Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP Partition | ಬಿಬಿಎಂಪಿ 5 ಭಾಗಗಳಾಗಿ ವಿಂಗಡನೆಗೆ ವಿರೋಧ : ಆರ್ಥಿಕ ಅಸಮತೋಲನದ ಆತಂಕ : ಎನ್.ಆರ್.ರಮೇಶ್ ಸಿಎಂಗೆ ಪತ್ರ

ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಉಂಟು ಮಾಡುವ ಪರಿಸ್ಥಿತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ತರುವ ಯೋಚನೆಯನ್ನು ಕೈಬಿಡಲು ಆಗ್ರಹ.

by Bengaluru Wire Desk
June 12, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.12 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು 5 ಭಾಗಗಳಾಗಿ ವಿಭಜನೆ ಮಾಡಲು ನಿರ್ಧರಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ನಾಡಪ್ರಭು ಕೆಂಪೇಗೌಡರು ನಿರ್ಮಿಸಿರುವ ಬೆಂಗಳೂರು ಮಹಾನಗರವನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದೆಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಮಾಜಿ ಅಧ್ಯಕ್ಷ , ಎನ್. ಆರ್.ರಮೇಶ್ ಆಗ್ರಹಿಸಿದ್ದಾರೆ.

ಬೆಂಗಳೂರು ಮಹಾನಗರವನ್ನು ವಿಭಜನೆ ಮಾಡುವುದಿಲ್ಲ – ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆಯನ್ನು ಐದು ಭಾಗಗಳಾಗಿ ವಿಭಜನೆ ಮಾಡುತ್ತೇವೆ ಎಂದು ಅತ್ಯಂತ ಜಾಣ ತನದಿಂದ ಹೇಳಿಕೆ ನೀಡಿದಾಕ್ಷಣ, ತಮ್ಮ ನಿಜ ಬಣ್ಣ ಬಯಲಾಗುವುದಿಲ್ಲ ಎಂದು ತಾವು ಭಾವಿಸಿದರೆ ಅದು ತಪ್ಪಾಗುತ್ತದೆ ಎಂದು ಎನ್.ಆರ್.ರಮೇಶ್ ಕಾಂಗ್ರೆಸ್ ಆಡಳಿತಕ್ಕೆ ಚಾಟಿ ಬೀಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಗೆ ಈ ಸಂಬಂಧ ಪತ್ರ ಬರೆದು ಬೆಂಗಳೂರನ್ನು “ಏಕ ಬೆಂಗಳೂರು ಮಹಾನಗರ”ವನ್ನಾಗಿಯೇ ಉಳಿಸಿಕೊಳ್ಳುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು ಮಹಾನಗರವನ್ನು ವಿಭಜಿಸುವುದೂ ಒಂದೇ ಅಥವಾ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಡಳಿತಾತ್ಮಕವಾಗಿ ವಿಭಜಿಸುವುದೂ ಒಂದೇ. “ಅಳಿಯ ಅಲ್ಲ ಮಗಳ ಗಂಡ” ಎಂಬ ಗಾದೆಯ ನಾಣ್ನುಡಿಯಂತೆ ಬೆಂಗಳೂರು ಮಹಾನಗರವನ್ನು ಆಡಳಿತಾತ್ಮಕವಾಗಿ ಒಡೆಯುವ ಕೆಲಸಕ್ಕೆ ಕೈಹಾಕುತ್ತಿರುವುದು ಸರಿಯಾದ ಕ್ರಮವಲ್ಲ.

ಈಗಾಗಲೇ ದೆಹಲಿ ಮಹಾನಗರ ಪಾಲಿಕೆಯನ್ನು ಆಡಳಿತಾತ್ಮಕವಾಗಿ ಮೂರು ಭಾಗಗಳಾಗಿ ವಿಭಜಿಸಿ ಆಗಿರುವ ಅನಾಹುತಗಳ ಬಗ್ಗೆ ತಮಗೆ ಅರಿವು ಇದೆ ಎಂದು ಭಾವಿಸುತ್ತೇನೆ.

ದೆಹಲಿ ಮಹಾನಗರ ಪಾಲಿಕೆಯನ್ನು ಮೂರು ಭಾಗಗಳಾಗಿ ವಿಭಜಿಸಿದ ನಂತರ ಆರ್ಥಿಕ ಅಸಮತೋಲನ ಉಂಟಾಗಿತ್ತು. ಈ ಆರ್ಥಿಕ ಅಸಮತೋಲನದಿಂದ ಚೇತರಿಸಿಕೊಳ್ಳಲಾಗದೇ ಕೊನೆಗೆ ದೆಹಲಿಯ ಮೂರು ಮಹಾನಗರ ಪಾಲಿಕೆಗಳು ಒಂದಾಗಬೇಕೆಂದು ನಿರ್ಣಯ ತೆಗೆದುಕೊಂಡು, ಒಂದೇ ಮಹಾನಗರ ಪಾಲಿಕೆಯನ್ನಾಗಿ ಮಾಡಿರುತ್ತಾರೆ.

ತಾವು ಈ ರೀತಿ ವಿಭಜನೆ ಮಾಡಿದರೆ, ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಹೆಚ್ಚಾಗುತ್ತದೆಯೇ ಹೊರತು ಇದರಿಂದ ಬೆಂಗಳೂರಿಗೆ ಒಳಿತಾಗುವ ಕೆಲಸ ಕಾರ್ಯಗಳಾಗುವುದಿಲ್ಲ. ಉದಾಹರಣೆಗೆ ಬೆಂಗಳೂರು ಮಹಾನಗರದ ಪಶ್ಚಿಮ ಭಾಗದ ಬಹುತೇಕ ಭಾಗಗಳಲ್ಲಿ ಆದಾಯ ತೆರಿಗೆ ಸಂಗ್ರಹ ಸೇರಿದಂತೆ ಪಾಲಿಕೆಯ ವಿವಿಧ ಮೂಲಗಳ ಆದಾಯ ಸಂಗ್ರಹವು ಅತ್ಯಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಹಾಗೆಯೇ ಬೆಂಗಳೂರು ಮಹಾನಗರದ ಪೂರ್ವ ಭಾಗಗಳ ಪ್ರದೇಶಗಳಲ್ಲಿನ ಆದಾಯ ತೆರಿಗೆ ಸೇರಿದಂತೆ ವಿವಿಧ ಆದಾಯ ಮೂಲಗಳಿಂದ ಸಂಗ್ರಹವಾಗುವ ಹಣದ ಪ್ರಮಾಣ ಬಹಳ ಹೆಚ್ಚಾಗಿರುತ್ತದೆ.

ನೀವು ವಿಭಜಿಸಬೇಕೆಂದುಕೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಂದು ಭಾಗಕ್ಕೆ ಸೇರ್ಪಡೆಯಾಗುವ ಮಹದೇವಪುರ ವಲಯ ಮತ್ತು ಪೂರ್ವ ವಲಯಗಳನ್ನು ಒಳಗೊಂಡಿರುವ ಪಾಲಿಕೆ ಆರ್ಥಿಕವಾಗಿ ಅತ್ಯಂತ ಶ್ರೀಮಂತ ಪಾಲಿಕೆಯಾಗುತ್ತದೆ ಹಾಗೂ ದಾಸರಹಳ್ಳಿ ವಲಯ ಮತ್ತು ಪಶ್ಚಿಮ ವಲಯಗಳನ್ನು ಒಳಗೊಂಡ ಪಾಲಿಕೆ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪಾಲಿಕೆಯಾಗುತ್ತದೆ.

ಈ ಎಲ್ಲಾ ವಿಷಯಗಳನ್ನು ತಾವು ಅರ್ಥ ಮಾಡಿಕೊಂಡು ಪ್ರಾದೇಶಿಕವಾಗಿ ಆರ್ಥಿಕ ಅಸಮತೋಲನ ಉಂಟು ಮಾಡುವ ಪರಿಸ್ಥಿತಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ತರುವಂತಹ ತಮ್ಮ ಯೋಚನೆಯನ್ನು ಕೈಬಿಡಬೇಕೆಂದು ಹಾಗೂ ಕೆಂಪೇಗೌಡರು ನಿರ್ಮಾಣ ಮಾಡಿರುವ ಬೆಂಗಳೂರು ಮಹಾನಗರವನ್ನು ಆಡಳಿತಾತ್ಮಕವಾಗಿ ಅಥವಾ ಭೌಗೋಳಿಕವಾಗಿ ವಿಭಜನೆ ಮಾಡುವಂತಹ ದುಸ್ಸಾಹಸಕ್ಕೆ ಕೈಹಾಕಬಾರದೆಂದು ಮತ್ತು ಆ ಮೂಲಕ ಕನ್ನಡಿಗರ, ವಿಶೇಷವಾಗಿ ಬೆಂಗಳೂರಿನ ಮೂಲ ನಾಗರಿಕರ ಆಕ್ರೋಶಗಳಿಗೆ ತುತ್ತಾಗಬಾರದೆಂದು ಎನ್.ಆರ್.ರಮೇಶ್ ಹೇಳಿದ್ದಾರೆ.

ಬೆಂಗಳೂರು ಮಹಾನಗರದ ನಿರ್ಮಾಣಕ್ಕೆಂದು ಹನ್ನೆರಡು ಹೋಬಳಿಗಳನ್ನು (ಉತ್ತರಹಳ್ಳಿ, ವರ್ತೂರು, ಯಲಹಂಕ, ಬೇಗೂರು, ಹಲಸೂರು, ಕೆಂಗೇರಿ, ತಲಘಟ್ಟಪುರ, ಜಿಗಣಿ, ಕುಂಬಳಗೋಡು, ಕಾಗಳ್ಳಿ, ಬಾಣಾವಾರ ಮತ್ತು ಹೆಸರುಘಟ್ಟ) ವಿಜಯನಗರ ಸಾಮ್ರಾಜ್ಯದ ಅರಸರಾದ  ಅಚ್ಯುತರಾಯರು ಜಹಗೀರಾಗಿ ಪಡೆದ ನಾಡಪ್ರಭು ಕೆಂಪೇಗೌಡರು ಅವರ ಶಕ್ತ್ಯಾನುಸಾರ 1537 ರಲ್ಲಿ ಬೆಂಗಳೂರು ಮಹಾನಗರವನ್ನು ನಿರ್ಮಿಸಿರುತ್ತಾರೆ. ಮುಂದೆ ಬೆಂಗಳೂರು ಮಹಾನಗರ ಬೃಹದಾಕಾರವಾಗಿ ಬೆಳೆಯುವ ಮುನ್ಸೂಚನೆಯನ್ನು ಅರಿತಿದ್ದ ಕೆಂಪೇಗೌಡರು ಆ ಎಲ್ಲಾ ಹನ್ನೆರಡು ಹೋಬಳಿಗಳ ವ್ಯಾಪ್ತಿಯಲ್ಲಿ ನಲವತ್ತಕ್ಕೂ ಹೆಚ್ಚು ಕೆರೆ – ಕುಂಟೆಗಳನ್ನು, ಗಡಿ ಗೋಪುರಗಳನ್ನು ನಿರ್ಮಿಸಿದ್ದರು ಎಂದು ನಗರದ ಬೆಳವಣಿಗೆಗೆ ಕಾರಣವಾದ ಅಂಶಗಳನ್ನು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

BBMP Property Tax | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ : ಓಟಿಎಸ್ ಯೋಜನೆಯಡಿ ಜುಲೈ 31ರವರೆಗೆ ಮಾತ್ರ ಅವಕಾಶ ; ಡಿಸಿಎಂ ಡಿ.ಕೆ. ಶಿವಕುಮಾರ್

Next Post

Karnataka Excise Collection | ರಾಜ್ಯದ ಅಬಕಾರಿ ಆದಾಯ ಸಂಗ್ರಹ ಎರಡು ತಿಂಗಳಲ್ಲಿ 5450 ಕೋಟಿ ರೂ.

Next Post
ಸೂಚನೆ : ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

Karnataka Excise Collection | ರಾಜ್ಯದ ಅಬಕಾರಿ ಆದಾಯ ಸಂಗ್ರಹ ಎರಡು ತಿಂಗಳಲ್ಲಿ 5450 ಕೋಟಿ ರೂ.

Namma Clinic | ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ 254 ಹೊಸ ನಮ್ಮ ಕ್ಲಿನಿಕ್!!

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group