ಬೆಂಗಳೂರು, ಆ.12 www.bengaluruwire.com: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸಚಿವ ಸಂಪುಟದ ನೂತನ ಸಚಿವರಿಗೆ ಇಲಾಖೆ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಂಡಿದೆ.
ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರ ಅಂಕಿತದೊಂದಿಗೆ 19 ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಕಳೆದ ಆಗಸ್ಟ್ 3ರಂದು ಸಚಿವ ಸಂಪುಟ ಪುನಾರಚನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಯಾವ ಜವಾಬ್ದಾರಿ ಸಿಗಲಿದೆ ಎಂಬ ಪ್ರಶ್ನೆಗೆ ಈಗ ಸ್ಪಷ್ಟತೆ ಸಿಕ್ಕಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರ ಪೈಪೋಟಿ, ದೆಹಲಿ ನಾಯಕರ ಭೇಟಿ ಮತ್ತು ಹಿರಿಯ ನಾಯಕರ ಹಲವು ಸುತ್ತಿನ ಸಭೆಗಳ ಬಳಿಕ ಅಂತಿಮ ತೀರ್ಪು ಹೊರಬಿದ್ದಿದೆ. ಈ ಮಹತ್ವದ ನಿರ್ಧಾರದೊಂದಿಗೆ ನೂತನ ಸಚಿವರು ತಮ್ಮ ಹೊಸ ಇಲಾಖೆಗಳ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ರಾಜ್ಯದ ಆಡಳಿತ ಯಂತ್ರ ಮತ್ತಷ್ಟು ಚುರುಕಾಗುವ ನಿರೀಕ್ಷೆಯಿದೆ.
ಪ್ರಮುಖ ಸಚಿವರಿಗೆ ಹಂಚಿಕೆಯಾದ ಖಾತೆಗಳ ವಿವರ:

ಲಕ್ಷ್ಮಣ ಸವದಿ: ಸಹಕಾರ ಇಲಾಖೆ (ಕೃಷಿ ಮಾರುಕಟ್ಟೆ ಹೊರತುಪಡಿಸಿ)
ರಾಮಲಿಂಗ ರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
ಕೆ.ಹೆಚ್. ಮುನಿಯಪ್ಪ: ಸಮಾಜ ಕಲ್ಯಾಣ ಇಲಾಖೆ
ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ ಇಲಾಖೆ
ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಎನ್. ಚಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ (ಜಲಸಂಪನ್ಮೂಲ) ಇಲಾಖೆ
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ ಖಾನ್: ವಸತಿ ಇಲಾಖೆ
ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

















