Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bannergatta Leopard Safari | ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ. | ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಗೆ ಡಿಪ್ಲೊಮೊ ಕೋರ್ಸ್

by Bengaluru Wire Desk
June 10, 2024
in Bengaluru Focus, News Wire
Reading Time: 2 mins read
0
ಚಿರತೆ ಸಫಾರಿಯ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ಟ್ರಿಪ್ ಅಡ್ವೈಸರ್)

ಚಿರತೆ ಸಫಾರಿಯ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ಟ್ರಿಪ್ ಅಡ್ವೈಸರ್)

ಬೆಂಗಳೂರು, ಜೂ.10 www.bengaluruwire.com : ಬೆಂಗಳೂರಿಗರಿಗೆ ಖುಷಿಯ ಸುದ್ದಿ. ಇಷ್ಟು ದಿನಗಳ ಕಾಲ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಿಂಹ, ಹುಲಿ ಸಫಾರಿ ಮಾತ್ರ ಲಭ್ಯವಿತ್ತು. ಆದರೀಗ ಈ ತಿಂಗಳ ಅಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲಿದ್ದೇವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು. ಈ ಸಂದರ್ಭದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕರಿಗಾಗಿ ಚಿರತೆ ಸಫಾರಿಯನ್ನು ಈ ಮಾಸಾಂತ್ಯದೊಳಗೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 12 ಚಿರತೆಗಳಿದ್ದು, ಸಫಾರಿ ಆರಂಭಿಸುವ ಮುನ್ನ ಕಬ್ಬಿಣದ ಆಳೆತ್ತರದ ಜಾಲರಿ, ಗೇಟ್, ಸಫಾರಿಗೆ ಬರುವವರ ಸುರಕ್ಷತೆ, ವಾಹನ, ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳುವ ಕೆಲಸ ಅಂತಿಮ ಹಂತಕ್ಕೆ ಬಂದಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿರುವ ಚಿತ್ರ.

ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಸಚಿವರು ಅನುಮೋದನೆ ನೀಡಿದರು. ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ,  ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.

ಮೈಸೂರು ಶ್ರೀ ಚಾಮರಾಜೇಂದ್ರ ಮಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು. ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿ ನೀಡಲಾಯಿತು.

ಮೃಗಾಲಯ ಪ್ರಾಧಿಕಾರದ ವಾರ್ಷಿಕ ವರದಿಯನ್ನು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬಿಡುಗಡೆ ಮಾಡಿದರು. ಜೊತೆಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅದೇ ರೀತಿ ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸುಭಾಷ್ ಮಾಲ್ಕಡೆ, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಎ.ವಿ.ಸೂರ್ಯಸೇನ್, ಮೈಸೂರು ಮೃಗಾಲಯ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆಗೆ ಡಿಪ್ಲೊಮೊ ಕೋರ್ಸ್ :

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management)ಯ 10 ತಿಂಗಳುಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ. ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಡ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಈ ಕೋರ್ಸ್ ಆರಂಭಿಸಲು ತಾತ್ವಿಕ ಅನುಮೋದನೆ ನೀಡಿದ್ದಾರೆ.

ಚಿರತೆ ಸಫಾರಿ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಲೆಕ್ಟ್ರಿಕ್ ಫೆನ್ಸಿಂಗ್ ಅಳವಡಿಸುತ್ತಿರುವ ಚಿತ್ರ.

ಈ ಡಿಪ್ಲೊಮಾ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳು ಲಭಿಸುವಂತಿರಬೇಕು. ದೀರ್ಘಕಾಲ ಈ ಕೋರ್ಸ್ ಪ್ರಾಮುಖ್ಯತೆ ಪಡೆಯುವಂತಿರಬೇಕು, ಈ ನಿಟ್ಟಿನಲ್ಲಿ ಪಠ್ಯಕ್ರಮ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧಕ ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು. ಪ್ರಾಣಿಗಳ ಆರೈಕೆ ಹಾಗೂ ನಿರ್ವಹಣೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ವನ್ಯಜೀವಿ ಮತ್ತು ಸಾಕುಪ್ರಾಣಿಗಳ ಸಂರಕ್ಷಣೆ, ನಿರ್ವಹಣೆ, ಆರೈಕೆ ಕುರಿತಂತೆ ಅಗತ್ಯ ಜ್ಞಾನ ಮತ್ತು ಕೌಶಲ ನೀಡುವ ಈ ಡಿಪ್ಲೊಮಾ ಕೋರ್ಸ್ ಪಡೆದವರು ಮೃಗಾಲಯಗಳಲ್ಲಿ, ಪುನರ್ವಸತಿ ಕೇಂದ್ರಗಳಲ್ಲಿ ಪ್ರಾಣಿಪಾಲಕರಾಗಿ ಕೆಲಸ ನಿರ್ವಹಿಸಬಹುದು. ಅದೇ ರೀತಿ ಖಾಸಗಿಯಾಗಿಯೂ ಸಾಕು ಪ್ರಾಣಿಗಳ ಆರೈಕೆ ಕೇಂದ್ರಗಳನ್ನು ನಡೆಸಬಹುದು. ಶಾಲಾ, ಕಾಲೇಜುಗಳಲ್ಲಿ ಪ್ರಾಣಿ ಆರೈಕೆಯ ತರಬೇತಿ ನೀಡಬಹುದು ಎಂದು ಸಭೆಗೆ ತಿಳಿಸಲಾಯಿತು.

ಇತರ ಪ್ರಮುಖ ನಿರ್ಣಯಗಳು:

• ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.

• ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

• ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

• ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.

WhatsApp Join our WhatsApp Channel
Previous Post

BW SPECIAL | BDA Revised Master Plan -2041 | ಬಿಡಿಎ ನಿಂದ ಬೆಂಗಳೂರಿನ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ತಯಾರಿಗೆ ಮೊದಲ ಹೆಜ್ಜೆ : ದ್ರೋಣ್ ಸರ್ವೇ ಮೂಲಕ ನಗರದ 3ಡಿ ಮಾಡೆಲ್!!

Next Post

Actor Darshan Arrest | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ; ಅಸಲಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್

Next Post

Actor Darshan Arrest | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ; ಅಸಲಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ನಡೆಸಿದರು. ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ಉಮಾಶಂಕರ್, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

BBMP Property Tax | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ : ಓಟಿಎಸ್ ಯೋಜನೆಯಡಿ ಜುಲೈ 31ರವರೆಗೆ ಮಾತ್ರ ಅವಕಾಶ ; ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group