Wednesday, July 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Exclusive | ಬೆಸ್ಕಾಂನಿಂದ ಜಿಬಿಎ ವ್ಯಾಪ್ತಿಯ ಸಣ್ಣ ವಸತಿ ಕಟ್ಟಡಗಳ ಮಾಲೀಕರಿಗೆ ನೆಮ್ಮದಿ: ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ

1200 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಿದ ನೆಲ + 2 ಅಥವಾ ಸ್ಟಿಲ್ಟ್ + 3 ಅಂತಸ್ತಿನ ಕಟ್ಟಡಗಳಿಗೆ ಕರೆಂಟ್ ಗ್ಯಾರಂಟಿ | ಬಾಕಿ ಇರುವ ಅರ್ಜಿಗಳಲ್ಲಿ ಶೇ.70ರಷ್ಟು ಗ್ರಾಹಕರಿಗೆ ಅನುಕೂಲ

by Bengaluru Wire Desk
October 23, 2025
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಅ.23 www.bengaluruwire.com : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಒಂದು ಮಹತ್ವದ ಮತ್ತು ನೆಮ್ಮದಿಯ ಸುದ್ದಿ ನೀಡಿದೆ. 

ಅಕ್ಟೋಬರ್ 16ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದಿರುವ 1,200 ಚದರ ಅಡಿ (30×40 ಅಡಿ ಅಳತೆಯ ನಿವೇಶನಗಳು ಸೇರಿದಂತೆ) ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Occupancy Certificate – OC) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ನಿರ್ಧಾರದಿಂದಾಗಿ ಹಲವು ತಿಂಗಳಿಂದ ಬಾಕಿಯಿದ್ದ ಸಾವಿರಾರು ವಿದ್ಯುತ್ ಸಂಪರ್ಕ ಅರ್ಜಿಗಳು ಇತ್ಯರ್ಥಗೊಳ್ಳಲಿವೆ.

ಈ ಮಹತ್ವದ ಬದಲಾವಣೆಯು ಅಕ್ಟೋಬರ್ 9ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯ (ಪ್ರಕರಣ ಸಂಖ್ಯೆ: ಸಿ.857/2025) ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅಡಿಯಲ್ಲಿ ಸರ್ಕಾರ ಹೊರಡಿಸಿದ ಆದೇಶದ ಅನ್ವಯ ಜಾರಿಗೆ ಬಂದಿದೆ. ಈ ಕಾನೂನಿನ ಅಡಿ, ನಿಗದಿತ ಮಾನದಂಡದೊಳಗೆ ಬರುವ ಒಸಿ ಗಳಿಲ್ಲದ ಕಟ್ಟಡಗಳು ಸಹ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅನುವು ಮಾಡಿಕೊಟ್ಟಿದೆ.

ಸಾವಿರಾರು ಅರ್ಜಿಗಳಿಗೆ ಮುಕ್ತಿ :

ಬೆಸ್ಕಾಂನ ಕಾರ್ಯಾಚರಣೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಮಾಲತೇಶ್ ಅವರು ಈ ನಿರ್ಧಾರವನ್ನು ದೃಢಪಡಿಸಿದ್ದಾರೆ. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1,200 ಚದರ ಅಡಿವರೆಗಿನ ಕಟ್ಟಡಗಳಿಗೆ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಅಕ್ಟೋಬರ್ 16ರಿಂದ ಬೆಸ್ಕಾಂನ ಜಿಬಿಎ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ಬಂದಿದೆ” ಎಂದು ಅವರು ತಿಳಿಸಿದ್ದಾರೆ.

“ಅಕ್ಟೋಬರ್ 15ರವರೆಗೆ ಜಿಬಿಎ ವ್ಯಾಪ್ತಿಯಲ್ಲಿ ಅಂದಾಜು 50,000 ಹೊಸ ವಿದ್ಯುತ್ ಸಂಪರ್ಕ ಅರ್ಜಿಗಳು ಬಾಕಿ ಉಳಿದಿವೆ. 30×40 ಚದರ ಅಡಿ ಅಳತೆಯ ವಿಸ್ತೀರ್ಣದ ನಿವೇಶನಗಳಲ್ಲಿ ಕಟ್ಟುವ ಕಟ್ಟಡಗಳ ಮಾಲೀಕರ ಅರ್ಜಿಗಳನ್ನು ಪ್ರತ್ಯೇಕಿಸಿರದಿದ್ದರೂ, ಬಾಕಿ ಇರುವ ಅರ್ಜಿಗಳಲ್ಲಿ ಸುಮಾರು ಶೇ.70ರಷ್ಟು ಗ್ರಾಹಕರು ಸರ್ಕಾರದ ಈ ನೂತನ ನಿರ್ಧಾರದಿಂದ ಪ್ರಯೋಜನ ಪಡೆಯುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

ಹಿನ್ನೆಲೆ ಮತ್ತು ಸಾರ್ವಜನಿಕರ ಸಮಸ್ಯೆ :

ಈ ಹಿಂದೆ, ಏಪ್ರಿಲ್ 4ರಿಂದ ಜಿಬಿಎ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಾರಂಭಿಕ ಪ್ರಮಾಣಪತ್ರ (CC) ಹಾಗೂ ಕಟ್ಟಡ ಪೂರ್ಣಗೊಳಿಸಿದ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (OC) ಇಲ್ಲದೆ ವಿದ್ಯುತ್ ಸಂಪರ್ಕ ನೀಡದಂತೆ ಬೆಸ್ಕಾಂ ಸುತ್ತೋಲೆ ಹೊರಡಿಸಿತ್ತು. ಇದರಿಂದಾಗಿ ಸಣ್ಣ ಕಟ್ಟಡಗಳ ಮಾಲೀಕರಿಗೆ ತೀವ್ರ ತೊಂದರೆಯಾಗಿತ್ತು ಮತ್ತು ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದವು.

ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, 2025ರ ಏಪ್ರಿಲ್ 4ರ ಮುಂಚೆಯೇ ಕಟ್ಟಡ ಕಟ್ಟಿ, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಬೆಸ್ಕಾಂಗೆ ಶುಲ್ಕ ಕಟ್ಟಿ, ಕಾರ್ಯಾದೇಶ ಮತ್ತು ಮೀಟರ್ ಪಡೆದಿದ್ದರೂ ಸಹ ಸುಮಾರು 1,73,000 ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿರಲಿಲ್ಲ. ಹಾಗೆಯೇ, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ಪೂರ್ಣಿಗೊಳಿಸಿ ಶಾಶ್ವತ ಸಂಪರ್ಕಕ್ಕಾಗಿ ಕಾಯುತ್ತಿದ್ದ ಅಂದಾಜು 2 ಲಕ್ಷ ಕಟ್ಟಡ ಮಾಲೀಕರು ಎಲ್ಲಾ ವಿಸ್ತೀರ್ಣದ ನಿವೇಶನಗಳಲ್ಲಿ ಇದ್ದರು. ಬೆಸ್ಕಾಂನ ಹಿಂದಿನ ಸುತ್ತೋಲೆಯ ನಂತರ ಮಂಜೂರಾತಿ ನಕ್ಷೆಯಿದ್ದಲ್ಲಿ ಮಾತ್ರ ತಾತ್ಕಾಲಿಕ ವಿದ್ಯುತ್ ಸರಬರಾಜು ನೀಡಲಾಗುತ್ತಿತ್ತು. ಮತ್ತು ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ, ಸಿಸಿ ಕಡ್ಡಾಯಗೊಳಿಸಿದ್ದರಿಂದ ಅದು ದೊಡ್ಡ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನುಕೂಲವಾಗುತ್ತಿತ್ತು ಎಂದು ಅವರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ಸರ್ಕಾರದ ಈ ಹೊಸ ಆದೇಶವು ಸಣ್ಣ ಮತ್ತು ಮಧ್ಯಮ ವರ್ಗದ ವಸತಿ ಕಟ್ಟಡಗಳ ಮಾಲೀಕರಿಗೆ ಬಹುದೊಡ್ಡ ನಿರಾಳತೆ ತಂದಿದ್ದು, ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದಂತಾಗಿದೆ.

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ಉತ್ತರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಅಹವಾಲಿನ ತ್ವರಿತ ಪರಿಹಾರಕ್ಕಾಗಿ ಅ.24ರಂದು ಆಯುಕ್ತರ ಫೋನ್-ಇನ್ ಕಾರ್ಯಕ್ರಮ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Next Post

ISRO News | 2035ಕ್ಕೆ ಬಾಹ್ಯಾಕಾಶದಲ್ಲಿ ಭಾರತದ ವಿರಾಟ್ ಹೆಜ್ಜೆ: ಸ್ವಂತ ನಿಲ್ದಾಣಕ್ಕೆ ಇಸ್ರೋ ಸಿದ್ಧತೆ

Kurnool bus accident | ಕರ್ನೂಲು ಬಸ್ ದುರಂತ : ಸಜೀವ ದಹನವಾಗುತ್ತಿದ್ದ ಬಸ್‌ ನಲ್ಲಿ ನಿದ್ರೆಯಲ್ಲಿದ್ದ 12 ಪ್ರಯಾಣಿಕರು ಬಲಿ

Please login to join discussion

Like Us on Facebook

Follow Us on Twitter

Recent News

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026

Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group