Sunday, May 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

UPI News | ಇನ್ಮುಂದೆ ಯುಪಿಐ ಪಾವತಿಗೆ ಪಿನ್​ ಬೇಕಿಲ್ಲ: ಫೇಸ್​ ಸ್ಕ್ಯಾನ್​ ಅಥವಾ ಫಿಂಗರ್​ಪ್ರಿಂಟ್​ ಬಳಸಿ

ಆರ್‌ಬಿಐ ಹೊಸ ಮಾರ್ಗಸೂಚಿಯಡಿ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಬದಲಾವಣೆ: ಇಂದಿನಿಂದ ದೇಶಾದ್ಯಂತ ಜಾರಿ

by Bengaluru Wire Desk
October 8, 2025
in Public interest
Reading Time: 1 min read
0

ಮುಂಬೈ/ಬೆಂಗಳೂರು, ಅ.08 www.bengaluruwire.com : ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ (Digital Payment) ಇಂದಿನಿಂದ ಪ್ರಮುಖ ಬದಲಾವಣೆಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊರಡಿಸಿದ ಹೊಸ ಮಾರ್ಗಸೂಚಿಯ ಅಡಿಯಲ್ಲಿ, ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಬಳಕೆದಾರರು ಇನ್ಮುಂದೆ ಪ್ರತಿ ವಹಿವಾಟಿಗೆ ಕಡ್ಡಾಯವಾಗಿ ಪಿನ್ (PIN) ನಮೂದಿಸುವ ಕಿರಿಕಿರಿಯಿಂದ ಮುಕ್ತರಾಗಿದ್ದಾರೆ.

ಬದಲಿಗೆ, ಆಧಾರ್-ಆಧಾರಿತ ಮುಖ ಚಹರೆ (Face Scan) ಅಥವಾ ಫಿಂಗರ್‌ಪ್ರಿಂಟ್ ಸ್ಕ್ಯಾನ್ (Fingerprint Scan) ಬಳಸಿ ಪಾವತಿಗಳನ್ನು ಕ್ಷಣಾರ್ಧದಲ್ಲಿ ಅನುಮೋದಿಸಲು ಸಾಧ್ಯವಾಗುತ್ತದೆ. ಈ ವೈಶಿಷ್ಟ್ಯವು ಇಂದಿನಿಂದ (ಅ. 08) ದೇಶಾದ್ಯಂತ ಜಾರಿಗೆ ಬಂದಿದೆ.

ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನಲ್ಲಿ ಘೋಷಣೆ :

ಮುಂಬೈನಲ್ಲಿ ನಡೆಯುತ್ತಿರುವ ‘ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2025’ (Global Fintech Fest 2025) ನಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮತ್ತು ಆರ್‌ಬಿಐ ಜಂಟಿಯಾಗಿ ಈ ಮಹತ್ವದ ಬದಲಾವಣೆಯನ್ನು ಮಂಗಳವಾರ ಘೋಷಿಸಿವೆ.

ಹೆಚ್ಚಿದ ಭದ್ರತೆ, ಸುಲಲಿತ ವಹಿವಾಟು :

ಟ್ರಾನ್ಸಾಕ್ಷನ್​ಗಳ ದೃಢೀಕರಣ (Verification) ಪ್ರಕ್ರಿಯೆಯಲ್ಲಿ ಇನ್ನಷ್ಟು ಸುರಕ್ಷತೆ ಮತ್ತು ವೇಗವನ್ನು ತರುವ ಉದ್ದೇಶದಿಂದ ಆರ್‌ಬಿಐ ಈ ಹೊಸ ನಿಯಮಗಳನ್ನು ಹೊರಡಿಸಿದೆ. ಬ್ಯಾಂಕುಗಳು ಮತ್ತು ಫಿನ್‌ಟೆಕ್ ಕಂಪನಿಗಳು ಸಾಂಪ್ರದಾಯಿಕ ಪಿನ್ ವ್ಯವಸ್ಥೆಯ ಜೊತೆಗೆ ಬಯೋಮೆಟ್ರಿಕ್ ಅಥವಾ ಮುಖ ಆಧಾರಿತ ದೃಢೀಕರಣವನ್ನು ಅಳವಡಿಸಿಕೊಳ್ಳಲು ಈ ಮಾರ್ಗಸೂಚಿಗಳು ಅನುಮತಿ ನೀಡುತ್ತವೆ. ಈ ಕ್ರಮವು ಡಿಜಿಟಲ್ ಪಾವತಿಗಳ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಿ, ವಂಚನೆಯ ಅಪಾಯವನ್ನು ಕಡಿಮೆ ಮಾಡಲಿದೆ ಎಂದು ಆರ್ ಬಿಐ ಹೇಳಿದೆ.

ಕಾರ್ಯನಿರ್ವಹಣೆ ಹೇಗಾಗುತ್ತೆ? :

ಹೊಸ ವೈಶಿಷ್ಟ್ಯದ ಅಡಿಯಲ್ಲಿ, ಬಳಕೆದಾರರು ಯುಪಿಐ ಪಾವತಿ ಮಾಡಲು ಮುಂದಾದಾಗ ಅವರ ಫೋನ್‌ನಲ್ಲಿರುವ ಕ್ಯಾಮೆರಾ ಅಥವಾ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಕ್ರಿಯಗೊಳ್ಳುತ್ತದೆ. ಮುಖ ಅಥವಾ ಬೆರಳಚ್ಚನ್ನು ಸ್ಕ್ಯಾನ್ ಮಾಡಿದ ತಕ್ಷಣ, ಆ ಡೇಟಾವನ್ನು ‘ಆಧಾರ್ ಡೇಟಾಬೇಸ್‌’ನೊಂದಿಗೆ ಹೊಂದಿಸಲಾಗುತ್ತದೆ. ಹೊಂದಾಣಿಕೆ ಯಶಸ್ವಿಯಾದರೆ, ಪಾವತಿ ಕೆಲವೇ ಸೆಕೆಂಡುಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ. ಈ ಅಸಾಮಾನ್ಯ ಸೌಲಭ್ಯವು ಬ್ಯಾಂಕ್ ಖಾತೆ ಮತ್ತು ಯುಪಿಐ ಐಡಿಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿರುವ ಬಳಕೆದಾರರಿಗೆ ಮಾತ್ರ ಲಭ್ಯವಾಗಲಿದೆ.

ಈವರೆಗೆ ಪ್ರತಿ ಯುಪಿಐ ವಹಿವಾಟಿಗೂ 4 ಅಥವಾ 6 ಡಿಜಿಟ್‌ಗಳ ಪಿನ್ ನಮೂದಿಸಬೇಕಿತ್ತು. ಈಗ ಈ ಬಯೋಮೆಟ್ರಿಕ್ ದೃಢೀಕರಣವು ವಹಿವಾಟಿನ ಸಮಯವನ್ನು ಒಂದು ಸೆಕೆಂಡ್‌ಗಿಂತ ಕಡಿಮೆ ಅವಧಿಗೆ ಇಳಿಸಿದೆ.

ವಂಚನೆ ತಡೆಯಲು ಇದು ಪರಿಣಾಮಕಾರಿ ಕ್ರಮ :

ಫಿನ್‌ಟೆಕ್ ತಜ್ಞರ ಪ್ರಕಾರ, ಬಯೋಮೆಟ್ರಿಕ್ ಡೇಟಾವನ್ನು ನಕಲಿಸುವುದು ಅಸಾಧ್ಯ. ಇದು ಯುಪಿಐ ವಹಿವಾಟುಗಳಲ್ಲಿ ಆಗಬಹುದಾದ ವಂಚನೆಯ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ. ಬಳಕೆದಾರರ ಡೇಟಾ ಗೌಪ್ಯತೆ ಮತ್ತು ಸುರಕ್ಷತೆಗಾಗಿ, ಎನ್ ಪಿಸಿಐ  ಮತ್ತು ಆಧಾರ್ (UIDAI) ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಮತ್ತು ಹಲವು ಕಟ್ಟುನಿಟ್ಟಿನ ಪ್ರೋಟೋಕಾಲ್‌ಗಳನ್ನು ಜಾರಿಗೆ ತಂದಿವೆ. ಇದರಿಂದ ಬಯೋಮೆಟ್ರಿಕ್ ಡೇಟಾವನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ ಎಂದು ಖಚಿತಪಡಿಸಲಾಗಿದೆ.

ವೇರಬಲ್ ಡಿವೈಸ್​ಗಳಿಗೂ ಯುಪಿಐ ಲೈಟ್:

ಇದೇ ಸಂದರ್ಭದಲ್ಲಿ, ಎನ್ ಪಿಸಿಐ ಮತ್ತು ಆರ್‌ಬಿಐ ಮತ್ತೊಂದು ಮಹತ್ವದ ಉಪಕ್ರಮವನ್ನು ಸಹ ಪ್ರಕಟಿಸಿವೆ. ಕಡಿಮೆ ಮೊತ್ತದ ವಹಿವಾಟುಗಳನ್ನು (Small-value transactions) ಸಂಪೂರ್ಣವಾಗಿ ಹ್ಯಾಂಡ್ಸ್-ಫ್ರೀ (Hands-free) ಆಗಿ ಮಾಡಲು ಸಹಾಯಕವಾಗುವಂತೆ ‘ವೇರಬಲ್ ಸ್ಮಾರ್ಟ್ ಗ್ಲಾಸ್​ಗಳಿಗಾಗಿ’ (Wearable Smart Glasses) ‘ಯುಪಿಐ ಲೈಟ್’ (UPI Lite) ವೈಶಿಷ್ಟ್ಯವನ್ನು ಪರಿಚಯಿಸಲಾಗಿದೆ. ಬಳಕೆದಾರರು ಕೇವಲ ಧ್ವನಿ ಆಜ್ಞೆಯ ಮೂಲಕವೇ ಪಾವತಿಗಳನ್ನು ಅನುಮೋದಿಸಿ ಪೂರ್ಣಗೊಳಿಸಬಹುದು. QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಫೋನ್, ಪಿನ್ ಅಥವಾ ಸ್ಪರ್ಶದ ಅಗತ್ಯವಿಲ್ಲದೆ ವಹಿವಾಟು ಮಾಡಬಹುದಾಗಿದೆ.

UPI launches Biometric Authentication at #GFF2025!

With No UPI PIN needed to make a transaction, this new launch as just made transactions faster and smoother than ever! @UPI_NPCI #NPCIGFF2025 pic.twitter.com/iDSb2RYJHD

— NPCI (@NPCI_NPCI) October 7, 2025
WhatsApp Join our WhatsApp Channel
Previous Post

Kidwai Hospital | ಕಿದ್ವಾಯಿ ಸಂಸ್ಥೆ ನಿರ್ದೇಶಕರಿಗೆ ಪೂರ್ಣ ಅಧಿಕಾರ ಪುನಃ ಸ್ಥಾಪನೆ

Next Post

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

Next Post

ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

Please login to join discussion

Like Us on Facebook

Follow Us on Twitter

Recent News

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

May 2, 2026

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group