Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

ಹಲವು ವರ್ಷಗಳಿಂದ ಬಾಕಿಯಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ | ಪ್ರಸ್ತುತ 762 ಸೆಗ್ಮೆಂಟ್‌ಗಳಲ್ಲಿ 416 ಸೆಗ್ಮೆಂಟ್ ಕಾಸ್ಟಿಂಗ್ ಹಾಗೂ 291 ಸೆಗ್ಮೆಂಟ್ ಜೋಡಣೆಯಾಗಿದೆ

by Bengaluru Wire Desk
May 30, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.30 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೂತನ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ ನಗರದ ಪಾದಚಾರಿ ಮಾರ್ಗಗಳ ಅಭಿವೃದ್ಧಿ ಮತ್ತು ಅಡೆತಡೆಗಳ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೋರಮಂಗಲ ವ್ಯಾಪ್ತಿಯಲ್ಲಿ 3.5 ಕಿ.ಮೀ.ಗಳಷ್ಟು ದೂರ ಅಧಿಕಾರಿಗಳೊಂದಿಗೆ ಪಾದಯಾತ್ರೆ ನಡೆಸಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಈಜೀಪುರ ಮೇಲುಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಜೀಪುರ ಮೇಲುಸೇತುವೆ ಕಾಮಗಾರಿ ತ್ವರಿತಗೊಳಿಸಲು ಸೂಚನೆ:

ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ವೀಕ್ಷಿಸುತ್ತಿರುವ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ ರಾವ್ (ಬಲದಿಂದ ಎಡಕ್ಕೆ ಎರಡನೆಯವರು). ಗುಣನಿಯಂತ್ರಣ ವಿಭಾಗದ ಚೀಫ್ ಇಂಜಿನಿಯರ್ ಡಾ.ರಾಘವೇಂದ್ರ (ಬಲದಿಂದ ಎಡಕ್ಕೆ ಮೂರನೆಯವರು) ಇಲ್ಲಿನ ಕಾಮಗಾರಿ ಬಗ್ಗೆ ವಿವರಿಸಿದರು.

ದಕ್ಷಿಣ ವಲಯದ ಡೈರಿ ವೃತ್ತದಿಂದ ಕಾಲ್ನಡಿಗೆ ಮೂಲಕ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ಈಜೀಪುರ ಮೇಲುಸೇತುವೆಯ ಪ್ರಗತಿಯನ್ನು ವೀಕ್ಷಿಸಿದರು. ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ಭೂಸ್ವಾಧೀನಪಡಿಸಿಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೆಂಟ್ ಜಾನ್ಸ್ ಬಳಿ ರಾಂಪ್‌ಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಿ, ರಾಂಪ್ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿದರು.

ಗುಣನಿಯಂತ್ರಣ ವಿಭಾಗದ ಮುಖ್ಯ ಅಭಿಯಂತರರಾದ ಡಾ.ರಾಘವೇಂದ್ರ ಈ ಕುರಿತು ಮಾಹಿತಿ ನೀಡಿ, ಈಜಿಪುರ ಮೇಲ್ಸೇತುವೆಯ ಬಾಕಿ ಉಳಿದ ಕಾಮಗಾರಿಯನ್ನು ಬಿ.ಎಸ್.ಸಿ.ಪಿ.ಎಲ್ ಇನ್ಫ್ರಾಸ್ಟ್ರಕ್ಚರ್ ಲಿ. ಗುತ್ತಿಗೆದಾರರಿಂದ ನಡೆಸಲಾಗುತ್ತಿದೆ. ಪ್ರಸ್ತುತ 762 ಸೆಗ್ಮೆಂಟ್‌ಗಳಲ್ಲಿ 416 ಸೆಗ್ಮೆಂಟ್ ಕಾಸ್ಟಿಂಗ್ ಹಾಗೂ 291 ಸೆಗ್ಮೆಂಟ್ ಜೋಡಣೆ ಮಾಡಲಾಗಿದೆ ಎಂದು ವಿವರಿಸಿದರು.

ರಸ್ತೆ ಮತ್ತು ಪಾದಚಾರಿ ಮಾರ್ಗಗಳ ನಿರ್ವಹಣೆಗೆ ಆದ್ಯತೆ:

ಮೇಲ್ಸೇತುವೆಯ ಕೆಳಭಾಗದ ರಸ್ತೆಯನ್ನು ಸರಿಯಾಗಿ ನಿರ್ವಹಿಸಲು ಮತ್ತು ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಗಳನ್ನು ಕೂಡಲೇ ದುರಸ್ತಿಪಡಿಸಲು ಮುಖ್ಯ ಆಯುಕ್ತರು ಸೂಚನೆ ನೀಡಿದರು. ಅಲ್ಲದೆ, ಮಳೆ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲು ಗುತ್ತಿಗೆದಾರರಿಗೆ ಸೂಚಿಸಿದರು.

ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತೆಗೆ ಒತ್ತು:

ಮಡಿವಾಳ ಬಸ್ ಪಿಕ್ ಅಪ್ ಪಾಯಿಂಟ್ ಬಳಿ ರಸ್ತೆ ಬದಿಯಲ್ಲಿ ಸಾಕಷ್ಟು ತ್ಯಾಜ್ಯ ಬಿಸಾಡಿರುವುದನ್ನು ಗಮನಿಸಿದ ಮಹೇಶ್ವರ್ ರಾವ್, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬಂದು ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಹೆಚ್ಚು ಜನ ಸಂಚರಿಸುವ ಸ್ಥಳವಾದ್ದರಿಂದ ಸದಾ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಜಂಕ್ಷನ್ ಅಭಿವೃದ್ಧಿಗೆ ಸೂಚನೆ:

ಮಡಿವಾಳ ಕೆಳಸೇತುವೆಯ ಮೇಲ್ಭಾಗದಲ್ಲಿರುವ ಜಂಕ್ಷನ್ ಬಳಿ ಪಾದಚಾರಿ ಮಾರ್ಗಗಳು, ರಸ್ತೆ ಅಭಿವೃದ್ಧಿ ಸೇರಿದಂತೆ ಜಂಕ್ಷನ್‌ನ ಸಮಗ್ರ ಅಭಿವೃದ್ಧಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಂಕ್ಷನ್‌ನಲ್ಲಿರುವ ಪೊಲೀಸ್ ಚೌಕಿಯಿಂದ ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗುತ್ತಿರುವುದನ್ನು ಸರಿಪಡಿಸುವಂತೆ ತಿಳಿಸಿದರು.

3.5 ಕಿ.ಮೀ ಪಾದಯಾತ್ರೆ ಮೂಲಕ ಪರಿಶೀಲನೆ:

ಡೈರಿ ಸರ್ಕಲ್ ಬಳಿಯಿರುವ ಕ್ರೈಸ್ಟ್ ಕಾಲೇಜು ಬಳಿಯಿಂದ ಸೆಂಟ್ ಜಾನ್ಸ್ ಕಾಲೇಜು ಜಂಕ್ಷನ್, ಮಡಿವಾಳ ಕೆಳಸೇತುವೆ, ಕೋರಮಂಗಲ 100 ಅಡಿ ರಸ್ತೆ, ಕೇಂದ್ರೀಯ ಸದನ, ಈಜೀಪುರ ಮೇಲ್ಸೇತುವೆ ರಸ್ತೆ, ಸೋನಿ ಜಂಕ್ಷನ್ ವರೆಗೆ ಸುಮಾರು 3.5 ಕಿ.ಮೀ ನಡಿಗೆ ಮೂಲಕ ರಸ್ತೆ ಮತ್ತು ಪಾದಚಾರಿ ಮಾರ್ಗಗಳನ್ನು ಪರಿಶೀಲನೆ ನಡೆಸಿದರು. ಉತ್ತಮ ರಸ್ತೆಗಳ ನಿರ್ಮಾಣದ ಜೊತೆಗೆ ಪಾದಚಾರಿ ಮಾರ್ಗಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಲಯ ಆಯುಕ್ತರಾದ ದಿಗ್ಜಯ್ ಬೋಡ್ಕೆ, ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್, ರಾಜೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

Next Post

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

Next Post

ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group