Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Anywhere registration | ನಿಮ್ಮ ಆಸ್ತಿಗಳನ್ನು “ಎನಿವೇರ್” ರಿಜಿಸ್ಟ್ರೇಷನ್ ಮಾಡಿಸಬಹುದು : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ಜಾರಿ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನೀವು ಬಯಸಿದ ಕಡೆಯ ಸಬ್ ರಿಜಿಸ್ಟ್ರರ್ ಕಚೇರಿಯಲ್ಲಿ ನಿಮ್ಮ ಸ್ವತ್ತು, ದಾಖಲಾತಿಗಳನ್ನು ನೋಂದಣಿ ಮಾಡಿಸಬಹುದು.

by Bengaluru Wire Desk
August 26, 2024
in News Wire, Public interest
Reading Time: 2 mins read
0
Anywhere Registration

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎನಿವೇರ್ ನೋಂದಣಿ ಕುರಿತ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.26 www.bengaluruwire.com : ಸಾರ್ವಜನಿಕರ ಅನುಕೂಲಕ್ಕಾಗಿ ಸ್ತಿರಾಸ್ಥಿ ನೋಂದಣಿಯನ್ನು ಸುಲಭಗೊಳಿಸಲು ಬೆಂಗಳೂರಿನಲ್ಲಿ ‘ಎನಿವೇರ್ ನೋಂದಣಿ‘ (Anywhere Registration) ಪರಿಕಲ್ಪನೆಯನ್ನು ಜಾರಿಗೆ ತಂದ ಸುಮಾರು 13 ವರ್ಷಗಳ ನಂತರ, ರಾಜ್ಯ ಸರ್ಕಾರ ಇದನ್ನು ರಾಜ್ಯದ (Karnataka) ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಜಾರಿಯಾಗಲಿದೆ.

ರಾಜ್ಯದಲ್ಲಿ ಒಟ್ಟು 35 ಜಿಲ್ಲಾನೋಂದಣಿ ಕಚೇರಿ (District Registrar Office) ಹಾಗೂ 257 ಉಪನೋಂದಣಿ ಕಚೇರಿ (Sub registrar office)ಗಳಿದ್ದು, ಸಾರ್ವಜನಿಕರು ಆಯಾ ಜಿಲ್ಲಾವ್ಯಾಪ್ತಿಯಲ್ಲಿ ಅವರು ಬಯಸಿದ ದಿನ, ಸಮಯದಲ್ಲಿ ಸ್ಥಿರಾಸ್ತಿಯನ್ನು ನೋಂದಾಯಿಸಬಹುದು. ಇದೇ ಎನಿವೇರ್ ನೋಂದಣಿಯಾಗಿದೆ.

ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಈ ಹಿಂದೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಬಜೆಟ್‌ ಮಂಡಿಸಿದ ತಿಂಗಳೊಳಗಾಗಿ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿತ್ತಾದರೂ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಈ ಸೌಲಭ್ಯವನ್ನು ಸೆಪ್ಟೆಂಬರ್‌ ಮೊದಲ ವಾರದಿಂದಲೇ ರಾಜಾದ್ಯಂತ ಹಂತ ಹಂತವಾಗಿ ಜಾರಿಯಾಗಲಿದೆ.

ಉಪ ನೋಂದಣಾಧಿಕಾರಿ ಕಛೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರ್ಕಾರಿ ಕಛೇರಿಗಳಲ್ಲಿ ಕಾಯಿಸುವುದೂ ಸಹ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ “ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ಜಾರಿಗೊಳಿಸಲಾಗಿದೆ. ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿ ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶ. ಇದೇ ಕಾರಣಕ್ಕೆ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಛೇರಿಯ ವ್ಯಾಪ್ತಿಯ ಉಪನೋಂದಣಿ ಕಛೇರಿಗಳಲ್ಲಿ ಜಾರಿಗೆ ತರಲಾಗಿತ್ತು.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು  ಬೆಂಗಳೂರು ನಗರದ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908 (Registration act 1908) ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವುಮಾಡಿಕೊಡಲಾಗಿತ್ತು. ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಸಹ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಬಜೆಟ್‌ನಲ್ಲಿ ನೀಡಿದ ಆಶ್ವಾಸನೆಯಂತೆ ಇಲಾಖೆ ಒಂದು ಹೆಜ್ಜೆ ಮುಂದೆ ಇಟ್ಟಿದೆ.

ಇದನ್ನೂ ಓದಿ :

ಅಲ್ಲದೆ, ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ ವರ್ಷದ ಮಾ.14ರಂದು “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆತಿತ್ತು. ಪ್ರಾಯೋಗಿಕ ಯೋಜನೆಯ ಯಶಸ್ವಿಯನ್ನು ಪರಿಗಣಿಸಿ ರಾಜ್ಯಾದ್ಯಂತ ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸೇವೆಯನ್ನು ಶೀಘ್ರದಲ್ಲೇ ರಾಜ್ಯಾದ್ಯಂತ ಚಾಲ್ತಿಗೆ ತರಲು ಉದ್ದೇಶಿಸಲಾಗಿದೆ. “ಎನಿವೇರ್ ನೋಂದಣಿ” ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ : Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

ಯೋಜನೆಯಿಂದ ಆಗುವ ಅನುಕೂಲಗಳು :

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಛೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲಾ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ.

ಕಂದಾಯ ಸಚಿವರು ಹೀಗಂತಾರೆ :

“ಎನಿವೇರ್ ನೋಂದಣಿ ವ್ಯವಸ್ಥೆ”ಯನ್ನು ರಾಜ್ಯದ ಎಲ್ಲಾ ಕಡೆ ಹಂತ ಹಂತವಾಗಿ ಜಾರಿಗೊಳಿಸುತ್ತಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಕ್ರಾಂತಿಕಾರಕ  ಹೆಜ್ಜೆಯಾಗಿದೆ. ಈ ಮೂಲಕ ಜನರಿಗೆ ಸರಳ ಮತ್ತು ಸುಲಭ ಆಡಳಿತ ನೀಡುವುದೇ ನಮ್ಮ ಧ್ಯೇಯ ಎಂಬುದನ್ನು ಮತ್ತೊಮ್ಮೆ ತಿಳಿಸಲು ಇಚ್ಚಿಸುತ್ತೇನೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

Next Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post
Bangalore CAR South Dog Died

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

GBA Head Office Image

"ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ"

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group