Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Chandrayaan-3 Mission | ಚಂದ್ರಯಾನ-3 ಗಗನನೌಕೆ ಹೊತ್ತ ರಾಕೆಟ್ ಯಶಸ್ವಿ ಉಡಾವಣೆ : ವಿಶ್ವದ ಭೂಪಟದಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಹೊರಟಿರುವ ಇಸ್ರೊ

ಚಂದ್ರಯಾನ-3 ಅನ್ನು ವಿನ್ಯಾಸ ಮಾಡುವಾಗ, ಚಂದ್ರಯಾನ-2ರಲ್ಲಿ ವೈಫಲ್ಯಕ್ಕೆ ಕಾರಣವಾದ ಅಂಶಗಳನ್ನು ಗುರುತಿಸಿ ತಿದ್ದಿಕೊಳ್ಳಲಾಗಿದೆ.

by Bengaluru Wire Desk
July 14, 2023
in News Wire, Public interest
Reading Time: 2 mins read
0

ಶ್ರೀಹರಿಕೋಟಾ, ಜು.14 www.bengaluruwire.com : ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನ ನೌಕೆಯನ್ನು ಹೊತ್ತ ಭಾರತದ ಹೆವಿ ಲಿಫ್ಟ್ ರಾಕೆಟ್ ಎಲ್ ವಿಎಮ್3 (LVM3) ರಾಕೆಟ್ ಚಂದ್ರಯಾನ ಹೊತ್ತು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 2.35ಕ್ಕೆ ಯಶಸ್ವಿಯಾಗಿ ನಭಕ್ಕೆ ಜಿಗಿಯಿತು.

ರಾಕೆಟ್ ಉಡಾವಣೆಯಾದ ಕೆಲವೇ ನಿಮಿಷದಲ್ಲಿ ಭೂಸ್ಥಿರ ಕಕ್ಷೆಗೆ ನೌಕೆಯನ್ನು ಯಶಸ್ವಿಯಾಗಿ ಸೇರ್ಪಡೆಯಾಗುತ್ತಿದ್ದಂತೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಭೂ ನಿಯಂತ್ರಣ ಕೇಂದ್ರದಲ್ಲಿ ಉಸಿರು ಬಿಗಿ ಹಿಡಿದು ಕೂತಿದ್ದ ವಿಜ್ಞಾನಿಗಳು ಹರ್ಷ ವ್ಯಕ್ತಪಡಿಸಿದರು.

ಭಾರತದ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾದ ಚಂದ್ರಯಾನ-3, ಚಂದ್ರನ ಮೇಲ್ಮೈಯಲ್ಲಿ ತನ್ನ ಬಾಹ್ಯಾಕಾಶ ನೌಕೆಯನ್ನು ಇಳಿಸುವ ನಾಲ್ಕನೇ ದೇಶವಾಗಿ ಹೊರಹೊಮ್ಮಲಿದೆ. ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್‍ಗಾಗಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಬಾಹ್ಯಾಕಾಶ ನೌಕೆ ಆಗಸ್ಟ್​ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ತಲುಪಲಿದೆ.

ಇಸ್ರೋ ಈ ಹಿಂದಿನ ಯೋಜನೆಯಾದ ಚಂದ್ರಯಾನ-2 ರಲ್ಲಿನ ವೈಫಲ್ಯಗಳಿಂದ ಪಾಠ ಕಲಿತು ಚಂದ್ರನ ಅಂಗಳಕ್ಕೆ ಹಗುರವಾಗಿ ಮತ್ತು ಸುರಕ್ಷಿತವಾಗಿ ಇಳಿಯಲು ಅಗತ್ಯ ತಂತ್ರಜ್ಞಾನ, ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸುವ ಹುಮ್ಮಸ್ಸಿನಲ್ಲಿದೆ.

ಚಂದ್ರನ ಭೂಪ್ರದೇಶದಲ್ಲಿ ರೋವರ್ ಮೂಲಕ ಚಲಿಸುತ್ತಾ ವೈಜ್ಞಾನಿಕ ಅಧ್ಯಯನ ನಡೆಸಲು ಸಿದ್ದವಾಗಿದೆ. ಈ ಚಂದ್ರಯಾನವು ಇಸ್ರೋದ ಭವಿಷ್ಯದ ಅಂತರ್ ಗ್ರಹ ಕಾರ್ಯಾಚರಣೆಗಳಿಗೆ ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಕೆಟ್ ಉಡಾವಣೆಯ ದೃಶ್ಯಗಳು

ಚಂದ್ರನಲ್ಲಿ ಹೆಚ್ಚುವರಿಯಾಗಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ರೋವರ್ ನಿಯೋಜಿಸುವ ಮೂಲಕ ಚಂದ್ರನ ದಂಡಯಾತ್ರೆಯಲ್ಲಿ ಹೊಸ ಶಕೆ ಬರೆಯಲಿದೆ. ಹೀಗಾಗಿ ದೇಶದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಚಂದ್ರನ ಬಗ್ಗೆ ಈವರೆಗೆ ಮಾನವ ಜನಾಂಗಕ್ಕೆ ತಿಳಿಯದಿರದ ಹಲವಾರು ಅಂಶಗಳನ್ನು ಅರಿಯಲು ಸಹಾಯಕವಾಗಲಿದೆ.

ಚಂದ್ರಯಾನ-3 ಮೂಲೋದ್ದೇಶವೇನು?
ಚಂದ್ರಯಾನ-3 ಮಿಷನ್ ಚಂದ್ರನ ಭೂಕಂಪನ, ಚಂದ್ರನಲ್ಲಿ ಆಚ್ಚಾದಿಸಿರುವ ಆಧಾರ ಶಿಲಾತಲದ ಮೇಲಿನ ಗಟ್ಟಿಗೊಂಡಿಲ್ಲದ ಘನಪದಾರ್ಥ ಕುರಿತಂತೆ, ಅಲ್ಲಿನ ಮೇಲ್ಮೈ ಪ್ಲಾಸ್ಮಾ ಪರಿಸರ ಮತ್ತು ಧಾತು ರೂಪದ ಸಂಯೋಜನೆಯ ಉಷ್ಣ-ಭೌತಿಕ ಗುಣಲಕ್ಷಣಗಳನ್ನು ಅಧ್ಯಯನ ಮಾಡಲು ವೈಜ್ಞಾನಿಕ ಉಪಕರಣಗಳನ್ನು ಮಾರ್ಕ್ -3 ರಾಕೆಟ್ ಒಳಗಿನ ಚಂದ್ರಯಾನ ನೌಕೆಯು ಹೊಂದಿದೆ. 

ನೌಕೆಯಲ್ಲಿನ ಲ್ಯಾಂಡರ್ ನಿರ್ದಿಷ್ಟವಾಗಿ, ಚಂದ್ರನ ಸ್ಥಳದಲ್ಲಿ ಮೃದುವಾಗಿ ಇಳಿಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಸಂದರ್ಭದಲ್ಲಿ ಲ್ಯಾಂಡರ್ ಐಎಸ್ ಡಿಎನ್, ರೋವರ್, ರೋವರ್ ನನ್ನು ತನ್ನ ಒಡಲಲ್ಲಿಟ್ಟುಕೊಂಡಿರುತ್ತದೆ. ಈ ಲ್ಯಾಂಡರ್ ಮತ್ತು ರೋವರ್ ನ ಜೀವಿತಾವಧಿಯು ಒಂದು ಚಂದ್ರನ ದಿನವಾಗಿರುತ್ತದೆ (ಅಂದರೆ 14 ಭೂಮಿಯ ದಿನಗಳು). ಮತ್ತು ತನ್ನ ಚಲನಶೀಲತೆಯ ಅವಧಿಯಲ್ಲಿ ಚಂದ್ರನ ಮೇಲ್ಮೈ ಸ್ಥಳದಲ್ಲಿ ರಾಸಾಯನಿಕ ವಿಶ್ಲೇಷಣೆಯನ್ನು ಕೈಗೊಳ್ಳುವ ರೋವರ್ ಅನ್ನು ನಿಯೋಜಿಸುತ್ತದೆ.
ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಅವರು ಚಂದ್ರಯಾನ-3 ಮಿಷನ್ ಯಶಸ್ವಿಯಾಗಲಿದೆ ಮತ್ತು ಭಾರತಕ್ಕೆ ಒಂದು ಗೇಮ್ ಚೇಂಜರ್ ಘಟನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಜುಲೈ 14ರಂದು ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಿಗದಿಯಂತೆ ರಾಕೆಟ್ ಹಾರಲು ಹವಾಮಾನ ಮುನ್ಸೂಚನೆ ಉತ್ತಮವಾಗಿತ್ತು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಂದ್ರಯಾನ-2 ನಲ್ಲಿ ವಿಫಲತೆ ಹೇಗಾಗಿತ್ತು ?:
2019ರಲ್ಲಿ ಚಂದ್ರಯಾನ-2 (Chandrayaan-2) ಯೋಜನೆ ಕೈಗೊಳ್ಳಲಾಗಿತ್ತು. ಎಲ್ಲ ಪ್ರಕ್ರಿಯೆಗಳೂ ಸರಿಯಾಗಿಯೇ ನಡೆದಿದ್ದವು. ಆದರೆ ಚಂದ್ರನ ಮೇಲೆ ರೋವರ್ ಇಳಿಯುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ನಿಯಂತ್ರಣ ಕೇಂದ್ರದ ಜತೆ ಸಂಪರ್ಕ ಕಡಿದುಕೊಂಡು ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಚಂದ್ರಯಾನ-3 ಯೋಜನೆಯಲ್ಲಿ ಆರ್ಬಿಟರ್ ಇಲ್ಲ :
ಸದ್ಯ ಚಂದ್ರಯಾನ-3 ಅನ್ನು ವಿನ್ಯಾಸ ಮಾಡುವಾಗ, ಚಂದ್ರಯಾನ-2ರಲ್ಲಿ ವೈಫಲ್ಯಕ್ಕೆ ಕಾರಣವಾದ ಅಂಶಗಳನ್ನು ಗುರುತಿಸಿ ತಿದ್ದಿಕೊಳ್ಳಲಾಗಿದೆ. ಇದರಲ್ಲಿ ಆರ್ಬಿಟರ್‌ ಇಲ್ಲ. ಗಗನನೌಕೆಯಲ್ಲಿ ಲ್ಯಾಂಡರ್‌ ಮತ್ತು ರೋವರ್‌ ಇದ್ದು 15 ದಿನಗಳ ಕಾಲ ಚಂದ್ರನನ್ನು ಸುತ್ತುವರಿದು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ರೋವರ್ ಚಂದ್ರನ ಮೇಲ್ಮೈಯಲ್ಲಿ ಓಡಾಡಿ ಡೇಟಾವನ್ನು ಸಂಗ್ರಹಿಸಲಿದೆ. ಚಂದ್ರನನ್ನು ಆವರಿಸಿರುವ ಶಿಲಾ ಪದರದ ಮೇಲಿನ ಘನಪದಾರ್ಥ, ಭೂಕಂಪನ, ಹೊರ ಆವರಣದ ಪ್ಲಾಸ್ಮಾ, ಬಾಹ್ಯಾಕಾಶ ನೌಕೆ ಇಳಿದಲ್ಲಿರುವ ಮೂಲಧಾತು ಸಂಯೋಜನೆ ಮುಂತಾದವುಗಳ ಅಧ್ಯಯನ ನಡೆಯಲಿದೆ. ಇವೆಲ್ಲವೂ ಭವಿಷ್ಯದಲ್ಲಿ ಇನ್ನಷ್ಟು ಬಾಹ್ಯಾಕಾಶ ಪ್ರಯೋಗಗಳನ್ನು ನಡೆಸಲು ವಿಜ್ಞಾನಿಗಳಿಗೆ ನೆರವಾಗಲಿದ್ದು, ಇಸ್ರೋಗೆ ಪೂರಕವಾಗಲಿದೆ.

WhatsApp Join our WhatsApp Channel
Previous Post

Rafale Marine Aircraft | 26 ರಫೇಲ್ ಮೆರೈನ್ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ ; ಹೆಚ್ಚಲಿದೆ ದೇಶದ ನೌಕಾಪಡೆ ಬಲ

Next Post

Malnutrition children | ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಿಂದ 39.50 ಲಕ್ಷ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

Malnutrition children | ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಿಂದ 39.50 ಲಕ್ಷ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕೋರ್ಟ್ ಚಡಿಯೇಟು ನೀಡಿದಾಗಲಷ್ಟೇ ಶಾಸ್ತ್ರಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡುವ ಬೃಹತ್ ನೀರಗಾಲುವೆ ವಿಭಾಗದ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ.

Govt. Land Encroachment | 'ಕಂದಾಯ ಸಚಿವರೇ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯ ಬ್ಯಾಟರಾಯನಪುರ ಕ್ಷೇತ್ರದಿಂದಲೇ ಆರಂಭವಾಗಲಿ' : ಎನ್.ಆರ್.ರಮೇಶ್

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group