Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

by Bengaluru Wire Desk
January 1, 2025
in Public interest
Reading Time: 3 mins read
0
Agriculture Farming

ರೈತನೊಬ್ಬ ಕೃಷಿ ಭೂಮಿಯಲ್ಲಿ ಬೆಳೆಗೆ ರಸಗೊಬ್ಬರ ಎರಚುತ್ತಿರುವ ಸಾಂದರ್ಭಿಕ ಚಿತ್ರ.

ಕಳಪೆ ರಸಗೊಬ್ಬರ (Poor fertilizer) ಹಾಗೂ ಗುಣಮಟ್ಟವಲ್ಲದ ಬೀಜಗಳು (Substandard seeds) ಮಾರುಕಟ್ಟೆಯಲ್ಲಿ ಹೇರಳವಾಗಿ ಲಗ್ಗೆಯಿಡುತ್ತಿರುವುದರಿಂದ ಸಾಲ ಸೋಲ ಮಾಡಿ ತಮಗರಿವಿಲ್ಲದೆ ಅವುಗಳನ್ನು ಖರೀದಿಸುವ ರೈತರು ಉತ್ತಮ ಬೆಳೆ ಬರದೆ ನಷ್ಟಕ್ಕೊಳಗಾಗಿ ತೊಂದರೆಗೊಳಗಾಗುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟೇ ಕಳಪೆ ಗುಣಮಟ್ಟದ ಸಾಮಗ್ರಿಗಳು ಮಾರುಕಟ್ಟೆ ಬರದಂತೆ ಕ್ರಮ ಕೈಗೊಂಡರೂ, ನಕಲಿ ಉತ್ಪನ್ನ ತಯಾಕರು ಲಾಭದಾಸೆಗೆ ತಮ್ಮ ಕಳಪೆ ಉತ್ಪನ್ನಗಳನ್ನು ರೈತರಿಗೆ ಮಾರುವ ಸಂಚು ರೂಪಿಸುತ್ತಲೇ ಇರುತ್ತಾರೆ.

ಈ ಹಿನ್ನಲೆಯಲ್ಲಿ ನಕಲಿ ಹಾಗೂ ಕಳಪೆ ರಸಗೊಬ್ಬರವನ್ನು ಕಂಡು ಹಿಡಿಯುವ ಸುಲಭ ವಿಧಾನ ಹಾಗೂ ಈ ಕುರಿತಂತೆ ಇರುವ ಪರೀಕ್ಷೆಗಳ ಬಗ್ಗೆ  ಶಿವಮೊಗ್ಗದ ಶಿಕಾರಿಪುರ ತಾಲೂಕು ಇರುವಕ್ಕಿ ಕೃಷಿ ವಿಜ್ಞಾನಗಳ ಮಹಾ ವಿದ್ಯಾಲಯದ ಮಣ್ಣು ವಿಜ್ಞಾನ ಪ್ರಾಧ್ಯಪಕರಾದ ಡಾ.ಗಣಪತಿಯವರು ರೈತರು ಮತ್ತು ಕೃಷಿ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (Keladi Shivappa Nayaka University of Agricultural and Horticultural Sciences) ಹಾಗೂ ಇರುವಕ್ಕಿಯ ಕೃಷಿ ವಿಜ್ಞಾನಗಳ ಮಹಾ ವಿದ್ಯಾಲಯ (College of Agricultural Sciences Iruvakki) ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಲ್ಲಿ “ರಸಗೊಬ್ಬರಗಳ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?” (How to detect adulteration of fertilizers?) ಎಂಬ ಗುಂಪು ಚರ್ಚೆ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆಯಲ್ಲಿ ವಿವರಿಸಿದ್ದಾರೆ.

ರಸಗೊಬ್ಬರಗಳ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? ಕುರಿತು ಪ್ರಾಧ್ಯಪಕರಾದ ಡಾ.ಗಣಪತಿಯವರು ರೈತರು ಮತ್ತು ಕೃಷಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಿದರು.

ರಸಗೊಬ್ಬರ ಕೊಳ್ಳುವಾಗ ರೈತರು ಗಮನಿಸಬೇಕಾದ ಅಂಶಗಳು (Factors to be observed by farmers while buying fertilizers)  :

* ರಸಗೊಬ್ಬರ ಚೀಲದ ಬಾಯಿ ಹೊಲೆದಿರಬೇಕು. ಕೈಯಿಂದ ಹೊಲೆದಿದ್ದರೆ ಅದಕ್ಕೆ ಸೀಸದ ಮೊಹರಿರಬೇಕು.

* ಚೀಲವನ್ನು ತೂಕ ಮಾಡಿಸಿಯೇ ಕೊಳ್ಳಬೇಕು.

* ಚೀಲದ ಮೇಲೆ ನಮೂದಿಸಿರುವ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು.

* ರಸಗೊಬ್ಬರ ಖರೀದಿಸಿದ್ದಕ್ಕೆ ನಮೂನೆ ಎಂ.ನಲ್ಲಿ ರಸೀತಿ ಪಡೆಯಬೇಕು. ಇದರಲ್ಲಿ ಖರೀದಿಯ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಿದ್ದು ರೈತರ ಮತ್ತು ಮಾರಾಟಗಾರರ ಸಹಿಯಿರಬೇಕು.

* ಚೀಲದ ಮೇಲೆ ರಸಗೊಬ್ಬರದ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ರಾಂಡ್, ಪೋಷಕಾಂಶಗಳ ವಿವರ, ಗರಿಷ್ಠ ಮಾರಾಟ ಬೆಲೆ, ಗರಿಷ್ಠ ಮತ್ತು ನಿವ್ವಳ ತೂಕ, ಬ್ಯಾಚ್ ಸಂಖ್ಯೆ ಮತ್ತು ರಿಜಿಸ್ಟ್ರೇಷನ್ ಸಂಖ್ಯೆ ಇರುವುದನ್ನು ಗಮನಿಸಬೇಕು.

* ಪ್ರಾಥಮಿಕ ಹಂತದಲ್ಲಿಯೇ ಈ ವಿವರ ಪರೀಕ್ಷಿಸಿ ಅಧಿಕೃತ ಮಾರಾಟಗಾರರಿಂದ ಮಾತ್ರ ಕೊಂಡರೆ ನಕಲಿ ಹಾಗೂ ಕಲಬೆರಕೆ ಹಾವಳಿಯನ್ನು ಸ್ವಲ್ಪ ಮಟ್ಟಿಗೆ ತಡೆಯಬಹುದು.

* ಕಡ್ಡಾಯವಾಗಿ ಆಧಾರ್ ಆಧಾರಿತ ಪಿ.ಓ.ಎಸ್ ಯಂತ್ರದ ಮೂಲಕ ಹೆಬ್ಬೆಟ್ಟು ಮುದ್ರೆ ಪಡೆದು ಬಿಲ್ ನೀಡಬೇಕು.

ರಸಗೊಬ್ಬರ ಖರೀದಿಸಿದ ನಂತರ ಕೆಲವು ಸರಳ ಪರೀಕ್ಷೆಗಳಿಂದ ಅವು ನಕಲಿಯೇ ಅಥವಾ ಕಲಬೆರಕೆಯಾಗಿದೆಯೇ ಎಂಬುದನ್ನು ಪತ್ತೆ ಹಚ್ಚಬಹುದು.  ಪರೀಕ್ಷೆ ಮಾಡುವುದು ಹೇಗೆ?

ಭೌತಿಕ ಪರೀಕ್ಷೆ : ಹರಳು ರೂಪದ ರಸಗೊಬ್ಬರಗಳು ಒಂದೇ ಬಣ್ಣ, ಆಕಾರ, ಗಾತ್ರದಿಂದ ಕೂಡಿದ್ದು ಕಣ್ಣಿಗೆ ಕಾಣುವಂತಹ ಇತರೆ ಪದಾರ್ಥಗಳು ಇರಬಾರದು. ಹೆಚ್ಚು ಪುಡಿ ಮತ್ತು ಹೆಚ್ಚಿನ ತೇವಾಂಶ ಹೊಂದಿರಬಾರದು. ಹರಳು ರೂಪದ ರಂಜಕ ಗೊಬ್ಬರ ಮತ್ತು ಜಿಪ್ಸಂ ಹರಳುಗಳು ಮೃದುವಾಗಿದ್ದು ಬೇರೆ ರಸಗೊಬ್ಬರದ ಹರಳುಗಳು ಗಟ್ಟಿಯಾಗಿರುತ್ತವೆ.

ಹರಳು ರೂಪದ ರಸಗೊಬ್ಬರವೊಂದರ ಚಿತ್ರ.

ನೀರಿನಲ್ಲಿ ಕರಗುವ ಪರೀಕ್ಷೆ : ಕೆಲವು ರಸಗೊಬ್ಬರಗಳು (ಯೂರಿಯ, ಅಮೋನಿಯಂ ಸಲ್ವೇಟ್, ಅಮೋನಿಯಂ ಕ್ಲೋರೈಡ್, ಮ್ಯೂರಿಯೇಟ್ ಆಫ್ ಪೊಟ್ಯಾಷ್, ಕ್ಯಾಲ್ಸಿಯಂ ಅಮೋನಿಯಂ ನೈಟ್ರೇಟ್) ನೀರಿನಲ್ಲಿ ಸಂಪೂರ್ಣ ಕರಗುತ್ತವೆ. ಅವನ್ನು ಪರೀಕ್ಷೆಗಾಗಿ ನೀರಿನಲ್ಲಿ ಹಾಕಿದಾಗ ಕರಗದೆ ಇರುವ ಪದಾರ್ಥ ಉಳಿದರೆ ಅದು ಕಲಬೆರಕೆ.  ಕೆಲವು ರಸಗೊಬ್ಬರಗಳು ನೀರಿನಲ್ಲಿ ಕರಗಿಸಿದಾಗ ತಣ್ಣನೆ ಅನುಭವ ನೀಡುತ್ತವೆ (ಯೂರಿಯ, ಅಮೋನಿಯಂ ಕ್ಲೋರೈಡ್, ಎಂಒಪಿ, ಸಿಎಎನ್, ನೈಟ್ರೋ ಫಾಸ್ಪೇಟ್ 20:20, 15:15:15, 19:19:19 ಇತ್ಯಾದಿ). ಹಾಗಿರದಿದ್ದಲ್ಲಿ ಅವು ಕಲಬೆರಕೆಯಾಗಿರುವ ಸಾಧ್ಯತೆಗಳಿರುತ್ತವೆ.

ನೀರಿನಲ್ಲಿ ರಸಗೊಬ್ಬರ ಕರಗುವ ಪರೀಕ್ಷೆಯ ಸಾಂದರ್ಭಿಕ ಚಿತ್ರ.

ಬಿಸಿ ಮಾಡುವ ಪರೀಕ್ಷೆ : ಯೂರಿಯವನ್ನು ಬಿಸಿ ಮಾಡಿದಾಗ ಸಂಪೂರ್ಣವಾಗಿ ಕರಗುತ್ತದೆ. ಕರಗದೇ ಇರುವ ವಸ್ತುಗಳು ಉಳಿದರೆ ಕಲಬೆರಕೆಯಾಗಿದೆ ಎಂದು ತಿಳಿಯಬೇಕು. ಡಿಎಪಿಯನ್ನು ಒಂದು ತಗಡಿನ ಮೇಲೆ ಬಿಸಿ ಮಾಡಿದಾಗ ಹರಳುಗಳು ಸುಣ್ಣದಂತೆ ಅರಳುತ್ತವೆ ಮತ್ತು ತಳಕ್ಕೆ ಅಂಟಿಕೊಳ್ಳುತ್ತವೆ.

ಸಾರಜನಕದ ಪರೀಕ್ಷೆ: ಅಮೋನಿಯ ರೂಪದ ಸಾರಜನಕವಿರುವ ರಸಗೊಬ್ಬರಗಳನ್ನು ತೇವ ಮಾಡಿ ಸುಟ್ಟ ಸುಣ್ಣದಿಂದ ತೀಡಿದಾಗ ಅಮೋನಿಯ ಘಾಟು ವಾಸನೆ ಬರುತ್ತದೆ. ಅದು ಬರದಿದ್ದರೆ ನಕಲಿ ಎಂದು ತಿಳಿಯಬಹುದು. ಹೀಗೆ 30 ರಸಗೊಬ್ಬರಗಳ ಪರೀಕ್ಷೆ ಮಾಡಬಹುದು.

ಅಮೋನಿಯಾ ರೂಪದ ಸಾರಜನಕ ವಿರುವ ರಸಗೊಬ್ಬರ ಪರೀಕ್ಷೆ (ಸಾಂದರ್ಭಿಕ ಚಿತ್ರ)

ರಂಜಕದ ಪರೀಕ್ಷೆ : ಸ್ವಲ್ಪ ರಸಗೊಬ್ಬರವನ್ನು ನೀರಿನಲ್ಲಿ ಕರಗಿಸಿ. ಸೂಪರ್ ಫಾಸ್ಪೇಟ್ ಮತ್ತು ಡಿಎಪಿ ರಸಗೊಬ್ಬರಗಳಾದಲ್ಲಿ ಸಿಲ್ವ‌ರ್ ನೈಟ್ರೇಟ್ ದ್ರಾವಣ, ಇತರೆ ಸಾರಜನಕ, ರಂಜಕ ಮತ್ತು ಸಾರಜನಕ, ರಂಜಕ ಹಾಗೂ ಪೊಟ್ಯಾಷ್ ರಸಗೊಬ್ಬರಗಳಿಗೆ ಫೆರಿ ಕ್ಲೋರೈಡ್ ದ್ರಾವಣ ಹಾಕಿದಾಗ ಹಳದಿ, ಬಿಳಿ ಮಿಶ್ರಿತ ಹಳದಿ ಬಣ್ಣ ಬರಬೇಕು.

ಪೊಟ್ಯಾಷ್ ಪರೀಕ್ಷೆ: ಪೊಟ್ಯಾಷ್ ಅಂಶವನ್ನು ಕೋಬಾಲ್ಟ್ ನೈಟ್ರೇಟ್ ದ್ರಾವಣದಿಂದ ಕಂಡು ಹಿಡಿಯಬಹುದು. ನಕಲಿ ಗೊಬ್ಬರ ಕೊಬಾಲ್ಟ್ ನೈಟ್ರೇಟ್‌ನೊಂದಿಗೆ ಬೆರೆತರೂ ಹಳದಿ ಬಣ್ಣವನ್ನು ಕೊಡುವುದಿಲ್ಲ.

ಪೊಟ್ಯಾಷ್ ಪರೀಕ್ಷೆಯ ಸಾಂದರ್ಭಿಕ ಚಿತ್ರ.

ರೈತರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು. ಕಿಸಾನ್ ಕಾಲ್ ಸೆಂಟರ್ (1800 180 1551) ಅಥವಾ ರೈತ ಸಹಾಯವಾಣಿ (1800 425 3553)ಗೆ ಶುಲ್ಕ ರಹಿತ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

Next Post

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

Next Post
Drunk And Drive Checking

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

ಬೆಂಗಳೂರಿನ ವಿಶ್ವೇಶ್ವರ ಪುರದಲ್ಲಿನ ತಿಂಡಿ ಬೀದಿಯ ಪಾದಚಾರಿ ಮಾರ್ಗವನ್ನು ಅಂಗಡಿ, ತಳ್ಳುಗಾಡಿಗಳು ಒತ್ತುವರಿ ಮಾಡಿಕೊಂಡಿರುವ ಚಿತ್ರ ಒಂದು ಕಡೆ. ಮತ್ತೊಂದು ಕಡೆ ಕಸ, ಆಹಾರದ ತಟ್ಟೆಗಳನ್ನು ಎಲ್ಲೆಂದರಲ್ಲಿ ಎಸೆದಿರುವ ಚಿತ್ರ.

BW SPECIAL | ಇಲ್ಲಿ ಮೂಗು ಮುಚ್ಚಿ ತಿಂಡಿ ತಿನ್ನಿ!! ಇದು ವಿವಿ ಪುರಂ Food Street : ಅವ್ಯವಸ್ಥೆಯ ಅಗರವಾಗಿದೆ ನವೀಕರಣವಾದ ತಿಂಡಿ ಬೀದಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group