಾಗೂ ದಾಖಲಾತಿ ವರ್ಗಾವಣೆ:

ಕೆಲವು ಡೆವಲಪರ್‌ಗಳು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಉದ್ದೇಶಪೂರ್ವಕವಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ದೂರುಗಳಿವೆ. ಅವರೊಂದಿಗೂ ಮಾತುಕತೆ ನಡೆಸಿ, ದಾಖಲಾತಿಗಳ ವರ್ಗಾವಣೆ (Handover) ಸರಾಗವಾಗಿ ಆಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಅಪಾರ್ಟ್‌ಮೆಂಟ್‌ಗಳಲ್ಲಿ ಎಸ್‌ಟಿಪಿ (STP) ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಲವು ಸುಧಾರಣೆಗಳನ್ನು ತರಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಹಾಗೂ ಅಂತರ್ಜಲ ವೃದ್ಧಿ ಮೂಲಕ ನೀರಿನ ಬವಣೆ ನೀಗಿಸಲು ಸರ್ಕಾರ ತ್ವರಿತಗತಿಯಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಸಿಎಂ ಭರವಸೆ ನೀಡಿದರು.

​ಆಡಳಿತ ವಿಕೇಂದ್ರೀಕರಣ: ಐದು ಕಾರ್ಪೊರೇಷನ್ ರಚನೆ:

“ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಪ್ರಮುಖ ಉದ್ದೇಶ. ಈಸ್ ಆಫ್ ಡೂಯಿಂಗ್ ಬಿಸಿನೆಸ್ (Ease of Doing Business) ಉತ್ತೇಜಿಸಲು ಹಾಗೂ ಆಡಳಿತ ಸುಧಾರಣೆಗಾಗಿ ನಗರದಲ್ಲಿ ಐದು ಕಾರ್ಪೊರೇಷನ್‌ಗಳನ್ನು ರಚಿಸಲಾಯಿತು. ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಬೆಳೆಯುತ್ತಿರುವ ಪ್ರದೇಶಗಳಲ್ಲಿನ ಅಪಾರ್ಟ್‌ಮೆಂಟ್‌ಗಳ ನಡುವಿನ ಸಮಸ್ಯೆಗಳನ್ನು ವ್ಯಾಜ್ಯಗಳಿಗೆ ಹೋಗದೆ ಬಗೆಹರಿಸಿಕೊಳ್ಳಲು ಒತ್ತು ನೀಡಲಾಗುತ್ತಿದೆ” ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

​ಮೂಲಸೌಕರ್ಯ ಮತ್ತು ಹೈ-ರೈಸ್ ಕಟ್ಟಡಗಳಿಗೆ ಒತ್ತು:

ಬೆಂಗಳೂರಿನಲ್ಲಿ 1.35 ಕೋಟಿ ವಾಹನಗಳಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲೆಂದೇ ಬರೋಬ್ಬರಿ 4000 ಕೋಟಿ ರೂ. ವೆಚ್ಚ ಮಾಡಲಾಗಿದೆ. ನಗರದಲ್ಲಿ ಹೈ-ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದು, ರಸ್ತೆಗಳ ವಿಸ್ತರಣೆಗೂ ಆದ್ಯತೆ ನೀಡಲಾಗಿದೆ. 132 ಕಿ.ಮೀ ಉದ್ದದ ಪೆರಿಫೆರಲ್ ವರ್ತುಲ ರಸ್ತೆ (ಬೆಂಗಳೂರು ಬ್ಯುಸಿನೆಸ್ ಕಾರಿಡಾರ್) ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಪರಿಹಾರವನ್ನು ರಾಜ್ಯದ ರೈತರಿಗೆ ನೀಡಲಾಗುತ್ತಿದೆ ಎಂದು ವಿವರಿಸಿದರು.

​ಬೆಂಗಳೂರಿನತ್ತ ಜಾಗತಿಕ ಹೂಡಿಕೆದಾರರ ಒಲವು:

ಮುಂಬೈ ಸೇರಿದಂತೆ ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಟ್ಟಡಗಳು ಹಾಗೂ ಜಾಗದ ಬೆಲೆ ಕಡಿಮೆಯಿದೆ. ಇದು ವಿಶ್ವದ ನಾಯಕರನ್ನು ಬೆಂಗಳೂರಿನತ್ತ ಆಕರ್ಷಿಸುತ್ತಿದೆ. ದಾವೋಸ್ ಪ್ರವಾಸದ ವೇಳೆ ಅನೇಕ ವಿದೇಶಿ ಹೂಡಿಕೆದಾರರು ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ತೀವ್ರ ಆಸಕ್ತಿ ತೋರಿದ್ದಾರೆ. ಎರಡನೇ ವಿಮಾನ ನಿಲ್ದಾಣವೂ ನಿರ್ಮಾಣವಾಗುತ್ತಿರುವುದರಿಂದ ಹೂಡಿಕೆಗೆ ಬೆಂಗಳೂರು ಅತ್ಯುತ್ತಮ ಕೇಂದ್ರವಾಗಿದೆ ಎಂದರು.

​ಸಲಹೆಗಳಿಗೆ ಆಗಸ್ಟ್ 6ರವರೆಗೆ ಅವಕಾಶ:

ಅಪಾರ್ಟ್‌ಮೆಂಟ್‌ಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಹೆಜ್ಜೆ ಇಟ್ಟಿದೆ. ಹೊಸದಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಪಾರ್ಟ್‌ಮೆಂಟ್ ಕಾಯ್ದೆಯು ಆಸ್ತಿ ಖರೀದಿದಾರರ ಅನುಕೂಲಕ್ಕಾಗಿಯೇ ಇದೆ. ಈ ವಿಧೇಯಕದ ಬಗ್ಗೆ ಕಾನೂನಿನ ಚೌಕಟ್ಟಿನಲ್ಲಿರುವ ಯಾವುದೇ ಸಲಹೆ, ಅಭಿಪ್ರಾಯಗಳಿದ್ದರೂ ಆಗಸ್ಟ್ 6ರ ಒಳಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ಸಲ್ಲಿಸಬಹುದು ಎಂದು ಸಿಎಂ ಮನವಿ ಮಾಡಿದರು. ಟೀಂ ಕರ್ನಾಟಕವಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.

​ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಭೈರತಿ ಸುರೇಶ್, ಕೆ.ಜೆ.ಜಾರ್ಜ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್, ಅಪಾರ್ಟ್‌ಮೆಂಟ್ ಸಂಘಗಳ ಅಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕರ್ನಾಟಕ ಮತದಾರರ ಪಟ್ಟಿಯ ಪರಿಷ್ಕರಣೆ: ಎಸ್‌ಐಆರ್ ಗಡುವು ವಿಸ್ತರಣೆ, ರಾಜ್ಯದಲ್ಲಿ ಶೇ. 95.58 ರಷ್ಟು ನಮೂನೆ ಹಂಚಿಕೆ

Next Post

GBA News | ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್

Next Post

GBA News | ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಅಪರ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್

ಕೇವಲ 5 ರೂ.ಗೆ ದೇಶದ ಮೊದಲ ಹೈಡ್ರೋಜನ್ ರೈಲಿನಲ್ಲಿ ಪ್ರಯಾಣ: ಜಿಂದ್-ಸೋನಿಪತ್ ಮಾರ್ಗದ ಟೈಮ್‌ಟೇಬಲ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d