ಬೆಂಗಳೂರು, ಜು.28 www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶುಕ್ರವಾರ (ಜುಲೈ 31) ಕಾವೇರಿ ನೀರು ಪೂರೈಕೆಯಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ.
ಹೀಗಾಗಿ ಸಾರ್ವಜನಿಕರು ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೀರು ಪೂರೈಕೆ ಸ್ಥಗಿತಕ್ಕೆ ಕಾರಣವೇನು?:
ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ 3000 ಮೀ.ಮೀ. ವ್ಯಾಸದ ಬೃಹತ್ ಕೊಳವೆ ಮಾರ್ಗದಲ್ಲಿನ ಸ್ಕೌರ್ ವಾಲ್ವ್ (Scour Valve) ಸೋರಿಕೆಯನ್ನು ತಡೆಗಟ್ಟುವ ಸಲುವಾಗಿ ಜಲಮಂಡಳಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ 31-07-2026ರ ಶುಕ್ರವಾರ ಬೆಳಿಗ್ಗೆ 06:00 ಗಂಟೆಯಿಂದ ರಾತ್ರಿ 09:00 ಗಂಟೆಯವರೆಗೆ ಒಟ್ಟು 15 ಗಂಟೆಗಳ ಕಾಲ ಜಲರೇಚಕ ಯಂತ್ರಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದಾಗಿ 5ನೇ ಹಂತದ ವ್ಯಾಪ್ತಿಗೆ ಬರುವ ನೂರಕ್ಕೂ ಹೆಚ್ಚು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನೀರು ವ್ಯತ್ಯಯವಾಗುವ ಪ್ರದೇಶಗಳ ಸಂಪೂರ್ಣ ಪಟ್ಟಿ ಇಲ್ಲಿದೆ:
ಅನಂತಪುರ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿ, ಹಾರೋಹಳ್ಳಿ, ಕೆಂಚನಹಳ್ಳಿ, ಗೋವಿಂದಪುರ, ವಾಸುದೇವಪುರ, ಮಂಚೇನಹಳ್ಳಿ, ಕಟ್ಟಿಗೇನಹಳ್ಳಿ, ಶ್ರೀನಿವಾಸಪುರ, ಬೆಳ್ಳಳ್ಳಿ, ತಿರುಮೆನಹಳ್ಳಿ, ಚೊಕ್ಕನಹಳ್ಳಿ, ದಾಸರಹಳ್ಳಿ, ರಾಚೇನಹಳ್ಳಿ, ಥಣೀಸಂದ್ರ, ಚಳ್ಳೆಕೇರೆ, ಹೊರಮಾವು ಆಗರ, ಅಮಾನಿ, ಬೈರತಿಖಾನೆ, ಗೆದ್ದಲಹಳ್ಳಿ, ಕೊತ್ತನೂರು ನಾರಾಯಣಪುರ, ಕೊತ್ತನೂರು, ಎನ್. ನಾಗೇನಹಳ್ಳಿ, ಕೈಲಾಸನಹಳ್ಳಿ, ಬೈರತಿ, ಬಿಳಿಶಿನಹಳ್ಳಿ, ಬಳಗೆರೆ, ಬೆಳ್ಳಂದೂರು ಅಮಾನಿಕೆರೆ, ಬೆಳತ್ತೂರು, ಬೆನ್ನಸಂದ್ರ, ದೇವರಬೀಸನಹಳ್ಳಿ.
ಅಬ್ಬಿಗೆರೆ, ಚಿಕ್ಕಸಂದ್ರ, ಶೆಟ್ಟಹಳ್ಳಿ, ಕರಿಹೋಬನಹಳ್ಳಿ, ಅಂಧರಹಳ್ಳಿ, ಮ್ಯಾಡರಹಳ್ಳಿ, ದೊಡ್ಡಬಿದರಕಲ್ಲು, ಲಿಂಗಧೀರನಹಳ್ಳಿ, ಹೆರೋಹಳ್ಳಿ, ಹೊಸಹಳ್ಳಿ, ಗುಂಜೂರು, ಅಗದೂರು, ಕಾಡಬೀಸನಹಳ್ಳಿ, ಕಾಯಮ್ಮನ ಅಗ್ರಹಾರ, ಕಾಡುಗೋಡಿ ಪ್ಲಾಂಟೇಷನ್, ಕಾಣೇಕಂಡ್ಯ, ಕುಂಬೇನ ಅಗ್ರಹಾರ, ನಾಗೋಂಡಹಳ್ಳಿ, ಪಣತ್ತೂರು, ರಾಮಗೊಂಡನಹಳ್ಳಿ, ಸಿದ್ದಾಪುರ ಸೋರಹುಣಸೆ, ತುಬರಹಳ್ಳಿ, ವರ್ತೂರು, ಕಲ್ಕರೆ, ಹೋರಮಾವು, ಕೆ. ಚೆನ್ನಸಂದ್ರ, ವಾರಣಾಸಿ, ವಸಂತಪುರ, ಉಲ್ಲಾಳ ಸೋಣ್ಣೆನಹಳ್ಳಿ, ಗಾಣಾಕಲ್ಲು, ಹೆಮ್ಮಿಗೆಪುರ, ಸೋಮಪುರ, ವಾರಸಂದ್ರ, ಮನವರ್ತಕಾವಲು, ಲಿಂಗದೀರನಹಳ್ಳಿ, ಹೊಸಹಳ್ಳಿ, ಅರೇನಹಳ್ಳಿ, ವಡ್ಡರಪಾಳ್ಯ ಉತ್ತರಹಳ್ಳಿ, ಸುಬ್ರಮಣ್ಯಪುರ, ಗುಬ್ಬಲಾಳ, ತುರಹಳ್ಳಿ, ಗಿಡದಕೋನೆನಹಳ್ಳಿ, ಆಲಹಳ್ಳಿ, ಅಂಬಲಿಪುರ, ಅಂಜನಾಪುರ, ಬಸಪುರ, ಬಸವನಪುರ, ಬೇಗೂರು, ಬೆಳ್ಳಂದೂರು, ಚಂದ್ರಶೇಖರಪುರ, ದೊಡ್ಡಕಲ್ಲಸಂದ್ರ, ಗೊಲ್ಲಹಳ್ಳಿ, ಗೊಟ್ಟಿಗೆರೆ, ಅರಳೂರು, ಜುನಸಂದ್ರ, ಕೈಕೋಂಡನಹಳ್ಳಿ, ಕಾಳೇನಾ ಅಗ್ರಹಾರ, ಕಂಬತ್ತಹಳ್ಳಿ, ಕಮ್ಮನಹಳ್ಳಿ, ಕಸವನಹಳ್ಳಿ, ಕೂಡಲು, ಪರಪ್ಪನ ಅಗ್ರಹಾರ, ಪಿಳ್ಳಗಾನಹಳ್ಳಿ, ರಘುವನಹಳ್ಳಿ, ತಲಘಟ್ಟಪುರ, ತಿಪ್ಪಸಂದ್ರ, ವಾಜರಹಳ್ಳಿ, ಯಲೇನಹಳ್ಳಿ, ಭರತೇನ ಅಗ್ರಹಾರ, ಬೋಗನಹಳ್ಳಿ, ಚಿಕ್ಕಬೆಳ್ಳಂದೂರು, ಚಿಕ್ಕತೇಗೂರು, ದೊಡ್ಡಕನ್ನಹಳ್ಳಿ, ದೊಡ್ಡತೆಗೂರು, ನಾಗನಾಥಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಮಂಡಳಿಯ ಈ ತುರ್ತು ಕಾಮಗಾರಿಗೆ ಸಾರ್ವಜನಿಕರು ಸಹಕರಿಸಬೇಕು ಹಾಗೂ ಮುಂಚಿತವಾಗಿ ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಜಲಮಂಡಳಿ (BWSSB) ಮನವಿ ಮಾಡಿದೆ.




















