Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA PRR Project | ಬಿಡಿಎ ಪಿಆರ್ ಆರ್ ಯೋಜನೆ ನಿಲ್ಲದು ; ಭೂಮಿ ನೀಡಿದವರ ಹಿತ ಕಾಯಲು ಬದ್ಧ – ರೈತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ

ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಸಿಗಬೇಕಾದರೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕು : ರೈತರು - ಭೂಮಾಲೀಕರ ಆಗ್ರಹ

by Bengaluru Wire Desk
July 31, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.31 www.bengaluruwire.com : “ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಬಗ್ಗೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ನಿರಪೇಕ್ಷಣಾ ಪ್ರಮಾಣಪತ್ರ (NOC- ಎನ್ ಓ ಸಿ) ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ.

ನಾನು ಸ್ವಾಧೀನ ಆಗಿರುವ ಭೂಮಿಗೆ ಎನ್ ಓ ಸಿ ನೀಡಲು ಸಾಧ್ಯವಿಲ್ಲ. ಅದನ್ನು ನೇರವಾಗಿ ನಿಮಗೆ ಸ್ಪಷ್ಟಪಡಿಸುತ್ತೇನೆ.
ಈ ಯೋಜನೆ ನಿಲ್ಲಿಸಲು ಆಗುವುದಿಲ್ಲ. ಆದರೆ ಯಾವ ರೀತಿ ನಿಮ್ಮ ಹಿತ ಕಾಯಬೇಕು, ಯಾವ ರೀತಿ ನಿಮಗೆ ಹೆಚ್ಚಿನ ಅನುಕೂಲ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.
ರಸ್ತೆಯೂ ಆಗಬೇಕು, ನಿಮಗೂ ನ್ಯಾಯ ಒದಗಿಸಬೇಕು ಎಂಬುದು ತಮ್ಮ ಉದ್ದೇಶ. ನೀವು ಕೊಟ್ಟಿರುವ ಅಮೂಲ್ಯ ಸಲಹೆಗಳನ್ನು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಈ ವಿಚಾರವಾಗಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಲೇ ಈ ರಸ್ತೆ ನಿರ್ಮಾಣ ಆಗಿದ್ದಾರೆ ನಮಗೆ ಇಷ್ಟು ಹೊರೆ ಆಗುತ್ತಿರಲಿಲ್ಲ. ನ್ಯಾಯಾಲಯದಲ್ಲಿ ಈ ಯೋಜನೆ ವಿಚಾರಣೆ ಆಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಆದೇಶ ಬಂದಿದೆ.
ಬಿಡಿಎಗೆ ಹೊಸ ಭೂಸ್ವಾಧೀನ ಕಾನೂನು ಅನ್ವಯ ಆಗುವುದಿಲ್ಲ. ಬಿಡಿಎ ಹಳೆ ಕಾನೂನಿನ ಪ್ರಕಾರ ಭೂಸ್ವಾಧೀನ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.
ನಮ್ಮ ಸರ್ಕಾರ ಹೊಸ ಭೂಮಿಗೆ ಅಧಿಸೂಚನೆ ಹೊರಡಿಸುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ವಾಸ್ತವ ಪರಿಸ್ಥಿತಿಯನ್ನು ಬಿಚ್ಚಿಟ್ಟರು.

ಈ ಯೋಜನೆಗೆ 25,000 ಕೋಟಿ ರೂ. ಅಗತ್ಯವಿದೆ. ಇದು ಕಾರ್ಯಗತವಾದರೆ ಸುತ್ತಮುತ್ತಲ ಜಮೀನು ಬೆಲೆ 5 ಪಟ್ಟು ಹೆಚ್ಚಾಗಲಿದೆ. ಇನ್ನು ನಾವು ಈ ಯೋಜನೆ ತಳ್ಳಿಕೊಂಡು ಹೋಗಲು ಆಗುವುದಿಲ್ಲ. ನಿಮ್ಮ ಪರಿಸ್ಥಿತಿ ನಾನು ಅರಿತಿದ್ದೇನೆ. ನೀವು ನನ್ನ ಸ್ಥಾನದಲ್ಲಿ ನಿಂತು ಈ ವಿಚಾರದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂದು ಸಲಹೆ ನೀಡಿ” ಎಂದರು.

ರೈತರು ಮತ್ತು ಭೂಮಾಲೀಕರ ಕಡೆಯಿಂದ ಬಂದ ಸಲಹೆಗಳು:

ಸಭೆಯಲ್ಲಿ ಪಿಆರ್ ಆರ್ ಯೋಜನೆ ಕುರಿತಂತೆ ರೈತರು, ಭೂಮಾಲೀಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್. ಬಿಡಿಎ ಆಧ್ಯಕ್ಷ ರಾಕೇಶ್ ಸಿಂಗ್, ಆಯುಕ್ತರಾದ ಕುಮಾರ್ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಜೊತೆಯಲ್ಲಿರುವ ಚಿತ್ರ.

‘ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಉನ್ನತ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ನಮ್ಮ ಬಳಿ ಹಣವಿಲ್ಲ. ನಮ್ಮ ಪರವಾಗಿ ಸರ್ಕಾರವೇ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಇಲ್ಲದಿದ್ದರೆ 2013ರಲ್ಲಿ ಜಾರಿಗೆ ತಂದ ಕಾಯ್ದೆಯಂತೆ ಪರಿಹಾರ ನೀಡಿ. ಕಾನೂನು ಹೋರಾಟಕ್ಕೆ ಹೋದರೆ ಮತ್ತೆ ಕಾಲಹರಣ ಆಗುತ್ತದೆ. ಸರ್ಕಾರವೇ ಇನ್ನು ಐದು ಸಾವಿರ ಕೋಟಿ ರೂ. ಹೆಚ್ಚು ಹಣ ಹಾಕಿ ಭೂಮಿ ಕಳೆದುಕೊಳ್ಳುವವರಿಗೆ ಹೆಚ್ಚಿನ ಪರಿಹಾರ ನೀಡಬೇಕು’ ಎಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.

ಸುಪ್ರೀಂ ಕೋರ್ಟ್ ತೀರ್ಪು ರೈತರ ಹಿತಕ್ಕೆ ವಿರುದ್ಧವಾಗಿದ್ದು, ಸರ್ಕಾರ ಸುಗ್ರೀವಾಜ್ಞೆ ಮೂಲಕ ಇದನ್ನು ಪಕ್ಕಕ್ಕಿಟ್ಟು ರೈತರಿಗೆ 2013ರ ಕಾಯ್ದೆ ಅನ್ವಯ ಪರಿಹಾರ ಹಣ ನೀಡಬೇಕು.
ಬಿಡಿಎ ಪರವಾಗಿ ಬಂದಿರುವ ತೀರ್ಪು ಬಿಡಿಎ ಮತ್ತು ಸರ್ಕಾರದ ವಿರುದ್ಧದ ಪ್ರಕರಣವಾಗಿದ್ದು, ಯಾವುದೇ ರೈತರು ಈ ವಿಚಾರಣೆಯಲ್ಲಿ ಅರ್ಜಿದಾರರಾಗಿಲ್ಲ. ಹೀಗಾಗಿ ಈ ತೀರ್ಪು ಪಕ್ಕಕ್ಕೆ ಇಟ್ಟು ರೈತರಿಗೆ ನೆರವಾಗಬೇಕು.

ಈ ಯೋಜನೆಯಲ್ಲಿ ಜಮೀನು ಕಳೆದುಕೊಳ್ಳುವ ನಮಗೆ ಸುತ್ತಮುತ್ತಲ ಹಳ್ಳಿಗಳಲ್ಲಿರುವ ಸರ್ಕಾರಿ ಜಮೀನನ್ನು ಬದಲಿಯಾಗಿ ನೀಡಿ. ಆಗ ನಾವು ಅಲ್ಲೇ ವ್ಯವಸಾಯ ಮಾಡಿಕೊಂಡು ಹೋಗುತ್ತೇವೆ. ಕಳೆದ 15 ವರ್ಷಗಳಿಂದ ಮನೆ ಕಟ್ಟಬೇಕಾ ಬೇಡವೇ ಎಂಬ ಗೊಂದಲದಲ್ಲಿ ಇದ್ದೇವೆ? ನಮಗೆ ಬೇರೆ ಬದಲಿ ನಿವೇಶನ ನೀಡಬೇಕು. ಯಾವುದೇ ಯೋಜನೆ ನೋಟಿಫಿಕೇಶನ್ ಆದ ನಂತರ 5 ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಆಗದಿದ್ದರೆ ಆ ನೋಟಿಫಿಕೇಶನ್ ಕೈಬಿಡಬೇಕು ಎಂಬ ಕಾನೂನು ಇದೆ. ಹೀಗಾಗಿ ನಮಗೆ ಎನ್ ಓ ಸಿ ನೀಡಬೇಕು ಎಂದು ರೈತರು ಒತ್ತಾಯಿಸಿದರು.

ಪಿಆರ್ ಆರ್ ಯೋಜನೆಯ ಬಗ್ಗೆ ರೈತರೊಂದಿಗಿನ ಸಂವಾದ ಕಾರ್ಯಕ್ರಮದ ಚಿತ್ರ.

2013ರ ಕಾಯ್ದೆ ಅನ್ವಯ ಪರಿಹಾರ ನೀಡಲು ರೈತರ ಆಗ್ರಹ : ಈ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ನಮಗೆ ಈ ತ್ರಿಶಂಕು ಸ್ಥಿತಿಯಿಂದ ಹೊರಗೆ ತಂದು ನಿರಾಳತೆ ನೀಡಬೇಕು. ಸರ್ಕಾರ ನೀಡುವ ಪುಡಿಗಾಸು ಪರಿಹಾರದಲ್ಲಿ ನಾವು ಬೇರೆ ಕಡೆ ಜಮೀನು ಖರೀದಿಸಲು ಆಗುವುದಿಲ್ಲ. ಹೀಗಾಗಿ ನಮ್ಮ ಗ್ರಾಮದಲ್ಲಿ ಇರುವ ಗೋಮಾಳ ಜಮೀನನ್ನು ನಮಗೆ ನೀಡಬೇಕು.
ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಸಿಗಬೇಕಾದರೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಬೇಕು. ಅದಕ್ಕೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ರೈತರು ಮತ್ತು ಭೂಮಾಲೀಕರು ಆಗ್ರಹಿಸಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಬಗ್ಗೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಬಿಡಿಎ ಆಯುಕ್ತ ಕುಮಾರ್ ನಾಯಕ್, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಪ್ರಾಧಿಕಾರದ ಕಾರ್ಯದರ್ಶಿ ಶಾಂತರಾಜು, ಭೂಸ್ವಾಧೀನ ವಿಭಾಗದ ಮುಖ್ಯಸ್ಥರಾದ ಸೌಜನ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

KMF Milk Rate Hike | ಆ.1ರಿಂದ ಕೆಎಂಎಫ್ ನೂತನ ಹಾಲಿನ ದರ 3ರೂ. ಏರಿಕೆ ಜಾರಿ : ಮೊಸರು ಪ್ರತಿ ಕೆಜಿಗೆ 3ರೂ. ಹೆಚ್ಚಳ ; ಇಲ್ಲಿದೆ ವಿವರ

Next Post

Dasara 2023 | ಈ ಬಾರಿ ಅದ್ದೂರಿ ನಾಡಹಬ್ಬ ದಸರಾ ಮಹೋತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Dasara 2023 | ಈ ಬಾರಿ ಅದ್ದೂರಿ ನಾಡಹಬ್ಬ ದಸರಾ ಮಹೋತ್ಸವ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜೇಂದ್ರ ಚೋಳನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು

IAS NEWS | ಹೊಸದಾಗಿ ಉಪಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆ ಸೃಷ್ಟಿಸಿದ ರಾಜ್ಯ ಸರ್ಕಾರ : ಹಿರಿಯ ಐಎಎಸ್ ಅಧಿಕಾರಿ ಪಿ.ರಾಜೇಂದ್ರ ಚೋಳನ್ ನೇಮಕ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group