Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ಬಿಳಿಗಿರಿರಂಗನಬೆಟ್ಟ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು. | ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

by Bengaluru Wire Desk
April 23, 2024
in News Wire, Public interest
Reading Time: 1 min read
0

ಚಾಮರಾಜನಗರ, ಏ. 23 www.bengaluruwire.com : ರಾಜ್ಯದ ಪ್ರಮುಖ ಹುಲಿಧಾಮಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಹುಲಿಧಾಮ ವ್ಯಾಪ್ತಿಯಲ್ಲಿ ಎರಡು ದಿನ ಹಿಂದೆ ಭಾರೀ ಬೆಂಕಿ ಬಿದ್ದು ಸೋಮವಾರವಿಡೀ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಆರಿಸುವ ಕೆಲಸ ಅರಣ್ಯ ಇಲಾಖೆಯಿಂದ ನಡೆದಿದೆ. 

ಬಿಳಿಗಿರಿರಂಗನಾಥ ಸ್ವಾಮಿ ರಥೋತ್ಸವ.

ಬೆಂಕಿ ತೀವ್ರತೆ ಎಷ್ಟಿದೆ ಎಂದರೆ ಬಿಳಿಗಿರಿರಂಗನಾಥಸ್ವಾಮಿ  ಜಾತ್ರೆಗೆ ಬಂದವರು ದೂರದ ಬಿಆರ್ ಟಿ ಹುಲಿಧಾಮದ ಬೆಟ್ಟಗಳ ಮೇಲೆ ಕಾಡ್ಗಿಚ್ಚಿನ ಬೆಂಕಿ ಆ ಮೂಲಕ ಕಂಡುಬಂದಿರುವ ಹೊಗೆ ಕಂಡುಬಂದಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಈ ಬಾರಿ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಮಂಗಳವಾರ ಶ್ರೀ ಬಿಳಿಗಿರಿರಂಗನಾಥನ ಬ್ರಹ್ಮರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು.

ಉತ್ಸವಮೂರ್ತಿ

ಮಿತಿ ಮೀರಿದ ಕಾಡ್ಗಿಚ್ಚು ಪ್ರಕರಣ :

ಬಿಆರ್ ಟಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬೆಟ್ಟದಲ್ಲಿ ಬೆಂಕಿ ಬಿದ್ದಿರುವುದರಿಂದ ಬೆಂಕಿ ಆರಿಸಲು ಅರಣ್ಯ ಇಲಾಖೆ ಪ್ರಯತ್ನ ಮಾಡುತ್ತಿದೆ. ಡಿಸಿಎಫ್‌ ದೀಪ್‌ ಜೆ ಕಂಟ್ರಾಕ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಬಾರಿಯೂ ಬಿಆರ್ ಟಿ ಸೇರಿದಂತೆ ರಾಜ್ಯದ ಬಹುತೇಕ ಕಾಡಿನ ವ್ಯಾಪ್ತಿಯಲ್ಲಿ ಸೂಕ್ತ ರೀತಿ ಮಳೆಯಾಗಿಲ್ಲ. ಈ ಬಾರಿ ಏಪ್ರಿಲ್ ನಾಲ್ಕು ವಾರ ಕಳೆದರೂ ವರುಣನ ಸುಳಿವೇ ಇಲ್ಲ. ಹೀಗಾಗಿ ಕಾಡಿನಬೆಂಕಿ ಪ್ರಕರಣ ಮಿತಿ ಮೀರಿದೆ ಎಂದು ಹೇಳಲಾಗುತ್ತಿದೆ. 

ಬಿಳಿಗಿರಿರಂಗನಾಥ ಬೆಟ್ಟದಿಂದ ಕಾಣುತ್ತಿರುವ ಕಾಡ್ಗಿಚ್ಚು.

ಎರಡು ತಿಂಗಳ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದೆ ಎನ್ನಲಾಗಿದೆ. ಅದರಲ್ಲೂ ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಬೈಲೂರು ಪುಣಜನೂರು ಭಾಗದಲ್ಲಿಯೇ ಹೆಚ್ಚಿನ ಕಾಡು ನಾಶವಾಗಿದೆ. ಬೇಸಿಗೆ ಇನ್ನೂ ಒಂದೂವರೆ ತಿಂಗಳು ಇರುವುದರಿಂದ ಮತ್ತೆ ಬೆಂಕಿ ಬಿದ್ದರೆ ಹೇಗೆ ಎಂದು ಅರಣ್ಯ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಭಾಗದಲ್ಲಿ ಮಳೆಯೂ ಆಗದೇ ಇರುವುದರಿಂದ ಒಣಗಿರುವ ಮರಗಳಿಗೆ ಬೆಂಕಿ ಬಿದ್ದರೆ ಇನ್ನಷ್ಟು ಅನಾಹುತ ಆಗಬಹುದು ಎನ್ನುವ ಆತಂಕವೂ ಅರಣ್ಯ ಇಲಾಖೆಯಲ್ಲಿ ಮನೆ ಮಾಡಿದೆ.

ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಹೆಚ್ಚಿನ ಹಾನಿ :

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಅರಣ್ಯ ಪ್ರದೇಶ ಹುಲಿಧಾಮವಾಗಿ ದಶಕಗಳೇ ಕಳೆದಿವೆ. ಈ ಹುಲಿಧಾಮ ತಮಿಳುನಾಡು ಗಡಿ ಭಾಗವನ್ನೇ ಹೆಚ್ಚು ಹೊಂದಿದೆ. ಅದರಲ್ಲೂ ಎತ್ತರದ ಗುಡ್ಡ, ಬೆಟ್ಟಗಳನ್ನೊಳಗೊಂಡ ಅರಣ್ಯ ಇಲ್ಲಿನ ವಿಶೇಷ. ಈಗಲೂ 12 ಸಾವಿರಕ್ಕೂ ಅಧಿಕ ಜನಸಂಖ್ಯೆ ಅರಣ್ಯ ಪ್ರದೇಶ ಹಾಗೂ ಕಾಡಿನ ಅಂಚಿನಲ್ಲೇ ವಾಸವಿದೆ. ಕೊಳ್ಳೇಗಾಲ, ಯಳಂದೂರು, ಚಾಮರಾಜನಗರ ಹಾಗೂ ಹನೂರು ತಾಲ್ಲೂಕು ವ್ಯಾಪ್ತಿಯ ಈ ಅರಣ್ಯದಲ್ಲಿ ಈ ಬಾರಿಯಂತೂ ಹೆಚ್ಚು ಪ್ರಮಾಣದಲ್ಲಿ ಬೆಂಕಿ ಬಿದ್ದಿದೆ. ಐವತ್ತಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದ್ದು. ದೊಡ್ಡ ಪ್ರಮಾಣದಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಕಾಡಿನ ಬೆಂಕಿ ಕಾಣಿಸಿಕೊಂಡಿದೆ. ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಭಾರೀ ಹಾನಿಯಾಗಿದೆ. ಇದನ್ನು ಉಪಗ್ರಹ ಆಧರಿತ ತಂತ್ರಜ್ಞಾನದ ಮೂಲಕವೂ ಪತ್ತೆ ಮಾಡಲಾಗಿದೆ. 

ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುತ್ತಿರುವುದು ಕಂಡು ಬಂದಿದೆ. ಹೊರಗಿನಿಂದ ಬಂದವರ ಜತೆಗೆ ಸ್ಥಳೀಯರು ಬೆಂಕಿ ನೀಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಆ ಮಾಹಿತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಹನೂರು ಠಾಣೆಯಲ್ಲಿ ಈ ಸಂಬಂಧ ದೂರನ್ನೂ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Next Post

#Loksabhaelection | ‘Vote ನಮ್ಮ Power’ Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

Next Post

#Loksabhaelection | 'Vote ನಮ್ಮ Power' Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

ಉಷ್ಣಾಂಶದ ಸಾಂದರ್ಭಿಕ ಚಿತ್ರ.

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group