Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | ಬೆಂಗಳೂರಿನ ತ್ಯಾಜ್ಯ ನೀರಿಗೆ ಜೀವ ತುಂಬುವ ‘ವೃಷಭಾವತಿ ಕಣಿವೆ ಯೋಜನೆ’: ಮೊದಲ ಹಂತ ಶೇ.50ರಷ್ಟು ಪೂರ್ಣ

ಮೊದಲ ಹಂತದ ಯೋಜನಾ ಮೊತ್ತ ​ರೂ. 1,081 ಕೋಟಿ : ಮೂರು ಹಂತಗಳಿಂದ 244 ಕೆರೆಗಳಿಗೆ ನೀರು ಹರಿಸುವ ಗುರಿ; 2026ರ ಜುಲೈಗೆ ಮೊದಲ ಹಂತ ಪೂರ್ಣದ ಗಡುವು

by Bengaluru Wire Desk
October 28, 2025
in BW Special, News Wire
Reading Time: 2 mins read
0

ಬೆಂಗಳೂರು, ಅ.28 www.bengaluruwire.com : ಜಲಸಂರಕ್ಷಣೆ ಮತ್ತು ಅಂತರ್ಜಲ ಅಭಿವೃದ್ಧಿಗೆ ಬೃಹತ್ ಹೆಜ್ಜೆ ಇಟ್ಟಿರುವ ಸಣ್ಣ ನೀರಾವರಿ ಇಲಾಖೆಯ ಮಹತ್ವದ ‘ವೃಷಭಾವತಿ ಕಣಿವೆ ಯೋಜನೆ’ಯು ನಿರೀಕ್ಷಿತ ವೇಗದಲ್ಲಿ ಪ್ರಗತಿ ಕಾಣುತ್ತಿದೆ. ಮೂರು ಹಂತಗಳ ಪೈಕಿ ಮೊದಲ ಹಂತವು ಈತನಕ ಶೇ.50ರಷ್ಟಕ್ಕೂ ಹೆಚ್ಚಿನ ಪ್ರಗತಿ ಕಂಡಿದೆ.

ಬೆಂಗಳೂರು ಜಲಮಂಡಳಿ (BWSSB) ವತಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ದಶಲಕ್ಷ ಲೀ. ನೀರನ್ನು ಅಂದರೆ ಸುಮಾರು 4 ಟಿಎಂಸಿ ನೀರು ಬಳಸಿಕೊಂಡು ಈ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯು ಒಟ್ಟು 3 ಹಂತಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಒಟ್ಟು 244 ಕೆರೆಗಳಿಗೆ ನೀರನ್ನು ಹರಿಸಲು ಉದ್ದೇಶಿಸಿದೆ. ಈ ಯೋಜನೆಯ ಮುಖ್ಯ ಉದ್ದೇಶ ಅಂತರ್ಜಲ ಮಟ್ಟವನ್ನು ಅಭಿವೃದ್ಧಿಪಡಿಸುವುದಾಗಿದೆ.

ಮೊದಲನೇ ಹಂತದ ಯೋಜನೆಯಡಿ ಪಂಪಿಂಗ್ ಸ್ಟೇಷನ್ ಹಾಗೂ ಪೈಪ್ ಲೈನ್ ಹಾದುಹೋಗುವ ನಕ್ಷೆ.

ಮೊದಲ ಹಂತದ ಪ್ರಗತಿ :

ಯೋಜನೆಯ ಮೊದಲನೇ ಹಂತವು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿನ 70 ಕೆರೆಗಳಿಗೆ 2 ಲಿಫ್ಟ್‌ಗಳ ಮೂಲಕ ನೀರನ್ನು ಹರಿಸುವ ಕಾಮಗಾರಿಯನ್ನು ಒಳಗೊಂಡಿದೆ.

 ವೆಚ್ಚ ಮತ್ತು ಗುತ್ತಿಗೆದಾರರು: ಮೊದಲ ಹಂತದ ಯೋಜನೆಯ ಅಂದಾಜು ಮೊತ್ತ ₹1,081.00 ಕೋಟಿ. ಈ ಕಾಮಗಾರಿಯ ಗುತ್ತಿಗೆಯನ್ನು ಶಂಕರನಾರಾಯಣ ಕನ್ಸ್‌ಟ್ರಕ್ಷನ್‌ ಸಂಸ್ಥೆಗೆ ನೀಡಲಾಗಿದೆ.

ನಾಯಂಡಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಪಂಪಿಂಗ್ ಸ್ಟೇಷನ್.

 ಯೋಜನೆಯ ಅವಧಿ: ಒಪ್ಪಂದದ ಪ್ರಕಾರ ಯೋಜನೆಯ ಅವಧಿ 36 ತಿಂಗಳುಗಳು ಮತ್ತು 5 ವರ್ಷಗಳ ನಿರ್ವಹಣೆಯನ್ನು ಒಳಗೊಂಡಿದೆ. ಟೆಂಡರ್ ಕರಾರಿನಂತೆ ಮೊದಲನೇ ಹಂತದ ಯೋಜನೆಯನ್ನು ಜುಲೈ-2026 ರಲ್ಲಿ ಪೂರ್ಣಗೊಳಿಸಬೇಕಾಗಿದೆ.

ಪ್ರಸ್ತುತ ಪ್ರಗತಿ: ಯೋಜನೆಯು ಜುಲೈ 2023 ರಲ್ಲಿ ಪ್ರಾರಂಭವಾಗಿದ್ದು, ಈತನಕ ಶೇ.50 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ. ಒಟ್ಟಾರೆ 103.20 ಕಿ.ಮೀ ಪೈಪ್‌ಲೈನ್ ಉದ್ದದಲ್ಲಿ, 81.3 ಕಿ.ಮೀ ಉದ್ದದ ಪೈಪ್‌ಗಳನ್ನು ಪೂರೈಕೆ ಮಾಡಲಾಗಿದ್ದು, 39.50 ಕಿ.ಮೀ ಉದ್ದದ ಪೈಪ್‌ಲೈನ್ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ.

ವೃಷಭಾವತಿ ಕಣಿವೆ ಯೋಜನೆಯಡಿ ಪೈಪ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವ ದೃಶ್ಯ.

ನಾಯಂಡಹಳ್ಳಿ ಎಸ್‌ಟಿಪಿ ಪಂಪ್‌ಹೌಸ್‌ನ ಕಾಮಗಾರಿ ಪ್ರಗತಿಯಲ್ಲಿದೆ. ಹುರುಳೀಹಳ್ಳಿ ಕೆರೆಯ ಬಳಿ ಪಂಪ್‌ಹೌಸ್ ನಿರ್ಮಾಣಕ್ಕೆ ಭೂಸ್ವಾಧೀನ ಸಮಸ್ಯೆ ಬಗೆಹರಿದಿದೆ. ಅನ್ಯ ಇಲಾಖೆಗಳಿಂದ ಅನುಮತಿ ವಿಳಂಬದಿಂದಾಗಿ ಕಾಮಗಾರಿಗೆ ತೊಡಕಾಗಿದ್ದು, ಪ್ರಸ್ತುತ 89.50 ಕಿ.ಮೀ ಉದ್ದಕ್ಕೆ ಅನುಮತಿ ಪಡೆದು ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ. ಅಧಿಕಾರಿಯೊಬ್ಬರ ಹೇಳಿಕೆಯಂತೆ, ಡೆಡ್‌ಲೈನ್‌ಗಿಂತ ನಾಲ್ಕೈದು ತಿಂಗಳು ಮೊದಲ ಹಂತ ತಡವಾಗುವ ಸಾಧ್ಯತೆಯಿದೆ.

ಸಂಸ್ಕರಿತ ನೀರು ಕೈಗಾರಿಕೆಗಳಿಗೆ : 

ಈ ಯೋಜನೆಯಿಂದ ಸುಮಾರು 15 ಎಂಎಲ್ ಡಿ ನೀರನ್ನು ನೆಲಮಂಗಲ ತಾಲ್ಲೂಕಿನ ಸೋಂಪುರ ಮತ್ತು ದಾಬಾಸ್‌ಪೇಟೆ ಕೈಗಾರಿಕಾ ಪ್ರದೇಶಕ್ಕೆ ಒದಗಿಸಲಾಗುತ್ತಿದ್ದು, ಕೈಗಾರಿಕೆಗಳ ನೀರಿನ ಬೇಡಿಕೆಯನ್ನು ಪೂರೈಸಲು ಸಹಾಯವಾಗಲಿದೆ.

ಅಳವಡಿಸಲಾದ ಆಳೆತ್ತರದ ಪೈಪ್ ಒಳಗೆ ತಾಂತ್ರಿಕ ಪರೀಕ್ಷೆ ನಡೆಸುತ್ತಿರುವ ಚಿತ್ರ.

ಯೋಜನೆಯ ಪ್ರಮುಖ ಅನುಕೂಲಗಳೇನು ? :

 * ವ್ಯರ್ಥವಾಗುತ್ತಿದ್ದ ಸಂಸ್ಕರಿತ ನೀರನ್ನು ಬರಪೀಡಿತ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ಬಳಸಲಾಗುತ್ತಿದೆ.

 * ಅತೀಯಾದ ಅಂತರ್ಜಲ ಬಳಕೆಯಿಂದ ಬರಿದಾಗಿದ್ದ ಭೂಮಿಯಲ್ಲಿ ಅಂತರ್ಜಲ ಮಟ್ಟವು ಮರುಪೂರಣಗೊಳ್ಳಲಿದೆ.

 * ಕೊಳವೆಬಾವಿ ಅವಲಂಬಿತ ಕೃಷಿ ಕ್ಷೇತ್ರ ವೃದ್ಧಿಸಲಿದೆ.

 * ಆಳದಿಂದ ನೀರನ್ನು ಎತ್ತಲು ಬಳಕೆಯಾಗುತ್ತಿದ್ದ ಇಂಧನ (ವಿದ್ಯುತ್) ಉಳಿತಾಯವಾಗಲಿದೆ.

 * ವಾರ್ಷಿಕ ಸುಮಾರು 4.00 TMC ನೀರನ್ನು ಹೊರಸಾಗಿಸುವುದರಿಂದ ಬೆಂಗಳೂರು ನಗರದ ಮಳೆ ನೀರಿನ ಕಾಲುವೆಗಳ ಮೇಲಿನ ಒತ್ತಡ ಕಡಿಮೆಯಾಗಿ ನಗರದ ಪ್ರವಾಹ ನಿಯಂತ್ರಣದಲ್ಲಿ ಸಹಕಾರಿಯಾಗಲಿದೆ.

 * ದೇಶದಲ್ಲಿ ಶುದ್ಧೀಕರಿಸಿದ ನೀರಿನ ಮರುಬಳಕೆ ಮಾಡಿಕೊಳ್ಳುವ ರಾಜ್ಯಗಳ ಪೈಕಿ ಕರ್ನಾಟಕವು ಅಗ್ರಮಾನ್ಯ ರಾಜ್ಯವಾಗಿ ಹೊರಹೊಮ್ಮಲು ಈ ಯೋಜನೆ ಸಹಕಾರಿಯಾಗಲಿದೆ.

ನಾಯಂಡಹಳ್ಳಿ ಪಂಪಿಂಗ್ ಸ್ಟೇಷನ್ ನಿಂದ, ಸಂಸ್ಕರಿತ ನೀರು ಸಾಗಿಸುವ ಕಾಂಕ್ರಿಟ್ ಕಾಲುವೆ ನಿರ್ಮಾಣವಾಗುತ್ತಿರುವ ಚಿತ್ರ.

ನೀರಿನ ಗುಣಮಟ್ಟದ ಮೇಲ್ವಿಚಾರಣೆ :

ಯೋಜನೆಯ ಯಶಸ್ಸಿಗೆ ನೀರಿನ ಗುಣಮಟ್ಟ ಬಹಳ ಮುಖ್ಯವಾಗಿದೆ. ಈ ಸಂಬಂಧ, ಬೆಂಗಳೂರು ಜಲಮಂಡಳಿ (BWSSB) ಯಿಂದ ಸಂಸ್ಕರಣಾ ಘಟಕದಲ್ಲಿನ ನೀರಿನ ಗುಣಮಟ್ಟ ಪರೀಕ್ಷೆಗೆ ಕ್ರಮ ಕೈಗೊಂಡಿದ್ದು, ಸಣ್ಣ ನೀರಾವರಿ ಇಲಾಖೆಯಿಂದಲೂ ಪ್ರತ್ಯೇಕ ಸಂಸ್ಥೆಗೆ ಗುತ್ತಿಗೆ ನೀಡಿ ಪರೀಕ್ಷೆಗಳನ್ನು ನಡೆಸಲು ಕ್ರಮವಹಿಸಲಾಗುತ್ತಿದೆ. ಇದರ ಜೊತೆಗೆ, ಯೋಜನೆಯ ಪ್ರಾರಂಭದ ಮುನ್ನ ಮತ್ತು ಅನುಷ್ಠಾನದ ನಂತರದ ಪರಿಣಾಮದ ಕುರಿತು ಅಧ್ಯಯನ ಕೈಗೊಳ್ಳಲು ಭಾರತೀಯ ವಿಜ್ಞಾನ ಸಂಸ್ಥೆಗೆ (IISc) ಆ ನೀಡಲಾಗಿದೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಈ ಯೋಜನೆಯ ಮೂಲಕ ‘ಓಡುವ ನೀರನ್ನು ನಿಲ್ಲಿಸಿ, ನಿಂತ ನೀರನ್ನು ಇಂಗಿಸಿ’ ಎಂಬ ಧ್ಯೇಯದೊಂದಿಗೆ ಅಂತರ್ಜಲವನ್ನು ಮರುಪೂರಣಗೊಳಿಸಿ, ಗ್ರಾಮೀಣ ಭಾಗ ಮತ್ತು ಕೃಷಿ ಕ್ಷೇತ್ರಕ್ಕೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದಾಗ ಸಚಿವ ಎನ್.ಎಸ್.ಬೋಸರಾಜು, ವೃಷಭಾವತಿ ವ್ಯಾಲಿ ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿರುತ್ತದೆ.

ಮೂರು ಹಂತದ ಯೋಜನೆ ಪೂರ್ಣವಾಗಲು 3 ವರ್ಷ:

“ಮೊದಲ ಹಂತದ ಯೋಜನೆ ಈತನಕ ಶೇ.50 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ. ಎರಡನೇ ಹಂತದ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಎರಡನೇ ಹಂತವನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕ್ರಿಯೆಯ ನಂತರ ಸುಮಾರು ಎರಡೂ ಕಾಲು ವರ್ಷ ಬೇಕಾಗುತ್ತದೆ. ಮೂರನೇ ಹಂತದ ಆರಂಭಕ್ಕೆ ಮುನ್ನ ನಿಧಿಯನ್ನು ಪಡೆದುಕೊಳ್ಳಬೇಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಒಟ್ಟಾರೆ ವೃಷಭಾವತಿ ವ್ಯಾಲಿ ಯೋಜನೆ ಪೂರ್ಣಗೊಳ್ಳಲು ಮೂರು ವರ್ಷಗಳಾಗಬಹುದು. ಎರಡನೇ ಮತ್ತು ಮೂರನೇ ಹಂತದ ಡಿಪಿಆರ್ ತಯಾರಿಕಾ ಕಾರ್ಯವು ಪ್ರಗತಿಯಲ್ಲಿದೆ.”

– ಎನ್.ಎಸ್.ಬೋಸರಾಜು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ

View this post on Instagram

A post shared by Bengaluru Wire (@bengaluruwirenews)

WhatsApp Join our WhatsApp Channel
Previous Post

ರಾಷ್ಟ್ರೋತ್ಥಾನ ಸಾಹಿತ್ಯದಿಂದ ನ. 1 ರಿಂದ ಡಿ. 7 ರವರೆಗೆ ಸಾಹಿತ್ಯ-ಸಂಸ್ಕೃತಿ ಉತ್ಸವ

Next Post

Wildlife News | ಸಮಸ್ಯೆ ಸೃಷ್ಟಿಸಿದ್ದ ಹುಲಿ ಸೆರೆ : ಆರೋಗ್ಯ ತಪಾಸಣೆಗಾಗಿ ಕೂರ್ಗಳ್ಳಿ ರಕ್ಷಣಾ ಕೇಂದ್ರಕ್ಕೆ ರವಾನೆ

Next Post

Wildlife News | ಸಮಸ್ಯೆ ಸೃಷ್ಟಿಸಿದ್ದ ಹುಲಿ ಸೆರೆ : ಆರೋಗ್ಯ ತಪಾಸಣೆಗಾಗಿ ಕೂರ್ಗಳ್ಳಿ ರಕ್ಷಣಾ ಕೇಂದ್ರಕ್ಕೆ ರವಾನೆ

Crime News | ಜೆ.ಪಿ. ನಗರ: ಮನೆಗೆಲಸದಾಕೆ ಕಳವು ಮಾಡಿದ್ದ ₹51.40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ವಶ : ಆರೋಪಿ ಬಂಧನ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group