Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Energy News | ದೇಶದ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಾರ್ಷಿಕ ಬೆಳವಣಿಗೆ ಶೇ.14.2 ತಲುಪಿದೆ

ನವೀಕರಿಸಬಹುದಾದ ಇಂಧನದ ಒಟ್ಟು ​​ಸ್ಥಾಪಿತ ಸಾಮರ್ಥ್ಯ 213.70 ಗಿ.ವ್ಯಾ : ಸೌರಶಕ್ತಿ ಶೇ.30.2ರಷ್ಟು ಬೆಳವಣಿಗೆ

by Bengaluru Wire Desk
December 12, 2024
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.12 www.bengaluruwire.com : ನವೀಕರಿಸಬಹುದಾದ ಇಂಧನ (Renewable Energy) ಕ್ಷೇತ್ರದಲ್ಲಿ ಭಾರತ 2023ರ ನವೆಂಬರ್ ನಿಂದ 2024ರ ನವೆಂಬರ್ ರವರೆಗೆ ವಾರ್ಷಿಕ ಶೇ.14.2ರಷ್ಟು ಬೆಳವಣಿಗೆ ಸಾಧಿಸಿ ಗಮನಾರ್ಹ ಪ್ರಗತಿ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿದ ‘ಪಂಚಾಮೃತ’ ಗುರಿಗಳಿಗೆ ಅನುಗುಣವಾಗಿ ಬದ್ಧತೆ ತೋರಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (Ministry of New and Renewable Energy- MNRE) ಪ್ರಕಟಣೆಯಲ್ಲಿ ತಿಳಿಸಿದೆ.

ಪಳೆಯುಳಿಕೆ ರಹಿತ ಇಂಧನ ಸ್ಥಾಪಿತ ಸಾಮರ್ಥ್ಯ 213.70 ಗಿಗಾ ವ್ಯಾಟ್ (Giga Watt) ತಲುಪಿದೆ. ಇದು ಕಳೆದ ವರ್ಷದ 187.05 ಗಿ.ವ್ಯಾ ಗಿಂತ ಶೇ.14.2ರಷ್ಟು ಹೆಚ್ಚಳವಾಗಿದೆ. ಈ ಮಧ್ಯೆ  ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವು 472.90 ಗಿ.ವ್ಯಾ ಗೆ ಏರಿತು. ಹಿಂದಿನ ವರ್ಷದ 368.15 ಗಿ.ವ್ಯಾ ಗಿಂತ ಗಣನೀಯ ಪ್ರಮಾಣದಲ್ಲಿ ಶೇ.28.5ರಷ್ಟು ಹೆಚ್ಚಳವಾಗಿದೆ.

ಹೊಸದಾದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ2023-24 ರಲ್ಲಿ ನವೆಂಬರ್ ಅವಧಿಯಲ್ಲಿ 7.54 ಗಿ.ವ್ಯಾ ಇತ್ತು. 2024-25ರ ಆರ್ಥಿಕ ವರ್ಷಾವಧಿಯಲ್ಲಿ ನವೆಂಬರ್ ತನಕ ಒಟ್ಟು 14.94 ಗಿ.ವ್ಯಾ ಆಗಿ ಕಳೆದ ವರ್ಷಕ್ಕಿಂತ ದ್ವಿಗುಣಗೊಂಡಿದೆ. 566.06 ಮೆ.ವ್ಯಾ ನಿಂದ ನಾಲ್ಕು ಪಟ್ಟು ಹೆಚ್ಚಳ ಕಂಡಿದೆ. ಹೀಗೆ ಭಾರತದ ನವೀಕರಿಸಬಹುದಾದ ಇಂಧನ ಕ್ಷೇತ್ರ ಎಲ್ಲಾ ಪ್ರಮುಖ ವರ್ಗಗಳಲ್ಲಿ ವ್ಯಾಪಕ ಬೆಳವಣಿಗೆ ಕಂಡಿದೆ. 

ಸೌರ-ಪವನ ಶಕ್ತಿ ಗಮನಾರ್ಹ ಬೆಳವಣಿಗೆ :

ಭಾರತದ ಸೌರ ಮತ್ತು ಪವನ ಶಕ್ತಿ ಉತ್ಪಾದನೆಯಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ. ಸೌರಶಕ್ತಿ ಮುನ್ನಡೆಯಲ್ಲಿದ್ದು, ಸ್ಥಾಪಿತ ಸಾಮರ್ಥ್ಯವು 2023ರಲ್ಲಿನ 72.31 ಗಿ.ವ್ಯಾ ನಿಂದ 2024ರಲ್ಲಿ 94.17 ಗಿ.ವ್ಯಾ ಗೆ ಏರಿದೆ. ಅಂದರೆ ಶೇ.30.2ರಷ್ಟು ಸದೃಢ ಬೆಳವಣಿಗೆಯಾಗಿದೆ. ಅಲ್ಲಿಗೆ ಒಟ್ಟು ಸೌರ ಸಾಮರ್ಥ್ಯವು ಶೇ.52.7ರಷ್ಟು ಹೆಚ್ಚಳವಾಗಿದೆ. 2023ರಲ್ಲಿ ಒಟ್ಟಾರೆ ಸೌರ ವಿದ್ಯುತ್ 171.10 ಗಿಗಾ ವ್ಯಾಟ್ ಗೆ ಹೋಲಿಸಿದರೆ 2024 ರಲ್ಲಿ 261.15 ಗಿಗಾವ್ಯಾಟ್ ತಲುಪಿದೆ. ಪವನ ಶಕ್ತಿ ಸಹ ಶೇ.17.4ರಷ್ಟು ಹೆಚ್ಚಾಗಿ ಗಮನಾರ್ಹ ಕೊಡುಗೆ ನೀಡಿದೆ. 

ಜೈವಿಕ ಇಂಧನ (Bio Energy) ಸಾಮರ್ಥ್ಯ 2023ರಲ್ಲಿ 10.84 ಗಿಗಾವ್ಯಾಟ್ ನಿಂದ 2024 ರಲ್ಲಿ 11.34 ಗಿಗಾವ್ಯಾಟ್ ಗೆ ಏರಿದೆ. ಇದು ಶೇ.4.6ರಷ್ಟು ಬೆಳವಣಿಗೆಯಾಗಿರುವುದನ್ನು ಪ್ರತಿಬಿಂಬಿಸುತ್ತದೆ. ಸಣ್ಣ ಜಲ ವಿದ್ಯುತ್ ಯೋಜನೆಗಳೂ ತುಸು ಹೆಚ್ಚಳ ಕಂಡಿವೆ. 2023ರಲ್ಲಿ 4.99 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆಯಾದರೆ 2024 ರಲ್ಲಿ 5.08 ಗಿಗಾವ್ಯಾಟ್, ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 5.54 ಗಿಗಾವ್ಯಾಟ್ ತಲುಪಿದೆ. 

ದೊಡ್ಡ ಜಲವಿದ್ಯುತ್ ಯೋಜನೆಗಳಲ್ಲಿ 2023 ರಲ್ಲಿ 46.88 ಗಿಗಾವ್ಯಾಟ್ ನಿಂದ 2024 ರಲ್ಲಿ 46.97 ಗಿಗಾವ್ಯಾಟ್ ಗೆ ಮತ್ತು ಪೈಪ್‌ಲೈನ್ ಯೋಜನೆ ಒಳಗೊಂಡಂತೆ ಒಟ್ಟು ಸಾಮರ್ಥ್ಯ ಕಳೆದ ವರ್ಷದ 64.85 ಗಿಗಾವ್ಯಾಟ್ ನಿಂದ 67.02 ಗಿಗಾವ್ಯಾಟ್ ಗೆ ಹೆಚ್ಚುವುದರೊಂದಿಗೆ ದೊಡ್ಡ ಜಲವಿದ್ಯುತ್ ಯೋಜನೆ ಕೊಡುಗೆಯೂ ಇದೆ.

ಪರಮಾಣು ಶಕ್ತಿ ಸ್ಥಿರ:

ಪರಮಾಣು ಶಕ್ತಿಯಲ್ಲಿ, ಸ್ಥಾಪಿತ ಪರಮಾಣು ಸಾಮರ್ಥ್ಯವು 2023 ರಲ್ಲಿ 7.48 ಗಿಗಾವ್ಯಾಟ್ ನಿಂದ 2024 ರಲ್ಲಿ 8.18 ಗಿಗಾವ್ಯಾಟ್ ಗೆ ಬೆಳೆದಿದೆ. ಆದರೆ ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 22.48  ಗಿಗಾವ್ಯಾಟ್ ನಲ್ಲಿ ಸ್ಥಿರವಾಗಿದೆ.

ಇಂಧನ ಭದ್ರತೆಗೆ ಸಚಿವ ಪ್ರಲ್ಹಾದ ಜೋಶಿ ಒತ್ತಾಸೆ:

ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಇಂಧನ ಭದ್ರತೆಯನ್ನು ಬಲಪಡಿಸುವಲ್ಲಿ ದಿಟ್ಟ ಹೆಜ್ಜೆ ಇರಿಸಿದೆ. ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ವೈರ್ ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ.

WhatsApp Join our WhatsApp Channel
Previous Post

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group