Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

NPKL Corner Sites Pledge? | ಕೆಂಪೇಗೌಡ ಬಡಾವಣೆ ಮೂಲೆ ನಿವೇಶನ ಬಿಡಿಎ ಅಡಮಾನ : ಬಂದ ವರಮಾನ ಲೇಔಟ್ ಅಭಿವೃದ್ಧಿಗೆ ಬಳಸಲು ಎನ್ ಪಿಕೆಎಲ್ ಮುಕ್ತ ವೇದಿಕೆ ಸಿಎಂಗೆ ಆಗ್ರಹ

ನಾಡಪ್ರಭು ಕೆಂಪೇಗೌಡ ಬಡಾವಣೆ ಮೂಲೆ ನಿವೇಶನ ಅಡಮಾನ ಕುರಿತಂತೆ, ಬಡಾವಣೆ ಮೂಲಸೌಕರ್ಯ ಕೊರತೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಧೀರ್ಘವಾಗಿ ಏ.6ರಂದು ಪತ್ರ ಬರೆದ ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ

by Bengaluru Wire Desk
April 6, 2024
in Bengaluru Focus, Public interest
Reading Time: 2 mins read
0
ಬಿಡಿಎ ನರ್ಮಾಣ ಮಾಡುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಒಂದು ನೋಟ. (ಸಾಂದರ್ಭಿಕ ಚಿತ್ರ)

ಬಿಡಿಎ ನರ್ಮಾಣ ಮಾಡುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ ಒಂದು ನೋಟ. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಏ.06 www.bengaluruwire.com : ಬೆಂಗಳೂರು ಅಭಿವೃದ್ಧಿ ಮಾಡದ ಪ್ರಾಧಿಕಾರವೆಂಬ ಕುಖ್ಯಾತಿಗೆ ಗುರಿಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಒಂದಲ್ಲಾ ಒಂದು ತಪ್ಪು ನಿರ್ಧಾರದಿಂದ ಎಡವಟ್ಟು ಮಾಡಿಕೊಳ್ಳುವ ಪ್ರಾಧಿಕಾರ ಇದೀಗ ಮತ್ತೊಂದು ಎಡವಟ್ಟು ಮಾಡಲು ಹೊರಟು ನಾಡಪ್ರಭು ಕೆಂಪೇಗೌಡ ಬಡಾವಣೆ ನಿವೇಶನದಾರರ ಕೋಪಕ್ಕೆ ಗುರಿಯಾಗಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯ ಅಭಿವೃದ್ಧಿಗೆ ಆಸ್ಥೆವಹಿಸದೆ, ಇಲ್ಲಿನ 2500 ಮೂಲೆ ನಿವೇಶನಗಳನ್ನು ಅಡಮಾನವಿಟ್ಟು ಬರುವ ಸಾವಿರ ಕೋಟಿ ರೂ. ಹಣವನ್ನು ಶಿವರಾಮ ಕಾರಂತ ಬಡಾವಣೆಗೆ ಬಿಡಿಎ ಬಳಸಿಕೊಳ್ಳಲಿದೆ ಎಂಬ ಮಾಧ್ಯಮದ ವರದಿಯನ್ನು ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ನಾಡಪ್ರಭು ಕೆಂಪೇಗೌಡ ಬಡಾವಣೆ ಮುಕ್ತ ವೇದಿಕೆ (Nadaprabhu Kempegowda Layout Open Forum – NPKL Open Forum) ಬಿಡಿಎ ಕ್ರಮವನ್ನು ಉಗ್ರ ಶಬ್ದಗಳಲ್ಲಿ ಖಂಡಿಸಿದೆ. ಅಲ್ಲದೆ ಈ ಮೂಲ ನಿವೇಶನಗಳನ್ನು ಅಡಮಾನವಿಟ್ಟು ಬರುವ ಹಣವನ್ನು ಕೆಂಪೇಗೌಡ ಬಡಾವಣೆ ಅಭಿವೃದ್ಧಿಗೆ ಮಾತ್ರ ಬಳಸುವಂತೆ ಈ ಪತ್ರದಲ್ಲಿ ತಿಳಿಸಿದೆ.

“ನಾಡಪ್ರಭು ಕೆಂಪೇಗೌಡ ಬಡಾವಣೆಯ 2500 ಮೂಲೆ ನಿವೇಶನಗಳನ್ನು ಅಡಮಾನವಿಟ್ಟು ಬರುವ ಸಾವಿರ ಕೋಟಿ ರೂ. ಹಣವನ್ನು ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ವ್ಯಯಿಸಲು ಯೋಜಿಸಿರುವ ಬಗ್ಗೆ ಬಿಡಿಎ ಸುಪ್ರೀಂಕೋರ್ಟ ನಲ್ಲಿ ಸಲ್ಲಿಸಿರುವ ತನ್ನ ಅಫಿಡೆವಿಟ್ ನಲ್ಲಿ ಶಿವರಾಮ ಕಾರಂತ ಬಡಾವಣೆಯ ಅಭಿವೃದ್ಧಿಗೆ, ಅಭಿವೃದ್ಧಿ ಹೊಂದಿದ ಬಡಾವಣೆಯ ಮೂಲೆ ನಿವೇಶನಗಳನ್ನು ಅಡಮಾನವಿಟ್ಟು ಆ ಹಣವನ್ನು ಹೊಂದಿಸುವ ಬಗ್ಗೆ ಪ್ರಸ್ತಾಪಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಂಪೇಗೌಡ ಬಡಾವಣೆಯು ಇನ್ನೂ ಅಭಿವೃದ್ಧಿ ಹೊಂದಿಲ್ಲ. ಇಲ್ಲಿಯೇ ಸಾಕಷ್ಟು ಕಾಮಗಾರಿಗಳು ಬಾಕಿ ಉಳಿದಿದೆ. 26 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಿದರೂ, ಬೆರಳಣಿಕೆಯಷ್ಟು ಮನೆಗಳು ಮಾತ್ರ ನಿರ್ಮಾಣವಾಗುತ್ತಿದೆ” ಎಂದು ಎನ್ ಪಿಕೆಎಲ್ ಓಪನ್ ಫೋರಮ್ ಅಧ್ಯಕ್ಷರಾದ ಎಂ.ಇ.ಚೆನ್ನಬಸವರಾಜ ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದಲ್ಲದೆ “ಎಂಟು ವರ್ಷ ಕಳೆದರೂ ಮನೆಗಳ ನಿರ್ಮಾಣವು ಸಾಕಷ್ಟು ಸಂಖ್ಯೆಯಲ್ಲಿ ಪ್ರಾರಂಭವಾಗದೇ ಇರುವ ಮೂಲ ಕಾರಣ, ಬಡಾವಣೆಯಲ್ಲಿನ ಮೂಲಭೂತ ಸೌಕರ್ಯ ಕೊರತೆ ಮತ್ತು ಎಂದು ಮುಗಿಯದ ಕಾಮಗಾರಿಗಳಾಗಿದೆ. ಹಾಗಾಗಿ ಕೆಂಪೇಗೌಡ ಬಡಾವಣೆಯ ಮೂಲೆ ನಿವೇಶನಗಳನ್ನು ಅಡಮಾನವಿಟ್ಟು ಬರುವ ಹಣವನ್ನು ಇಲ್ಲಿಗೆ ಬಳಸುವಂತೆ” ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಬಿಡಿಎ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಕಾಮಗಾರಿ ಕುಂಟುತ್ತಾ ಸಾಗಿರುವ ಸಾಂದರ್ಭಿಕ ದೃಶ್ಯ.

“ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಯೋಜನೆಯನ್ನು ಪ್ರಾರಂಭಿಸಲು,ಯಾವುದೇ ಯೋಜನೆಯಿಂದ ಬಂದ ಆದಾಯವನ್ನು ಮತ್ತೊಂದು ಯೋಜನೆಗೆ ಬಳಸಲು ಸರ್ವ ಸ್ವತಂತ್ರ. ಆದರೆ ಅಪೂರ್ಣವಾಗಿರುವ ಯೋಜನೆಯ ಮೂಲೆ ನಿವೇಶನಗಳನ್ನು ಆದಾಯದ ಮೂಲವಾಗಿ ಮಾಡಿಕೊಂಡು ಅದೇ ಬಡಾವಣೆಯ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸದೆ ಮತ್ತೊಂದು ಬಡಾವಣೆ, ಮತ್ತಿತರ ಯೋಜನೆಗಳಿಗೆ ವಿನಯೋಗಿಸಲು ನಿರ್ಧರಿಸಿರುವುದು ಖಂಡನಾರ್ಹ. ಒಂದು ಬಡಾವಣೆ ಯೋಜನೆಯಿಂದ ಬಂದ ಮತ್ತು ಬರುವ ಆದಾಯವನ್ನು ಅದೇ ಬಡಾವಣೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಬಳಸಲು ಆದ್ಯತೆ ಕೊಡದೆ ಮತ್ತೊಂದು ಬಡಾವಣೆ, ಮತ್ತಿತರ ಯೋಜನೆಗಳಿಗೆ ವಿನಿಯೋಗ ಮಾಡುತ್ತಿರುವ ಕ್ರಮವು ಯಾವ ಸಾಮಾಜಿಕ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

8 ವರ್ಷವಾದರೂ ಮೂಲಸೌಕರ್ಯ ಕಲ್ಪಿಸಿಲ್ಲ :

ಪ್ರಾಧಿಕಾರವು ತಾನೇ ನಿರ್ಧರಿಸಿದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗಡವು,ಸರಕಾರವು ಗೊತ್ತು ಪಡಿಸಿದ ಸಮಯ, ರೇರಾ (RERA) ಪ್ರಾಧಿಕಾರದ ಗಡವು ಮತ್ತು ಅರ್ಜಿ ಸಮಿತಿಯ ಸಮಯ ಮಿತಿಯನ್ನು ಮೀರಿದ್ದರೂ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉತ್ಸುಕತೆ ತೋರಿಲ್ಲ. ಸರ್ವೋಚ್ಚ ನ್ಯಾಯಾಲಯದ ಆದೇಶದ ನೆಪವಡಿ ಶಿವರಾಮ ಕಾರಂತ ಬಡಾವಣೆಗೆ ಹೆಚ್ಚಿನ ಆದ್ಯತೆಯನ್ನು ಕೊಡುತ್ತಿರುವುದು ಮತ್ತು  8 ವರ್ಷಗಳ ಹಿಂದೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನವನ್ನು ಪಡೆದು ಇಲ್ಲಿಯವರೆಗೂ ಮನೆ ಕಟ್ಟಲು ಕನಿಷ್ಠ ಮೂಲಭೂತ ಸೌಕರ್ಯಕ್ಕಾಗಿ ಕಾಯುತ್ತಿರುವ ನಿವೇಶನಾದರರಿಗೆ ಭ್ರಮನಿರಸನವಾಗಿದೆ ಎಂದು ಮುಕ್ತ ವೇದಿಕೆಯು ಬೇಸರ ವ್ಯಕ್ತಪಡಿಸಿದೆ.

ಈ ಬಡಾವಣೆಯಲ್ಲಿ ಸುಮಾರು 10,000 ನಿವೇಶನಗಳನ್ನು ಸಾರ್ವಜನಿಕರಿಗೆ 2016 ರಿಂದ ಮಾರುಕಟ್ಟೆ ದರದಲ್ಲಿ ಪೂರ್ಣ ಮೌಲ್ಯವನ್ನು ಪಡೆದು ಹಂಚಿಕೆ ಮಾಡಲಾಗಿರುತ್ತದೆ. ಎರಡುವರೆ ಸಾವಿರಕ್ಕಿಂತಲೂ ಹೆಚ್ಚಿನ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಈಗಾಗಲೇ ಹರಾಜು ಮಾಡಲಾಗಿರುತ್ತದೆ. ಬಹಳಷ್ಟು ಸಿಎ ನಿವೇಶನಗಳನ್ನು ಕೂಡ ಹಂಚಿಕೆ ಮಾಡಲಾಗಿರುತ್ತದೆ. ಈ ಎಲ್ಲಾ ಮೂಲಗಳಿಂದ ಬಂದಿರುವ ಆದಾಯವನ್ನು ಇದೆ ಬಡಾವಣೆಯಲ್ಲಿ ವಿನಿಯೋಗಿಸಿದಿದ್ದರೆ ಎಲ್ಲಾ ಮೂಲಭೂತ ಸೌಕರ್ಯ ಕಾಮಗಾರಿಗಳು ಪೂರ್ಣಗೊಂಡು ಮನೆಗಳ ನಿರ್ಮಾಣಕ್ಕೆ ಅನುಕೂಲವಾಗುತ್ತಿತ್ತು.

ಕಾಂಟ್ರಾಕ್ಟರ್ ಬಿಲ್ ಬಾಕಿಯಿಂದ ಕಾಮಗಾರಿ ಮತ್ತಷ್ಟು ಆಮೆಗತಿ :

ಆದರೆ ಕೆಂಪೇಗೌಡ ಲೇಔಟ್ ನಲ್ಲಿ ಕಾಮಗಾರಿಗಳನ್ನು ನಡೆಸುತ್ತಿರುವ ಗುತ್ತಿಗೆದಾರರಿಗೆ ಕಾಮಗಾರಿಗಳ ಬಹಳಷ್ಟು ಬಿಲ್ ಗಳನ್ನು ಬಾಕಿ ಉಳಿಸಿಕೊಳ್ಳಲಾಗಿರುತ್ತದೆ. ಆದ್ದರಿಂದ ಗುತ್ತಿಗೆದಾರರು ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ನಿಯೋಜಿಸದೆ ಕಾಮಗಾರಿಗಳು ಕುಂಠಿತಗೊಳಿಸಿದ್ದಾರೆ. ಹೀಗಾಗಿ ಬಹಳಷ್ಟು ಕಾಮಗಾರಿಗಳಿಗೆ ಬಿಡಿಎ ಇನ್ನು  ಟೆಂಡರ್ ಅನ್ನು ಕರೆದಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರದಲ್ಲಿ ತಿಳಿಸಿರುವ ಎನ್ ಪಿಕೆಎಲ್ ಮುಕ್ತ ವೇದಿಕೆಯು ಲೇಔಟ್ ನಲ್ಲಿ ಆಗಬೇಕಿರುವ ಬಾಕಿ ಕಾಮಗಾರಿಗಳ ವಿವರವನ್ನು ತಿಳಿಸಿದೆ.

ಬಿಡಿಎ ವಿವಿಧ ಸಂಪನ್ಮೂಲಗಳಿಂದ ಲೇಔಟ್ ನಿರ್ಮಾಣ ಮಾಡುವುದರಲ್ಲಿ ತಪ್ಪೇನಿದೆ? :

“ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಯಾವುದೇ ಹೊಸ ಬಡಾವಣೆಯನ್ನು ರಚನೆ ಮಾಡುವಾಗ ಹಿಂದಿನ ಬಡಾವಣೆ ಹಾಗೂ ವಿವಿಧ ಸಂಪನ್ಮೂಲಗಳಿಂದ ಬಂದ ಹಣವನ್ನು ಅದಕ್ಕೆ ಖರ್ಚು ಮಾಡುತ್ತೆ. ಬಿಡಿಎ ಖಾಸಗಿ ಬಡಾವಣೆಯಂತೆ 8-10 ಎಕರೆ ಜಾಗದಲ್ಲಿ ಲೇಔಟ್ ಅಭಿವೃದ್ಧಿಪಡಿಸುವುದಿಲ್ಲ. ಸಾವಿರಾರು ಎಕರೆ ಜಾಗದಲ್ಲಿ ಬಡಾವಣೆ ನಿರ್ಮಿಸುವುದರಿಂದ ನೂರಾರು ಕೋಟಿ ರೂ. ಹಣ ಕರ್ಚಾಗುತ್ತದೆ. ಅದಕ್ಕೆ ಸಂಪನ್ಮೂಲವನ್ನು ಒದಗಿಸಲು ಮೂಲೆ ನಿವೇಶನಗಳನ್ನು ಮಾರಾಟ ಮಾಡುವ ಬದಲು ಅಡಮಾನ ಇಟ್ಟು ಬರುವ ಆದಾಯದಿಂದ ಇನ್ನೊಂದು ಬಿಡಿಎ ಲೇಔಟ್ ಅಭಿವೃದ್ಧಿಪಡಿಸುವುದರಲ್ಲಿ ತಪ್ಪೇನಿದೆ? ಎನ್ ಪಿಕೆಎಲ್ ಲೇಔಟ್ ನಲ್ಲಿ ಈತನಕ 9,500 ನಿವೇಶನಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ. ಅವರಿಂದ ಸಂಗ್ರಹವಾಗಿರುವ ಹಣ ಕೇವಲ 2,100 ಕೋಟಿ ರೂ. ಆದರೆ ಬಿಡಿಎ ಅಲ್ಲಿ ಕರ್ಚು ಮಾಡಿರುವ ಹಣ 2,700 ಕೋಟಿ ರೂ. ಇಲ್ಲಿಗೆ ಬೇರೆ ಸಂಪನ್ಮೂಲಗಳಿಂದ ಬಂದ ಹಣವನ್ನು ವೆಚ್ಚ ಮಾಡಲಾಗಿದೆ. ಈತನಕ ಪ್ರಾಧಿಕಾರದಿಂದ ಕೇವಲ 20 ಮಂದಿ ಮನೆ ಕಟ್ಟಲು ನಕ್ಷೆ ಮಂಜೂರಾತಿ ಪಡೆದಿದ್ದಾರಷ್ಟೆ. ಬಿಡಿಎ ಹಂತ ಹಂತವಾಗಿ ಭವಿಷ್ಯದ ದೃಷ್ಟಿಯಿಂದ ಮೂಲಸೌಕರ್ಯವನ್ನು ಕಲ್ಪಿಸಲಿದೆ. ವಿನಾ: ಕಾರಣ ಪ್ರಾಧಿಕಾರವನ್ನು ತಪ್ಪು ದೃಷ್ಟಿಕೋನದಿಂದ ನೋಡಬಾರದು.”

  • ಡಾ.ಎಚ್.ಆರ್.ಶಾಂತಾರಾಜಣ್ಣ, ಬಿಡಿಎ ಎಂಜಿನಿಯರ್ ಸದಸ್ಯರು
WhatsApp Join our WhatsApp Channel
Previous Post

ಸಾ.ರಾ. ಗೋವಿಂದು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಗೆ ಕಸಾಪ ‘ಕುವೆಂಪು ಸಿರಿಗನ್ನಡ ’ ದತ್ತಿ ಪ್ರಶಸ್ತಿ

Next Post

#Skyshow | ನೆಹರು ಪ್ಲಾನಿಟೋರಿಯಂನಲ್ಲಿ ‘ಸ್ಕೈ ಶೋ’ ಪ್ರದರ್ಶನ ಏ.7ರಿಂದ ಆರಂಭ : ಬಾಹ್ಯಾಕಾಶ ಆಸಕ್ತರಿಗೆ ಅವಕಾಶ

Next Post
ಸ್ಕೈ ಥಿಯೇಟರ್ ಮಂದಿರದ ಸಾಂದರ್ಭಿಕ ಚಿತ್ರ.

#Skyshow | ನೆಹರು ಪ್ಲಾನಿಟೋರಿಯಂನಲ್ಲಿ 'ಸ್ಕೈ ಶೋ' ಪ್ರದರ್ಶನ ಏ.7ರಿಂದ ಆರಂಭ : ಬಾಹ್ಯಾಕಾಶ ಆಸಕ್ತರಿಗೆ ಅವಕಾಶ

ನಗರದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಎಸಿ ಮತ್ತು ಫ್ರಿಜ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. (ಸಾಂದರ್ಭಿಕ ಚಿತ್ರ

BW SPECIAL | Summer Demand For AC, Refrigerator | ಬೆಂಗಳೂರಿನಲ್ಲಿ ಬೇಸಿಗೆ ಬಿಸಿಗೆ ಸಾರ್ವಜನಿಕರು ತತ್ತರ : ಎಸಿ, ರೆಫ್ರಿಜರೇಟರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡ್!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group