Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ED Raid | 900 ಕೋಟಿ ರೂ. ಮೊತ್ತದ ಬೋರ್ ವೆಲ್ ಹಗರಣ ಪ್ರಕರಣದ ಹಿನ್ನಲೆ : ಬಿಬಿಎಂಪಿ ಕೇಂದ್ರ ಕಚೇರಿ ಮೇಲೆ ಇಡಿ ದಾಳಿ

ಬಿಬಿಎಂಪಿಯ ವ್ಯಾಪ್ತಿಯಲ್ಲಿ 2016 ರಿಂದ 2019ರ ಅವಧಿಯಲ್ಲಿ ನಡೆದ ಬೋರ್ ವೆಲ್ ಕೊರೆಸುವಿಕೆ ಹಾಗೂ ಆರ್ ಒ ಪ್ಲಾಂಟ್ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸಂಬಂಧ ಇಡಿಯಲ್ಲಿ ದೂರು ದಾಖಲಾಗಿತ್ತು.

by Bengaluru Wire Desk
January 7, 2025
in Bengaluru Focus, Public interest
Reading Time: 1 min read
0
Enforcement Directorate Raid

ಬಿಬಿಎಂಪಿ ಕೇಂದ್ರ ಕಚೇರಿಯ ಪ್ರಧಾನ ಎಂಜಿನಿಯರ್ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂಗಳವಾರ ಪರಿಶೀಲನೆ ನಡೆಸಿದರು.

ಬೆಂಗಳೂರು, ಜ.07 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಏಳು ಇಡಿ ಅಧಿಕಾರಿಗಳ ತಂಡ ಬೆಳಗ್ಗೆ 11 ಗಂಟೆಗೆ ಕೇಂದ್ರ ಕಚೇರಿಯಲ್ಲಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರ ಕಚೇರಿಯಲ್ಲಿ ಶೋಧ ಕೈಗೊಂಡಿದ್ದವು.  2016ರಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 900 ಕೋಟಿ ಹಗರಣ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಇದೇ ಅವಧಿಯಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಎಇ, ಎಇಇಗಳನ್ನೂ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಈ ಸಂಬಂಧ ಜಾರಿ ನಿರ್ದೇಶನಾಲಯದಲ್ಲಿ ದೂರು ಕೂಡ ದಾಖಲಿಸಿದ್ದು, ಅದರ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿರುವ ಇಡಿ ಅಧಿಕಾರಿಗಳು

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್, “ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಪ್ರಮುಖವಾಗಿ ಬಿಬಿಎಂಪಿಯ ವ್ಯಾಪ್ತಿಯಲ್ಲಿ 2016 ರಿಂದ 2019ರ ಅವಧಿಯಲ್ಲಿ ನಡೆದ ಬೋರ್ ವೆಲ್ ಕೊರೆಸುವಿಕೆ ಹಾಗೂ ಆರ್ ಒ ಪ್ಲಾಂಟ್ ನಿರ್ಮಾಣ ಕಾಮಗಾರಿ ಸೇರಿದಂತೆ ಬಿಬಿಎಂಪಿಯ ವಿವಿಧ ಇಲಾಖೆಗಳಲ್ಲಿನ ಕಾಮಗಾರಿಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಮುಖ್ಯ ಲೆಕ್ಕಾಧಿಕಾರಿ ಬೀನಾ, ಕೇಂದ್ರ ಯೋಜನಾ ವಿಭಾಗ ಚೀಫ್ ಎಂಜಿನಿಯರ್ ಲೋಕೇಶ್ ಹಾಗೂ ತಮ್ಮ ಬಳಿ ಅಧಿಕಾರಿಗಳು ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ”

“ಕಳೆದ ಎರಡು ವರ್ಷಗಳಿಂದಲೂ ಬೋರ್ ವೆಲ್ ಕಾಮಗಾರಿ ದೂರಿನ ಸಂಬಂಧ ನಡೆಯುತ್ತಿರುವ ಇಡಿ ತನಿಖೆಗೆ ಬಿಬಿಎಂಪಿಯಿಂದ ಹಲವು ದಾಖಲೆಗಳನ್ನು, ಮಾಹಿತಿಗಳನ್ನು ಪಾಲಿಕೆಯಿಂದ ಒದಗಿಸಿದ್ದೇವೆ. ನಾವು ಕೊಟ್ಟಿರುವ ದಾಖಲೆಗಳು ಸಮರ್ಪಕವಾಗಿದೆಯಾ ಎಂದು ಇಡಿ ಅಧಿಕಾರಿಗಳು ಖುದ್ದಾಗಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಲವು ವಿಭಾಗಗಳ ಮುಖ್ಯಸ್ಥರನ್ನು ಕರೆಸಿ ಇಡಿ ಅಧಿಕಾರಿಗಳು ಪ್ರಾಥಮಿಕವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿನ ಒಂದು ಕೊಠಡಿಯನ್ನು ಈ ಪ್ರಕರಣದ ವಿಚಾರಣೆಗಾಗಿ ಇಡಿಗೆ ಕೊಠಡಿ ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದು ಮಾಧ್ಯಮಗಳಿಗೆ ತಿಳಿಸಿದರು.

ಕೊಳವೆ ಬಾವಿಗಳು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಹೆಸರಿನಲ್ಲಿ 400 ಕೋಟಿಗಳಿಗೂ ಹೆಚ್ಚು ಹಣ ಲೂಟಿ ಮಾಡಿರುವ ಹಗರಣ ನಡೆದಿದೆ. ರಾಜರಾಜೇಶ್ವರಿ ನಗರ, ಯಶವಂತಪುರ, ಬೆಂಗಳೂರು ದಕ್ಷಿಣ, ಕೆ. ಆರ್. ಪುರ, ಬ್ಯಾಟರಾಯನಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಲೂಟಿ ಮಾಡಲಾಗಿದೆ. ಕೊಳವೆ ಬಾವಿಗಳು ಮತ್ತು ಆರ್ ಒ ಘಟಕಗಳ ಹೆಸರಿನಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಶೇ.80 ಕ್ಕೂ ಹೆಚ್ಚು ಅನುದಾನವನ್ನು ಲೂಟಿ ಮಾಡಲಾಗಿದೆ. ಕೇವಲ ಶೇ. 20 ಕ್ಕೂ ಕಡಿಮೆಯಷ್ಟು ಕಾರ್ಯಗಳನ್ನು ಮಾತ್ರವೇ ಮಾಡಿರುವುದು ಪರಿಶೀಲನಾ ಕಾರ್ಯದಲ್ಲಿ ಬಹಿರಂಗವಾಗಿದೆ ಎಂದು ಈ ಹಿಂದೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದರು.

ಹೊಸ 05 ವಲಯಗಳ 66 ವಾರ್ಡ್ ಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, 5 ವಲಯಗಳ ಎಲ್ಲ ಮುಖ್ಯ ಅಭಿಯಂತರರು, ಜಂಟಿ ಆಯುಕ್ತರು ಮತ್ತು ಕಾರ್ಯಪಾಲಕ ಅಭಿಯಂತರರುಗಳ ವಿರುದ್ಧ ಈ ಹಿಂದೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇಡಿ ಈ ಪ್ರಕರಣ ಸಂಬಂಧ 2022ರಲ್ಲಿ ಎನ್.ಆರ್.ರಮೇಶ್ ಅವರಿಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಸಮನ್ಸ್ ಕೂಡ ಜಾರಿ ಮಾಡಿತ್ತು.

ಪಾಲಿಕೆ ವೈಟ್ ಟಾಪಿಂಗ್ ರಸ್ತೆ ಅಕ್ರಮದ ಬಗ್ಗೆಯೂ ವಿಚಾರಣೆ :

ಬೋರ್ ವೆಲ್ ಕಾಮಗಾರಿ ಅಕ್ರಮದ ಜೊತೆಗೆ ವೈಟ್ ಟಾಪಿಂಗ್ ನಲ್ಲಿ ಬಹುಕೋಟಿ ಹಗರಣದ ಬಗ್ಗೆಯೂ ಇಡಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಎರಡು ಕಾಮಗಾರಿಗಳ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ. 2018-19ರಲ್ಲಿ ಬೆಂಗಳೂರಲ್ಲಿ ಕೋಟ್ಯಾಂತರ ರೂ. ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದ್ದ ಬಗ್ಗೆ ಗಂಭೀರ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ 2019ರಲ್ಲಿ ಬೆಂಗಳೂರು ಬಿಜೆಪಿ ಶಾಸಕರ ನಿಯೋಗ ಲೋಕಾಯುಕ್ತಕ್ಕೆ ದೂರು ನೀಡಿತ್ತು.

ವೈಟ್ ಟಾಪಿಂಗ್ ರಸ್ತೆಯ ಸಾಂದರ್ಭಿಕ ಚಿತ್ರ

ಮೊದಲ‌ ಹಂತದಲ್ಲಿ 93.37 ಕಿ.ಮೀ ಗೆ 1147.76 ಕೋಟಿ ರೂ. ವೆಚ್ಚ. ಎರಡನೇ ಹಂತದಲ್ಲಿ 62.80 ಕಿ.ಮೀ ಗೆ 758.56 ಕೋಟಿ‌ ರೂ. ವೆಚ್ಚ ಹಾಗೂ ಮೂರನೇ ಹಂತದಲ್ಲಿ 123 ಕಿ.ಮೀ ಗೆ 1139 ಕೋಟಿ ರೂ. ಹಣವನ್ನು ಬಿಬಿಎಂಪಿ ವೆಚ್ಚ ಮಾಡಿತ್ತು. ಒಟ್ಟು 279 ಕಿ.ಮೀ ಉದ್ದದ ವೈಟ್ ಟಾಪಿಂಗ್ ಹಾಗೂ ರಸ್ತೆ ದುರಸ್ಥಿಗೆ ಪಾಲಿಕೆ ಬರೋಬ್ಬರಿ 3046 ಕೋಟಿ ರೂ. ವೆಚ್ಚ ಮಾಡಿತ್ತು. ಪ್ರತಿ ಕಿಲೋ ಮೀಟರ್ ಗೆ 12 ರಿಂದ 18 ಕೋಟಿವರೆಗೆ ವೆಚ್ಚ ಮಾಡಿರುವುದಾಗಿ ಪಾಲಿಕೆ ಲೆಕ್ಕ ನೀಡಿತ್ತು.

ಈ ಅವಧಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಹೈದರಾಬಾದ್ ಮೂಲದ ಮಧುಕಾನ್ ಕಂಪೆನಿಗೆ ಪಾಲಿಕೆ ಗುತ್ತಿಗೆ ನೀಡಿತ್ತು. ದೇಶದ ಮೆಟ್ರೋಪಾಲಿಟನ್ ಸಿಟಿಗಳಲ್ಲಿ ಸ್ಥಳೀಯ ಪಾಲಿಕೆಗೆಳ‌ ಜೊತೆ ಗುತ್ತಿಗೆಹೊಂದಿರುವ ಮಧುಕಾನ್ ಸಂಸ್ಥೆಯು 2022ರಲ್ಲಿ ಗ್ರೇಟರ್ ಡೆಲ್ಲಿ ಅಥಾರಿಟಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಆರೋಪ ಸಂಬಂಧ ಮಧುಕಾನ್ ಹಾಗೂ ಡೆಲ್ಲಿ ಅಥಾರಿಟಿ ಮೇಲೆ ದಾಳಿ ಇಡಿ ದಾಳಿ ಮಾಡಿದ ವೇಳೆ ಅಂದಾಜು 93 ಕೋಟಿ ರೂ.ನಷ್ಟು ಬೃಹತ್ ಮೊತ್ತದ ಹಗರಣ ಬೆಳಕಿಗೆ ಬಂದಿತ್ತು ಎಂದು ವರದಿಯಾಗಿತ್ತು. ಇದೀಗ ಇದೇ ಮಾದರಿಯಲ್ಲಿ ಬಿಬಿಎಂಪಿಯಲ್ಲೂ ಅಕ್ರಮ ನಡೆದಿರುವ ಶಂಕೆ ಹಿನ್ನಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗಿದೆ.

WhatsApp Join our WhatsApp Channel
Previous Post

ನೆಹರು ತಾರಾಲಯದಿಂದ ಜ.10 ರಂದು ರಾತ್ರಿ ಆಕಾಶ ವೀಕ್ಷಣೆ ಅವಕಾಶ : ನೀವು ಭಾಗವಹಿಸಬೇಕೆ? ಹೀಗೆ ಮಾಡಿ

Next Post

Security at Maha Kumbh 2025 | ಮಹಾ ಕುಂಭಮೇಳ 2025 : ಭಕ್ತರ ಸುರಕ್ಷತೆಗೆ ಏಳು ಹಂತದ ಭದ್ರತಾ ಕ್ರಮ 

Next Post

Security at Maha Kumbh 2025 | ಮಹಾ ಕುಂಭಮೇಳ 2025 : ಭಕ್ತರ ಸುರಕ್ಷತೆಗೆ ಏಳು ಹಂತದ ಭದ್ರತಾ ಕ್ರಮ 

Six Naxalites surrender | ಸಶಸ್ತ್ರ ಹೋರಾಟ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾದ ಆರು ನಕ್ಸಲರು

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group