Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Mangalyaan | ಮಂಗಳಯಾನ ಯೋಜನೆ : ವಿಶ್ವ ಭೂಪಟದಲ್ಲಿ ಇಸ್ರೊ ಚಾರಿತ್ರಿಕ ಸಾಧನೆಗೆ 11 ವರ್ಷ

ಮಂಗಳಯಾನ ಉಡಾವಣೆಯಾದ ಒಂದು ವರ್ಷದ ನಂತರ, ಸೆಪ್ಟೆಂಬರ್ 24, 2014 ರಂದು, ಅನೇಕರು ಅಸಾಧ್ಯವೆಂದು ಪರಿಗಣಿಸಿದ್ದನ್ನು ಸಾಧಿಸಿ ತೋರಿಸಿತು. ಮಂಗಳವನ್ನು ತಲುಪಿದ ಏಷ್ಯಾದ ಮೊದಲ ಬಾಹ್ಯಾಕಾಶ ನೌಕೆಯಾಗಿದೆ.

by Bengaluru Wire Desk
November 5, 2024
in News Wire
Reading Time: 1 min read
0

ನವದೆಹಲಿ, ನ.05 www.bengaluruwire.com : ಸರಿಯಾಗಿ ಇದೇ ದಿನದಂದು 11 ವರ್ಷಗಳ ಹಿಂದೆ ಇಡೀ ವಿಶ್ವವನ್ನೇ ಭಾರತೀಯ ಬಾಹ್ಯಾಕಾಶ ಸಂಸ್ಥೆ (Indian Space Research Organization- ISRO) ತನ್ನ ಕಾರ್ಯಕ್ಷಮತೆ, ನಮ್ಮ ಅಂತರಿಕ್ಷ ವಿಜ್ಞಾನಿಗಳ ಬುದ್ಧಿವಂತಿಕೆಗೆ ಪ್ರತೀಕವಾಗಿ ಮಂಗಳ ಗ್ರಹದತ್ತ ಮಂಗಳಯಾನ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಚಾರಿತ್ರಿಕ ದಿನ.

ನವೆಂಬರ್ 5, 2013 ರಂದು, ಜಾಗತಿಕ ಬಾಹ್ಯಾಕಾಶ ಸಮುದಾಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸುವ ಮಂಗಳಯಾನ, ಮಾರ್ಸ್ ಆರ್ಬಿಟರ್ ಮಿಷನ್ (Mars Orbiter Mission – MOM) ಉಡಾವಣೆಯೊಂದಿಗೆ ಭಾರತವು ಮಂಗಳ ಗ್ರಹಕ್ಕೆ ಗಮನಾರ್ಹ ಪ್ರಯಾಣವನ್ನು ಪ್ರಾರಂಭಿಸಿತು.

ಹೀಗೆ ಮಂಗಳಯಾನ ನೌಕೆಯು ಉಡಾವಣೆಯಾದ ಒಂದು ವರ್ಷದ ನಂತರ ಅಂದರೆ ಸೆಪ್ಟೆಂಬರ್ 24, 2014 ರಂದು, ಮಂಗಳಯಾನವು ಅಸಾಧ್ಯವೆಂದು ಹಲವರು ಪರಿಗಣಿಸಿದ್ದನ್ನು ಸಾಧಿಸಿ ತೋರಿಸಿತು. ಮಂಗಳ ಗ್ರಹವನ್ನು ತಲುಪಿದ ಮೊದಲ ಏಷ್ಯಾದ ಬಾಹ್ಯಾಕಾಶ ನೌಕೆ ಮತ್ತು ಚೊಚ್ಚಲ ಪ್ರಯತ್ನದಲ್ಲಿ ಮಂಗಳನ ಅಂಗಳದತ್ತ ತೆರಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆ ಪಾತ್ರವಾಯಿತು ನಮ್ಮ ಭಾರತ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಭಿವೃದ್ಧಿಪಡಿಸಿದ ಈ ಕಾರ್ಯಾಚರಣೆಯು ಸಣ್ಣ- ಪುಟ್ಟ ಸಾಧನೆಯಾಗಿರಲಿಲ್ಲ. ಬದಲಿಗೆ ಇದು ಕೇವಲ ಮಂಗಳ ಗ್ರಹವನ್ನು ಅನ್ವೇಷಿಸಲು ಮಾತ್ರವಲ್ಲದೆ ಭಾರತದ ಬಾಹ್ಯಾಕಾಶ ಸಾಮರ್ಥ್ಯಗಳ ಗಡಿಗಳನ್ನು ವಿಶ್ವಮಟ್ಟಕ್ಕೆ ತೆರೆದುಕೊಳ್ಳಲು ಅನುವುಮಾಡಿಕೊಟ್ಟಿತು.

ಈ ಅಂತರ್ ಗ್ರಹ ಬಾಹ್ಯಾಕಾಶ ಯೋಜನೆಯಲ್ಲಿ ಭಾರತದ ಈ ಜಿಗಿತವು ಆಶ್ಚರ್ಯಕರವಾಗಿ ಕಡಿಮೆ ವೆಚ್ಚದಲ್ಲಿ ರೂಪಿಸಲಾಗಿತ್ತು. ಸರಿಸುಮಾರು 450 ಕೋಟಿ ರೂ. ವೆಛಚದಲ್ಲಿ ($73 ಮಿಲಿಯನ್) ಬಜೆಟ್‌ನೊಂದಿಗೆ, ಮಂಗಳಯಾನವು ಅತ್ಯಂತ ಕಡಿಮೆ ಬಜೆಟ್ ನಲ್ಲಿ ಮಂಗಳಯಾನ ಯೋಜನೆಯನ್ನು ಇಸ್ರೊ ವಿಜ್ಞಾನಿಗಳು ರೂಪಿಸುವಲ್ಲಿ ಯಶಸ್ವಿಯಾದರು. ಯಾವುದೇ ಹಾಲಿವುಡ್ ಬಾಂಡ್ ಸಿನಿಮಾಗಿಂತ ಕಡಿಮೆ ವೆಚ್ಚದಲ್ಲಿ ಇಂತದ್ದೊಂದು ಮಹತ್ವದ ಯೋಜನೆ ಸಿದ್ದವಾಗಿದ್ದು, ಇಡೀ ಜಗತ್ತಿನ ಜನರನ್ನೇ ನಿಬ್ಬೆರಗಾಗಿಸಿತ್ತು. ಹಲವು ಮಿತಿಗಳ ನಡುವೆ ಇಂತಹ ಆವಿಷ್ಕಾರ ಮಾಡುವ ಇಸ್ರೊ ಸಾಮರ್ಥ್ಯ ಇಲ್ಲಿ ಪ್ರದರ್ಶಿತವಾಯಿತು.

ಈ ಕಾರ್ಯಾಚರಣೆಯು ಮಂಗಳ ಗ್ರಹದ ವಾತಾವರಣ, ಮೇಲ್ಮೈ ಮತ್ತು ಖನಿಜ ಸಂಯೋಜನೆಯನ್ನು ಅಧ್ಯಯನ ಮಾಡುವ ಗುರಿಯನ್ನು ಹೊಂದಿತ್ತು. ಆರ್ಬಿಟರ್‌ನಲ್ಲಿ ಐದು ವೈಜ್ಞಾನಿಕ ಉಪಕರಣಗಳನ್ನು ಬಳಸಿಕೊಳ್ಳಲಾಗಿತ್ತು. ಮೊದಲಿಗೆ ಕೇವಲ 6 ತಿಂಗಳಿಗೆ ಮಂಗಳನ ಅಧ್ಯಯನಕ್ಕೆಂದು ಪ್ಲಾನ್ ಮಾಡಲಾಗಿತ್ತಾದರೂ ಬಳಿಕೆ ಮಂಗಳಯಾನ ನೌಕೆಯು ಏಳು ವರ್ಷ ಆರು ತಿಂಗಳು 8 ದಿನಗಳ ಕಾಲ ಕಾರ್ಯನಿರ್ವಹಿಸಿ ಅಮೂಲ್ಯವಾದ ಮಾಹಿತಿಯ ಸಂಪತ್ತನ್ನು ಭೂಮಿಗೆ ರವಾನಿಸಿತು. ಕೆಂಪು ಗ್ರಹದ ಬಗ್ಗೆ ನಮ್ಮ ತಿಳುವಳಿಕೆಯನ್ನು ಪುಷ್ಟೀಕರಿಸಿತು ಮತ್ತು ಮಂಗಳದ ಧೂಳಿನ ಬಿರುಗಾಳಿಗಳು, ಮೀಥೇನ್ ಉಪಸ್ಥಿತಿ ಮತ್ತು ವಾತಾವರಣದ ಮಾದರಿಗಳ ಒಳನೋಟಗಳನ್ನು ಒದಗಿಸಿತು.

ಮಂಗಳಯಾನದ ಯಶಸ್ಸು ಜಾಗತಿಕವಾಗಿ ಪ್ರತಿಧ್ವನಿಸಿದೆ. ಪ್ರಮುಖ ಬಾಹ್ಯಾಕಾಶ ಸಂಸ್ಥೆಗಳಿಂದ ಮೆಚ್ಚುಗೆ ಮತ್ತು ಗೌರವವನ್ನು ಪಡೆಯಿತು.  ಮೊದಲ ಪ್ರಯತ್ನದಲ್ಲಿ ಇಸ್ರೊ ವಿಜಯವು ಬಾಹ್ಯಾಕಾಶ ಪರಿಶೋಧನೆಯಲ್ಲಿ ಅಪರೂಪದ ಸಾಧನೆಯಾಗಿದೆ. ವಿಶೇಷವಾಗಿ ಕಡಿಮೆ ಬಜೆಟ್‌ನಲ್ಲಿ ಇಂತಹ ಸಾಧನೆ ಮಾಡಬಹುದೆಂದು ಇತರ ದೇಶಗಳಿಗೆ, ಭಾರತವು ದೊಡ್ಡ ಕನಸು ಕಾಣಬಹುದೆಂದು ಮತ್ತು ಇನ್ನೂ ದೊಡ್ಡದನ್ನು ಸಾಧಿಸಬಹುದು ಎಂಬುದನ್ನು ಸಾಬೀತುಪಡಿಸಿತು.

ಇಸ್ರೋ ಮುಂಬರುವ ವರ್ಷಗಳಲ್ಲಿ ಉಡಾವಣೆಗೆ ಸಿದ್ಧವಾಗಿರುವ ಮಂಗಳಯಾನ-2 ಅನ್ನು ಯೋಜಿಸುತ್ತಿದ್ದಂತೆ, ಮಾಮ್ ಪರಂಪರೆಯು ಸ್ಫೂರ್ತಿ ನೀಡುತ್ತಲೇ ಇದೆ.  ಮುಂಬರುವ ಮಿಷನ್ ಮಂಗಳದ ಭೂವಿಜ್ಞಾನ ಮತ್ತು ವಾತಾವರಣವನ್ನು ಆಳವಾಗಿ ಅಧ್ಯಯನ ಮಾಡುವ ಗುರಿಯನ್ನು ಹೊಂದಿದೆ. ಈ ಹಿಂದೆ ಹಾಕಿ ಅಸ್ತಿಭಾರ ಹಾಕಿದ ಅಡಿಪಾಯವನ್ನು ಮುನ್ನಡೆಸುತ್ತದೆ. ಮಂಗಳಯಾನದ ಮೂಲಕ, ಭಾರತವು ಮಂಗಳವನ್ನು ತಲುಪಿದೆ ಮಾತ್ರವಲ್ಲದೆ, ದೂರದೃಷ್ಟಿ, ಕಠೋರತೆ ಮತ್ತು ಜಾಣ್ಮೆಯೊಂದಿಗೆ, ಅಂತರಗ್ರಹ ಪರಿಶೋಧನೆಯು ಕೈಗೆಟುಕುತ್ತದೆ ಎಂಬುದನ್ನು ಜಗತ್ತಿಗೆ ತೋರಿಸಿದೆ.

Celebrating 11 years of the launch of Mars Orbiter Mission – India’s 1st interplanetary mission to the Red Planet. #MarsOrbiterMission #Mangalyaan @PMOIndia @IndiaDST @DrJitendraSingh @isro @AshwiniVaishnaw @Murugan_MoS @PIB_India @airnewsalerts @DDNewslive pic.twitter.com/5iCwHgB5XF

— Ministry of Information and Broadcasting (@MIB_India) November 5, 2024

 

WhatsApp Join our WhatsApp Channel
Previous Post

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

Next Post

Waqf Land row | ವಕ್ಫ್ ಆಸ್ತಿ ವಿವಾದ : ನ.7ರಂದು ರಾಜ್ಯಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್‌ ಭೇಟಿ

Next Post
Waqf JPC Chairman Jagadambika Pal

Waqf Land row | ವಕ್ಫ್ ಆಸ್ತಿ ವಿವಾದ : ನ.7ರಂದು ರಾಜ್ಯಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್‌ ಭೇಟಿ

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group