Sunday, June 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

  • Bengaluru Focus

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

  • Bengaluru Focus

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ: ‘ಸಣ್ಣ ಹುಡುಗ’ vs ‘ಅನುಭವವಿಲ್ಲದ ಆತುರ’ದ ರಾಜಕೀಯ ಜಟಾಪಟಿ

ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ಖಾರವಾದ ಪ್ರತಿಕ್ರಿಯೆ: ‘ಬೆಂಗಳೂರಿನ ಹಿತಾಸಕ್ತಿಗಾಗಿ ಆತುರ’ ಎಂದ ಸೂರ್ಯ

by Bengaluru Wire Desk
August 7, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಆ.07 www.bengaluruwire.com : ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಭೇಟಿ ನೀಡಿ ನಮ್ಮ ಮೆಟ್ರೋದ ಹಳದಿ ಮಾರ್ಗ ಉದ್ಘಾಟನೆ ಮಾಡಲಿರುವ ಬೆನ್ನಲ್ಲೇ, ಈ ಯೋಜನೆಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ತಾರಕಕ್ಕೇರಿದೆ. 

ಯೆಲ್ಲೋ ಲೈನ್ ಉದ್ಘಾಟನೆಗೆ ‘ಸಣ್ಣ ಹುಡುಗ ಅನಗತ್ಯ ಅವಸರ ಮಾಡುತ್ತಿದ್ದಾನೆ’ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಾರ್ಗದ ಉದ್ಘಾಟನೆ ಕುರಿತು ಡಿ.ಕೆ. ಶಿವಕುಮಾರ್ ಅವರು ತೇಜಸ್ವಿ ಸೂರ್ಯ ಅವರನ್ನು ಉದ್ದೇಶಿಸಿ, “ಅನುಭವವಿಲ್ಲದ ಆತುರದ ಹುಡುಗ, ಈ ಕೆಲಸಗಳನ್ನು ಆತುರದಲ್ಲಿ ಮಾಡಲು ಆಗುವುದಿಲ್ಲ” ಎಂದು ಹೇಳಿದ್ದರು. 

ಇದಕ್ಕೆ ತೀಕ್ಷ್ಣವಾಗಿ ಉತ್ತರಿಸಿರುವ ಸಂಸದ ತೇಜಸ್ವಿ ಸೂರ್ಯ, ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಪ್ರಕಟಿಸಿದ್ದಾರೆ. “ಹೌದು, ನಾನು ಅವಸರದಲ್ಲಿದ್ದೇನೆ, ಏಕೆಂದರೆ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಳ್ಳಲು ದಶಕಗಳು ಬೇಕಾಗಬಾರದು ಎಂದು ನಾನು ನಂಬಿದ್ದೇನೆ. 

ಬೆಂಗಳೂರಿನ ಜನತೆ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಸಮಯ ವ್ಯರ್ಥ ಮಾಡುವುದನ್ನು ನಾನು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷ ವಿಳಂಬ ರಾಜಕಾರಣವನ್ನು ಪ್ರತಿನಿಧಿಸುತ್ತದೆ. ಆದರೆ ನಾನು ಮೋದಿ ಅವರ ಹೊಸ ಭಾರತವನ್ನು ಪ್ರತಿನಿಧಿಸುತ್ತೇನೆ. ಕೇಂದ್ರ ಸರ್ಕಾರ ಯೋಜನೆಯನ್ನು ಆರಂಭಿಸಿ, ಅದನ್ನು ಉದ್ಘಾಟಿಸುವುದೂ ಸಹ ಅವರೇ” ಎಂದು ಸೂರ್ಯ ಬರೆದಿದ್ದಾರೆ.

ಯಾವಾಗ, ಎಲ್ಲಿದ್ದೀರಿ? ಎಂಬ ಪ್ರಶ್ನೆಗಳ ಸುರಿಮಳೆ:

ಯೆಲ್ಲೋ ಲೈನ್ ಯೋಜನೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರ ಪಾತ್ರದ ಕುರಿತು ತೇಜಸ್ವಿ ಸೂರ್ಯ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಗಳ ಸಮಯದಲ್ಲಿ, ಪೂರ್ಣಾವಧಿ ಬಿಎಂಆರ್‌ಸಿಎಲ್ ಎಂಡಿ ನೇಮಕಕ್ಕಾಗಿ ಹೋರಾಡಿದಾಗ, ಮತ್ತು ರೋಲಿಂಗ್ ಸ್ಟಾಕ್ ಪೂರೈಕೆಗಾಗಿ ಸಚಿವಾಲಯಗಳೊಂದಿಗೆ ಸಮನ್ವಯ ಸಾಧಿಸಿದಾಗ ಡಿ.ಕೆ.ಶಿವಕುಮಾರ್ ಎಲ್ಲಿದ್ದರು ಎಂದು ಸೂರ್ಯ ಪ್ರಶ್ನಿಸಿದ್ದಾರೆ.

ವಿದೇಶಿ ಇಂಜಿನಿಯರ್‌ಗಳಿಗೆ ವೀಸಾ ಪಡೆಯಲು ಪ್ರಯತ್ನಿಸಿದಾಗ ಹಾಗೂ ಉದ್ಘಾಟನೆಗೆ ನಿರ್ದಿಷ್ಟ ದಿನಾಂಕಕ್ಕಾಗಿ ತಾವು ನಾಗರಿಕರೊಂದಿಗೆ ಪ್ರತಿಭಟನೆ ನಡೆಸಿದಾಗಲೂ ಡಿಸಿಎಂ ಕಾಣಿಸಿಕೊಂಡಿರಲಿಲ್ಲ ಎಂದು ಸೂರ್ಯ ಹೇಳಿದ್ದಾರೆ. 

ಪ್ರಧಾನಿ ಭೇಟಿಗೆ ಕೇವಲ ಮೂರು ದಿನಗಳ ಮೊದಲು ಮಾಧ್ಯಮಗಳ ಮುಂದೆ ಬಂದು, ಈ ಯೋಜನೆ ತಮ್ಮದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಫೋಟೋ-ಆಪ್ ರಾಜಕಾರಣವಲ್ಲ, ಬದಲಾಗಿ ಕಾರ್ಯಕ್ಷಮತೆ ಆಧಾರಿತ ರಾಜಕಾರಣದ ಸಮಯ ಎಂದು ಸೂರ್ಯ ತಮ್ಮ ಪೋಸ್ಟ್‌ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೆಟ್ರೋ ಯೆಲ್ಲೋ ಲೈನ್ ಮಹತ್ವ:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲುದಾರಿಕೆಯಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ದಕ್ಷಿಣ ಬೆಂಗಳೂರನ್ನು ನಗರದ ಕೇಂದ್ರ ಭಾಗಕ್ಕೆ ಸಂಪರ್ಕಿಸುವ ಈ ಮಾರ್ಗ, ಮೆಟ್ರೋ ಹಂತ-3 ರ ನಿರ್ಮಾಣಕ್ಕೂ ನಾಂದಿ ಹಾಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಈ ಮಾರ್ಗವನ್ನು ಉದ್ಘಾಟಿಸಲಿದ್ದು, ₹15,611 ಕೋಟಿ ವೆಚ್ಚದ ಮೆಟ್ರೋ ಹಂತ-3ರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

WhatsApp Join our WhatsApp Channel
Previous Post

ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ

Next Post

ನಾಗಮೋಹನ್ ದಾಸ್ ವರದಿ: ಸಚಿವರಲ್ಲಿ ಪರ-ವಿರೋಧ, ಮುಖ್ಯಮಂತ್ರಿ ಮಧ್ಯಪ್ರವೇಶ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ನಾಗಮೋಹನ್ ದಾಸ್ ವರದಿ: ಸಚಿವರಲ್ಲಿ ಪರ-ವಿರೋಧ, ಮುಖ್ಯಮಂತ್ರಿ ಮಧ್ಯಪ್ರವೇಶ

ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಸಂಭ್ರಮ

Please login to join discussion

Like Us on Facebook

Follow Us on Twitter

Recent News

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

June 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group