Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Actor Darshan Arrest | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ; ಅಸಲಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್

ನಟಿ ಪವಿತ್ರ ಗೌಡಗೆ ಚಿತ್ರದುರ್ಗದ 28 ವರ್ಷದ ರೇಣುಕಾಸ್ವಾಮಿ ಆಗಾಗ ಬೇರೆ ಬೇರೆ ಮೊಬೈಲ್ ಫೋನ್ ನಿಂದ ಕೆಟ್ಟದಾಗಿ ಮೆಸೇಜ್​ ಮಾಡಿದ್ದಕ್ಕೆ ಅಪಹರಿಸಿ ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. | ಅಸಲಿಗೆ ಅಲ್ಲಿ ನಡೆದಿದ್ದೇನು?

by Bengaluru Wire Desk
June 11, 2024
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು, ಜೂ.11 www.bengaluruwire.com : ಕೊಲೆ ಪ್ರಕರಣವೊಂದರಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ನಗರದ ಕಾಮಾಕ್ಷಿ ಠಾಣೆ ಪೊಲೀಸರು ಬಂಧನ ಮಾಡಿ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಈತನಕ ನಟ ದರ್ಶನ್ ಸೇರಿದಂತೆ 10 ಮಂದಿಗೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣವೊಂದರ ಬಂಧಿತ ಆರೋಪಿಗಳು ನಟ ದರ್ಶನ್ ಹೆಸರನ್ನು ಬಾಯ್ಬಿಟ್ಟಿರುವ ಹಿನ್ನೆಲೆಯಲ್ಲಿ ದರ್ಶನ್​ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಹತ್ಯೆ ಸಂಬಂಧ ನಟಿ ಪವಿತ್ರಾಗೌಡ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ (28) ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಅವರನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಶೆಡ್​ ಒಂದರಲ್ಲಿ ಜೂನ್​ 8ರಂದು ರೇಣುಕಾಸ್ವಾಮಿಯ ಮಾರಣಾಂತಿಕ ಹಲ್ಲೆ ನಡೆದಿತ್ತು.  ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು. 

ನಟಿ ಪವಿತ್ರ ಗೌಡ ಚಿತ್ರ.

ಈ ಪ್ರಕರಣದಲ್ಲಿ ಕೆಲ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಇದೀಗ ಆರೋಪಿಗಳು ದರ್ಶನ್​ ಹೆಸರನ್ನು ಬಹಿರಂಗಪಡಿಸಿದ್ದಾರೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ ಸೇರಿ 10 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದಂತಾಗಿದೆ.

ಆದರೆ ನಟ ದರ್ಶನ್ ಪೊಲೀಸರಿಗೆ, ನಟಿ ಪವಿತ್ರ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್​ ಮಾಡಿದ್ದಕ್ಕೆ, ತಾವು ಕೇವಲ ಬೆದರಿಸಿ ಎಂದಷ್ಟೇ ಹೇಳಿದ್ದೆ. ಆದರೆ ಕೊಲೆ ಮಾಡಲು ಹೇಳಿರಲಿಲ್ಲ” ಎಂದು ಹೇಳಿದ್ದಾಗಿ ತಿಳಿದುಬಂದಿದೆ. ಆದರೆ ಇದಕ್ಕೂ ಮುನ್ನ ಬಂಧಿಸಲಾದ ಆರೋಪಿಗಳು ದರ್ಶನ್ ಕೊಲೆ ಮಾಡಲು ತಿಳಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟ ರೇಣುಕಾಸ್ವಾಮಿ ಚಿತ್ರ.

ನಟಿ ಪವಿತ್ರ ಗೌಡಗೆ ಚಿತ್ರದುರ್ಗದ 28 ವರ್ಷದ ರೇಣುಕಾಸ್ವಾಮಿ ಆಗಾಗ ಬೇರೆ ಬೇರೆ ಮೊಬೈಲ್ ಫೋನ್ ನಿಂದ ಕೆಟ್ಟದಾಗಿ ಮೆಸೇಜ್​ ಮಾಡಿದ್ದಕ್ಕೆ ಅಪಹರಿಸಿ ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಜೂ.8ರಂದು ಶನಿವಾರ ರೇಣುಕಾಸ್ವಾಮಿ ಕಾಣೆಯಾಗಿದ್ದ. ಪ್ರಕರಣ ಸಂಬಂಧ ನಿನ್ನೆ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇದೀಗ ಇದೇ ಪ್ರಕರಣದ ನಟ ದರ್ಶನ್ ಸೇರಿದಂತೆ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮೆಡಿಕಲ್ ಶಾಪ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ :

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, “ಕೊಲೆ ಪ್ರಕರಣವೊಂದರಲ್ಲಿ ನಟರೊಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ತನಿಖೆಯ ನಂತರವಷ್ಟೇ ತಿಳಿದುಬರಲಿದೆ” ಎಂದು ತಿಳಿಸಿದ್ದಾರೆ.

ಅಸಲಿಗೆ ನಡೆದಿದ್ದೇನು? :

 ಪವಿತ್ರಾಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾ ಸ್ವಾಮಿ ಕಾಮೆಂಟ್ ಮಾಡಿದ್ದ. ಈ ಹಿನ್ನಲೆಯಲ್ಲಿ ರೇಣುಕಾಸ್ವಾಮಿಯನ್ನು ನಟ ದರ್ಶನ್ ಜೂ.8ರಂದು

ಕರೆಸಿಕೊಂಡಿದ್ದರು. ಆರ್ ಆರ್ ನಗರದ ಮನೆ ಬಳಿ ಇರುವ ಶೆಡ್ ನಲ್ಲಿ ರೇಣುಕಾಸ್ವಾಮಿಯನ್ನು ಕೂಡಿಹಾಕಲಾಗಿತ್ತು. ಆ ಸಂದರ್ಭದಲ್ಲಿ ದರ್ಶನ್ ಜೊತೆಗೆ ಪವಿತ್ರಾ ಗೌಡ ಕೂಡ ಇದ್ದಿದ್ದರು. ಆಗ ರೇಣುಕಾಸ್ವಾಮಿಗೆ ದರ್ಶನ್ ಕೂಡಾ ಹೊಡೆದಿದ್ದಾರೆ ಎನ್ನಲಾಗಿದೆ.

ಗಿರಿನಗರದ ಮೂವರು ಯುವಕರು ಮರ್ಮಾಂಗಕ್ಕೆ ಹೊಡೆದ ಏಟಿಗೆ ಸ್ಥಳದಲ್ಲೇ ರೇಣುಕಾಸ್ವಾಮಿ ಸಾವಿಗೀಡಾದರು. ರೇಣುಕಾಸ್ವಾಮಿ ದೇಹವನ್ನು ಕಾಮಾಕ್ಷಿಪಾಳ್ಯ ರಾಜಕಾಲುವೆ ಬಳಿ ಹುಡುಗರು ಮೋರಿಯಲ್ಲಿ ಎಸೆದಿದ್ದರು. ಮೃತದೇಹ ಸಿಕ್ಕಾಗ ಪೊಲೀಸರು ಅದರ ಪರಿಶೀಲನೆ ನಡೆಸಿದ್ದರು. ಯಾರೊ ಕೊಲೆ ಮಾಡಿದ್ದಾರೆ ಅಂತ ಪೊಲೀಸರು ತನಿಖೆ ನಡೆಸಿದ್ದರು. ರೇಣುಕಾಸ್ವಾಮಿ ಮೊಬೈಲ್‌ ಪರಿಶಿಲನೆ ಮಾಡಿದ್ದಾಗ ಆರ್ ಆರ್ ನಗರದಲ್ಲಿನ‌ ನಟ ದರ್ಶನ್ ಮನೆ ಲೊಕೇಶನ್ ತೋರಿಸಿತ್ತು.

ವಿಚಾರ ದೊಡ್ಡದಾಗುತ್ತೆ ಅಂತ ಮೂರು ಜನ‌ ನಿನ್ನೆ ಸೆರಂಡರ್ ಆಗಿದ್ದರು. ಮೊದಲಿಗೆ ಹಣಕಾಸಿನ ವಿಚಾರಕ್ಕೆ ತಾವೇ ಕೊಲೆ ಮಾಡಿದ್ವಿ ಅಂತ ಹೇಳಿದ್ದರು. ಆದರೆ ಯಾವಾಗ ಪೊಲೀಸ್ ಭಾಷೆಯಲ್ಲಿ ಕೇಳಿದಾಗ ಆರೋಪಿಗಳು ದರ್ಶನ್ ಹೆಸರು ಪ್ರಸ್ತಾಪ ಮಾಡಿದರು ಎಂದು ತಿಳಿದು ಬಂದಿದೆ. ಅಷ್ಟೊತ್ತಿಗಾಗ್ಲೆ ದರ್ಶನ್ ಮೈಸೂರಿಗೆ ತೆರಳಿದರು. ಆದರೆ ಪ್ರಕರಣ ಕಾವೇರುತ್ತಿದ್ದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಕಾರುಗಳನ್ನು ಬಳಕೆ ಮಾಡಿದ್ದು, ಎರಡು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮತ್ತೆರಡು ಕಾರು ವಶಕ್ಕೆ ಪಡೆಯಲು ಪೊಲೀಸರು ಕೈಗೊಂಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳ ವಿವರ :

1.ಪವನ್: ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನಾಪ್ ಮಾಡಲು ಹೇಳಿದ್ದವನು, ಪವಿತ್ರ ಗೌಡನಿಗೂ ಆಪ್ತ.

2. ಪ್ರದೋಶ್:  ಹೋಟೆಲ್ ಉದ್ಯಮಿ… 

3. ನಂದೀಶ್:  ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಕಿಡ್ನಾಪ್ ಮಾಡಿಕೊಂಡು ಕರೆತಂದವನು.

4.ಕೇಶವಮೂರ್ತಿ , ಪ್ರದೂಶ್ ಗೆಳೆಯ ಹಾಗೂ ಉದ್ಯಮಿ.

5.  ರಾಘವೇಂದ್ರ : ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ

6. ಲಕ್ಷ್ಮಣ್,

7.  ದೀಪಕ್ ,

8.ಕಾರ್ತಿಕ್

WhatsApp Join our WhatsApp Channel
Previous Post

Bannergatta Leopard Safari | ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ

Next Post

BBMP Property Tax | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ : ಓಟಿಎಸ್ ಯೋಜನೆಯಡಿ ಜುಲೈ 31ರವರೆಗೆ ಮಾತ್ರ ಅವಕಾಶ ; ಡಿಸಿಎಂ ಡಿ.ಕೆ. ಶಿವಕುಮಾರ್

Next Post
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯನ್ನು ನಡೆಸಿದರು. ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ಉಮಾಶಂಕರ್, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

BBMP Property Tax | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ : ಓಟಿಎಸ್ ಯೋಜನೆಯಡಿ ಜುಲೈ 31ರವರೆಗೆ ಮಾತ್ರ ಅವಕಾಶ ; ಡಿಸಿಎಂ ಡಿ.ಕೆ. ಶಿವಕುಮಾರ್

BBMP Partition | ಬಿಬಿಎಂಪಿ 5 ಭಾಗಗಳಾಗಿ ವಿಂಗಡನೆಗೆ ವಿರೋಧ : ಆರ್ಥಿಕ ಅಸಮತೋಲನದ ಆತಂಕ : ಎನ್.ಆರ್.ರಮೇಶ್ ಸಿಎಂಗೆ ಪತ್ರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group