Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ : ತುರ್ತು ಚಿಕಿತ್ಸೆಗೆ ಮಿಂಟೊ – ವಿಕ್ಟೋರಿಯಾ ಆಸ್ಪತ್ರೆ ಸಿದ್ಧ

by Bengaluru Wire Desk
October 29, 2024
in Bengaluru Focus
Reading Time: 1 min read
0

ಬೆಂಗಳೂರು, ಅ.29 www.bengaluruwire.com : ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ದೀಪಾವಳಿ ಹಬ್ಬಕ್ಕೆ ನಗರದ ದೊಡ್ಡ ಕಣ್ಣಿನ ಆಸ್ಪತ್ರೆ ಮಿಂಟೊ ಹಾಗೂ ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. 

ಪಟಾಕಿ ಸಿಡಿತದಿಂದ ಮೈಕೈ ಸುಟ್ಟು ಗಾಯಗಳಾಗುವ ಅಥವಾ ದೀಪಾವಳಿಯಲ್ಲಿ ಒಂದೊಮ್ಮೆ ಅಗ್ನಿ ಅವಘಡಗಳಾದಾಗ ಚಿಕಿತ್ಸೆ ನೀಡಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದಕ್ಕಾಗಿಯೇ 15 ಬೆಡ್ ಗಳನ್ನು ಹಾಗೂ ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದ ಪ್ರಕರಣದಲ್ಲಿ ಚಿಕಿತ್ಸೆ ನೀಡಲು ಪುರುಷರು (7 ಹಾಸಿಗೆ), ಮಹಿಳೆಯರು (7 ಹಾಸಿಗೆ) ಹಾಗೂ ಮಕ್ಕಳಿಗಾಗಿ (8 ಹಾಸಿಗೆ) ಸೇರಿದಂತೆ ಒಟ್ಟು 22 ಹಾಸಿಗೆಗಳನ್ನು ಮೀಸಲಿಡಲಾಗಿದೆ. 

ಈ ಬಾರಿಯ ದೀಪಾವಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ಚಿಕಿತ್ಸೆಗೆಂದು ಮಹಾಭೋದಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಸಜ್ಜುಗೊಳಿಸಲಾಗಿದೆ. ದಿನದ 24 ಗಂಟೆ ಕಾರ್ಯನಿರ್ವಹಿಸುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಒಂದೊಮ್ಮೆ ಪಟಾಕಿಯಿಂದ ದೊಡ್ಡ ಅವಘಡಗಳು ಸಂಭವಿಸಿದರೆ ಪ್ರತಿ ರೋಗಿಗಳಿಗೂ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ, ಪಟಾಕಿ ಸುಟ್ಟಗಾಯಗಳ ಚಿಕಿತ್ಸೆಗೆಂದೇ ಪ್ರತ್ಯೇಕ ದಾಖಲಾತಿ ವಿಭಾಗ, ಸೂಕ್ತ ಔಷಧಿ, ಚಿಕಿತ್ಸಾ ಉಪಕರಣ, ತೀವ್ರ ಸುಟ್ಟಗಾಯಗಳ ಚಿಕಿತ್ಸೆಗೆ ಅಗತ್ಯವಾದರೆ ಪ್ಲಾಸ್ಟಿಕ್ ಸರ್ಜರಿ ಘಟಕಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕ (BMIC) ಡಾ.ಕೆ.ರಮೇಶ್ ಕೃಷ್ಣ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

ಇನ್ನು ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದವರ ಚಿಕಿತ್ಸೆಗೆಂದು ಆಸ್ಪತ್ರೆಯಲ್ಲಿ ದಿನದ 24ಗಂಟೆಯು ರೋಗಿಗಳಿಗೆ ಚಿಕಿತ್ಸೆ ಲಭ್ಯವಿದೆ. ಅಗತ್ಯ ವೈದ್ಯರು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗೆ ಒಂದು ವಾರ ರಜೆ ನೀಡುವುದಿಲ್ಲ. ಅಗತ್ಯ ಸಿಬ್ಬಂದಿ ದಿನಪೂರ್ತಿ ಸೇವೆ ನೀಡಲು ಸಜ್ಜಾಗಿದ್ದಾರೆ. ಹೊರ ರೋಗಿಗಳ ವಿಭಾಗದಲ್ಲಿ ಆಸ್ಪತ್ರೆಗೆ ಪಟಾಕಿ ಗಾಯಗಳಿಂದ ಬರುವ ರೋಗಿಗಳ ಪರೀಕ್ಷೆ, ಮೌಲ್ಯಮಾಪನ, ತುರ್ತು ಚಿಕಿತ್ಸೆ ಹಾಗೂ ನರ್ಸ್ ಸ್ಟೇಷನ್ ತಂಡವು ಒಂದೇ ಸ್ಥಳದಲ್ಲಿರಲಿದೆ. ಒಂದೊಮ್ಮೆ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಕಂಡುಬಂದರೆ ಆಪರೇಷನ್ ಥಿಯೇಟರ್ ಗಳನ್ನು ಅದೇ ಬ್ಲಾಕ್ ನಲ್ಲಿ ಸಿದ್ದವಾಗಿಟ್ಟಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೊ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಮಹಿಳೆಯರು, ಮಕ್ಕಳು ಹಾಗೂ ಪುರುಷರಿಗೆ ಒಟ್ಟಾರೆ 22 ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡಲಾಗಿದೆ. ತುರ್ತು ಚಿಕಿತ್ಸೆ, ಆಪರೇಷನ್ ಗೂ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ವೈದ್ಯರು, ಸಿಬ್ಬಂದಿ ಕಳೆದ ವರ್ಷ ಪಟಾಕಿ ಸಿಡಿತದಿಂದ 40 ಜನರಿಗೆ ಕಣ್ಣಿನ ಚಿಕಿತ್ಸೆ ನೀಡಲಾಗಿತ್ತು. ಆ 40 ಜನರ ಪೈಕಿ 7-8 ಜನರು ದೃಷ್ಟಿ ಕಳೆದುಕೊಂಡಿದ್ದರು. ಪಟಾಕಿ ಹಚ್ಚುವಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕ ಡಾ.ಜಿ.ನಾಗರಾಜು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ : Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

ತುರ್ತು ಸಂದರ್ಭದಲ್ಲಿ ಈ ದೂರವಾಣಿ ಸಂಪರ್ಕಿಸಿ :

ಬೆಂಗಳೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಈ ರೀತಿ ಪಟಾಕಿ ಅವಘಡಗಳು ಸಂಭವಿಸಿದರೆ, ಕಣ್ಣಿನ ಚಿಕಿತ್ಸೆ ಹಾಗೂ ತುರ್ತ ಚಿಕಿತ್ಸೆ ಪಡೆಯಲು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಸೂಕ್ತ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಿಂಟೊ ಆಸ್ಪತ್ರೆಯ 9481740137 ಹಾಗೂ 080- 26707176 ಈ ಸಂಖ್ಯೆಗಳಿಗೆ ಕರೆ ಮಾಡಬಹುದು.

ಇನ್ನು ಪಟಾಕಿ ಅವಘಡದಿಂದ ಸುಟ್ಟಗಾಯಗಳಾದವರಿಗೆ ವಿಕ್ಟೋರಿಯಾ ಆಸ್ಪತ್ರೆ  ಚಿಕಿತ್ಸೆಗಾಗಿ 7498809105, 9740322179, 8197969128 ತುರ್ತು ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು.

ದೀಪಾವಳಿ ಹಬ್ಬಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದು, ಬೆಂಗಳೂರಿನಲ್ಲಿ ಪಟಾಕಿಗಳ ಖರೀದಿ ಭರಾಟೆ ಜೋರಾಗಿದೆ. ಬೆಂಗಳೂರಿನ 456 ಮೈದಾನಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದ್ದು, ಜನ ಮುಗಿಬಿದ್ದು ಪಟಾಕಿ ಖರೀದಿಗೆ ಮುಂದಾಗಿದ್ದಾರೆ.

ಪ್ರಮುಖ ಆಸ್ಪತ್ರೆ ಸಹಾಯವಾಣಿಗಳ ಸಂಪರ್ಕ ಸಂಖ್ಯೆ ಹೀಗಿದೆ :

ನಾರಾಯಣ ನೇತ್ರಾಲಯ : ರಾಜಾಜಿನಗರ ಬ್ರಾಂಚ್ – 08066121641/1643 ಅಥವಾ 9902546046.

ಶಂಕರ ಕಣ್ಣಿನ ಆಸ್ಪತ್ರೆ : (ಮಾರತ್ ಹಳ್ಳಿ) 08069038900 ಅಥವಾ 9739270477.

ನೇತ್ರಧಾಮ : (ಜಯನಗರ) 08026088000 ಅಥವಾ 9448071816.

ಮಣಿಪಾಲ್ ಆಸ್ಪತ್ರೆ : (ಹಳೇ ವಿಮಾನ ನಿಲ್ದಾಣ ರಸ್ತೆ) 080-22221111.

ಡಾ.ಎಂ.ಸಿ.ಮೋದಿ ಕಣ್ಣಿನ ಆಸ್ಪತ್ರೆ : 08023492233.

ಡಾ.ಅಗರವಾಲ್ ಕಣ್ಣಿನ ಆಸ್ಪತ್ರೆ : ಬನ್ನೇರುಘಟ್ಟ ಶಾಖೆ- 08048193419, ರಾಜರಾಜೇಶ್ವರಿನಗರ ಶಾಖೆ – 918048193501.

ಶೇಖರ್ ಕಣ್ಣಿನ ಆಸ್ಪತ್ರೆ : (ಜೆ.ಪಿ.ನಗರ) 09980562020.

WhatsApp Join our WhatsApp Channel
Previous Post

Deepavali 2024 | ಬೆಳಗಿನ ಸಮಯ ಪಟಾಕಿ ಸಿಡಿಸಲು ಅವಕಾಶವಿಲ್ಲ : ಬಿಬಿಎಂಪಿ ನಿರ್ದೇಶನ

Next Post

BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

Next Post
Bangalore University Bio Park

BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

ಚಿನ್ನದ ದರ ಒಂದು ವರ್ಷದಲ್ಲಿ ಬರೋಬ್ಬರಿ ಶೇ.35, ಬೆಳ್ಳಿ ಶೇ.36ರಷ್ಟು ಏರಿಕೆ : ಗಗನಮುಖಿಯಾದ ಅಮೂಲ್ಯ ಲೋಹಗಳು

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group