Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Karnataka Bhavan-1 | ನವದೆಹಲಿಯಲ್ಲಿ ಕರ್ನಾಟಕ ಭವನ-1 ನೂತನ ಕಟ್ಟಡ ಲೋಕಾರ್ಪಣೆ : ಈ ಕಟ್ಟಡದ ವಿಶೇಷತೆಗಳೇನು?

ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ ಕೆಲಸ ಮಾಡಲಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ

by Bengaluru Wire Desk
April 3, 2025
in News Wire
Reading Time: 1 min read
0
Karnataka Bhavan-1 Building New Delhi

ನವದೆಹಲಿಯಲ್ಲಿರುವ ಕರ್ನಾಟಕ ಭವನ-1ರ ನೂತನ ಕಟ್ಟಡದ ನೋಟ

ನವದೆಹಲಿ, ಏ.3 www.bengaluruwire.com : ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸೇರಿ ದೇಶ ಮತ್ತು ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕೆಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನ-1 (ಕಾವೇರಿ)ರ ಕಟ್ಟಡವನ್ನು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

2018 ರ ಬಜೆಟ್ ನಲ್ಲಿ ಘೋಷಣೆಯಾಗಿ  2019 ರಲ್ಲಿ  ಕಾಮಗಾರಿ ಪ್ರಾರಂಭವಾಯಿತು.  ಈವರೆಗೆ 8 ವರ್ಷಗಳ ವಿಳಂಬವಾಗಿದೆ.  ಸಚಿವರ ಕೊಠಡಿಗಳು ಉತ್ತಮವಾಗಿದ್ದು. ಶಾಸಕರ ಕೊಠಡಿಗೆ ಸಿಟ್ ಔಟ್ ಅಗತ್ಯವಿದ್ದು ಈ ಬಗ್ಗೆ ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಭವನದಲ್ಲಿ ಗುರುವಾರದಿಂದಲೇ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು. 

ಯಾವುದೇ ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಂದ ತೆರಿಗೆಯನ್ನು ವಸೂಲು ಮಾಡುತ್ತವೆ. ಐದು ವರ್ಷಕ್ಕೊಮ್ಮೆ ರಚನೆಯಾಗುವ ಹಣಕಾಸಿನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯ ಪಾಲು ನಿಗದಿಯಾಗುತ್ತದೆ. ಅನುದಾನದಲ್ಲಿ ಕೇಂದ್ರ ಸರ್ಕಾರದ ಅನೇಕ ಕಾರ್ಯಕ್ರಮಗಳೂ ಸೇರಿದ್ದು,  ಕೇಂದ್ರ ಪುರಸ್ಕೃತ  ಯೋಜನೆಗಳೂ ಇರುತ್ತವೆ. ಇದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲು ಇರುತ್ತದೆ ಎಂದರು.

ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ , ಬಾಬಾ ಸಾಹೇಬ್ ಅಂಬೇಡ್ಕರ್ ರವರು ನೀಡಿದ ಸಂವಿಧಾನದ ಅನ್ವಯ ಸೆಂಟ್ರಲ್ ಲಿಸ್ಟ್, ಸ್ಟೇಟ್ ಲಿಸ್ಟ್ ಹಾಗೂ ಕನ್ಕರೆಂಟ್ ಲಿಸ್ಟ್ ಎಂದು ಅಧಿಕಾರ ಹಂಚಿಕೆಯಾಗಿದೆ. ಇದರನ್ವಯ ಕೇಂದ್ರ , ರಾಜ್ಯಗಳು ಕಾನೂನುಗಳನ್ನು ರಚಿಸಿದರೆ, ಕನ್ಕರೆಂಟ್ ಲಿಸ್ಟ್ ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕಾನೂನನ್ನು ರಚಿಸುತ್ತವೆ. 

ಕೇಂದ್ರಸರ್ಕಾರದ ಕೇಂದ್ರಸ್ಥಾನವಾದ ನವದೆಹಲಿಯಲ್ಲಿ ಪ್ರತಿಯೊಂದು ರಾಜ್ಯಗಳ ಭವನಗಳು ಇರುತ್ತವೆ. ನವದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳಿದ್ದು, ಇಲ್ಲಿಗೆ ಆಗಮಿಸುವ ಮಂತ್ರಿಗಳು, ಸಂಸದರು, ಹಾಲಿ ಹಾಗೂ ಮಾಜಿ ಶಾಸಕರು, ಅಧಿಕಾರಿಗಳಿಗೆ ಅನುಕೂಲ ಕಲ್ಪಿಸಲಾಗಿದೆ.

1967 ರಲ್ಲಿ ಕರ್ನಾಟಕ ಭವನಕ್ಕೆ ಶಂಕುಸ್ಥಾಪನೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ನೆರವೇರಿಸಿದ್ದು, ಅಂದಿನ ಪ್ರಧಾನಿ ಇಂದಿರಾಗಾಂಧಿಯವರು  ಉದ್ಘಾಟನೆ ಮಾಡಿದ್ದರು ಹಾಗೂ  ನಿಜಲಿಂಗಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. 51 ವರ್ಷಗಳ ಕಾಲ ಕರ್ನಾಟಕ ಭವನ ಕಾರ್ಯನಿರ್ವಹಿಸಿದೆ. ತಜ್ಞರ ಅಭಿಪ್ರಾಯದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಕೆಡವಿ ಹೊಸ  ಕಟ್ಟಡ ಕಟ್ಟಲು ತೀರ್ಮಾನಿಸಲಾಗಿತ್ತು. 

ರಾಯಭಾರಿ ಕಚೇರಿಯಾಗಿ ಕೆಲಸ ಮಾಡಲಿ :

ಕರ್ನಾಟಕ ಭವನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರಾಯಭಾರಿ ಕಛೇರಿಯಾಗಿ  ಕೆಲಸ ಮಾಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

ಕರ್ನಾಟಕ ಭವನ-2 ರ ನವೀಕರಣದ ಭರವಸೆ :

ಕರ್ನಾಟಕ ಭವನ-2 ರ ನವೀಕರಣ ಮಾಡುವ ಅಗತ್ಯವಿದ್ದು, ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕರ್ನಾಟಕ ಭವನ-1 ಕಟ್ಟಡದ ವಿಶೇಷತೆಗಳು :

ನವದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ ನೆಲೆಗೊಂಡಿರುವ ಕರ್ನಾಟಕ ಭವನವು 3,532 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಒಟ್ಟು 12,212 ಚದರ ಮೀಟರ್ (131,450 ಚದರ ಅಡಿ) ವಿಸ್ತೀರ್ಣವನ್ನು ಹೊಂದಿದೆ. ರಾಜ್ಯ ಕಾರ್ಯಕ್ರಮಗಳು, ಸಭೆಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಹುಪಯೋಗಿ ಸ್ಥಳವಾಗಿ ವಿನ್ಯಾಸಗೊಳಿಸಲಾದ ಈ ಕಟ್ಟಡವು ಕರ್ನಾಟಕದ ಶಾಶ್ವತ ಪರಂಪರೆಯ ಸಂಕೇತವಾಗಿದೆ.

ಎರಡು ನೆಲಮಾಳಿಗೆಗಳು ಸೇರಿದಂತೆ 9 ಮಹಡಿಗಳನ್ನು ಒಳಗೊಂಡಿರುವ ಈ ಬಹುಮಹಡಿ ಸಂಕೀರ್ಣವು 52 ಕೊಠಡಿಗಳನ್ನು ಹೊಂದಿದೆ. ಇವುಗಳಲ್ಲಿ 2 ಐಷಾರಾಮಿ ವಿಐಪಿ ಸೂಟ್‌ಗಳು, 32 ಸೂಟ್ ಕೊಠಡಿಗಳು ಮತ್ತು 18 ಸಿಂಗಲ್ ಕೊಠಡಿಗಳಿವೆ. ಇದರ ಜೊತೆಗೆ, ಕಟ್ಟಡವು 86 ಶೌಚಾಲಯಗಳು ಮತ್ತು ನೆಲಮಾಳಿಗೆಯಲ್ಲಿ 10 ಕಾರುಗಳಿಗೆ ಪಾರ್ಕಿಂಗ್ ಮಾಡಬಹುದು. ಮೂಲತಃ ಈ ಕಟ್ಟಡ ಯೋಜನಾ ವೆಚ್ಚ ರೂ. 81 ಕೋಟಿ ಎಂದು ಅಂದಾಜಿಸಲಾಗಿತ್ತು. ಬಳಿಕ ಈ ಯೋಜನೆಯ ಅಂತಿಮ ವೆಚ್ಚವು ರೂ. 138 ಕೋಟಿಗೆ ಏರಿತು. 

ಭವನದ ಸೌಲಭ್ಯಗಳ ವಿಷಯದಲ್ಲಿ ಸೌಕರ್ಯ ಮತ್ತು ಕ್ರಿಯಾತ್ಮಕತೆ ಎರಡಕ್ಕೂ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿವೆ. ವಿಶಾಲವಾದ ಸಭೆ ಕೊಠಡಿಗಳು, ವಿಐಪಿ ಲಾಂಜ್‌ಗಳು, ಸಮ್ಮೇಳನ ಕೊಠಡಿಗಳು, ಜಿಮ್ ಮತ್ತು ಸೌರಶಕ್ತಿ ಘಟಕಗಳನ್ನು ಹೊಂದಿರುವ ಟೆರೇಸ್ ಅನ್ನು ಸಹ ಒಳಗೊಂಡಿದೆ. ಈ ಕಟ್ಟಡದ ಉದ್ದೇಶವು ನವದೆಹಲಿಯಲ್ಲಿ ಕರ್ನಾಟಕದ ಉಪಸ್ಥಿತಿಯನ್ನು ಹೆಚ್ಚಿಸುವುದರ ಜೊತೆಗೆ ಸರ್ಕಾರಿ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಧಿಕೃತ ಸ್ಥಳವನ್ನು ಒದಗಿಸುವುದಾಗಿದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಮಹಾದೇವಪ್ಪ, ರಾಜಣ್ಣ, ಕೆ.ಎಚ್. ಮುನಿಯಪ್ಪ ಮತ್ತಿತರರು ಹಾಜರಿದ್ದರು.

WhatsApp Join our WhatsApp Channel
Previous Post

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್

Next Post

Namma Metro News | ನಮ್ಮ ಮೆಟ್ರೋ ರೈಲಿನಲ್ಲಿ ಕಳೆದ 6 ತಿಂಗಳಲ್ಲಿ ನಿಯಮ ಉಲ್ಲಂಘನೆಯ 27000 ಪ್ರಕರಣಗಳು ಪತ್ತೆ

Next Post

Namma Metro News | ನಮ್ಮ ಮೆಟ್ರೋ ರೈಲಿನಲ್ಲಿ ಕಳೆದ 6 ತಿಂಗಳಲ್ಲಿ ನಿಯಮ ಉಲ್ಲಂಘನೆಯ 27000 ಪ್ರಕರಣಗಳು ಪತ್ತೆ

Power Transmission Graphic Image

ಬೆಸ್ಕಾಂನಿಂದ ವಾಟ್ಸಾಪ್ ಸಹಾಯವಾಣಿ : ವಿದ್ಯುತ್ ದೂರುಗಳಿಗೆ ತ್ವರಿತ ಪರಿಹಾರ

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group