Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bellandur Lake Rejuvenation | ಬೆಳ್ಳಂದೂರು ಕೆರೆ ಪುನರುಜ್ಜೀವನ ಯೋಜನೆಗೆ ನಾಲ್ಕು ವರ್ಷ: ಕೊಳಚೆಯುಕ್ತ ಜಲ ಮೂಲಕ್ಕೆ ಮುಕ್ತಿಯೆಂದು?

by Bengaluru Wire Desk
December 3, 2024
in Bengaluru Focus, Public interest
Reading Time: 2 mins read
0
ಬೆಳ್ಳಂದೂರು ಕೆರೆಯ ಪಕ್ಷಿನೋಟ.

ಬೆಳ್ಳಂದೂರು ಕೆರೆಯ ಪಕ್ಷಿನೋಟ.

ಬೆಂಗಳೂರು, ಡಿ.03 www.bengaluruwire.com : ರಾಜಧಾನಿ ಬೆಂಗಳೂರಿನ ಬೃಹತ್ ಕೆರೆ ಬೆಳ್ಳಂದೂರು ಕೆರೆ ಪುನಶ್ಚೇತನ ಯೋಜನೆ (Bellandur Lake Rejuvenation) ಯು 2020 ರಲ್ಲಿ ಆರಂಭವಾಗಿ, ನಿರಂತರ ವಿಳಂಬ, ಹಣಕಾಸಿನ ಕೊರತೆ ಮತ್ತು ಅಸಮರ್ಪಕ ಯೋಜನೆಗಳಿಂದ ತೊಂದರೆಗೀಡಾಗಿದೆ. ನಾಗರಿಕ ಗುಂಪುಗಳು ಮತ್ತು ಸ್ವಯಂಸೇವಕರ ಪ್ರಯತ್ನಗಳ ಹೊರತಾಗಿಯೂ, ಯೋಜನೆಯ ಪ್ರಗತಿಯು ನಿಧಾನವಾಗಿದೆ ಮತ್ತು ಈ ಕೆರೆಯ ಪುನಶ್ಚೇತನ ಯೋಜನೆಯ ಭವಿಷ್ಯವು ಅನಿಶ್ಚಿತವಾಗಿದೆ.

ಯೋಜನೆಯ ಪ್ರಸ್ತುತ ಸ್ಥಿತಿಯು ಆತಂಕಕ್ಕೆ ಕಾರಣವಾಗಿದೆ. ಏಕೆಂದರೆ ಅಂದಾಜು 32.33 ಲಕ್ಷ ಕ್ಯೂಬಿಕ್ ಮೀಟರ್ ಹೂಳು ಪೈಕಿ 22.69 ಲಕ್ಷ ಕ್ಯೂಬಿಕ್ ಮೀಟರ್ (ಶೇ.70) ಮಾತ್ರ ಈತನಕ ತೆಗೆಯಲಾಗಿದ್ದು, ಇನ್ನು ಶೇ.30 ಹೂಳು ತೆಗೆಯಲಾಗಿಲ್ಲ. ಮಾನ್ಸೂನ್ ಮತ್ತು ಕೆಸರುಮಯ ಪರಿಸ್ಥಿತಿಗಳಿಂದ ಹೂಳು ತೆಗೆಯುವ ಕೆಲಸಕ್ಕೆ ಅಡ್ಡಿಯಾಗಿದೆ. ಆದರೆ ಕಳಪೆ ಯೋಜನೆ ನಿಜವಾದ ಸಮಸ್ಯೆಯಿದು ಸ್ಥಳೀಯ ನಾಗರಿಕರು ದೂರುತ್ತಾರೆ. 2024ರ ಡಿಸೆಂಬರ್ ವೇಳೆಗೆ ಪರಿಷ್ಕೃತ ಗಡುವಿನಲ್ಲಿ ಯೋಜನೆಯ ಕಾಮಗಾರಿ ಪೂರ್ಣಗೊಳ್ಳುವುದು ಮರೀಚಿಕೆಯಾಗಿದೆ.

ಜೌಗು ಪ್ರದೇಶ ನಿರ್ಮಾಣ ವಿಳಂಬ :

Bellandur Lake Canal
ಬೆಳ್ಳಂದೂರು ಕೆರೆಗೆ ಹೊಂದುಕೊಂಡಿರುವ ಕಾಲುವೆಯಲ್ಲಿ ಘನತ್ಯಾಜ್ಯ ತುಂಬಿಕೊಂಡಿರುವ ಚಿತ್ರ.

ಯೋಜನೆಯ ಮತ್ತೊಂದು ನಿರ್ಣಾಯಕ ಅಂಶವಾದ ಜೌಗು ಪ್ರದೇಶ ನಿರ್ಮಾಣ (Wetland Construction) ವಿಳಂಬವಾಗಿದೆ. ಕೋರಮಂಗಲ ಮತ್ತು ಅಗರ ಕಣಿವೆಯಲ್ಲಿ ಕೇವಲ ಶೇ.30 ರಷ್ಟು ಜೌಗು ಪ್ರದೇಶ ಕಾಮಗಾರಿ ಪೂರ್ಣಗೊಂಡಿದ್ದು, ಎಚ್‌ಎಎಲ್, ಎಸ್‌ಟಿ ಬೆಡ್ ಮತ್ತು ಇಬ್ಲೂರಿನಲ್ಲಿನ ಮೂರು ಪ್ರಮುಖ ವೆಟ್‌ಲ್ಯಾಂಡ್ ಯೋಜನೆಗಳು ಹಣಕಾಸಿನ ಕೊರತೆಯಿಂದಾಗಿ ಸ್ಥಗಿತಗೊಂಡಿವೆ. ಯೋಜನೆಯು ಎದುರಿಸುತ್ತಿರುವ ಹಣಕಾಸಿನ ನಿರ್ಬಂಧಗಳು ಗಮನಾರ್ಹವಾಗಿವೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT – ಎನ್‌ಜಿಟಿ) ಮಂಜೂರು ಮಾಡಿದ ₹ 500 ಕೋಟಿ ಎಸ್‌ಕ್ರೊ ನಿಧಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆ. ಆರ್ಥಿಕ ಸಂಪನ್ಮೂಲ ಗಮನಾರ್ಹ ಕೊರತೆಯಾಗಿದೆ.

ಕೊಳಚೆ ನೀರು ಸಂಸ್ಕರಣಾ ಘಟಕಗಳಿಗೆ (ಎಸ್‌ಟಿಪಿ) ₹250 ಕೋಟಿ, ಬೆಳ್ಳಂದೂರು ಕೆರೆಗೆ ₹100 ಕೋಟಿ, ಉಳಿದ ಮೊತ್ತದಲ್ಲಿ ಹೂಳು ತುಂಬಿರುವ ಗ್ರಾಮಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗಿದೆ ಎಂದು ಸರ್ಕಾರ ಹೇಳಿದೆ. ಬಿಬಿಎಂಪಿ ಮಾರ್ಷಲ್ ಗಳು ಬೆಳ್ಳಂದೂರು ಕೆರೆಯಲ್ಲಿ ಘನತ್ಯಾಜ್ಯ ಹಾಕುವುದನ್ನು ತಡೆಯಲು, ಒತ್ತುವರಿ ನಿಗ್ರಹಿಸಲು, ವಿಫಲರಾಗಿದ್ದಾರೆ ಎಂದು ಸಿಟಿಜನ್ ಚೇಂಜ್ ಮೇಕರ್ಸ್ (Citizen Change Makers) ಸಂಸ್ಥೆ ತಿಳಿಸಿದೆ. ಯೋಜನೆಯ ಪ್ರಗತಿಯ ಬಗ್ಗೆ ನಾಗರಿಕರು ತಮ್ಮ ಹತಾಶೆ ವ್ಯಕ್ತಪಡಿಸಿದ್ದಾರೆ. “ಎರಡು ವರ್ಷಗಳಲ್ಲಿ ನೆಲದ ಮೇಲೆ ಹೆಚ್ಚು ಕೆಲಸವಾಗಲಿಲ್ಲ. ಈ ವೇಗದಲ್ಲಿ ಕೆಲಸ ಮುಂದುವರೆದರೆ ಈ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಒಂದು ದಶಕ ತೆಗೆದುಕೊಳ್ಳುತ್ತದೆ” ಎಂದು ಸಿಟಿಜನ್ ಚೇಂಜ್ ಮೇಕರ್ ಸಂಸ್ಥೆಯ ಸೋನಾಲಿ ಸಿಂಗ್ ಹೇಳಿದ್ದಾರೆ.

ಕೆರೆಯಲ್ಲಿ ಅಕ್ರಮ ಚಟುವಟಿಕೆ :

ಯೋಜನೆಯ ಸವಾಲುಗಳು ಬಹುಮುಖವಾಗಿವೆ. ಅಂಬೇಡ್ಕರ್ ಕಾಲೋನಿಯಲ್ಲಿನ ಅತಿಕ್ರಮಣಗಳು ಬಗೆಹರಿಯದೆ ಉಳಿದಿದ್ದು, ಭದ್ರತೆ ಹಾಗೂ ನಿರ್ವಹಣೆ ಕೊರತೆಯಿಂದ ಕೆರೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ತುತ್ತಾಗುತ್ತಿದೆ. ಘನತ್ಯಾಜ್ಯ ಮತ್ತು ಸಂಸ್ಕರಿಸದ ಕೊಳಚೆಯ ಸಂಗ್ರಹಣೆಯು ಕೆರೆಯನ್ನು ಹಾಳುಮಾಡುವುದನ್ನು ಮುಂದುವರೆಸಿದೆ. ಇದು ಸ್ಥಳೀಯ ನಿವಾಸಿಗಳ ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಈ ಸವಾಲುಗಳನ್ನು ಎದುರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಿಟಿಜನ್ ಚೇಂಜ್ ಮೇಕರ್ಸ್ ಗ್ರೂಪ್ ಸರ್ಕಾರವನ್ನು ಒತ್ತಾಯಿಸಿದೆ.

ಹೂಳೆತ್ತುವಿಕೆ ಮತ್ತು ಜೌಗು ಪ್ರದೇಶ ನಿರ್ಮಾಣವನ್ನು ಪುನರಾರಂಭಿಸಲು ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲು, ಎನ್‌ಜಿಟಿ ಶಿಫಾರಸು ಮಾಡಿದ ವೈಜ್ಞಾನಿಕ ಯೋಜನೆಗೆ ಬದ್ಧತೆ, ಅತಿಕ್ರಮಣಗಳ ಪರಿಹಾರ, ಭದ್ರತೆಯ ವರ್ಧನೆ, ಒಳಚರಂಡಿ ಸಂಸ್ಕರಣೆ ಮತ್ತು ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ : Bellandur – Varthur Lake Restoration | ಕುಂಟುತ್ತಾ ಸಾಗುತ್ತಿದೆ ಬೆಳ್ಳಂದೂರು- ವರ್ತೂರು ಕೆರೆ ಹೂಳೆತ್ತುವ ಕಾಮಗಾರಿ : ಏನು ಮಾಡುತ್ತಿದೆ ಬಿಡಿಎ ?

ಬೆಂಗಳೂರು ಜಲಮಂಡಳಿಯು (BWSSB), ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಜೊತೆಗೆ ಸೇರಿಕೊಂಡು 110 ದಶಲಕ್ಷ ಲೀಟರ್ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ (Sewage Treatment Plant) ಅಳವಡಿಸುವಲ್ಲಿ ವಿಫಲವಾಗಿರುವ ಕಾರಣದಿಂದಾಗಿ ಸಂಸ್ಕರಿಸದ ಕೊಳಚೆ ನೀರು ಬೆಳ್ಳಂದೂರು ಕೆರೆಯ ಒಡಲನ್ನು ಸೇರುತ್ತಿದೆ ಎಂದು ಸೋನಾಲಿ ಸಿಂಗ್ ಆರೋಪಿಸಿದ್ದಾರೆ.

ಪೂರ್ವ ಬೆಂಗಳೂರಿನ ನಾಗರೀಕರ ಭವಿಷ್ಯಕ್ಕೆ ಬೆಳ್ಳಂದೂರು ನಿರ್ಣಾಯಕ :

ಬೆಳ್ಳಂದೂರು ಕೆರೆ ಪುನರುಜ್ಜೀವನವು ಕೇವಲ ಪರಿಸರದ ಸಮಸ್ಯೆಯಲ್ಲ. ಆದರೆ ಪೂರ್ವ ಬೆಂಗಳೂರಿನ ಭವಿಷ್ಯದ ಜಲ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ ನಿರ್ಣಾಯಕವಾಗಿದೆ.  ನಾಗರಿಕರು ಈ ಕಾಮಗಾರಿಗಳನ್ನು ಬೆಂಬಲಿಸಲು ಬದ್ಧರಾಗಿದ್ದಾರೆ.  ಆದರೆ ಸರ್ಕಾರವು ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕು ಮತ್ತು ಸಮಯೋಚಿತ ಕ್ರಮವನ್ನು ಖಚಿತಪಡಿಸಿಕೊಳ್ಳಬೇಕು.

ಬೆಳ್ಳಂದೂರು-ವರ್ತೂರು ಕೆರೆಗಳ ಅಭಿವೃದ್ಧಿ ಸಮಿತಿಯ ಸಾಮಾಜಿಕ ಕಾರ್ಯಕರ್ತ ಜಗದೀಶ್ ರೆಡ್ಡಿ, ‘ ಬೆಳ್ಳಂದೂರು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲ್ವಿಚಾರಣಾ ಸಮಿತಿ ರಚಿಸಬೇಕು. ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗಡಿಯಾರದ ಮುಳ್ಳು ಟಿಕ್ ಟಿಕ್ ಎನ್ನುತ್ತಿದೆ. ಬೆಳ್ಳಂದೂರು ಕೆರೆಯ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಸರ್ಕಾರವು ಸವಾಲನ್ನು ಇನ್ನಾದರೂ ಸಮರ್ಥವಾಗಿ ಎದುರಿಸುತ್ತದೆಯೇ? ಹಾಗೂ ಯೋಜನೆಯನ್ನು ಸಮಯೋಚಿತವಾಗಿ ಪೂರ್ಣಗೊಳಿಸುತ್ತದೆಯೇ ಅಥವಾ ಇದು ಮತ್ತೊಂದು ತಪ್ಪಿದ ಅವಕಾಶವಾಗುತ್ತದೆಯೇ? ಕಾಲವೇ ಉತ್ತರಿಸಬೇಕಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Pushpa 2 Movie | ಪುಷ್ಪಾ 2 : ಬಾಕ್ಸ್ ಆಫೀಸಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ ಬಹು ಭಾಷಾ ಸಿನಿಮಾ

Next Post

“ಸಿದ್ದರಾಮಯ್ಯ ಸಾಬ್” ಅಂದಾಕೆಗೆ ನಿವೇಶನ ಭಾಗ್ಯ!! : ಯಾರಿಗುಂಟು ಯಾರಿಗಿಲ್ಲ!!?

Next Post

"ಸಿದ್ದರಾಮಯ್ಯ ಸಾಬ್" ಅಂದಾಕೆಗೆ ನಿವೇಶನ ಭಾಗ್ಯ!! : ಯಾರಿಗುಂಟು ಯಾರಿಗಿಲ್ಲ!!?

ಕೆ.ಜಿ.ಎಫ್ ನಲ್ಲಿ ವಿಭಿನ್ನ ಮತ್ತು ವಿಶಿಷ್ಟ ಸಂಯೋಜಿತ ಟೌನ್ ಶಿಪ್ ನಿರ್ಮಾಣಕ್ಕೆ ಡಿಪಿಆರ್ ರಚನೆಗೆ ಸಚಿವ ಬೈರತಿ ಸುರೇಶ್ ಸೂಚನೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group