ಬೆಂಗಳೂರು ಏ.03 www.bengaluruwire.com : ಆನ್ಲೈನ್ (Online) ಮೂಲಕ ಬುಕ್ಕಿಂಗ್ ಮಾಡಿದ ನಾಗರೀಕರ ಮನೆಬಾಗಿಲಿಗೆ ಬಿಐಎಸ್ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ ಸಂಚಾರಿ “ಕಾವೇರಿ ಆನ್ ವ್ಹೀಲ್ಸ್” (Cauvery on Wheels) ಯೋಜನೆಯನ್ನು ಬೆಂಗಳೂರು ಜಲಮಂಡಳಿ ಶೀಘ್ರದಲ್ಲೇ ಜಾತಿಗೆ ತರಲಿದೆ ಎಂದು ಬೆಂಗಳೂರು ಜಲಮಂಡಳಿ (Bangalore Water Board) ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಅಂತರ್ಜಲಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂಧರ್ಭದಲ್ಲಿ ಖಾಸಗಿ ಟ್ಯಾಂಕರ್ಗಳು ತಮ್ಮ ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಈ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸಲಾಗಿದೆ. ಯೋಜನೆ ಜಾರಿಗಾಗಿ ಈಗಾಗಲೇ ಆಪ್ ಹಾಗೂ ವೆಬ್ಸೈಟ್ ರೂಪಿಸಲಾಗಿದೆ.
ಸಂಚಾರಿ ಕಾವೇರಿ – ಕಾವೇರಿ ಆನ್ ವ್ಹೀಲ್ಸ್ ಯೋಜನೆಯ ಪ್ರಮುಖ ಅಂಶಗಳು :
⦁ಟ್ಯಾಂಕರ್ ಟ್ರಾಕಿಂಗ್, ಓಟಿಪಿ ಪ್ರೊಟೆಕ್ಟೆಡ್ ಸೇವೆ

⦁ಬೆಂಗಳೂರು ನಾಗರೀಕರು ಆನ್ ಡಿಮ್ಯಾಂಡ್ ಟ್ಯಾಂಕರ್ ನೀರು ಬುಕ್ಕಿಂಗ್ ಮಾಡಲು ಅವಕಾಶ
⦁ಬಿಐಎಸ್ ಪ್ರಮಾಣಿತ ಶುದ್ದ ಹಾಗೂ ಸ್ವಚ್ಛ ಕುಡಿಯುವ ನೀರು ಲಭ್ಯ
⦁ಸಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ನೀರು ನೀಡುವ ವ್ಯವಸ್ಥೆ
⦁ದರ ಏರಿಕೆಯ ಭಯವಿಲ್ಲದೇ ಜನರು ನಿಗದಿತ ರಿಯಾಯತಿ ದರದಲ್ಲಿ ಟ್ಯಾಂಕರ್ ನೀರು ಬುಕ್ಕಿಂಗ್ ಗೆ ಅವಕಾಶ
⦁ಯಾವುದೇ ಸರ್ಚಾರ್ಜ್, ಬೇಡಿಕೆ ಹೆಚ್ಚಾಗುವ ಛಾರ್ಜ್ಗಳ ಭಯವಿಲ್ಲ
ಅತ್ಯಂತ ಸುಲಭ ವಿಧಾನದಲ್ಲಿ ಜನರು ತಮಗೆ ಅಗ್ಯವಿರುವಷ್ಟು ನೀರನ್ನು ಬುಕ್ಕಿಂಗ್ ಮಾಡಲು ಇಲ್ಲಿ ಅನುವು ಮಾಡಲಾಗಿದೆ. ಕಾವೇರಿ ಕನೆಕ್ಟ್ ಸೆಂಟರ್ಗಳಿಂದ ಬಿಐಎಸ್ ಪ್ರಮಾಣೀಕೃತ ಶುದ್ದ ನೀರನ್ನು ಮನೆಬಾಗಿಲಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ. ಗ್ರಾಹಕರು ನೇರವಾಗಿ ನಮ್ಮ ಆನ್ಲೈನ್ ಪ್ಲಾಟ್ಫಾರಂಗಳ ಮೂಲಕ ಹಣಪಾವತಿಸಿ ಟ್ಯಾಂಕರ್ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ ಎಂದು ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಇದೊಂದು ವಿಶೇಷ ಹಾಗೂ ವಿನೂತನ ಯೋಜನೆಯಾಗಿದೆ. ದೇಶದ ಯಾವುದೇ ಜಲಮಂಡಳಿಯೂ ಇದುವರೆಗೂ ಪ್ರಾರಂಭಿಸದೇ ಇರುವಂತಹ ಹೊಸ ಯೋಜನೆ ಇದಾಗಿದ್ದು, ನಮ್ಮಲ್ಲಿ ಲಭ್ಯವಿರುವಂತಹ ನೀರನ್ನು ಅಗತ್ಯವಿರುವ ಜನರಿಗೆ ಸರಬರಾಜು ಮಾಡುವ ವ್ಯವಸ್ಥೆ ಇದಾಗಿದೆ. ಖಾಸಗಿ ಟ್ಯಾಂಕರ್ಗಳು ಪೂರೈಸುವಂತಹ ನೀರಿನ ಗುಣಮಟ್ಟ, ಅವುಗಳ ಅಳತೆಯಲ್ಲಿ ವ್ಯತ್ಯಾಸ, ಬೇಡಿಕೆ ಹೆಚ್ಚಾದಾಗ ದರ ಹೆಚ್ಚಳ ಈ ಎಲ್ಲಾ ಸಮಸ್ಯೆಗಳನ್ನು ಏಕಕಾಲದಲ್ಲಿ ಪರಿಹರಿಸುವ ಯೋಜನೆ ಇದಾಗಿದೆ. ಈ ಸೇವೆಗೆ ಸದ್ಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
110 ಹಳ್ಳಿಗಳಿಗೆ ಹಾಗೂ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಅರ್ಜಿದಾರರಿಗೆ ಆದ್ಯತೆ :
110 ಹಳ್ಳಿಗಳ ವ್ಯಾಪ್ತಿಯಲ್ಲಿ ಕಾವೇರಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದು, ಸಂಪರ್ಕದ ಕಾಮಗಾರಿ ಪ್ರಗತಿಯಲ್ಲಿರುವವರಿಗೆ ಹಾಗೂ ಅರ್ಜಿದಾರರಿಗೆ ಆದ್ಯತೆ ನೀಡಲಾಗುವುದು ಎಂದು ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಟ್ಯಾಂಕರ್ ನೊಂದಣಿಗೆ ಅವಕಾಶ :
ಖಾಸಗಿ ಟ್ಯಾಂಕರ್ ರವರು ಬೆಂಗಳೂರು ಜಲಮಂಡಳಿಯ https://bwssb.karnataka.gov.in/ ಜಾಲತಾಣದಲ್ಲಿ ತಮ್ಮ ನೀರಿನ ಟ್ಯಾಂಕರ್ ಬಾಡಿಗೆ ಆಧಾರದಲ್ಲಿ ಜಲಮಂಡಳಿಗೆ ನೀಡಲು ಇಚ್ಛಿಸಿದಲ್ಲಿ, ನೇರವಾಗಿ ನೋಂದಣಿ ಮಾಡಿಕೊಳ್ಳಲು ಏ.10ರ ತನಕ ಅವಕಾಶ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಅಭಿಯಂತರರು (ಗುಣ & ವಿನ್ಯಾಸ ಆಶ್ವಾಸನೆ) ಸನತ್ ಕುಮಾರ್ ವಿ ಮೊ: 9901888338 ಅವರನ್ನು ಸಂಪರ್ಕಿಸಬಹುದಾಗಿದೆ.
“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.






















