Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW IMPACT | ಬೆಂಗಳೂರು ವೈರ್ ವರದಿ ಪರಿಣಾಮ : ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿ- ಕೆಎಸ್ ಪಿಸಿಬಿ ಅಧಿಕಾರಿಗಳ ಜಂಟಿ ಪರಿಶೀಲನೆ ; ನೀರಿನ ಗುಣಮಟ್ಟ ಸುಧಾರಣೆಗೆ ಕ್ರಮ

ಉಲ್ಲಾಳು ಕೆರೆಯಲ್ಲಿನ ಕಲುಷಿತ ನೀರಿನ ಶುದ್ಧೀರಣಕ್ಕಾಗಿ ನೈಸರ್ಗಿಕವಾಗಿ ತಯಾರಿಸಿದ ಬೊಕಾಸಿ ಬಾಲ್ ಗಳನ್ನು ಬಳಕೆ | ಕೆರೆ ನೀರಿನ ವಿಷಕಾರಿ ಅಂಶಗಳ ನಿವಾರಣೆಗೆ ಬಿಬಿಎಂಪಿ ಕ್ರಮ | ಸ್ಥಗಿತವಾಗಿದ್ದ ಕೆರೆ ಕಾಮಗಾರಿ ಆರಂಭಕ್ಕೆ ಗುತ್ತಿಗೆದಾರರಿಗೆ ಸೂಚನೆ

by Bengaluru Wire Desk
January 13, 2024
in Bengaluru Focus, BW Special, Public interest
Reading Time: 1 min read
0
ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು ವೈರ್ ವರದಿ ಪರಿಣಾಮ

ಬೆಂಗಳೂರು, ಆ.30 www.bengaluruwire.com : ಬಿಬಿಎಂಪಿಯ ರಾಜರಾಜೇಶ್ವರಿ ನಗರ ವಲಯದ ಉಲ್ಲಾಳು ಕೆರೆಯಲ್ಲಿ ಮೀನುಗಳ ಮಾರಣಹೋಮ ಕುರಿತಂತೆ ಆ.28ರಂದು ಬೆಂಗಳೂರು ವೈರ್ ಸುದ್ದಿ ಪ್ರಸಾರದ ಬಳಿಕ ಎಚ್ಚೆತ್ತುಕೊಂಡಿರುವ ಪಾಲಿಕೆ ಕೆರೆ ವಿಭಾಗದ ಎಂಜಿನಿಯರ್ ಗಳು, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬುಧವಾರ ಕೆರೆಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.

ಇದೇ ಸಂದರ್ಭದಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದರ ಬಗ್ಗೆ ಹಿಂದಿನ ಕಾರಣ ತಿಳಿಯಲು, ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಕೆರೆಯ ನೀರಿನ ಮಾದರಿಯನ್ನು ಸಂಗ್ರಹಿಸಿದರು. ಉಲ್ಲಾಳ ಕೆರೆಯಲ್ಲಿ ಸತ್ತು ಹೋಗಿದ್ದ ಮೀನುಗಳಿಂದ ಸಾಕಷ್ಟು ದುರ್ವಾಸನೆ ಬರುತ್ತಿದ್ದು ಅದನ್ನು ನಿಯಂತ್ರಿಸಲು ಜೆಸಿಬಿ ಯಂತ್ರದ ಮೂಲಕ ಪಾಲಿಕೆ ಸಿಬ್ಬಂದಿ ಅವುಗಳನ್ನು ತೆರವುಗೊಳಿಸಿದರು.

ಸಾವಿರಾರು ಮೀನುಗಳ ಸಾವನ್ನಪ್ಪಿರುವ ಉಲ್ಲಾಳು ಕೆರೆಯಲ್ಲಿ ಬಿಬಿಎಂಪಿಯ ಕೆರೆ ವಿಭಾಗ, ಕೆಎಸ್ ಪಿಸಿಬಿ ಹಾಗೂ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳು ಬುಧವಾರ ಜಂಟಿ ತಪಾಸಣೆ ನಡೆಸಿದರು.

ಕೆರೆಯ ನೀರಿನ ಮಾದರಿ ಪರೀಕ್ಷೆಗೆ ಕೊಂಡೊಯ್ದ ಕೆಎಸ್ ಪಿಸಿಬಿ :

ಉಲ್ಲಾಳು ಕೆರೆಯ ದುಸ್ಥಿತಿ ಬಗ್ಗೆ ಬೆಂಗಳೂರು ವೈರ್ ಬಿಬಿಎಂಪಿ ಕೆರೆ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಅವರನ್ನು ಪ್ರಶ್ನಿಸಿದಾಗ, “ಉಲ್ಲಾಳು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದನ್ನು ಇದೀಗ ತೆರವುಗೊಳಿಸಲಾಗಿದೆ. ಮೀನುಗಳ ಸಾವಿಗೆ ಕಾರಣವಾಗಿರುವ ಅಂಶಗಳ ಬಗ್ಗೆ ತಿಳಿಯಲು ಬುಧವಾರ ಸ್ಥಳಕ್ಕೆ ಪಾಲಿಕೆ ಕೆರೆ ವಿಭಾಗದ ಎಇಇ ಮಹೇಶ್, ಬೆಂಗಳೂರು ಜಲಮಂಡಳಿಯ ಎಇಇ ಸೈಯ್ಯದ್ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್ ಸ್ಥಳಕ್ಕೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದ್ದಾರೆ. ನವೀನ್ ಅವರ ತಂಡ ಕೆರೆಯ ನೀರಿನ ಮಾದರಿಗಳನ್ನು ಲ್ಯಾಬ್ ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ.”

ಕೆರೆಯಲ್ಲಿ ಮೀನುಗಾರಿಕೆ ನಿಷೇಧಕ್ಕೆ ಪಾಲಿಕೆ ಕ್ರಮ :

“ಕೆರೆಯಲ್ಲಿ ಉಳಿದಿರುವ ನೀರಿನ ಶುದ್ಧೀಕರಣಕ್ಕಾಗಿ ‘ಬೊಕಾಸಿ ಬಾಲ್’ ಗಳನ್ನು ನೀರಿಗೆ ಹಾಕಿ, ನೈಸರ್ಗಿಕವಾಗಿ ನೀರಿನಲ್ಲಿ ಸೇರಿಸಿರುವ ವಿಷಕಾರಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾವನ್ನು ನಿವಾರಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಅದೇ ರೀತಿ ಮೀನುಗಾರಿಕೆ ಇಲಾಖೆಗೆ ಪತ್ರ ಬರೆದು ಉಲ್ಲಾಳು ಕೆರೆಯಲ್ಲಿ ಮೀನುಗಾರಿಕೆ ನಿಲ್ಲಿಸುವಂತೆ ಸೂಚಿಸುತ್ತೇವೆ. ಅದೇ ರೀತಿ ಹಲವು ದಿನಗಳಿಂದ ನಿಂತಿರುವ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲಾಗುತ್ತದೆ. ಬೆಂಗಳೂರು ಜಲಮಂಡಳಿ ವತಿಯಿಂದ ಮಲ್ಲತ್ತಹಳ್ಳಿ ಕೆರೆ ಬದಿ ಹಿಂದೆ ಇದ್ದ 5 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು 10 ದ.ಲ.ಲೀ ಸಾಮರ್ಥ್ಯಕ್ಕೆ ಉನ್ನತೀಕರಿಸುವ ಕಾಮಗಾರಿಗೆ ಅನುಕೂಲವಾಗುವಂತೆ ಜು.1ರಿಂದ ಉಲ್ಲಾಳ ಕೆರೆಗೆ ಸಂಸ್ಕರಿತ ನೀರು ಹರಿಯುವುದು ನಿಂತಿರುವ ಕಾರಣ ಹಾಗೂ ಮಳೆಯ ಕೊರತೆಯಿಂದ ಕೆರೆ ಬಹುತೇಕ ಬರಿದಾಗಿದೆ” ಎಂದು ಸಿಇ ವಿಜಯ್ ಕುಮಾರ್ ಹರಿದಾಸ್ ತಿಳಿಸಿದ್ದಾರೆ.

ಕಲುಷಿತಗೊಂಡಿರುವ ಉಲ್ಲಾಳ ಕೆರೆಗೆ ಬಿಬಿಎಂಪಿ ಕೆರೆ ವಿಭಾಗ ಜೈವಿಕ ರಾಸಾಯನಿಕ ಸಿಂಪಡಿಸುತ್ತಿರುವುದು.

ಬೆಳಗಿನ ಹೊತ್ತು ವಾಯು ವಿಹಾರಕ್ಕೆ ಬರುವ ನಡಿಗೆದಾರರಿಗೆ, ಸತ್ತು ಮೀನುಗಳು ಕೊಳೆತು ನಾರುತ್ತಿರುವ ಕಾರಣ ಮೂಗು ಹಿಡಿದೇ ನಡಿಗೆ ಮಾಡುವಂತಾಗಿದೆ. ಈ ಮೀನುಗಳ ಮಾರಣ ಹೋಮವಾಗಿ ನಾಲ್ಕೈದು ದಿನಗಳು‌ ಕಳೆದರೂ ಉಲ್ಲಾಳ ಕೆರೆಯ ಹೊಣೆ ಹೊತ್ತ ಬಿಬಿಎಂಪಿ‌ಕೆರೆ ವಿಭಾಗದ ಎಂಜಿನಿಯರ್ ಗಳಾಗಲಿ, ಕೆರೆಯ ನಿರ್ವಹಣೆ ಹೊಣೆಹೊತ್ತ ಗುತ್ತಿಗೆದಾರರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ ಎಂದು “ಬಿಬಿಎಂಪಿಯ ಉಲ್ಲಾಳ ಕೆರೆಯಲ್ಲಿ ಮೀನುಗಳ‌ ಮಾರಣಹೋಮ…!! ಹೇಳೋರಿಲ್ಲ ಕೇಳೋರಿಲ್ಲ!! ಅಧಿಕಾರಿಗಳೇನು ಮಾಡ್ತಿದ್ದಾರೆ!!?” ಶೀರ್ಷಿಕೆಯಡಿ ಮೊದಲಿಗೆ ಸುದ್ದಿ ಪ್ರಸಾರ ಮಾಡಿತ್ತು.

ಆ ಬಳಿಕ ಇತರ ರಾಜ್ಯ ಮಟ್ಟದ ಇಂಗ್ಲೀಷ್ ಮತ್ತು ಕನ್ನಡ ದಿನಪತ್ರಿಕೆಗಳು ಬೆಂಗಳೂರು ವೈರ್ ಕನ್ನಡ ಡಿಜಿಟಲ್ ವೆಬ್ ನ್ಯೂಸ್ ಪೋರ್ಟಲ್ ಸುದ್ದಿಯನ್ನು ಅನುಸರಿಸಿ ಉಲ್ಲಾಳ ಕೆರೆಯಲ್ಲಿ ಮೀನುಗಳ ಸತ್ತು ಹೋಗಿರುವ ಬಗ್ಗೆ ವರದಿ ಪ್ರಕಟಿಸಿದ್ದವು.

27 ಎಕರೆ ವಿಸ್ತೀರ್ಣದ ಉಲ್ಲಾಳ ಕೆರೆಯಲ್ಲಿ ಪಾಲಿಕೆಯ ಗಮನಕ್ಕೆ ಬಾರದೆ ಮೀನುಗಾರಿಕಾ ಇಲಾಖೆಯು ಬೆಂಗಳೂರು ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಖಾಸಗಿಯವರಿಗೆ ಮೀನು ಸಾಕಲು ಅನುಮತಿ ಪಡೆದಿರುವುದರ ಬಗ್ಗೆಯೂ ಬೆಂಗಳೂರು ವೈರ್ ಆ.28ರ ವರದಿಯಲ್ಲಿ ತಿಳಿಸಿತ್ತು. ಅದೇ ರೀತಿ ಕೆರೆಯಲ್ಲಿನ ಔಗುಪ್ರದೇಶದಲ್ಲಿ ಹೂಳೆತ್ತುವ, ನಡಿಗೆ ಮಾರ್ಗ ಸರಿಪಡಿಸುವ, ಕೆರೆ ದಂಡೆಯಲ್ಲಿ ಕಲ್ಲಿನ ಬೆಂಚು ಹಾಕುವ ಮತ್ತಿತರ ಕಾರ್ಯಗಳ ಸುಮಾರು 2 ಕೋಟಿ ರೂ. ಕಾಮಗಾರಿಯು ಮಂಜೂರಾಗಿದೆ. ಈ ಪೈಕಿ ಉಲ್ಲಾಳು ಕೆರೆಯ ಜೌಗು ಪ್ರದೇಶದಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು, ಪಾಲಿಕೆಯಿಂದ ಹಳೆ ಬಿಲ್ ಬಾಕಿ ಕಾರಣದ ನೆಪ ಹೇಳಿ ಕಾಮಗಾರಿಯನ್ನು ನಿಲ್ಲಿಸಿದ್ದರು. ಈ ಬಗ್ಗೆಯೂ ಪಾಲಿಕೆ ಗಮನ ಸೆಳೆಯಲಾಗಿತ್ತು. ಇವೆಲ್ಲದರ ಬಗ್ಗೆ ಕ್ರಮ ಜರುಗಿಸುವುದಾಗಿ ಬಿಬಿಎಂಪಿ ಕೆರೆ ವಿಭಾಗದ ಚೀಫ್ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಭರವಸೆ ನೀಡಿದ್ದಾರೆ.

ಉಲ್ಲಾಳು ಕೆರೆಯ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿ.

ಉಲ್ಲಾಳು ಕೆರೆಗೆ ವರ್ಷದ ಹಲವು ತಿಂಗಳುಗಳ ಕಾಲ ವಿದೇಶಿ ಹಕ್ಕಿಗಳು ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಜಾತಿಯ ಹಕ್ಕಿಗಳು ಆಹಾರ ಅರಸಿ ಬರುತ್ತವೆ. 13 ರಿಂದ 14ಕ್ಕೂ ಹೆಚ್ಚು ನವಿಲುಗಳು, ಆಮೆ, ಹಾವು, ಮುಂಗುಸಿ, ಅಳಿಲು ಸೇರಿದಂತೆ ಹತ್ತಾರು ಪ್ರಾಣಿ, ಪಕ್ಷಿಗಳು ಹಾಗೂ ಸರೀಸೃಪಗಳ ಆಶ್ರಯ ತಾಣವಾಗಿರುವ ಉಲ್ಲಾಳು ಕೆರೆಯ ಅಭಿವೃದ್ಧಿಗೆ ಬಿಬಿಎಂಪಿ ತನ್ನ ಬದ್ಧತೆಯನ್ನು ತೋರಿಸಬೇಕಿದೆ ಎಂಬುದು ಸ್ಥಳೀಯ ನಿವಾಸಿಗಳ ಆಗ್ರಹವಾಗಿದೆ.

ಏನಿದು ಬೊಕಾಸಿ ಬಾಲ್? :

ಬೊಕಾಸಿ ಬಾಲ್ ಗಳು ಸಾವಯವ ವಸ್ತುಗಳಾದ ಉದ್ಯಾನವನದ ಮಣ್ಣು, ಸೂಕ್ಷ್ಮ ಜೀವಾಣುಗಳು, ಕಾಕಂಬಿ ಹಾಗೂ ಭತ್ತದ ತೌಡನ್ನು ಮಿಶ್ರಣ ಮಾಡಿ ತಯಾರಿಸುವ ಒಂದು ಮುದ್ದೆಯಾಗಿದೆ. ಈ ಮುದ್ದೆಗಳನ್ನು ಕಲುಷಿತ ನೀರಿಗೆ ಮಿಶ್ರಣ ಮಾಡಿದಾಗ, ನೀರಿನಲ್ಲಿನ ಅಪಯಕಾರಿ ಬ್ಯಾಕ್ಟೀರಿಯಾ ಹಾಗೂ ವಿಷಕಾರಿ ಅಂಶಗಳನ್ನು ನಿವಾರಿಸುತ್ತದೆ.

WhatsApp Join our WhatsApp Channel
Previous Post

Gruha Lakshmi Scheme | ರಾಜ್ಯದ 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವಿಡಿಯೋ ಮೂಲಕ “ಗೃಹಲಕ್ಷ್ಮಿ ಯೋಜನೆ”ಗೆ ಚಾಲನೆ

Next Post

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

Next Post
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್-2ರ ಹೊರನೋಟದ ಚಿತ್ರ.

KIAL T2 International Airport | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 : ಆ.31ರಿಂದ ಕಾರ್ಯಾಚರಣೆ ಆರಂಭ

BBMP CE CM Shivakumar Died | ಬಿಬಿಎಂಪಿಯ ಅಗ್ನಿ ಅನಾಹುತ : ಗಾಯಗೊಂಡವರಲ್ಲಿ ಮುಖ್ಯ ಎಂಜಿನಿಯರ್ ಸಿ.ಎಂ.ಶಿವಕುಮಾರ್ ವಿಧಿವಶ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group