Friday, August 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

  • Bengaluru Focus

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಡಿ.ಕೆ.ಶಿವಕುಮಾರ್ ಮಧ್ಯಸ್ಥಿಕೆ: ‘ಬಿಗ್ ಬಾಸ್’ ಮನೆಗೆ ಮರಳಿದ 17 ಸ್ಪರ್ಧಿಗಳು; ಜಾಲಿವುಡ್ ಸ್ಟುಡಿಯೋ ಸೀಲ್ ತೆರವು

ಪರಿಸರ ಉಲ್ಲಂಘನೆ ಆರೋಪದ ಮೇಲೆ ಮುಚ್ಚಲಾಗಿದ್ದ ಬಿಡದಿಯ ಸ್ಟುಡಿಯೋ ಮರು ಆರಂಭ; ನಟ ಕಿಚ್ಚ ಸುದೀಪ್‌ರಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಧನ್ಯವಾದ ಸಲ್ಲಿಕೆ

by Bengaluru Wire Desk
October 9, 2025
in Bengaluru Focus, Life Style, Public interest
Reading Time: 1 min read
0

ಬೆಂಗಳೂರು, ಅ.09 www.bengaluruwire.com : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ವಿವಾದಕ್ಕೆ ತೆರೆ ಬಿದ್ದಿದ್ದು, ಎಲ್ಲಾ 17 ಸ್ಪರ್ಧಿಗಳು ಮತ್ತೆ ಬಿಗ್ ಬಾಸ್ ಮನೆಗೆ ಮರಳಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಯಿಂದ ಸೀಲ್ ಮಾಡಲಾಗಿದ್ದ ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಜಿಲ್ಲಾಡಳಿತ ತೆರೆದಿದ್ದು, ಚಿತ್ರೀಕರಣ ಪುನರಾರಂಭಗೊಂಡಿದೆ.

ನಡೆಯುವುದೇನು? ಎಲ್ಲಿಂದ ಎಲ್ಲಿಗೆ ಶಿಫ್ಟ್? :

ಸೀಸನ್ 12, ಸೆಪ್ಟೆಂಬರ್ 28 ರಂದು ನಟ ಕಿಚ್ಚ ಸುದೀಪ್ ಅವರ ನಿರೂಪಣೆಯಲ್ಲಿ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಆದರೆ, ಕಾರ್ಯಕ್ರಮ ಶುರುವಾಗಿ ಒಂದು ವಾರದ ನಂತರ, ಅಕ್ಟೋಬರ್ 7 ರಂದು ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪಗಳ ಹಿನ್ನೆಲೆ ಕೆಎಸ್ ಪಿಸಿಬಿ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. 

ತ್ಯಾಜ್ಯ ನೀರು ಬಿಡುಗಡೆ, ತ್ಯಾಜ್ಯ ಸಂಸ್ಕರಣಾ ಘಟಕ (STP) ದೋಷ ಮತ್ತು ಡೀಸೆಲ್ ಜನರೇಟರ್‌ಗಳ ಅನಧಿಕೃತ ಬಳಕೆಯಂತಹ ಪರಿಸರ ಉಲ್ಲಂಘನೆಗಳಿಂದ ಈ ಕ್ರಮ ಕೈಗೊಳ್ಳಲಾಗಿತ್ತು. ಹೀಗಾಗಿ, ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳನ್ನು ರಾಮನಗರದ ಈಗಲ್ಟನ್ ರೆಸಾರ್ಟ್‌ಗೆ ತಕ್ಷಣಕ್ಕೆ ಶಿಫ್ಟ್ ಮಾಡಲಾಗಿತ್ತು.

ಡಿಸಿಎಂ ಮಧ್ಯಸ್ಥಿಕೆ: ಸ್ಟುಡಿಯೋ ಬೀಗ ತೆರವು :

ಘಟನೆ ನಡೆದ ಮರುದಿನವೇ, ಅಂದರೆ ಬುಧವಾರ, ಉಪಮುಖ್ಯಮಂತ್ರಿ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಸ್ಟುಡಿಯೋ ಬೀಗ ತೆರೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇವರ ಸೂಚನೆಯ ಮೇರೆಗೆ, ಬುಧವಾರ ಮುಂಜಾನೆ 4 ಗಂಟೆಗೆ, ರಾಮನಗರ ತಾಲೂಕಿನ ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಜಾಲಿವುಡ್ ಸ್ಟುಡಿಯೋಗೆ ಮರಳಿ ಶಿಫ್ಟ್ ಮಾಡಲಾಗಿದೆ.

ಯಾವುದೇ ಸಾರ್ವಜನಿಕರಿಗೆ ಕಾಣದಂತೆ ಸ್ಪರ್ಧಿಗಳನ್ನು ಕರೆತರಲು ಕಾರ್‌ಗಳ ಗಾಜಿಗೆ ಕಪ್ಪು ಬಟ್ಟೆ ಸುತ್ತಿ ಕರೆತರಲಾಗಿದ್ದು, ಬಿಗ್ ಬಾಸ್ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರ ಸಮ್ಮುಖದಲ್ಲಿ ಸ್ಟುಡಿಯೋದ ಗೇಟ್ ‘ಸಿ’ ಅನ್ನು ತೆರೆಯಲಾಗಿದ್ದು, ಅಲ್ಲಿಂದಲೇ ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸಲಾಗಿದೆ.

ಕಿಚ್ಚ ಸುದೀಪ್ ಕಡೆಯಿಂದ ಧನ್ಯವಾದ :

ಸಮಸ್ಯೆ ಇತ್ಯರ್ಥವಾಗಿ, ಚಿತ್ರೀಕರಣ ಮರು ಆರಂಭಕ್ಕೆ ಅವಕಾಶ ದೊರೆತ ನಂತರ, ನಟ ಮತ್ತು ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಅವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ತಮ್ಮ ಮನವಿಯನ್ನು ಪರಿಗಣಿಸಿ ಜಾಲಿವುಡ್ ಸ್ಟುಡಿಯೋ ತೆರೆಯಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಹಾಗೂ ಇತ್ತೀಚೆಗೆ ನಡೆದ ಈ ಸಮಸ್ಯೆಗೆ ಬಿಗ್ ಬಾಸ್ ಶೋ ಕಾರಣವಲ್ಲ ಎಂಬುದನ್ನು ಮನಗಂಡಿದ್ದಕ್ಕಾಗಿ” ಎಂದು ಅವರು ಡಿಸಿಎಂ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳೊಂದಿಗೆ, ಬಿಗ್ ಬಾಸ್ ಕನ್ನಡ 12 ರ ಚಿತ್ರೀಕರಣ ಪುನರಾರಂಭಗೊಂಡಿದ್ದು, ಸ್ಪರ್ಧಿಗಳ ಮುಂದಿನ ಪಯಣ ಎಂದಿನಂತೆ ಮುಂದುವರಿಯಲಿದೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಟನಲ್ ರಸ್ತೆಯಿಂದ ಲಾಲ್‌ಬಾಗ್ ಉದ್ಯಾನವನಕ್ಕೆ ತೊಂದರೆಯಿಲ್ಲ, ಜಿಬಿಎ ಪಾಲಿಕೆಗಳಲ್ಲಿ ಇನ್ನು ಮುಂದೆ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್‌ಗಳು: ಡಿಸಿಎಂ

Next Post

BW Special | PM Suryaghar Scheme | ಸೂರ್ಯಘರ್ ‘ಮುಫ್ತ್ ಬಿಜಲಿ’ ಯ ಹೆಸರಲ್ಲಿದೆಯಾ ಗೊಂದಲ?: ರಾಜ್ಯದಲ್ಲಿ ಹೇಗೆ ಸಾಗುತ್ತಿದೆ ಗೊತ್ತಾ ಕೇಂದ್ರದ ಯೋಜನೆ?

Next Post
ಬೆಂಗಳೂರಿನ ಮನೆಯೊಂದರ ಮೇಲ್ಛಾವಣಿ ಮೇಲೆ ಸೌರ ಫಲಕ ಅಳವಡಿಸಿರುವ ಸಾಂದರ್ಭಿಕ ಚಿತ್ರ (ಕೃಪೆ : ಬೆಸ್ಕಾಂ)

BW Special | PM Suryaghar Scheme | ಸೂರ್ಯಘರ್ 'ಮುಫ್ತ್ ಬಿಜಲಿ' ಯ ಹೆಸರಲ್ಲಿದೆಯಾ ಗೊಂದಲ?: ರಾಜ್ಯದಲ್ಲಿ ಹೇಗೆ ಸಾಗುತ್ತಿದೆ ಗೊತ್ತಾ ಕೇಂದ್ರದ ಯೋಜನೆ?

ಮಹಿಳೆಯರಿಗೆ ಬಂಪರ್‌ ಗಿಫ್ಟ್: ಇನ್ನು ಮುಂದೆ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ

Please login to join discussion

Like Us on Facebook

Follow Us on Twitter

Recent News

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

August 20, 2026

BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

August 20, 2026

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group