ಬೆಂಗಳೂರು, ಆ.04 www.bengaluruwire.com: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ.
ಪ್ರತಿಯೊಂದು ತಾಲೂಕುಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಕ್ಷಣ ವರದಿ ಸಲ್ಲಿಸುವಂತೆ ಅವರು ಸೂಚಿಸಿದ್ದಾರೆ.
ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ?
ಮುಖ್ಯಮಂತ್ರಿಗಳು ಬಿಡುಗಡೆ ಮಾಡಿರುವ ಪಟ್ಟಿಯ ಅನ್ವಯ, ವಿವಿಧ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಮತ್ತು ಪರಿಶೀಲನಾ ಜವಾಬ್ದಾರಿಯನ್ನು ನೀಡಲಾಗಿದೆ.

ಡಾ. ಜಿ. ಪರಮೇಶ್ವರ ಅವರಿಗೆ ತುಮಕೂರು, ರಘುಮೂರ್ತಿ ಚಿತ್ರದುರ್ಗ, ಬಿ.ಎಸ್. ಸುರೇಶ್ (ಭೈರತಿ) ಚಿಕ್ಕಬಳ್ಳಾಪುರ ಹಾಗೂ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಅದೇ ರೀತಿ, ರಾಮಲಿಂಗಾ ರೆಡ್ಡಿ ಕೋಲಾರ, ಹೆಚ್. ಸಿ. ಬಾಲಕೃಷ್ಣ ಬೆಂಗಳೂರು ದಕ್ಷಿಣ, ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿಜಯನಗರ, ಕೆ.ಜೆ. ಜಾರ್ಜ್ ಚಿಕ್ಕಮಗಳೂರು, ಕೆ.ಎಂ. ಶಿವಲಿಂಗೇಗೌಡ ಹಾಸನ, ಮಧು ಬಂಗಾರಪ್ಪ ಶಿವಮೊಗ್ಗ ಮತ್ತು ಎಂ.ಬಿ. ಅವರು ವಿಜಯಪುರ ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.
ಉಳಿದಂತೆ, ವಿಜಯಾನಂದ ಕಾಶಪ್ಪನವರ ಅವರಿಗೆ ಬಾಗಲಕೋಟೆ, ಬಸವರಾಜ ರಾಯರೆಡ್ಡಿ ಅವರಿಗೆ ಗದಗ, ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ದಾವಣಗೆರೆ, ರುದ್ರಪ್ಪ ಲಮಾಣಿ ಅವರಿಗೆ ಹಾವೇರಿ, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಸಂತೋಷ್ ಲಾಡ್ ಅವರಿಗೆ ಧಾರವಾಡ, ಲಕ್ಷ್ಮಣ ಸವದಿ ಅವರಿಗೆ ಉತ್ತರಕನ್ನಡ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ, ಅಜಯ್ ಧರಂ ಸಿಂಗ್ ಅವರಿಗೆ ರಾಯಚೂರು, ಈಶ್ವರ್ ಖಂಡ್ರೆ ಅವರಿಗೆ ಬೀದರ್, ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ, ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಕೊಡಗು, ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲೆಯ ಪರಿವೀಕ್ಷಣೆಯ ಹೊಣೆಯನ್ನು ವಹಿಸಲಾಗಿದೆ.
ಜಿಲ್ಲೆಗಳ ಉಸ್ತುವಾರಿ ಹೊತ್ತಿರುವ ಸಚಿವರು ಸ್ಥಳೀಯ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಪರಿಸ್ಥಿತಿಯ ಸಮಗ್ರ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಮುಂದಿನ ಬರ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.





















