Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Gruha Jyothi News | ಗೃಹಜ್ಯೋತಿ ಯೋಜನೆ ಶುಭಸುದ್ದಿ : ಬಾಡಿಗೆ ಮನೆ ಬದಲಾಯಿಸಿದ್ರಾ? ಸೇವಾಸಿಂಧು ಡಿ-ಲಿಂಕ್ ನಿಂದ ಯೋಜನೆ ಲಾಭ ಪಡೆಯಬಹುದು

ಬಾಡಿಗೆ ಮನೆ ಬದಲಾಯಿಸಿದಾಗ ನೋಂದಣಿ ಪ್ರಕ್ರಿಯೆ ಹೇಗಿತ್ತು ಮೊದಲು? | ಈಗ ತಂತ್ರಾಂಶ ಹೇಗೆ ಬದಲಾಗುತ್ತಿದೆ ಗೊತ್ತಾ?

by Bengaluru Wire Desk
February 7, 2024
in News Wire
Reading Time: 1 min read
0

ಬೆಂಗಳೂರು, ಫೆ.7 www.bengaluruwire.com : ರಾಜ್ಯದ ವಿದ್ಯುತ್ ಗ್ರಾಹಕರು ತಮ್ಮ ಬಾಡಿಗೆ ಮನೆಯನ್ನು ಬದಲಾಯಿಸಿದಂತಹ ಸಂದರ್ಭದಲ್ಲಿ ಹಾಗೂ ಇತರೆ ಸಂದರ್ಭಗಳಲ್ಲಿ ಈಗಾಗಲೇ “ಗೃಹಜ್ಯೋತಿ” ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸ್ಥಾವರದಿಂದ ಸ್ಥಗಿತಗೊಳಿಸಿ ಮತ್ತೊಂದು ಸ್ಥಾವರಕ್ಕೆ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಡಿ-ಲಿಂಕ್ (De-Link) ಮಾಡಲು ಸರ್ಕಾರ ಅವಕಾಶ ಕಲ್ಪಿಸಿದೆ.

 ಈ ಆದೇಶದಂತೆ ಇನ್ನು ಮುಂದೆ ಬಾಡಿಗೆ ಮನೆಯಲ್ಲಿ ವಾಸಿಸುವ ಜನರು ಸೇವಾಸಿಂಧು ಪೋರ್ಟಲ್ ಮೂಲಕವೇ ಮನೆಯನ್ನು ಖಾಲಿ ಮಾಡುವಾಗ ಗೃಹಜ್ಯೋತಿ ಯೋಜನೆ ರದ್ದುಪಡಿಸಿ, ಹೊಸ ಬಾಡಿಗೆ ಮನೆಗೆ ಲಿಂಕ್ ಮಾಡಬಹುದಾಗಿದೆ. ಆದ್ದರಿಂದ, ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ಈ ಸಂಬಂಧ, ಮುಂದಿನ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಇಂಧನ ಇಲಾಖೆ ಅಪರ ಕಾರ್ಯದರ್ಶಿಗಳು ಫೆ.5 ರಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. 

ಬಾಡಿಗೆ ಮನೆ ಬದಲಾಯಿಸಿದಾಗ ನೋಂದಣಿ ಪ್ರಕ್ರಿಯೆ ಹೇಗಿತ್ತು ಮೊದಲು? :

ಪ್ರಸ್ತುತ ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಗೃಹಜ್ಯೋತಿ ಯೋಜನೆಯಡಿ ಆಧಾರ್ ನಂಬರ್ ನೀಡಿ ನೋಂದಣಿ ಮಾಡಿಸುತ್ತಿದ್ದಾರೆ. ಆದರೆ ಮನೆಯನ್ನು ಖಾಲಿ ಮಾಡುವಾಗ ಅವರು ಆನ್‌ಲೈನ್ ಮೂಲಕ ಹಳೆಯ ಮನೆ ನೋಂದಣಿ ರದ್ದುಗೊಳಿಸಲು ಅವಕಾಶವಿರಲಿಲ್ಲ. ಇದಕ್ಕಾಗಿ ಅವರು ಹತ್ತಿರದ ವಿದ್ಯುತ್ ಕಛೇರಿಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕಿತ್ತು. ಅವರ ಹೆಸರಿನ ಆಧಾರ್ ನಂಬರ್‌ನಲ್ಲಿ ನೋಂದಣಿಯಾದ ಗೃಹಜ್ಯೋತಿ ಯೋಜನೆ ರದ್ದಾದ ಬಳಿಕವಷ್ಟೆ ಪುನಃ ಹೊಸ ಮನೆಯ ನಂಬರ್ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದರಿಂದ ಒಂದು ಬಾಡಿಗೆ ಮನೆಯಿಂದ ಮತ್ತೊಂದು ಬಾಡಿಗೆ ಮನೆಗೆ ಹೋದ ಗ್ರಾಹಕರಿಗೆ ಕಷ್ಟವಾಗಿತ್ತು.

ಆದ್ದರಿಂದ ಆನ್‌ಲೈನ್ ಮೂಲಕವೇ ಹಳೆಯ ಸ್ಥಾವರದ ನೋಂದಣಿಯನ್ನು ರದ್ದತಿ ಮಾಡಲು ಅರ್ಜಿ ಸಲ್ಲಿಕೆ ಮಾಡಿ, ಹೊಸ ಸ್ಥಾವರಕ್ಕೆ ನೋಂದಣಿ ಮಾಡಲು ಅವಕಾಶ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಅದನ್ನೀಗ ಸರ್ಕಾರ ಮಾನ್ಯ ಮಾಡಿ ಈ ಡಿ-ಲಿಂಕ್ ಅವಕಾಶವನ್ನು ತಂತ್ರಾಂಶದಲ್ಲಿ ಕಲ್ಪಿಸಿದೆ.

ಗೃಹಜ್ಯೋತಿ ಯೋಜನೆ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಸಹ ಒಂದು. ಸರ್ಕಾರ 2023ರ ಜೂನ್ 18ರಂದು ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೊಂದಣಿಗೆ ಚಾಲನೆ ನೀಡಿತ್ತು. ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‍ವರೆಗಿನ ಬಳಕೆಯ ಮಿತಿಯಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಮೊದಲು ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‍ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿದ್ದರು. 

ರಾಜ್ಯದ ಸರಾಸರಿ ವಿದ್ಯುತ್ ಬಳಕೆ ಪ್ರಮಾಣ 53 ಯೂನಿಟ್ ಗಳಾಗಿದೆ. ಗೃಹ ಬಳಕೆದಾರರಲ್ಲಿ ಸುಮಾರು 69.73 ಲಕ್ಷ ಕುಟುಂಬಗಳು ಪ್ರತಿ ತಿಂಗಳು 48 ಯುನಿಟ್‌ಗಳಿಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. ಸುಮಾರು 30 ಯೂನಿಟ್‌ಗಳನ್ನು ಬಳಸುವ ಬಡ ಕುಟುಂಬಗಳಿಗೆ ಅರ್ಹತಾ ಯೂನಿಟ್‌ಗಳು ಕೇವಲ 33 ಯೂನಿಟ್‌ಗಳಾಗಿರುತ್ತದೆ (30 + ಶೇ.10) ಆದ್ದರಿಂದ, ರಾಜ್ಯದ ಸರಾಸರಿ ಬಳಕೆಗಿಂತ ಕಡಿಮೆ ಬಳಸುವ ಕುಟುಂಬಗಳಿಗೆ ಹೆಚ್ಚುವರಿಯಾಗಿ ಶೇ.10 ರ ಬದಲಾಗಿ ಹೆಚ್ಚುವರಿ 10 ಯೂನಿಟ್‌ಗಳನ್ನು ಅನುಮತಿಸಬೇಕೆಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನ.22ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಇದರಿಂದಾಗಿ, ವಾಸ್ತವವಾಗಿ ಅಗತ್ಯವಿರುವ ಕುಟುಂಬಗಳು ಪ್ರಯೋಜನಗಳನ್ನು ಪಡೆಯಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ ಎನ್ನಲಾಗಿತ್ತು.

ಹೀಗಾಗಿ “ಗೃಹ ಜ್ಯೋತಿ” ಯೋಜನೆಯಡಿಯಲ್ಲಿನ LT-2 ಪ್ರವರ್ಗದ ಗ್ರಾಹಕರಲ್ಲಿ ಮಾಸಿಕ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಹೆಚ್ಚುವರಿ ಶೇ.10 ರಷ್ಟು ಬದಲಾಗಿ ಹೆಚ್ಚುವರಿ 10 ಯೂನಿಟ್ ಅರ್ಹತಾ ಯೂನಿಟ್‌ಗಳನ್ನು ಉಚಿತವಾಗಿ ನೀಡುವುದು.  ಈ ಪರಿಷ್ಕರಣೆಯನ್ನು ಫೆ.1ರಿಂದ ಜಾರಿಗೆ ಬರುವಂತೆ ಮಾಸಿಕ ಬಿಲ್ಲಿಂಗ್ ತಂತ್ರಾಂಶದಲ್ಲಿ ಪರಿಷ್ಕರಣೆ (Billing machine recalibration) ಮಾಡಲು ಆದೇಶಿಲಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

BW SPECIAL | Bangalore Water Supply Analysis | ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ : ಬೇಸಿಗೆಯಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ; ಟ್ಯಾಂಕರ್ ಮಾಫಿಯಾಕ್ಕೆ ಹಬ್ಬದೂಟ

Next Post

Hookah Ban In Karnataka | ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆರೋಗ್ಯ ಇಲಾಖೆ ಮಹತ್ವದ ಆದೇಶ – ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ

Next Post

Hookah Ban In Karnataka | ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆರೋಗ್ಯ ಇಲಾಖೆ ಮಹತ್ವದ ಆದೇಶ - ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಬಿಬಿಎಂಪಿ ದಾಸರಹಳ್ಳಿ ವಲಯದ ಅಪರ ಆಯುಕ್ತ ಹುದ್ದೆ ಉನ್ನತೀಕರಿಸಿ ಎಚ್.ಬಾಲಶೇಖರ್ ಅವರನ್ನು ವರ್ಗಾಯಿಸಿ ಹೊರಡಿಸಿರುವ ಅಧಿಸೂಚನೆ.

BW EXCLUSIVE | ಬಿಬಿಎಂಪಿ ದಾಸರಹಳ್ಳಿ ವಲಯ : ಅಧಿಕಾರದ ಲಾಲಸೆಗೆ ಜಂಟಿ ಆಯುಕ್ತರ ಹುದ್ದೆಯೇ ಬದಲು!! – ಚೀಫ್ ಕಮಿಷನರ್ ಆಕ್ಷೇಪಕ್ಕೂ ಮೀರಿದ ಪ್ರಭಾವದ ಹಿಂದೆ ಯಾರಿದ್ದಾರೆ?

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group