Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Belagavi Session | ನಾಡಪ್ರಭು ಕೆಂಪೇಗೌಡ ಬಡಾವಣೆ : “ಸದನವನ್ನು‌ ತಪ್ಪು ದಾರಿಗೆ ಎಳೆದ ಬಿಡಿಎ”

"ಶಾಸಕ ಸುರೇಶ್ ಕುಮಾರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿ.ಕೆ.ಶಿವಕುಮಾರ್ ಗೆ ಲಿಖಿತ ಉತ್ತರ ನೀಡಿದ್ದರು. ಇದು ಸದನದ ದಿಕ್ಕು ತಪ್ಪಿಸುವಂತಿದೆ" ಎಂದು ಎನ್ ಪಿಕೆಎಲ್ ಮುಕ್ತ ವೇದಿಕೆ ಆರೋಪಿಸಿದೆ.

by Bengaluru Wire Desk
December 5, 2023
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಡಿ.05 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲಭೂತ ಸೌಕರ್ಯಗಳ ಕುರಿತ ಪ್ರಶ್ನೆಯೊಂದಕ್ಕೆ ಸರ್ಕಾರಕ್ಕೆ ಸಿದ್ದಪಡಿಸಿ ನೀಡಿರುವ ಉತ್ತರ ವಾಸ್ತವದಲ್ಲಿ ಸದನವನ್ನು ದಾರಿ ತಪ್ಪಿಸುವಂತಿದೆ ಎಂದು ಆರೋಪಿಸಲಾಗಿದೆ.

ಮಂಗಳವಾರ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ, ಶಾಸಕ ಸುರೇಶ್ ಕುಮಾರ್ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿ.ಕೆ.ಶಿವಕುಮಾರ್ ಗೆ ಬಿಡಿಎ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಮೂಲಭೂತ ಸೌಕರ್ಯಗಳ ಕುರಿತ ಪ್ರಶ್ನೆಗೆ ಮಾಹಿತಿ ನೀಡಿತ್ತು. ಡಿಸಿಎಂ ನೀಡಿದ ಈ ಉತ್ತರವು ವಾಸ್ತವಾಂಶಕ್ಕೆ ದೂರವಾಗಿದೆ. ಬಿಡಿಎ ಎಂಜಿನಿಯರಿಂಗ್ ವಿಭಾಗವು ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ ದೂರಿದೆ.

ಬಿಡಿಎ ಇಲ್ಲಿಯವರೆಗೂ ಮಾಡಿರುವ ಮೂಲಭೂತ ಸೌಕರ್ಯ ಕಾಮಗಾರಿಗಳಿಂದ ಯಾವುದೇ ನಿವೇಶನಾದಾರರಿಗೆ, ಮನೆ ಕಟ್ಟುತ್ತಿರುವವರಿಗೆ ಅನುಕೂಲವಾಗಿಲ್ಲ. ಭೂಸ್ವಾಧೀನ ಸಮಸ್ಯೆಗಳಿಲ್ಲದ ಪ್ರದೇಶದಲ್ಲಿ ನೀರು, ಒಳಚರಂಡಿ, ವಿದ್ಯುತ್ ಸಂಪರ್ಕವನ್ನು ಕೊಡಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಲಾಗಿದೆ. ಭೂಸ್ವಾದಿನ ಸಮಸ್ಯೆಗಳಿರುವ ಪ್ರದೇಶದಿಂದಾಗಿ ನಿರಂತರತೆ ಕಾಪಾಡಿಕೊಳ್ಳುವಲ್ಲಿ ಸಮಸ್ಯೆ ಉಂಟಾಗಿರುವ ಬಡಾವಣೆಯ ಕೆಲವು ಭಾಗಗಳಿಗೆ ನೀರು, ಒಳಚರಂಡಿ, ವಿದ್ಯುತ್ ಪರ್ಯಾಯ ವ್ಯವಸ್ಥೆಯ ಮೂಲಕ ತಾತ್ಕಾಲಿಕವಾಗಿ ಕಲ್ಪಿಸಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಲಾಗಿದೆ ಎಂದು ವೇದಿಕೆಯ ಕಾರ್ಯದರ್ಶಿ ಎಂ.ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆ ಕಟ್ಟುತ್ತಿರುವ ನಿವೇಶನದಾರರಿಗೆ ತಾತ್ಕಾಲಿಕವಾಗಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣ ಮಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮತ್ತು ಬಡಾವಣೆ ಎಲ್ಲಾ ನಿವೇಶನಗಳ ಹಂಚಿಕೆಯದಾರರಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ ಎಂದು ಸದನದ ದಿಕ್ಕು ತಪ್ಪಿಸಿದ್ದಾರೆ. ವಾಸ್ತವವಾಗಿ ಭೂಸ್ವಾಧೀನ ಸಮಸ್ಯೆಗಳಿರದ ಪ್ರದೇಶ, ಭೂಸ್ವಾಧೀನ ಸಮಸ್ಯೆಗಳಿಂದ ನಿರಂತರತೆಗೆ ಉಂಟಾಗಿರುವ ಸಮಸ್ಯೆಯ ಪ್ರದೇಶಗಳನ್ನು ಒಳಗೊಂಡಂತೆ ತಾತ್ಕಾಲಿಕವಾಗಿ ಯಾವುದೇ ಪರಿಹಾರವನ್ನು ಮಾಡಿರುವುದಿಲ್ಲ ಎಂದು ಅವರು ದೂರಿದ್ದಾರೆ.

ಒಳಚರಂಡಿ,ನೀರು, ವಿದ್ಯುತ್ ಸಂಪರ್ಕ ಕೊಡುವ ಪರಿಕರಗಳ ಅಳವಡಿಕೆ ಕಾಮಗಾರಿಗಳು ಕೂಡ ಅರ್ಧಂಬರ್ಧವಾಗಿರುತ್ತದೆ. ಈ ಅವ್ಯವಸ್ಥೆಯಿಂದ ಮನೆ ಕಟ್ಟುವವರು ತ್ರಿಶಂಕು ನರಕವನ್ನು ಅನುಭವಿಸುತ್ತಿದ್ದಾರೆ.

ಅಸಲಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿನ ಸಮಸ್ಯೆಗಳು ಈ ಕೆಳಕಂಡಂತಿವೆ : 

1. ಶೌಚ ಅಥವಾ ಕೊಳಚೆ ಗುಂಡಿ :

ಮನೆ ನಿರ್ಮಾಣ ಆರಂಭಿಸಿದವರಿಗೆ ಬಿಡಿಎ ಯುಜಿಡಿ ಜಾಲಕ್ಕೆ ಸಂಪರ್ಕ ಕಲ್ಪಿಸಬಾರದು ಎಂದು, ಕೊಳಚೆ ನೀರು ವಿಲೇವಾರಿ ಮಾಡಲು ಶೌಚ/ಕೊಳಚೆ ಗುಂಡಿಗಳನ್ನು ನಿರ್ಮಿಸಲು ಬಿಡಿಎ ಎಂಜಿನಿಯರ್ ಗಳು ಮೌಖಿಕವಾಗಿ ಒತ್ತಾಯಿಸುತ್ತಿದ್ದಾರೆ.

2. ಕೊಳವೆ ಬಾವಿಯ ನೀರು :

ಮನೆ ನಿರ್ಮಾಣಕ್ಕೆ , ನಿರ್ಮಾಣದ ನಂತರ ಬಿಡಿಎ ಜಾಲದಿಂದ ನೀರನ್ನು ಒದಗಿಸುತ್ತಿಲ್ಲ. ಬದಲಿಗೆ ಎಲ್ಲರೂ ಕೊಳವೆ ಬಾವಿಯ  ನೀರಿನ ಮೇಲೆ ಅವಲಂಬಿತವಾಗಬೇಕಾದ ಪರಿಸ್ಥಿತಿಯಿದೆ.

3. ಕಗ್ಗತ್ತಲೆಯ ಬಡಾವಣೆ :

ಅಪೂರ್ಣ ಕಾಮಗಾರಿಯಿಂದಾಗಿ ಭೂಗತ ಬಿಡಿಎ ವಿದ್ಯುತ್ಜಾಲದ ಬದಲಾಗಿ ಬೆಸ್ಕಾಂನಿಂದ ಓವರ್‌ಹೆಡ್ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುತ್ತಿದೆ. ಬಡಾವಣೆಯ ನಿವೇಶನದಾರರ ಹೊಸದಾಗಿ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸಲು, ವಿದ್ಯುತ್ ಸಂಪರ್ಕ ಪಡೆಯಲು ತಿಂಗಳುಗಟ್ಟಲೆ ತಿರುಗಾಡಬೇಕಾಗಿದೆ. ಮನೆ ನಿರ್ಮಿಸುತ್ತಿರುವವರ ರಸ್ತೆಯಲ್ಲಿ ಮನೆ ನಿರ್ಮಾಣ ಸಾಮಗ್ರಿ ಕಳವು ತಡೆಯಲು ಉಳಿದುಕೊಳ್ಳುವ ಕಾರ್ಮಿಕರ, ಮನೆ ನಿರ್ಮಾಣ ನಂತರ ವಾಸಿಸುವವರ ಸುರಕ್ಷತೆಗಾಗಿ ಬಿದ್ದಿ ದೀಪಗಳ ವ್ಯವಸ್ಥೆಗಾಗಿ ಗೋಗರೆಯುವ ಪರಿಸ್ಥಿತಿ ಇದೆ. 

4. ಮಣ್ಣಿನ ಹಳ್ಳ ಕೊಳ್ಳಗಳ ರಸ್ತೆ :

ಬಡಾವಣೆಯಲ್ಲಿ ಬಿಡಿಎ 30,40,50  ಅಡಿ ಆಂತರಿಕ ರಸ್ತೆಗಳು ಅವ್ಯವಸ್ಥಿತವಾಗಿದೆ. ಮನೆ ನಿರ್ಮಾಣ ಸಾಮಗ್ರಿ ಸಾಗಿಸುವ ವಾಹನಗಳು ನಿರ್ಮಾಣ ಪ್ರಾರಂಭವಾದ ನಿವೇಶನಗಳಿಗೆ ತಲುಪಲು ತುಂಬಾ ಕಷ್ಟಕರವಾಗಿದೆ. ಕಟ್ಟಡ ನಿರ್ಮಾಣ ಸ್ಥಳಗಳಿಗೆ ಹರಸಾಹಸ ಪಟ್ಟು ಹೋಗಬೇಕಿದೆ. ಹೀಗಾಗಿ ನಿವೇಶನಗಳಿಗೆ ವಸ್ತುಗಳನ್ನು ಸಾಗಿಸಲು ಹೆಚ್ಚುವರಿ ಹಣವನ್ನು ಪಾವತಿಸಬೇಕಾಗಿದೆ ಮತ್ತು ವಾಹನ ಚಲಾಯಿಸುವ ವ್ಯವಸ್ಥಿತ ರಸ್ತೆ ಇಲ್ಲದಿರುವುದರಿಂದ ಆಟೋಗಳು ಮತ್ತು ದ್ವಿಚಕ್ರ ಅಥವಾ ನಾಲ್ಕು ಚಕ್ರ ವಾಹನಗಳು ಸಹ ನಿವೇಶನ, ಮನೆಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ.             

WhatsApp Join our WhatsApp Channel
Previous Post

BBMP News | ಬಿಬಿಎಂಪಿ ಕಸದ ಕರ್ಮಕಾಂಡ : ” ಕಪ್ಪು ಪಟ್ಟಿಗೆ ಸೇರಿಸಬೇಕಾದ ಸಂಸ್ಥೆಗಳಿಗೆ ಘನತ್ಯಾಜ್ಯ ಪರಿವೀಕ್ಷಕರ ಸೇವೆ ಗುತ್ತಿಗೆ” : ಮುಖ್ಯಮಂತ್ರಿಗಳಿಗೆ ದೂರು

Next Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

Next Post

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ- ಸಾಂಸ್ಕೃತಿಕ ಹೊನಲಿನಲ್ಲಿ ಮಿಂದೆದ್ದ ಕರಾವಳಿ ಜನ

ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧೆ. (ಸಾಂದರ್ಭಿಕ ಚಿತ್ರ)

BW SPECIAL | SMILE Sub Scheme | ಮೈಸೂರನ್ನು “ಭಿಕ್ಷುಕ ವೃತ್ತಿ ಮುಕ್ತ” ನಗರವಾಗಿಸಲು ಸಮಾಜ ಕಲ್ಯಾಣ ಇಲಾಖೆ ಹೊಸ ಯೋಜನೆ ಸದ್ಯದಲ್ಲೇ ಜಾರಿ!!

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group