Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

“ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ”

by Bengaluru Wire Desk
August 27, 2024
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.27 www.bengaluruwire.com : ಕಾಮಗಾರಿ ಗುತ್ತಿಗೆಯಲ್ಲಿ, ಟೆಂಡರ್ ಮೂಲಕ ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸಲು ಪಾಲಿಕೆಯ ಅಧಿಕಾರಿಗಳು ನೂರಾರು ಕೋಟಿ ರೂಪಾಯಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿರೋದು ಹಳೆಯ ವಿಷಯ. 

ಬಿಬಿಎಂಪಿಯ ಮುಖ್ಯ ಅಭಿಯಂತರರುಗಳು ಯೋಜನೆ ನಿರ್ವಹಣಾ ಸಮಾಲೋಚನೆ (Project Management Consultancy- PMC) ಹೆಸರಿನಲ್ಲಿ ಕೋಟ್ಯಾಂತ ರೂ. ಹಣವನ್ನು ಕೊಳ್ಳೆ ಹೊಡೆಯುತ್ತಿರುವ ವಿಷಯ ಬಹಿರಂಗವಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪಿಎಂಸಿ ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು ಬಾಹಿರವಾಗಿ ನಿರ್ವಹಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ವರ್ಷ ಒಂದಕ್ಕೆ ಕನಿಷ್ಠ 4 ಸಾವಿರದಿಂದ 5 ಸಾವಿರ ಕೋಟಿ ರೂಪಾಯಿಗಳಷ್ಟು ಮೊತ್ತದ ಅಭಿವೃದ್ಧಿ ಕಾರ್ಯಗಳು ಅಥವಾ ಕಾಮಗಾರಿಗಳು ನಡೆಯುತ್ತದೆ. ಇವುಗಳಿಂದ ವರ್ಷಂಪ್ರತಿ 80 ಕೋಟಿಯಿಂದ 100 ಕೋಟಿ ರೂಪಾಯಿಗಳಷ್ಟು ಮೊತ್ತ ಕೇವಲ ಪಿಎಂಸಿ ಹೆಸರಿನಲ್ಲಿ ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳ ಜೇಬು ಸೇರುತ್ತಿದೆ. ಈ ಸಂಬಂಧ  ಕಳೆದ ಹತ್ತು ವರ್ಷಗಳಿಂದ ಇಂತಹ ಕಾನೂನು ಬಾಹಿರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲಾ ಮುಖ್ಯ ಅಭಿಯಂತರರುಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಆಗ್ರಹಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಒಟ್ಟು ಮೊತ್ತದ ಶೇ.2 ರಷ್ಟು ಮೊತ್ತವನ್ನು ಪಿಎಂಸಿ ಹೆಸರಿನಲ್ಲಿ ಕಡಿತಗೊಳಿಸುವ ಮುಖ್ಯ ಅಭಿಯಂತರರುಗಳು ಅಂತಹ ಎಲ್ಲಾ ಪಿಎಂಸಿ ಕಾರ್ಯಗಳನ್ನು ತಮ್ಮ ಸಂಬಂಧಿಕರು, ಬೆಂಬಲಿಗರು ಅಥವಾ ಹಿಂಬಾಲಕರ ಮೂಲಕವೇ ನಡೆಸುತ್ತಿದ್ದಾರೆ. ಪ್ರತಿಯೊಂದು ಕಾಮಗಾರಿಯಲ್ಲಿ ಲಕ್ಷಾಂತರ ರೂಪಾಯಿಗಳನ್ನು ಕೊಳ್ಳೆ ಹೊಡೆಯುತ್ತಿರುವ ಸಂಗತಿ ಇದುವರೆವಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರು ಹಾಗೂ ಮಾನ್ಯ ಆಡಳಿತಾಧಿಕಾರಿಗಳ ಗಮನಕ್ಕೆ ಬಾರದೇ ಇರುವುದು ನಿಜಕ್ಕೂ ದುರಾದೃಷ್ಟಕರ ಎಂದು ಟೀಕಿಸಿದ್ದಾರೆ.

ಪ್ರತಿಯೊಂದು ಕಾಮಗಾರಿಯ ಪಿಎಂಸಿ ಏಜನ್ಸಿಗಳನ್ನು ನಿಗದಿ ಮಾಡುವ ಸಂಬಂಧ ನಿಯಮಾನುಸಾರ ಪಿಎಂಸಿ ಮೊತ್ತ 5 ಲಕ್ಷಕ್ಕಿಂತಲೂ ಕಡಿಮೆ ಇದ್ದರೆ ಕೊಟೇಷನ್ (Quotation) ಮೂಲಕ ಮತ್ತು 5 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಟೆಂಡರ್ (Tender) ಆಹ್ವಾನಿಸಿದ ನಂತರ ಅರ್ಹರಿಗೆ ಈ ಕಾರ್ಯದ ಬಗ್ಗೆ ಕಾರ್ಯಾದೇಶ ಪತ್ರ ನೀಡಬೇಕಿರುತ್ತದೆ. ಆದರೆ ಇಲ್ಲಿ‌ ತಮ್ಮವರಿಗೆ ಪಿಎಂಸಿ ಕೆಲಸ ಕೊಡಿಸಲು ಬೇರೆ ಏಜನ್ಸಿಗಳು ಕೊಟೇಷನ್ ಕೊಡದಂತೆ ಅಥವಾ ಟೆಂಡರ್ ನಲ್ಲಿ ಭಾಗವಹಿಸದಂತೆ ಆಯಾ ಮುಖ್ಯ ಅಭಿಯಂತರರು ನೋಡಿಕೊಳ್ಳುತ್ತಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿ ಬಿಲ್ಲುಗಳನ್ನು ಪಾವತಿ ಮಾಡುವಲ್ಲಿ ಹೆಚ್ಚಿನ ಆರ್ಥಿಕ ಶಿಸ್ತು ಹಾಗೂ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ 2018ರ ಆಗಸ್ಟ್ 3ರಂದು‌ ಪಾಲಿಕೆಯ ಅಂದಿನ ಆಯುಕ್ತರು ಪಿಎಂಸಿ ಪದ್ಧತಿಯನ್ನು ಜಾರಿಗೆ ತರಲು ಆದೇಶಿಸಿದ್ದರು. ಅಂದಿನ ಆಯುಕ್ತರ ಈ ಆದೇಶವು ಕೆಲವು ಭ್ರಷ್ಟ ಮುಖ್ಯ ಅಭಿಯಂತರರುಗಳಿಗೆ ವರದಾನವಾಗಿ ಪರಿಣಮಿಸಿದ್ದು, ಅದನ್ನೇ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಅಪಾರ ಪ್ರಮಾಣದ ಹಣವನ್ನು ಕಾನೂನು ಬಾಹಿರವಾಗಿ ಲೂಟಿ ಮಾಡಿರುತ್ತಾರೆ.

ಈ ಪದ್ಧತಿ ಜಾರಿ ಮಾಡಿದ ನಂತರ ಇದುವರೆಗೂ ಸುಮಾರು 500 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ಪಿಎಂಸಿ ಪದ್ಧತಿ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಪೈಕಿ ಶೇ. 90 ರಷ್ಟು ಹಣವನ್ನು ನಾಲ್ಕೈದು ಪ್ರಾಮಾಣಿಕ ಮುಖ್ಯ ಅಭಿಯಂತರರುಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಮುಖ್ಯ ಅಭಿಯಂತರರುಗಳು ತಮ್ಮ ರಕ್ತ ಸಂಬಂಧಿಕರುಗಳಿಗೆ, ಹಿಂಬಾಲಕರಿಗೆ, ಮತ್ತು ಅನುಯಾಯಿಗಳಿಗೆ ನಿಯಮಬಾಹಿರವಾಗಿ ಪಿಎಂಸಿ ಪದ್ಧತಿಯ ಟೆಂಡರ್ ಗಳನ್ನು ಮಾಡಿಕೊಡುವ ಮೂಲಕ ಕೋಟ್ಯಾಂತರ ರೂ. ಹಣವನ್ನು ಲಪಟಾಯಿಸಿರುತ್ತಾರೆ ಎಂದು ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಕೂಡಲೇ, ಕಳೆದ ಹತ್ತಾರು ವರ್ಷಗಳಿಂದ ನಿತ್ಯ ನಿರಂತರವಾಗಿ ನಡೆಯುತ್ತಿರುವ ಈ ಬೃಹತ್ ಅಕ್ರಮದ ತನಿಖೆಯನ್ನು ಸಿಐಡಿ (CID)ಗೆ ವಹಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಪತ್ರ ಬರೆಯುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಧಿಕಾರಿ ಉಮಾಶಂಕರ್ ಅವರನ್ನು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

CAR DOG SQUAD | ಬೆಂಗಳೂರು : ಮಾದಕವಸ್ತು ಪತ್ತೆ ಕಾರ್ಯದಲ್ಲಿ ಎಕ್ಸ್ ಪರ್ಟ್ ಆಗಿದ್ದ ಶ್ವಾನದಳದ ಮಿಕಿ ನಾಯಿ ಸಾವು

Next Post

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Next Post
Telegram

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

Property Buying

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group