Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

HDK Counter |  “ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು” : ಎಚ್.ಡಿ.ಕೆ ಟಾಂಗ್

ಡಿಕೆಶಿ ಮಾತಿಗೆ ಉತ್ತರ ಕೊಟ್ಟ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ

by Bengaluru Wire Desk
April 11, 2024
in News Wire
Reading Time: 1 min read
0

ಹಾಸನ, ಏ.11 www.bengaluruwire.com : ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಅವರಿಗೆ ಸರಿಸಾಟಿ ಇದೀನಾ ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿಯೇ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಗುರುವಾರ ಮಾಧ್ಯಮಗಳ ಜತೆ ಡಿ.ಕೆ.ಶಿವಕುಮಾರ್ ಡೋಂಟ್ ಕೇರ್ ಹೇಳಿಕೆ, ಆದಿಚುಂಚನಗಿರಿ ಶ್ರೀಗಳ ಪೋನ್ ಟ್ಯಾಪಿಂಗ್ ಕುರಿತಂತೆ ಚೆಲುವರಾಯಸ್ವಾಮಿ ಟೀಕೆ, ಶ್ರೀಗಳ ಭೇಟಿ ಬಗೆಗಿನ ವಿವಾದ, ಪರ್ಯಾಯ ಮಠ ರಚನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡಿದರು. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು, ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು  ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದರು.

“ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ‘ಡೋಂಟ್ ಕೇರ್’ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟಿಕೋ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ. ಆರೂವರೆ ಕೋಟಿ ಜನ ಕುಮಾರಸ್ವಾಮಿ ಅವಶ್ಯಕತೆ ಇದೆಯೊ ಇಲ್ಲವೊ ಎಂದು ತೀರ್ಮಾನ ಮಾಡುತ್ತಾರೆ. ಅವರು ಏನೋ ಐ ಆಮ್  ಸ್ಟ್ರೈಟ್ ಫೈಟರ್ ಎಂದು ಹೇಳಿದಾರೆ. ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್ ಅಂತ” ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ಗುಡುಗಿದರು.

“ಕೊತ್ವಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು. ನೀವು ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಪೈಟ್ ಮಾಡ್ತೀರಾ. ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮ‌ ಮದ ಇದೆಯಲ್ಲ, ಅದನ್ನು ಇಳಿಸುವ ಕಾಲ ಸನಿಹಕ್ಕೆ ಬಂದಿದೆ ಎಂದು ಅವರು ಕಿಡಿಕಾರಿದರು. ಅವನ್ಯಾರೋ ಹೇಳುತ್ತಾನೆ, ನನ್ನ ಆದಾಯ ಆಲೂಗಡ್ಡೆ ಬೆಳೆದು ಬಂದಿದ್ದು ಎಂದು. ಬಂದು ನನ್ನ ತೋಟ ನೋಡಪ್ಪ ಮಹಾನುಭಾವ. ನಾನು ಇನ್ನೊಬ್ಬರ ಥರ ಸರಕಾರದ ಜಾಗಕ್ಕೆ ಬೇಲಿ ಹಾಕಿ ಸಂಪಾದನೆ ಮಾಡಿಲ್ಲ. ಕಷ್ಟಪಟ್ಟು ಅಸ್ತಿ ಸಂಪಾದನೆ ಮಾಡಿದ್ದೇವೆ” ಎಂದು ಅವರು ತಿರುಗೇಟು ಕೊಟ್ಟರು.

ನಾನು ಪೋನ್ ಟ್ಯಾಪಿಂಗ್ ಮಾಡಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? :

ಆದಿಚುಂಚನಗಿರಿ ಶ್ರೀಗಳ ಪೋನ್ ಟ್ಯಾಪಿಂಗ್ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾಡಿರುವ ಆರೋಪದ ಬಗ್ಗೆ ತೀಕ್ಷ್ಣವಾಗಿ ಉತ್ತರಿಸಿದ ಕುಮಾರಸ್ವಾಮಿ ಅವರು; ನಾನು ಫೋನ್  ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು? ಎಂದು ತರಾಟೆಗೆ ತೆಗೆದುಕೊಂಡರು.

ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು; ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೆವೆ. ಅದರಲ್ಲಿ ಏನಿದೆ? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ? ಎಂದು ಕೇಳಿದರು.

ಸ್ವಾಮಿಜಿ ಅವರನ್ನು ಭೇಟಿ ಮಾಡುವುದಕ್ಕೆ ಇವರು ಎಷ್ಟು ಜನ ಹೋಗಿದ್ದರು? ಎಲ್ಲಾ ಟಿವಿಗಳಲ್ಲಿ ವೀಡಿಯೋ ಬಂದಿದೆಯಲ್ಲ. ಇವರು ಏನು ಬೇಕಾದರೂ ಮಾಡಬಹುದು, ನಾವು ಮಾಡುವ ಹಾಗಿಲ್ಲವೇ? ಅದು ಕೂಡ ಒಂದು ದೊಡ್ಡ ರಾಜಕೀಯನಾ? ವರ್ಷದ ಮೊದಲ ದಿನ ನಮ್ಮ ಸಮುದಾಯದ ಗುರು ಹಿರಿಯರ ಆಶೀರ್ವಾದ ಪಡೆಯುತ್ತೇವೆ. ಅದೇನು ಮಹಾ ಅಪರಾಧವಾ? ಜ್ವರ ಬಂದಾಗ ಆಸ್ಪತ್ರೆಗೆ ಹೋಗದೆ ಇನ್ನೆಲ್ಲಿಗೆ ಹೋಗಲು ಸಾಧ್ಯ? ನಾನು 140 ಮಠಗಳಿಗೆ ಅನುದಾನ ನೀಡಿದ್ದೆ. ಮಠಗಳು ಮಾಡುತ್ತಿರುವ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಿದ್ದೆ. ಇದೇನು ಹೊಸದಲ್ಲ ಎಂದು ಖಾರವಾಗಿ ಟಾಂಗ್ ಕೊಟ್ಟರು ಮಾಜಿ ಮುಖ್ಯಮಂತ್ರಿಗಳು.

“ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ” :

ಜೆಡಿಎಸ್ ಎಲ್ಲಿದೆ ಎನ್ನುವ ದುರಹಂಕಾರ ಮಾತುಗಳನ್ನು ಇವರು ಆಡುತ್ತಿದ್ದಾರೆ. ಸಹವಾಸ ಮಾಡಿದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಜವಾಬ್ದಾರಿ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ‌ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ, ಎಲ್ಲಾ ನೆನಪಿದೆ ನನಗೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಧರ್ಮಸ್ಥಳದಲ್ಲಿ ಸರಕಾರ ತೆಗೆಯಲು ಷಡ್ಯಂತ್ರ :

ನಿಮ್ಮ ಸರಕಾರ ತೆಗೆದವರು ಯಾರು ಎಂದು  ಹಾಸನಾಂಬೆ ಸನ್ನಿಧಿಗೆ ಬಂದು ಆಣೆ ಮಾಡಿ ಎಂದು ಡಿ.ಕೆ.ಶಿವಕುಮಾರ್ ಹಾಕಿರುವ ಸವಾಲಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ ಅವರು, ಆಣೆ ಯಾಕೆ ಮಾಡಬೇಕು? ಧರ್ಮಸ್ಥಳ ಆಯುರ್ವೇದ ಆಸ್ಪತ್ರೆಯಲ್ಲಿ ಮೈತ್ರಿ ಸರಕಾರ ತೆಗೆಯಲು ಗುಳಿಗೆ ಅರೆದಿದ್ದನ್ನು ನೀವೇ (ಮಾಧ್ಯಮಗಳು) ತೋರಿಸಿದರಲ್ಲ. ಅದಕ್ಕೆ ಹಾಸನಾಂಬೆಯ ಮುಂದೆ ಪ್ರಮಾಣ ಮಾಡಬೇಕಾ? ಧರ್ಮಸ್ಥಳದಲ್ಲಿ ಕುತಂತ್ರ ಮಾಡಿ ಬಂದರಲ್ಲ, ಈ ಸರಕಾರ ಒಂದೇ ವರ್ಷ ಎಂದು ಹೇಳಿದರಲ್ಲ. ಆಮೇಲೆ ಏನಾಯಿತು ಎನ್ನುವುದು ನಾಡಿನ ಜನರಿಗೆ ಗೊತ್ತಿದೆಯಲ್ಲ ಎಂದು ಮಂಡ್ಯ ಜೆಡಿಎಸ್ ಬಿಜೆಪಿ ಮೈತ್ರೀಕೂಟದ ಅಭ್ಯರ್ಥಿ ವ್ಯಂಗ್ಯವಾಡಿದರು.

ಸೋನಿಯಾ ಗಾಂಧಿ ಅವರು ಬಳ್ಳಾರಿಗೆ ಬಂದಿದ್ದು ಯಾಕೆ? :

ಮಂಡ್ಯಕ್ಕೆ ಕುಮಾರಸ್ವಾಮಿ ಹೊರಗಿನವರು ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾ, ಅವರ ತಟ್ಟೆಯಲ್ಲಿ ಹೆಗ್ಗಣವೇ ಸತ್ತು ಬಿದ್ದಿದೆ. ಇಲ್ಲಿ ನೊಣ ಹುಡುಕುತ್ತಿದ್ದಾರೆ. ಸೋನಿಯಾ ಗಾಂಧಿ ಬಂದಾಗ ಅವರಿಗೆ ಬೇರೆ ದೇಶದವರು ಅನ್ನಿಸಲಿಲ್ವ? ಬಳ್ಳಾರಿಗೆ ಬಂದು ಚುನಾವಣೆಗೆ ಬಂದು ನಿಂತರಲ್ಲ. ಅವರೇನು ಬಳ್ಳಾರಿಯವರಾ? ನಾನಾದರೂ ಕನ್ನಡಿಗ. ಈ ರಾಜ್ಯದ ಮಣ್ಣಲ್ಲಿ ಹುಟ್ಡಿದವನು. ಇಂದಿರಾಗಾಂಧಿ ಚಿಕ್ಕಮಗಳೂರಿಗೆ ಯಾಕೆ ಬಂದರು? ರಾಹುಲ್ ಗಾಂಧಿ ಅವರು ವೈನಾಡಿಗೆ ಹೋಗಿಲ್ಲವೇ? ಅಮೇಥಿ ಬಿಟ್ಟು ಯಾಕೆ ಹೋದರು? ನಾನು ಮಂಡ್ಯದಿಂದ ಸ್ಪರ್ಧೆ ಮಾಡಿದರೆ ಅಪರಾಧವೇ? ಎಂದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಜ್ಯೋತಿಷ್ಯ ಸಂಶೋಧನೆ ಮಾಡಿದ್ದಾರಾ? :

ಜೆಡಿಎಸ್ ಒಂದು ಸ್ಥಾನ ಗೆಲ್ಲಲ್ಲ ಎಂಬ ಡಿ.ಕೆ.ಶಿವಕುಮಾರ್ ಹೇಳಿರುವ ಬಗ್ಗೆ ಕುಟುಕಿದ ಮಾಜಿ ಮುಖ್ಯಮಂತ್ರಿಗಳು; ಅವರು ಭವಿಷ್ಯ ಹೇಳುವುದರಲ್ಲಿ ಎಕ್ಸಪರ್ಟ್ ಇದ್ದಾರೆ. ಅವರು ಜ್ಯೋತಿಷಿನೇ ಅಲ್ಲವೇ? ಅವರ‌ ಬ್ಯಾಗ್ ತೆಗೆದರೆ ಜ್ಯೋತಿಷ್ಯದ ಬಗ್ಗೆ ಸಾಕಷ್ಟು ಪುಸ್ತಕಗಳು ಸಿಗುತ್ತವೆ. ಅವರು ಸಂಶೋಧನೆ ಮಾಡಿರಬಹುದು. ನಾವೂ ರೀಸರ್ಚ್ ಮಾಡಿದೇವೆ. ಈ ರಾಜ್ಯದಲ್ಲಿ ಕಾಂಗ್ರೆಸ್ ತೆಗೆಯಲು ಏನು ಮಾಡಬೇಕೊ ಜನ ಅದನ್ನೇ ಮಾಡುತ್ತಾರೆ. ಹಿಂದೆ ಹೋದ ಕಡೆ ಜನ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ಕೂಗುತ್ತಿದ್ದರು. ಅದು ಜನರ ಆಶೀರ್ವಾದ. ಈಗ ಕೇಂದ್ರದ ಮಂತ್ರಿ ಆಗುತ್ತಾರೆ ಎಂದು ಕೂಗುತ್ತಿದ್ದಾರೆ. ಅದಕ್ಕೆ ನಾನು ಋಣಿ ಎಂದರು.

ಬಿಜೆಪಿ ಜೊತೆ 50 ಸಭೆಗಳಲ್ಲಿ ಚುನಾವಣಾ ಪ್ರಚಾರ :

ಪ್ರಧಾನಿ‌ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಮೈಸೂರಿಗೆ ಬರುತ್ತಾರೆ. ನಂತರ ಇನ್ನು ಎರಡು ಮೂರು ಕಡೆ ಬರುವವರಿದ್ದಾರೆ. ನಾನು ಕೂಡ 50 ಸಾರ್ವಜನಿಕ ಸಭೆಗಳಲ್ಲಿ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್ ನವರು, ಪಾಪ.. ಕುಮಾರಸ್ವಾಮಿ ಕಾಣೆ ಆಗಿದ್ದಾರೆ ಎಂದು  ಮಂಡ್ಯದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಕಾಣೆ ಆಗಿಲ್ಲ. 28ಕ್ಕೆ 28 ಸ್ಥಾನ ಗೆಲ್ಲುವುದಕ್ಕೆ ಬಿಜೆಪಿ ಜತೆ ಸೇರಿ 50 ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

WhatsApp Join our WhatsApp Channel
Previous Post

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

Next Post

Namma Metro News | ನಮ್ಮ ಮೆಟ್ರೊ ಪ್ರಯಾಣಿಕರ ತೃಪ್ತಿ ಸಮೀಕ್ಷೆ ಆರಂಭ :  ಪ್ರಯಾಣಿಕರು ಪ್ರತಿಕ್ರಿಯೆ ನೀಡಲು ಹೀಗೆ ಮಾಡಿ

Next Post
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Namma Metro News | ನಮ್ಮ ಮೆಟ್ರೊ ಪ್ರಯಾಣಿಕರ ತೃಪ್ತಿ ಸಮೀಕ್ಷೆ ಆರಂಭ :  ಪ್ರಯಾಣಿಕರು ಪ್ರತಿಕ್ರಿಯೆ ನೀಡಲು ಹೀಗೆ ಮಾಡಿ

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

New Power Connection | ಹೊಸ ವಿದ್ಯುತ್ ಸಂಪರ್ಕ ಗಡುವು ಇಳಿಕೆ ಮಾಡಿದ ಕೆಇಆರ್ ಸಿ : ಮೆಟ್ರೊ ನಗರಗಳಲ್ಲಿ ಅರ್ಜಿ ಸ್ವೀಕರಿಸಿದ 3 ದಿನಕ್ಕೆ ಸಿಗುತ್ತೆ ಪವರ್!!

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group