Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ  ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು

ಬಿಜೆಪಿ ಶಾಸಕರು ಪ್ರತಿನಿಧಿಸುವ ಮೂರು ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ವಾರ್ಡ್ ಗಳ ಹೆಸರು ಬದಲಾವಣೆ

by Bengaluru Wire Desk
September 25, 2023
in Bengaluru Focus, Public interest
Reading Time: 2 mins read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.25 www.bengaluruwire.com : ಕಾಂಗ್ರೆಸ್ ನೇತೃತ್ವದ ಸರ್ಕಾರ ಬೃಹತ್ ಬೆಂಗಳೂರು ನಗರ ಪಾಲಿಕೆ (BBMP)ಯಲ್ಲಿ 225 ವಾರ್ಡ್ ಪುನರ್ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಸೋಮವಾರ ಪ್ರಕಟಸಿದ್ದು (ಸೆ.25),  ಕರಡು ಅಧಿಸೂಚನೆಯಲ್ಲಿದ್ದ 16 ವಾರ್ಡ್ ಹೆಸರುಗಳನ್ನು ಅಂತಿಮವಾಗಿ ಬದಲಿಸಿದೆ.

ಈ 16 ವಾರ್ಡ್ ಗಳ ಪೈಕಿ 3 ಬಿಜೆಪಿ ಶಾಸಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ವಾರ್ಡ್‌ಗಳ ಹೆಸರನ್ನು‌ ಮುಲಾಜಿಲ್ಲದೆ ಬದಲಾಯಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ (ಶಾಸಕ ಕೆ.ಗೋಪಾಲಯ್ಯ), ರಾಜಾಜಿನಗರ (ಶಾಸಕ ಎಸ್.ಸುರೇಶ್ ಕುಮಾರ್) ಹಾಗೂ ಬಸವನಗುಡಿ ವಿಧಾನಸಭಾ ಕ್ಷೇತ್ರ (ಶಾಸಕ ಎಲ್.ಎ ರವಿಸುಬ್ರಮಣ್ಯ) ದಲ್ಲಿ ತಲಾ ಮೂರು ವಾರ್ಡ್ ಗಳ ಹೆಸರು ಬದಲಾವಣೆಯಾಗಿದೆ. ಅದರಲ್ಲೂ ಬಸವನಗುಡಿಯ ಕ್ಷೇತ್ರದಲ್ಲಿ 198ನೇ ವಾರ್ಡ್ ಬಸವನಗುಡಿ ಹೆಸರನ್ನು ದೊಡ್ಡ ಗಣಪತಿಯೆಂದೂ, ಹಲವು ದಶಕಗಳಿಂದ ಸ್ಥಳೀಯ ಜನರಿಗೆ ಹಾಗೂ ಬೆಂಗಳೂರಿನ ಸಂಸ್ಕೃತಿ ಹೆಗ್ಗುರುತಿನ ಹೆಸರಿದ್ದ 200ನೇ ವಾರ್ಡ್ ಗಿರಿನಗರ ಹೆಸರನ್ನು ಸ್ವಾಮಿ ವಿವೇಕಾನಂದ ವಾರ್ಡ್ ಎಂದೂ ಹಾಗೂ ಬಸವನಗುಡಿಗೆ ಕಲಶಪ್ರಾಯವಾಗಿದ್ದ 196ನೇ ವಾರ್ಡ್ ಹನುಮಂತನಗರ ಹೆಸರನ್ನು ಗವಿಗಂಗಾಧರೇಶ್ವರ ಹೆಸರಿಗೆ ಬದಲಾಯಿಸಲಾಗಿದೆ.

ಈ ಹಿಂದೆ 198 ವಾರ್ಡ್ ಹಾಗೂ 243 ವಾರ್ಡ್ ಮಾಡಿದಾಗಲೂ ಗಿರಿನಗರ, ಹನುಮಂತನಗರ ಹಾಗೂ ಬಸವನಗುಡಿ ಹೆಸರುಗಳು ವಾರ್ಡ್ ಪುನರ್ವಿಂಗಡಣೆ ಮಾಡಿದ್ದರೂ ಹಳೆಯ ಹೆಸರುಗಳನ್ನು ತೆಗೆದಿರಲಿಲ್ಲ. ಇದೀಗ 225 ವಾರ್ಡ್ ಗಳ ಅಂತಿಮ ಅಧಿಸೂಚನೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಈ ಸರ್ಕಸ್ ಮಾಡಿದೆ. 16 ವಾರ್ಡ್ ಗಳ ಹೆಸರು 225 ವಾರ್ಡ್ ಗಳ ಪುನರ್ ವಿಂಗಡಣೆ ಕರಡು ತಯಾರಿಸುವಾಗ ಇದ್ದ ಹೆಸರು ಅಂತಿಮ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ.

16 ವಾರ್ಡ್ ಗಳ ಹೆಸರು ಬದಲಾಗಿರುವ ವಿವರ :

ಕ್ರಮ ಸಂಖ್ಯೆವಿಧಾನಸಭಾ ಕ್ಷೇತ್ರಪುನರ್ವಿಂಗಡಣೆಯಾದ ವಾರ್ಡ್ ಸಂಖ್ಯೆ ಮತ್ತು ಹೆಸರು (ಆವರಣದಲ್ಲಿರುವುದು ಹಳೆಯ ಹೆಸರು)
1)ಮಹಾಲಕ್ಷ್ಮಿಲೇಔಟ್46. ರಾಜೀವ್ ನಗರ (ಮಾರಪ್ಪನಪಾಳ್ಯ)
 47. ಡಾ.ಪುನೀತ್ ರಾಜ್ ಕುಮಾರ್ (ನಂದಿನಿ ಲೇಔಟ್)
 50. ನಾಲ್ವಡಿ ಕೃಷ್ಣರಾಜ ಒಡೆಯರ್ (ಡಾ.ಪುನೀತ್ ರಾಜ್ ಕುಮಾರ್)
2)ರಾಜಾಜಿನಗರ130. ಶ್ರೀ ರಾಮಮಂದಿರ (ಪ್ರಕಾಶ್ ನಗರ)
 131. ಶಿವನಗರ (ಶ್ರೀರಾಮಮಂದಿರ)
 132. ರಾಜಾಜಿನಗರ (ಶಿವನಗರ)
3)ಬಸವನಗುಡಿ196. ಗವಿಗಂಗಾಧರೇಶ್ವರ (ಹನುಮಂತನಗರ)
 198. ದೊಡ್ಡ ಗಣಪತಿ (ಬಸವನಗುಡಿ)
 200. ಸ್ವಾಮಿ ವಿವೇಕಾನಂದ (ಗಿರಿನಗರ)
4)ಮಹದೇವಪುರ98. ಹೂಡಿ (ಬೆಲತ್ತೂರು)
 99. ಭೈರತಿ (ಹೂಡಿ)
5)ಯಶವಂತಪುರ27. ಲಿಂಗಧೀರನಹಳ್ಳಿ (ಬ್ಯಾಡರಹಳ್ಳಿ)
6)ಸರ್ವಜ್ಞನಗರ83.ಸುಬ್ಬಯ್ಯನಪಾಳ್ಯ (ಕೆಎಸ್ ಎಫ್ ಸಿ ಲೇಔಟ್)
7)ಶಿವಾಜಿನಗರ118. ಸಂಪಂಗಿರಾಮನಗರ (ಎಸ್.ಆರ್.ನಗರ)
8)ಶಾಂತಿನಗರ167. ಅಶೋಕ್ ನಗರ (ಶಾಂತಲಾ ನಗರ)
9)ಚಿಕ್ಕಪೇಟೆ165. ಬಿ.ವೆಂಕಟರೆಡ್ಡಿ ನಗರ (ಸೋಮೇಶ್ವರ ನಗರ)

ನಿರೀಕ್ಷೆಯಂತೆಯೇ ನಗರಾಭಿವೃದ್ಧಿ ಇಲಾಖೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸಂಬಂಧಿಸಿದಂತೆ 225 ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಆ.18 ರಂದು ಕರ್ನಾಟಕ ರಾಜ್ಯಪತ್ರ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಿತ್ತು. ಈ ಕರಡಿನ ವಾರ್ಡ್ ವಾರು ಪುನರ್ ವಿಂಗಡಣೆ ಕುರಿತಂತೆ ಸಾರ್ವಜನಿಕರು – ಸಂಸ್ಥೆಗಳಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಿತ್ತು. ಬಿಬಿಎಂಪಿ ವಾರ್ಡುಗಳ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷರು ಹಾಗೂ ಪಾಲಿಕೆ ಮುಖ್ಯ ಆಯುಕ್ತರಾಗಿರುವ ತುಷಾರ್ ಗಿರಿನಾಥ್, ಆಗಸ್ಟ್ 8ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸರ್ಕಾರಕ್ಕೆ ಆಗಸ್ಟ್ 14ರಂದು ವಾರ್ಡ್ ವಾರು ಕರಡು ಪುನರ್ ವಿಂಗಡಣಾ ವರದಿಯನ್ನು ಸಲ್ಲಿಸಿದ್ದರು. ಇದನ್ನು ಒಪ್ಪಿದ ಸರ್ಕಾರವು 2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಕರಡು ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಗೆ 2021ರ ನವೆಂಬರ್ 20ರಂದು ವಾರ್ಡುಗಳ ಪುನರ್ ವಿಂಗಡಣೆಗಾಗಿ ರಚಿಸಲಾಗಿದ್ದ ಸಮಿತಿಯ ಶಿಫಾರಸ್ಸಿನ ಅನ್ವಯ, ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು 243 ವಾರ್ಡುಗಳಾಗಿ ವಿಂಗಡಣೆಗೊಳಿಸಿ ಅಧಿಸೂಚಿಸಲಾಗಿತ್ತು. ಆದರೆ ಈ ಅಧಿಸೂಚನೆಯನ್ನು ಪ್ರಶ್ನಿಸಿ, ಅದರ ವಿರುದ್ಧ ದಾಖಲಾಗಿದ್ದ ರಿಟ್ ಅರ್ಜಿಗಳನ್ನು, ಹೈಕೋರ್ಟ್ 2022ರ ಸೆಪ್ಟೆಂಬರ್ 16ರ ಆದೇಶದಲ್ಲಿ ವಜಾಗೊಳಿಸಿತ್ತು. ಈ ಆದೇಶವನ್ನು, ಪ್ರಶ್ನಿಸಿ ಮಾಜಿ ಮೇಯರ್ ಬಿ.ಎಸ್. ಮಂಜುನಾಥ ರೆಡ್ಡಿ ಮತ್ತು ಇತರರು ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ರಿಟ್ ಅಪೀಲು ದಾಖಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ದ್ವಿಸದಸ್ಯ ನ್ಯಾಯಪೀಠ ಈ ವರ್ಷದ ಜೂನ್ 19ರಂದು, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ ಪುನರ್ ವಿಂಗಡಣೆ ಕುರಿತಂತೆ  ನಿಗದಿತ ಮಾರ್ಗಸೂಚಿಗಳು ಮತ್ತು ಕಾನೂನಿನ ಸಂಬಂಧಿತ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ 12 ವಾರಗಳ ಸಮಯವನ್ನು ನೀಡಿತ್ತು. ಇದರ ಆಧಾರದ ಮೇಲೆ  ರಾಜ್ಯ ಸರ್ಕಾರವು ಪಾಲಿಕೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ಗಳ ಪುನರ್ ವಿಂಗಡಣಾ ಆಯೋಗವನ್ನು ಜೂನ್ 23ರಂದು ಪುನರ್ ರಚಿಸಿ ಆದೇಶಿಸಿತ್ತು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರ ನವೆಂಬರ್ 20ರಂದು 243 ಬಿಬಿಎಂಪಿ ಕೌನ್ಸಿಲರ್ ಗಳನ್ನು ನಿಗದಿಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು ಪಾಲಿಕೆ ಪುರಪಿತೃಗಳ ಸಂಖ್ಯೆಯನ್ನು 225ಕ್ಕೆ ನಿಗದಿಪಡಿಸಿತ್ತು. ಇದರ ಆಧಾರದ ಮೇಲೆ ಪ್ರಸ್ತುತ 225 ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಾಡಲಾಗಿದ್ದು, ಸೆ.25ರಂದು ಈ ಬಗ್ಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ಸೋಮವಾರದಿಂದಲೇ ನಗರದಲ್ಲಿ 225 ವಾರ್ಡ್ ಗಳು ಅಧಿಕೃತವಾಗಿ ಚಾಲ್ತಿಗೆ ಬಂದಂತಾಗಿದೆ.

ಬ್ರಾಂಡ್ ಬೆಂಗಳೂರಿನ ಮೂಲ ಹೆಸರುಗಳ ಬದಲಾವಣೆ ಬಗ್ಗೆ ಮಾಜಿ ಮೇಯರ್ ಹೇಳಿದ್ದೇನು?:

“ಐವತ್ತು ವರ್ಷಗಳ ಹಿಂದೆ ಬಸವನಗುಡಿ ವಾರ್ಡ್ ಹೆಸರು ಬಸವೇಶ್ವರ ಎಂದಾಗಿತ್ತು. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಗಳಾಗಿದ್ದಾಗ ಈ ವಾರ್ಡ್ ಹೆಸರನ್ನು ಬಸವನಗುಡಿ ಎಂದು ಹೆಸರಿಡಲಾಯಿತು. ಈಗ ದೊಡ್ಡ ಗಣಪತಿ ಎಂದು ಹೆಸರು ಬದಲಾಯಿಸಲಾಗಿದೆ. ಹನುಮಂತ ನಗರ ವಾರ್ಡ್ ನಲ್ಲಿ ಶ್ರೀರಾಮ ಹಾಗೂ ಹನುಮಂತನನ್ನು ಅಪ್ಪಿಕೊಂಡಿಕೊಂಡಿರುವ ಬೃಹದಾಕಾರದ ಪ್ರತಿಮೆಯಿರುವ ಬಹಳ ಹಳೆಯ ದೇವಸ್ಥಾನದಿಂದ ಹನುಮಂತನಗರ ಎಂದೇ ಎಲ್ಲೆಡೆ ಜನ ಜನಿತವಾಗಿತ್ತು. ಈಗ ಅದನ್ನು ಗವಿಗಂಗಾಧರೇಶ್ವರ ಎಂದು ಬದಲಾವಣೆ ಮಾಡಲಾಗಿದೆ. ಅದೇ ರೀತಿ 40 ವರ್ಷಗಳ ಹಿಂದೆ ಕೃಷ್ಣಭಟ್ ಎಂಬುವರು ಲೇಔಟ್ ಮಾಡಿದ್ದ ಸ್ಥಳವನ್ನು ಗಿರಿನಗರ ಮಾಡಲಾಗಿತ್ತು. ಆ ಹೆಸರು ಈಗ ಸ್ವಾಮಿ ವಿವೇಕಾನಂದ ಎಂದು ಹೆಸರು ನೀಡಿದ್ದಾರೆ. ಬೆಂಗಳೂರಿನ ಹೆಗ್ಗುರುತಾಗಿರುವ ಈ ಹೆಸರುಗಳನ್ನು ಬದಲಾಯಿಸಿದ್ದು ಬಹಳ ಬೇಸರದ ಸಂಗತಿ. ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಿ ಕೌನ್ಸಿಲ್ ಆಡಳಿತ ಬಂದರೆ ಸಾಮಾನ್ಯ ನಾಗರೀಕರಿಗೆ ಅನುಕೂಲವಾಗಲಿದೆ.”

– ಕಟ್ಟೆ ಸತ್ಯನಾರಾಯಣ, ಬಿಬಿಎಂಪಿ ಮಾಜಿ ಮೇಯರ್
WhatsApp Join our WhatsApp Channel
Previous Post

ಕಾವೇರಿ ನೀರು ವಿವಾದ : ನಾಳೆ “ಬೆಂಗಳೂರು ಬಂದ್” ಗೆ 250ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ : ಸೆ.29ಕ್ಕೂ “ಕರ್ನಾಟಕ ಬಂದ್” – ಸಂಘಟನೆಗಳ ಮಧ್ಯೆ ಮೂಡದ ಒಮ್ಮತ

Next Post

BW SPECIAL | BBMP NAMMA CLINIC | ಬಿಬಿಎಂಪಿಯ ನಮ್ಮ ಕ್ಲಿನಿಕ್ ಗಳಲ್ಲಿ ಈವರೆಗೆ 4.84 ಲಕ್ಷ ಹೊರ ರೋಗಿಗಳಿಂದ ಆರೋಗ್ಯ ಸೇವೆ ಬಳಕೆ : ಔಷಧಿ ಕೊರತೆ ನಿವಾರಿಸಲು ಆಗ್ರಹ

Next Post
ಬಿಬಿಎಂಪಿ ನಮ್ಮ ಕ್ಲಿನಿಕ್ ವೊಂದರ ಸಾಂದರ್ಭಿಕ ಚಿತ್ರ.

BW SPECIAL | BBMP NAMMA CLINIC | ಬಿಬಿಎಂಪಿಯ ನಮ್ಮ ಕ್ಲಿನಿಕ್ ಗಳಲ್ಲಿ ಈವರೆಗೆ 4.84 ಲಕ್ಷ ಹೊರ ರೋಗಿಗಳಿಂದ ಆರೋಗ್ಯ ಸೇವೆ ಬಳಕೆ : ಔಷಧಿ ಕೊರತೆ ನಿವಾರಿಸಲು ಆಗ್ರಹ

WildLife News | ಮೈಸೂರು ಸಿಐಡಿ ಅರಣ್ಯ ಘಟಕದಿಂದ ಮನೆಯಲ್ಲಿ ಅಕ್ರಮವಾಗಿ 9 ಜಾತಿಯ ಹಾವು ಹಾಗೂ ಅಪರೂಪದ ಬೆಕ್ಕುಗಳನ್ನು ಸಾಕಿದ್ದ ಓರ್ವನ ಬಂಧನ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group