Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus
    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus
    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BEML TBM | ಭಾರತದಲ್ಲೇ ಸುರಂಗ ಕೊರೆಯುವ ಯಂತ್ರಗಳ ತಯಾರಿಕೆಗೆ ಮುಂದಡಿ ಇಟ್ಟ ಬಿಇಎಂಎಲ್

'ಮೇಕ್ ಇನ್ ಇಂಡಿಯಾ' ಅಡಿಯಲ್ಲಿ ಟಿಬಿಎಂ ಉತ್ಪಾದನೆ, ವಿದೇಶಿ ಆಮದಿಗೆ ಕಡಿವಾಣ

by Bengaluru Wire Desk
August 29, 2025
in News Wire
Reading Time: 1 min read
0

ಬೆಂಗಳೂರು, ಆ.29 www.bengaluruwire.com : ದೇಶದಲ್ಲಿ ಹೆಚ್ಚುತ್ತಿರುವ ಮೂಲಭೂತಸೌಕರ್ಯ ಯೋಜನೆಗಳಿಗೆ ಅನುವಾಗುವಂತೆ, ಬೆಂಗಳೂರು ಮೂಲದ ರಕ್ಷಣಾ ಸಾರ್ವಜನಿಕ ಉದ್ದಿಮೆ ಬಿಇಎಂಎಲ್ (BEML), ಭಾರತದಲ್ಲಿ ಸುರಂಗ ಕೊರೆಯುವ ಯಂತ್ರಗಳ (Tunnel Boring Machines – TBMs) ಉತ್ಪಾದನೆಯನ್ನು ಮಾಡಲು ಸಿದ್ಧತೆ ನಡೆಸುತ್ತಿದೆ ಮತ್ತು ವಿನ್ಯಾಸ ಸಲಹೆಗಾಗಿ ಬಿಡ್‌ಗಳನ್ನು ಆಹ್ವಾನಿಸಿದೆ.

ಈ ಕ್ರಮವು ಭಾರತದ ಸ್ವಾವಲಂಬಿ ಕನಸನ್ನು ನನಸು ಮಾಡುವ ‘ಆತ್ಮನಿರ್ಭರ ಭಾರತ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳಿಗೆ ಪುಷ್ಟಿ ನೀಡಲಿದೆ. ಭಾರತದಲ್ಲಿ ಮೆಟ್ರೋ ರೈಲು, ಸುರಂಗ ರಸ್ತೆಗಳು, ಜಲವಿದ್ಯುತ್, ನೀರಾವರಿ, ಗಣಿಗಾರಿಕೆ ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಟಿಬಿಎಂಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಭೂಗರ್ಭದಲ್ಲಿ ಸುರಂಗ ಮಾರ್ಗಗಳನ್ನು ನಿರ್ಮಿಸಲು ಬಳಸಲಾಗುವ ಈ ಟಿಬಿಎಂ ಯಂತ್ರಗಳಿಗಾಗಿ ಭಾರತ ಇದುವರೆಗೂ ವಿದೇಶಿ, ಅದರಲ್ಲೂ ನಿರ್ದಿಷ್ಟವಾಗಿ ಚೀನಾ ದೇಶಗಳ ಮೇಲೆ ಅವಲಂಬಿತವಾಗಿತ್ತು. ಬಿಇಎಂಎಲ್ ಈಗಾಗಲೇ ಆಸ್ಟ್ರಿಯಾ ಮತ್ತು ಜಪಾನ್‌ನಂತಹ ದೇಶಗಳ ಸಂಸ್ಥೆಗಳೊಂದಿಗೆ ಟಿಬಿಎಂ ವಿಷಯವಾಗಿ ಚರ್ಚೆಗಳನ್ನು ಪ್ರಾರಂಭಿಸಿದೆ. “ಈ ಟೆಂಡರ್ ವಿನ್ಯಾಸ ಸಲಹೆಗಾಗಿ, ಮತ್ತು ಜಾಗತಿಕ ಸಂಸ್ಥೆಗಳಿಂದ ನಮಗೆ ಯಾವ ರೀತಿಯ ಪ್ರತಿಕ್ರಿಯೆ ಸಿಗುತ್ತದೆ ಎಂಬುದನ್ನು ನಾವು ಎದುರು ನೋಡುತ್ತಿದ್ದೇವೆ. ಉತ್ಪಾದನೆಗೆ ಇನ್ನೂ ಸ್ವಲ್ಪ ಸಮಯವಾಗುತ್ತದೆ ” ಎಂದು ಮೂಲಗಳು ತಿಳಿಸಿದೆ.

ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಬಿಇಎಂಎಲ್, ಟಿಬಿಎಂಗಳ ಸ್ಥಳೀಯ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ ಜಾಗತಿಕವಾಗಿ ಪ್ರಸಿದ್ಧ ವಿನ್ಯಾಸ ಸಲಹಾ ಸಂಸ್ಥೆಗಳೊಂದಿಗೆ ಪಾಲುದಾರಿಕೆಯನ್ನು ಕೋರಿ ಆಸಕ್ತಿ ಅಭಿವ್ಯಕ್ತಿ (ಇಒಐ- EOI)ಯನ್ನು ಪ್ರಾರಂಭಿಸಿದೆ.  ಕಂಪನಿಯು 6 ಮೀಟರ್‌ಗಳಿಂದ 16.5 ಮೀಟರ್ ವ್ಯಾಸದವರೆಗಿನ ಟಿಬಿಎಂಗಳನ್ನು ವಿನ್ಯಾಸಗೊಳಿಸುವಲ್ಲಿ ಸಾಬೀತಾದ ದಾಖಲೆಯನ್ನು ಹೊಂದಿರುವ ಆಸಕ್ತ ಸಂಸ್ಥೆಗಳನ್ನು ಹುಡುಕುತ್ತಿದೆ. 

ಪ್ರಸ್ತುತ, ಭಾರತವು ಮುಖ್ಯವಾಗಿ ಹೆರೆಂಕ್ನೆಕ್ಟ್ (ಜರ್ಮನಿ), ಟೆರಾಟೆಕ್ (ಆಸ್ಟ್ರೇಲಿಯಾ), ಸಿಆರ್ ಸಿಎಚ್ಐ (CRCHI) ಮತ್ತು ಎಸ್ ಟಿಇಸಿ (STEC- ಚೀನಾ) ಮತ್ತು ಕೊಮಾಟ್ಸು (ಜಪಾನ್) ಗಳಿಂದ ಆಮದು ಮಾಡಿಕೊಳ್ಳುವ ಟಿಬಿಎಂ ಗಳನ್ನು ಹೆಚ್ಚು ಅವಲಂಬಿಸಿದೆ. ಇವುಗಳಲ್ಲಿ ಹಲವು ಚೀನಾದಲ್ಲಿ ಜೋಡಿಸಲ್ಪಟ್ಟಿವೆ. ಇತ್ತೀಚಿನ ಭಾರತ-ಚೀನಾ ಗಡಿ ಬಿಕ್ಕಟ್ಟು ಟಿಬಿಎಂ ಆಮದನ್ನು ಅಡ್ಡಿಪಡಿಸಿತು. ಇದು ಮುಂಬೈನ ಭೂಗತ ಮೆಟ್ರೋ ಯೋಜನೆಯಂತಹ ಪ್ರಮುಖ ಮೂಲಸೌಕರ್ಯ ಯೋಜನೆಗಳ ಮೇಲೆ ಪರಿಣಾಮ ಬೀರುತ್ತಿದೆ.

ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA)ವು ಸ್ಥಳೀಯವಾಗಿ ಟಿಬಿಎಂ ಯಂತ್ರದ ಉತ್ಪಾದನೆಯನ್ನು ಪ್ರೋತ್ಸಾಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜೂನ್ 2025 ರಲ್ಲಿ ನವದೆಹಲಿಯಲ್ಲಿ ಬಿಇಎಂಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಲಾಗಿತ್ತು ಎಂದು ಎಂಒಎಚ್ ಯುಎ ಮೂಲಗಳು ತಿಳಿಸಿವೆ, ಅಲ್ಲಿ ಪಿಎಸ್‌ಯು 6 ಮೀಟರ್ ನಿಂದ 15 ಮೀಟರ್ ವ್ಯಾಸದ ಟಿಬಿಎಂಗಳನ್ನು ತಯಾರಿಸುವ ಪ್ರಸ್ತಾವನೆಯನ್ನು ಮಂಡಿಸಿತ್ತು ಎಂದು ತಿಳಿದುಬಂದಿದೆ.

ಬಿಇಎಂಎಲ್‌ನ ಈ ಮಹತ್ವದ ನಿರ್ಧಾರವು, ಸುರಂಗ ಮಾರ್ಗಗಳ ನಿರ್ಮಾಣದಲ್ಲಿ ಟಿಬಿಎಂ ಮೇಲಿನ ಭಾರತದ ಆಮದು ಅವಲಂಬನೆಯನ್ನು ತೀವ್ರವಾಗಿ ಕಡಿಮೆ ಮಾಡಲಿದೆ. ಬಿಇಎಂಎಲ್ ಈಗಾಗಲೇ ವಂದೇ ಭಾರತ್ ಸ್ಲೀಪರ್ ರೈಲುಗಳು ಮತ್ತು ಇತರ ಬಗೆಯ ರೋಲಿಂಗ್ ಸ್ಟಾಕ್‌ಗಳನ್ನು ತಯಾರಿಸುತ್ತಿದೆ. ಇದೇ ಘಟಕದಲ್ಲಿ ಈಗ ಟಿಬಿಎಂ ಉತ್ಪಾದನಾ ವಿಭಾಗವನ್ನು ಸ್ಥಾಪಿಸಲಾಗುತ್ತಿದೆ.

ದೇಶದ ನಗರೀಕರಣ ಹೆಚ್ಚಿದಂತೆ ಮೆಟ್ರೋ ರೈಲು ಮತ್ತು ಇತರ ಮೂಲಸೌಕರ್ಯ ಯೋಜನೆಗಳಿಗೆ ಸುರಂಗ ಯಂತ್ರಗಳ ಬೇಡಿಕೆ ಹೆಚ್ಚಾಗುತ್ತಿದೆ. ಈ ಬೇಡಿಕೆಯನ್ನು ಸ್ಥಳೀಯವಾಗಿ ಪೂರೈಸುವ ಮೂಲಕ ಬಿಇಎಂಎಲ್ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 

ಈಗ ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವಾಗಿರುವ ಭಾರತದ ಮೆಟ್ರೋ ಜಾಲವು 23 ನಗರಗಳಲ್ಲಿ 1,013 ಕಿ.ಮೀ.ಗೂ ಹೆಚ್ಚು ವ್ಯಾಪಿಸಿದೆ. 2025-26ರಲ್ಲಿ ಮೆಟ್ರೋ ಯೋಜನೆಗಳಿಗೆ ಕೇಂದ್ರದ ಬಜೆಟ್ 34,807 ಕೋಟಿ ರೂ.ಗಳಿಗೆ ಏರಿದೆ, ಇದು 2013-14ಕ್ಕೆ ಹೋಲಿಸಿದರೆ ಆರು ಪಟ್ಟು ಹೆಚ್ಚಾಗಿದೆ.

ಅಲ್ಲದೆ, ರಕ್ಷಣಾ ಉತ್ಪನ್ನಗಳು ಮತ್ತು ರೈಲುಗಳಿಗೆ ಕೋಚ್‌ಗಳನ್ನು ತಯಾರಿಸುವಲ್ಲಿ ಬಿಇಎಂಎಲ್ ಈಗಾಗಲೇ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಸುಮಾರು 1,750 ಕ್ಕೂ ಹೆಚ್ಚು ಮೆಟ್ರೋ ಕೋಚ್‌ಗಳನ್ನು ಪೂರೈಸಿದೆ. ಈ ಹೊಸ ಉತ್ಪಾದನಾ ಘಟಕದಿಂದ ಮತ್ತಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 2.19 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ

Next Post

ಪಿತ್ರಪಕ್ಷಕ್ಕೆ ಗಯಾದಲ್ಲಿ ಇ-ಪಿಂಡದಾನ ಯೋಜನೆ; ಬಿಹಾರ ಟೂರಿಸಂ ವ್ಯವಸ್ಥೆ

Next Post

ಪಿತ್ರಪಕ್ಷಕ್ಕೆ ಗಯಾದಲ್ಲಿ ಇ-ಪಿಂಡದಾನ ಯೋಜನೆ; ಬಿಹಾರ ಟೂರಿಸಂ ವ್ಯವಸ್ಥೆ

ಜಿಎಸ್‌ಟಿ ಸರಳೀಕರಣ: ರಾಜ್ಯಗಳ ಆದಾಯಕ್ಕೆ 2.5 ಲಕ್ಷ ಕೋಟಿ ನಷ್ಟ ಸಾಧ್ಯತೆ - ಸಚಿವ ಕೃಷ್ಣ ಬೈರೇಗೌಡ ಕಳವಳ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group