Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Greater Bengaluru Governance Bill | ಬಿಬಿಎಂಪಿಯಲ್ಲ “ಗ್ರೇಟರ್ ಬೆಂಗಳೂರು” : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸರ್ಕಾರಕ್ಕೆ ಒಂದರಿಂದ 10 ಪಾಲಿಕೆಗಳನ್ನು ರಚಿಸುವ ಅಧಿಕಾರ | 400 ವಾರ್ಡ್ ಗಳ ರಚನೆಗೆ ಪ್ರಸ್ತಾಪಿಸಲಾಗಿದೆ | ಪ್ರತಿ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಅಧಿಕಾರದ ಅವಧಿ 5 ವರ್ಷ | ಎಸಿಎಸ್ ಗಿಂತ ಕಡಿಮೆ ಶ್ರೇಣಿಯಲ್ಲದ ಅಧಿಕಾರಿ ಮೆಟ್ರೊಪಾಲಿಟನ್ ಕಮಿಷನರ್ ಆಗಿ ನೇಮಕ

by Bengaluru Wire Desk
July 23, 2024
in Bengaluru Focus, BW Special, Public interest
Reading Time: 2 mins read
0
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜು.23 www.bengaluruwire.com : ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಆಡಳಿತಾತ್ಮಕವಾಗಿ ವಿಭಜಿಸುವ ಹಾಗೂ ಗ್ರೇಟರ್ ಬೆಂಗಳೂರು ರಚಿಸುವ ಕಾಲ‌ ಸನ್ನಿಹಿತವಾಗಿದೆ. 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಸಂಪುಟ ಸಭೆ ಅಸ್ತು ಎಂದಿದ್ದು, ಸದನದಲ್ಲಿ ಕರಡು ವಿಧೇಯಕಕ್ಕೆ ಅನುಮೋದನೆ ಸಿಗುವುದೊಂದು ಬಾಕಿಯಿದೆ.

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಸದನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಲು ಕೋರಲಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯಕಲಾಪಗಳ ಪಟ್ಟಿಯಲ್ಲಿ ಈ ವಿಷಯ ಸ್ಥಾನ ಪಡೆದಿದೆ. ಬಿಬಿಎಂಪಿ (BBMP) ಪುನರ್ ರಚನಾ ತಜ್ಞಾರ ಸಮಿತಿ (ಈಗಿನ ಬ್ರ್ಯಾಂಡ್ ಬೆಂಗಳೂರು ಸಮಿತಿ) ಅಧ್ಯಕ್ಷ ಬಿ.ಎಸ್. ಪಾಟೀಲ್ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸೋಮವಾರ ಅನುಮೋದನೆ ನೀಡಲಾಗಿದೆ.

ಒಂದರಿಂದ 10 ಪಾಲಿಕೆಗಳನ್ನು ರಚಿಸುವ ಅಧಿಕಾರವನ್ನು ಸರ್ಕಾರ ಹೊಂದಲಿದ್ದು, ಪ್ರತಿ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಅಧಿಕಾರದ ಅವಧಿ 5 ವರ್ಷಗಳಾಗಲಿದೆ. 400 ವಾರ್ಡ್ ಗಳ ರಚನೆಗೆ ಪ್ರಸ್ತಾಪಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಲಾಗುತ್ತದೆ. ಹೊಸ ಕಾಯ್ದೆ ರಚನೆಯಾದಲ್ಲಿ ಪಾಲಿಕೆಯಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯವನ್ನು ಸರ್ಕಾರ ತನ್ನ ವಿವೇಚನೆ ಬಳಸಿ ತಿರಸ್ಕರಿಸುವ ಅಧಿಕಾರ ಹೊಂದಿರುತ್ತದೆ.  ಅಲ್ಲದೆ ಪಾಲಿಕೆಯನ್ನು ವಜಾ ಅಥವಾ ವಿಸರ್ಜಿಸುವ ಅಧಿಕಾರ ಸರ್ಕಾರದ ಕೈಯಲ್ಲಿರುತ್ತದೆ. 

ಹೀಗೆ ವಜಾಗೊಂಡ ಪಾಲಿಕೆಗೆ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಿಸಬಹುದು.  ಅವರಿಗೆ ಐವರು ಸದಸ್ಯರ ಸಲಹಾ ಸಮಿತಿಯನ್ನು ರಚನೆ ಮಾಡಬಹುದು. ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯ, ಆರ್ಥಿಕ ವೆಚ್ಚದ ಮೇಲೆ ಸರ್ಕಾರ ನಿಗಾವಣೆ ವಹಿಸಿ, ಅದು ಸರಿಯಿಲ್ಲ ಎಂದೆನಿಸಿದರೆ ಈ ಕುರಿತು ಕ್ರಮ ಕೈಗೊಳ್ಳಬಹುದಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಗ್ರೇಟರ್ ಬೆಂಗಳೂರು ಆಡಳಿತ (GBG) ಸಮಿತಿಯು 130 ಪುಟಗಳ ಅಂತಿಮ ವರದಿಯನ್ನು ಇದೇ ಜುಲೈ 20ರಂದು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ  5 ವರ್ಷಗಳ ಪ್ರಯತ್ನದ ಫಲವಾಗಿ (2014-18 ಮತ್ತು 2023-24) ನವೀಕರಿಸಿದ ಗ್ರೇಟರ್‌ ಬೆಂಗಳೂರು ವರದಿಯು ಒಳಗೊಂಡಿದೆ. ಈ ವರದಿಯಲ್ಲಿ, ಪ್ರಸ್ತುತ ಬಿಬಿಎಂಪಿ ಕಾಯ್ದೆಯಲ್ಲಿನ ಲೋಪಗಳಿದ್ದು, ಅಧಿಕಾರ ವಿಕೇಂದ್ರಿಕರಣ ಬಲಪಡಿಸುವ ರೀತಿ ಗ್ರೇಟರ್ ಬೆಂಗಳೂರು ಆಡಳಿತ ರಚನೆಗೆ ಸಮಿತಿ ಸಲಹೆ ನೀಡಿದೆ.  ಇದರಂತೆ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕಾಯ್ದೆಯಾದರೆ, ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ಬರಲಿದೆ. ಇದಕ್ಕೆ ಸಿಎಂ ಅಧ್ಯಕ್ಷರಾಗಿ, ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಇರಲಿದ್ದಾರೆ. ಈ ವರದಿಯಲ್ಲಿ 3-ಹಂತದ ಆಡಳಿತ ಚೌಕಟ್ಟನ್ನು ಸಾಂಸ್ಥಿಕಗೊಳಿಸುವ ಮೂಲಕ 74 ನೇ ಸಾಂವಿಧಾನಿಕ ತಿದ್ದುಪಡಿಯಂತೆ ವಿಕೇಂದ್ರೀಕೃತ ಪ್ರಜಾಪ್ರಭುತ್ವದ ಚೈತನ್ಯವನ್ನು ಅರಿತುಕೊಳ್ಳಲು ಪ್ರಯತ್ನಿಸುತ್ತದೆ. ಮೂರು ಹಂತದ ರಚನೆ ಹೇಗಿರುತ್ತದೆಯೆಂದರೆ :

* ಬೃಹತ್ ಬೆಂಗಳೂರು ಪ್ರದೇಶದ ಅಭಿವೃದ್ಧಿಗಾಗಿ ಯೋಜನೆ, ಸಮನ್ವಯ, ಮೇಲ್ವಿಚಾರಣೆ ಮತ್ತು ಹಣಕಾಸಿಗಾಗಿ ಬೃಹತ್ ಬೆಂಗಳೂರು ಪ್ರಾಧಿಕಾರ ರಚನೆ.

 * ಇದು ಪರಿಣಾಮಕಾರಿಯಾಗಲು ಬೃಹತ್ ಬೆಂಗಳೂರು ಪ್ರದೇಶದಲ್ಲಿ ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳು, ಭಾಗವಹಿಸುವ ಮತ್ತು ಸ್ಪಂದಿಸುವ ಆಡಳಿತ.

* ನಗರಾಡಳಿತದ ಮೂಲಭೂತ ಘಟಕಗಳಾಗಲು ಅಧಿಕಾರ ಪಡೆದ ವಾರ್ಡ್ ಸಮಿತಿಗಳು ಮತ್ತು ಸಮುದಾಯದ ಭಾಗವಹಿಸುವಿಕೆಯನ್ನು ಸುಲಭಗೊಳಿಸುವುದಕ್ಕೆ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಗ್ರೇಟರ್ ಬೆಂಗಳೂರು ಆಡಳಿತ ಸಮಿತಿ ವರದಿಯಲ್ಲಿ ಪ್ರಸ್ತಾಪಿಸಿದ ಮೂರು ಹಂತದ ರಚನಾ ವ್ಯವಸ್ಥೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಪ್ರಸ್ತಾಪ :

* ಜೆಬಿಜಿ ಮಸೂದೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯನ್ನು ಪ್ರಸ್ತಾಪಿಸುತ್ತದೆ. ಬಿಡಿಎ, ಬಿಡಬ್ಲ್ಯುಎಸ್ ಎಸ್ ಬಿ, ಬೆಸ್ಕಾಂ, ಬಿಎಂಟಿಸಿ, ಬಿಎಂಆರ್ ಸಿಎಲ್  (BDA, BWSSB, BESCOM, BMTC, BMRCL) ಇತ್ಯಾದಿಗಳಂತಹ 10 ವಿವಿಧ ಸಂಸ್ಥೆಗಳನ್ನು ಒಳಗೊಂಡ ಸಮಗ್ರ ಆಡಳಿತ ಚೌಕಟ್ಟಿನ ಅಡಿಯಲ್ಲಿ ರಚನೆಯಾಗಲಿದೆ.

ಮೇಯರ್-ಇನ್-ಕೌನ್ಸಿಲ್ ವ್ಯವಸ್ಥೆ :

• ಮೇಯರ್-ಇನ್-ಕೌನ್ಸಿಲ್ ವ್ಯವಸ್ಥೆಯನ್ನು ಹೊಂದಿರುವ ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳು ಪ್ರಸ್ತುತ ಬಿಬಿಎಂಪಿ ತುಂಬಾ ದೊಡ್ಡದಾಗಿದೆ ಮತ್ತು ಒಂದೇ ಘಟಕವಾಗಿ ನಿರ್ವಹಿಸಲು ಅಸಮರ್ಥವಾಗಿದೆ. ಜಿಬಿಜಿ ಪರಿಷ್ಕೃತ ಕಾರ್ಪೊರೇಷನ್ ಪ್ರದೇಶವನ್ನು ಬಹು ಮುನ್ಸಿಪಲ್ ಕಾರ್ಪೊರೇಶನ್‌ಗಳಾಗಿ ಮಾಡಲು ಮಸೂದೆ ಅನುಮತಿಸುತ್ತದೆ. ಸರ್ಕಾರ ಒಪ್ಪಿದರೆ ಪಾಲಿಕೆಯನ್ನು ಜನರಿಗೆ ಹತ್ತಿರವಾಗಿಸುತ್ತದೆ. ಪ್ರತಿ ಮುನ್ಸಿಪಲ್ ಕಾರ್ಪೊರೇಶನ್ ಮೇಯರ್-ಇನ್-ಕೌನ್ಸಿಲ್ ಅನ್ನು ಹೊಂದಿರಲು ಅವಕಾಶ ಕಲ್ಪಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮೇಯರ್, ಉಪಮೇಯರ್ ಮತ್ತು ಮೇಯರ್ ನಾಮನಿರ್ದೇಶನಗೊಂಡ ಇತರ 10 ಸದಸ್ಯರು ಮೇಯರ್-ಇನ್ ಕೌನ್ಸಿಲ್ ಕಾರ್ಯನಿರ್ವಾಹಕ ಅಧಿಕಾರವನ್ನು ಹೊಂದಿರುತ್ತದೆ. ಹಾಗೂ ಸ್ಪೀಕರ್ ಗೆ ಸಮಾನವಾದ ಅಧ್ಯಕ್ಷರು ಕೌನ್ಸಿಲ್ ನಡಾವಳಿಗಳನ್ನು ನಿರ್ವಹಿಸಲು ಸಹಾಯ ಮಾಡುತ್ತಾರೆ.  ಪ್ರತಿ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ಪ್ರತಿ ವಲಯಗಳಾಗಿ ವಿಂಗಡಿಸಲು ಮಸೂದೆಯು ಪ್ರಸ್ತಾಪಿಸುತ್ತದೆ.

ವಾರ್ಡ್‌ಗಳಿಂದ ಚುನಾಯಿತರಾದ ಎಲ್ಲಾ ಕೌನ್ಸಿಲರ್‌ಗಳನ್ನು ಒಳಗೊಂಡಿರುವ ವಲಯ ಸಮಿತಿಯಿರಲಿದೆ. ವಲಯ ವ್ಯಾಪ್ತಿಯಲ್ಲಿ ಬಹು ವಾರ್ಡ್‌ಗಳಿರಲಿದ್ದು,ಪ್ರತಿ ಮುನಿಸಿಪಲ್ ಕಾರ್ಪೊರೇಷನ್ ಚಟುವಟಿಕೆಗಳನ್ನು ವಲಯ ಸಮಿತಿಯು ಮೇಲ್ವಿಚಾರಣೆ ಮಾಡಬಹುದು ಎಂದು ಬಿ.ಎಸ್.ಪಾಟೀಲ್ ನೇತೃತ್ವದ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

ಅಧಿಕಾರ ಪಡೆದ ವಾರ್ಡ್ ಸಮಿತಿಗಳು :

ಜಿಬಿಜಿಯಲ್ಲಿ ವಾರ್ಡ್‌ಗಳನ್ನು ಆಡಳಿತದ ಮೂಲ ಘಟಕವನ್ನಾಗಿ ಮಾಡಲು ಮತ್ತು ವಾರ್ಡ್‌ಗೆ ಅಧಿಕಾರ ನೀಡಲು ಪ್ರಸ್ತಾಪಿಸುತ್ತದೆ. ವಾರ್ಡ್‌ನಲ್ಲಿ ಕಾರ್ಪೊರೇಷನ್ ಕಾಮಗಾರಿಗಳ ಮೇಲ್ವಿಚಾರಣೆ ಮತ್ತು ಲೆಕ್ಕಪರಿಶೋಧನೆಗಾಗಿ ಸಮಿತಿಗಳು.  

ಪ್ರತಿ ವಾರ್ಡ್‌ಗೆ 20 ಸದಸ್ಯರನ್ನು ಒಳಗೊಂಡ ವಾರ್ಡ್ ಸಮಿತಿ ಇರುತ್ತದೆ, ಅವರಲ್ಲಿ ಅರ್ಧದಷ್ಟು ಚುನಾಯಿತರಾಗಿರುತ್ತಾರೆ. ವಾರ್ಡ್ ಸಮಿತಿ ಪಕ್ಷದ ಮತ ಪಾಲನ್ನು ಪ್ರತಿಬಿಂಬಿಸುವ ಅನುಪಾತದ ಪ್ರಾತಿನಿಧ್ಯವನ್ನು ಆಧರಿಸಿದೆ. 

ಚುನಾವಣೆಗಳು (ಪ್ರತಿ 10% ಮತ ಹಂಚಿಕೆಯು ಒಬ್ಬ ಪ್ರತಿನಿಧಿಯನ್ನು ಪಡೆಯುತ್ತದೆ) ಮತ್ತು ಉಳಿದ ಅರ್ಧದಷ್ಟು ನಾಮನಿರ್ದೇಶನಗೊಂಡವರಾಗುತ್ತಾರೆ ಹಾಗೆಯೇ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಂದ ಹಿಡಿದು ಕೊಳೆಗೇರಿ ಗುಂಪುಗಳವರೆಗೆ ವ್ಯಾಪಕ ಶ್ರೇಣಿಯ ನಾಗರಿಕ ಸಮಾಜದ ಗುಂಪುಗಳು ಈ ವಾರ್ಡ್ ಸಮಿತಿಯಲ್ಲಿರುತ್ತಾರೆ. ವಾರ್ಡ್ ಸಮಿತಿಗಳು ಕಡಿಮೆ-ಮೌಲ್ಯಮಾಪನ ಮಾಡಿದವರಿಂದ ಆಸ್ತಿ ತೆರಿಗೆಯ ಪಾಲನ್ನು ಉಳಿಸಿಕೊಳ್ಳಲು ಹಾಗೂ ವಾರ್ಡ್‌ನಲ್ಲಿ ಯೋಜನೆಗಳನ್ನು ಕೈಗೊಳ್ಳಲು ವಾರ್ಡ್‌ನಿಂದ ಸಂಗ್ರಹಿಸಲಾದ ಆಸ್ತಿಗಳು ಮತ್ತು ಬಾಕಿಗಳನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ.

ಉತ್ತಮ ಹಣಕಾಸು ಯೋಜನೆ :

 ಜಿಬಿಜಿ ಅಂತಿಮ ವರದಿಯಲ್ಲಿ  ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು,‌ ಮೌಲ್ಯಮಾಪನ, ಯೋಜನೆ ಮತ್ತು ಬಳಕೆದಾರರ ಶುಲ್ಕಗಳು, ಸೆಸ್‌ಗಳು, ಶುಲ್ಕಗಳು, ದಂಡಗಳು, ಅಭಿವೃದ್ಧಿ ಶುಲ್ಕಗಳು ಮತ್ತು ಸ್ಥಿರ ಆಸ್ತಿಗಳ ವರ್ಗಾವಣೆಯ ಮೇಲಿನ ಸುಂಕ ಸಂಗ್ರಹಿಸಲು ಮುನ್ಸಿಪಲ್ ಕಾರ್ಪೊರೇಶನ್ ಅನ್ನು ಸುಗಮಗೊಳಿಸುತ್ತದೆ. 

ಮೇಯರ್-ಇನ್-ಕೌನ್ಸಿಲ್ ವಾರ್ಷಿಕ ಹಣಕಾಸು ಹೇಳಿಕೆಯನ್ನು ಸಿದ್ಧಪಡಿಸುವ ಅಗತ್ಯವಿದೆ.  ಚಾರ್ಟರ್ಡ್ ಅಕೌಂಟೆಂಟ್‌ನಿಂದ ಆಡಿಟ್ ಮಾಡಲಾಗುವುದು, ಅವರ ವರದಿಯನ್ನು ಪರಿಶೀಲನೆಗಾಗಿ ಲೆಕ್ಕಪತ್ರ ಸಮಿತಿ ಮುಂದೆ ಇಡಲಾಗುತ್ತದೆ.

 ಕಾರ್ಪೊರೇಷನ್ ಗಳಿಗೆ ಸಹಾಯ ಮಾಡಲು ಜಿಬಿಎ ಮಟ್ಟದಲ್ಲಿ ಹಣಕಾಸು ಸಲಹಾ ಸಮಿತಿ ವ್ಯವಸ್ಥೆಯನ್ನು ಒದಗಿಸುತ್ತದೆ. ಕಾರ್ಪೊರೇಷನ್ ಗಳು ಆರ್ಥಿಕವಾಗಿ ಸುಸ್ಥಿರವಾಗಲು ಮತ್ತು ಹೆಚ್ಚುವರಿ ರಾಜ್ಯದ ಅನುದಾನಗಳನ್ನು ಹೇಗೆ ಮಹಾನಗರ ಪಾಲಿಕೆಗಳ ನಡುವೆ ಹಂಚಿಕೆ ಎಂಬುದರ ಕುರಿತು ಶಿಫಾರಸುಗಳನ್ನು ಮಾಡಲು, ಆದಾಯ ಮತ್ತು ಬಂಡವಾಳದ ಅಗತ್ಯಗಳನ್ನು ಪೂರೈಸಲು ಸಲಹಾ ಸಮಿತಿ ಸಹಕರಿಸಲಿವೆ.

ಕೇಂದ್ರ ಹಣಕಾಸು ಆಯೋಗ ಮತ್ತು ರಾಜ್ಯ ಹಣಕಾಸು ಆಯೋಗದಿಂದ ನೇರವಾಗಿ ಅನುದಾನವನ್ನು ಪಡೆಯಲು ಹಾಗೂ ಆಸ್ತಿ ತೆರಿಗೆ ಸೇರಿದಂತೆ ಎಲ್ಲಾ ಸ್ವಂತ ಆದಾಯವನ್ನು ಉಳಿಸಿಕೊಳ್ಳಲು ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ರಚನೆಯಾಗುವ ಕಾರ್ಪೊರೇಷನ್ ಗಳಿಗೆ ಕಾನೂನಾತ್ಮಕ ಅವಕಾಶ ನೀಡಲಾಗುತ್ತದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೆಟ್ರೊಪಾಲಿಟನ್ ಕಮಿಷನರ್ ಅಧಿಕಾರ ವ್ಯಾಪ್ತಿಯೇನು?:

(1) ರಾಜ್ಯ ಸರ್ಕಾರವು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯನ್ನು ಗ್ರೇಟರ್ ಬೆಂಗಳೂರು ಮೆಟ್ರೋಪಾಲಿಟನ್ ಆಯುಕ್ತರಾಗಿ ನೇಮಿಸಬೇಕು.

 (2) ಮೆಟ್ರೋಪಾಲಿಟನ್ ಆಯುಕ್ತರು ಸಾಮಾನ್ಯವಾಗಿ ಮೂರು ವರ್ಷಗಳ ಅವಧಿಗೆ ಅಧಿಕಾರವನ್ನು ಹೊಂದಿರುತ್ತಾರೆ. ಬೃಹತ್ ಬೆಂಗಳೂರು ಪ್ರಾಧಿಕಾರದ ಪರಿಣಾಮಕಾರಿ ಆಡಳಿತಕ್ಕೆ ಅಗತ್ಯವಿರುವಂತೆ ಸರ್ಕಾರದ ವ್ಯವಧಾನಕ್ಕೆ ಒಳಪಟ್ಟಿದ್ದು, ಅವರನ್ನು ಅಗತ್ಯ ಕಂಡುಬಂದಲ್ಲಿ ವರ್ಗಾಯಿಸಬಹುದು. 

 (3) ಮೆಟ್ರೋಪಾಲಿಟನ್ ಆಯುಕ್ತರು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಪ್ರಧಾನ ಕಾರ್ಯನಿರ್ವಾಹಕ ಅಧಿಕಾರಿಯಾಗಿರುತ್ತಾರೆ. ಬೆಂಗಳೂರು ಪ್ರಾಧಿಕಾರ ಮತ್ತು ಗ್ರೇಟರ್‌ ಬೆಂಗಳೂರಿನ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಬೆಂಗಳೂರು ಪ್ರಾಧಿಕಾರ, ಅಧಿಕಾರಗಳನ್ನು ಚಲಾಯಿಸಿ ಮತ್ತು ನಿರ್ದಿಷ್ಟವಾಗಿ ನೀಡಲಾದ ಕಾರ್ಯಗಳನ್ನು ನಿರ್ವಹಿಸಿ ಅಥವಾ ಈ ಕಾಯಿದೆಯ ಮೂಲಕ ಅಥವಾ ಅದರ ಅಡಿಯಲ್ಲಿ ಅಥವಾ ಸಮಯಕ್ಕೆ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅವರು ಕಾರ್ಯನಿರ್ವಹಿಸಬೇಕು.

(4) ಮೆಟ್ರೋಪಾಲಿಟನ್ ಕಮಿಷನರ್ ಅವರು ಬೃಹತ್ ಬೆಂಗಳೂರು ಪ್ರಾಧಿಕಾರದಲ್ಲಿ ಬೃಹತ್ ಬೆಂಗಳೂರಿನ ಪೂರ್ಣ ಸಮಯದ ಅಧಿಕಾರಿಯಾಗಿರುತ್ತಾರೆ. ಅವರ ಅಧಿಕಾರವು ಎಲ್ಲಾ ಅಧಿಕಾರಗಳು, ಕರ್ತವ್ಯಗಳು ಮತ್ತು ಕಾರ್ಯಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಇವರು ಈ ಹುದ್ದೆಯಲ್ಲಿದ್ದಾಗ ಬೇರೆ ಯಾವುದೇ ವೃತ್ತಿ, ವ್ಯಾಪಾರ ಅಥವಾ ಯಾವುದೇ ವ್ಯವಹಾರದಲ್ಲಿ ತೊಡಗಬಾರದು.  

 

 

Previous Post

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

Next Post

Modi 3.0 Budget 2024 | ಕೇಂದ್ರ ಬಜೆಟ್ 2024ರಲ್ಲಿ ಹೊಸ ತೆರಿಗೆ ಲಾಭ ಯಾರಿಗೆ? : ಬಡವರು – ಮಧ್ಯಮ ವರ್ಗಕ್ಕೆ ಒತ್ತು‌ ; ಯಾವ ವಸ್ತುಗಳು ದುಬಾರಿ ಮತ್ತು ಅಗ್ಗ?

Next Post

Modi 3.0 Budget 2024 | ಕೇಂದ್ರ ಬಜೆಟ್ 2024ರಲ್ಲಿ ಹೊಸ ತೆರಿಗೆ ಲಾಭ ಯಾರಿಗೆ? : ಬಡವರು - ಮಧ್ಯಮ ವರ್ಗಕ್ಕೆ ಒತ್ತು‌ ; ಯಾವ ವಸ್ತುಗಳು ದುಬಾರಿ ಮತ್ತು ಅಗ್ಗ?

ವಿಧಾನಸೌಧದ ಸಾಂದರ್ಭಿಕ ಚಿತ್ರ

MLA Local area development Fund | ರಾಜ್ಯದಲ್ಲಿ 2023-24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ : ಶೇ.100ರಷ್ಟು ಅನುದಾನ ಬಳಕೆ ಮಾಡಿದ್ದು ಮೂವರು ಶಾಸಕರು ಮಾತ್ರ!!

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group