Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಚಿತ್ರದುರ್ಗದಲ್ಲಿ ಭೀಕರ ರಸ್ತೆ ದುರಂತ: ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸೀಬರ್ಡ್ ಬಸ್; 10ಕ್ಕೂ ಹೆಚ್ಚು ಮಂದಿ ಸಜೀವ ದಹನ?

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ: ನಿದ್ದೆಯಲ್ಲೇ ಕಮರಿದ ಬದುಕು | ಕೂದಲೆಳೆ ಅಂತರದಲ್ಲಿ ಪಾರಾದ ಶಾಲಾ ಮಕ್ಕಳ ಬಸ್: 42 ವಿದ್ಯಾರ್ಥಿಗಳು ಸುರಕ್ಷಿತ

by Bengaluru Wire Desk
December 25, 2025
in News Wire, Public interest
Reading Time: 1 min read
0

ಹಿರಿಯೂರು (ಚಿತ್ರದುರ್ಗ), ಡಿ.25 www.bengaluruwire.com : ಕ್ರಿಸ್‌ಮಸ್ ರಜೆಯ ಮಜಾ ಕಳೆಯಲು ಊರುಗಳಿಗೆ ಮತ್ತು ಪ್ರವಾಸಕ್ಕೆ ತೆರಳುತ್ತಿದ್ದವರ ಪಾಲಿಗೆ ಗುರುವಾರ (ಡಿ.25) ಕರಾಳ ದಿನವಾಗಿ ಪರಿಣಮಿಸಿದೆ. 

ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಇದೇ ವೇಳೆ ದೈವದತ್ತ ಎಂಬಂತೆ ಪಕ್ಕದಲ್ಲೇ ಸಾಗುತ್ತಿದ್ದ ಶಾಲಾ ಬಸ್‌ ಒಂದರಲ್ಲಿದ್ದ 42 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ:

ಬೆಂಗಳೂರಿನಿಂದ ಗೋಕರ್ಣದ ಕಡೆಗೆ (ಕೆಲವು ಮೂಲಗಳ ಪ್ರಕಾರ ಶಿವಮೊಗ್ಗ) ತೆರಳುತ್ತಿದ್ದ ‘ಸೀಬರ್ಡ್’ (Sea Bird) ಖಾಸಗಿ ಬಸ್, ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮುಂಜಾನೆ 2:00 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ.

ಅತಿವೇಗವಾಗಿ ಬಂದ ಬಸ್, ರಸ್ತೆಯಲ್ಲಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ಅಗ್ನಿಗಾಹುತಿಯಾಗಿದೆ.

ಬಸ್‌ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಗಾಢ ನಿದ್ದೆಯಲ್ಲಿದ್ದ ಪ್ರಯಾಣಿಕರಿಗೆ ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಕೆಲವರು ಕಿಟಕಿ ಒಡೆದು ಹೊರಬಂದಿದ್ದರೆ, ದುರದೃಷ್ಟವಶಾತ್ ಬಸ್‌ನೊಳಗೆ ಸಿಲುಕಿದ 10ಕ್ಕೂ ಹೆಚ್ಚು ಮಂದಿ ಗುರುತು ಸಿಗದಂತೆ ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ.

ಆಸ್ಪತ್ರೆಗೆ ಸೇರಿದವರ ಮತ್ತು ನಾಪತ್ತೆಯಾದವರ ವಿವರ:

ಘಟನೆಯಲ್ಲಿ ಗಾಯಗೊಂಡವರನ್ನು ಹಿರಿಯೂರು, ಶಿರಾ, ತುಮಕೂರು ಮತ್ತು ಚಿತ್ರದುರ್ಗದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ, 7 ಪ್ರಯಾಣಿಕರು ಸಂಪರ್ಕಕ್ಕೆ ಸಿಗುತ್ತಿಲ್ಲ ಅಥವಾ ಮೃತಪಟ್ಟಿರುವ ಶಂಕೆ ಇದೆ ಎನ್ನಲಾಗಿದೆ.

 * ಸಂಪರ್ಕಕ್ಕೆ ಸಿಗದೇ ಇರುವವರು (ಶಂಕಿತ ಮೃತರು): ಬಿಂದು ವಿ, ಮಾನಸ, ಶಶಿಕಾಂತ್, ನವ್ಯ, ಮಸ್ರತುನ್ನಿಸಾ, ಸೈಯದ್ ಜಮೀರ್, ರಶ್ಮಿ ಮಹಲೆ.

 * ಗಾಯಾಳುಗಳು: ವಿಜಯ್ ಭಂಡಾರಿ, ಆದಿತ್ಯ ಎನ್, ಪ್ರತೀಶ್ವರನ್, ಮೇಘರಾಜ್, ಅಭಿಷೇಕ್, ಸೂರಜ್, ಮಹಮದ್ ರಫಿ (ಚಾಲಕ), ಮಹಮದ್ ಸಾಧಿಕ್ (ನಿರ್ವಾಹಕ), ಶಶಾಂಕ್, ಮಿಲನ, ಕವಿತಾ, ಸಂಧ್ಯಾ, ಕೀರ್ತನ್ ಎಂ, ಕಿರಣ್ ಪಾಲ್, ದಿಲೀಪ್, ಮಂಜುನಾಥ್, ಅನಿರುದ್ಧ್, ಅಮೃತ, ಈಶ, ದೇವಿಕಾ, ನಂದಿತಾ, ಗಗನಶ್ರೀ, ರಕ್ಷಿತಾ ಆರ್, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ.

ಪವಾಡದಂತೆ ಪಾರಾದ ಶಾಲಾ ಮಕ್ಕಳು:

ಈ ದುರಂತದ ನಡುವೆಯೂ ಸಮಾಧಾನಕರ ಸಂಗತಿಯೆಂದರೆ, 42 ಶಾಲಾ ಮಕ್ಕಳಿದ್ದ ಬಸ್ ಪವಾಡದಂತೆ ಪಾರಾಗಿದೆ. ಬೆಂಗಳೂರಿನ ಟಿ. ದಾಸರಹಳ್ಳಿಯಿಂದ ದಾಂಡೇಲಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಬಸ್, ಅಪಘಾತಕ್ಕೀಡಾದ ಬಸ್‌ನ ಪಕ್ಕದಲ್ಲೇ ಸಮಾನಾಂತರವಾಗಿ ಚಲಿಸುತ್ತಿತ್ತು. ಬೆಂಕಿ ಹೊತ್ತಿಕೊಂಡ ಬಸ್ ಶಾಲಾ ವಾಹನಕ್ಕೆ ತಗುಲಿದರೂ, ಚಾಲಕನ ಸಮಯಪ್ರಜ್ಞೆಯಿಂದ ಬಸ್ ಹೆದ್ದಾರಿ ತಡೆಗೋಡೆ ದಾಟಿ ಪಕ್ಕದ ಚರಂಡಿ ಬಳಿ ನಿಂತಿದೆ. ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಿ ಬೇರೆ ಬಸ್‌ನಲ್ಲಿ ಕಳುಹಿಸಿಕೊಡಲಾಗಿದೆ.

4 ಕಿ.ಮೀ ಟ್ರಾಫಿಕ್ ಜಾಮ್:

ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸುಮಾರು 4 ಕಿಲೋಮೀಟರ್‌ಗಳಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ, ಗಾಯಾಳುಗಳನ್ನು ರಕ್ಷಿಸಲು ಬಂದ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಲು ಹರಸಾಹಸ ಪಡಬೇಕಾಯಿತು. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿ ಪರಿಹಾರ ಕಾರ್ಯಾಚರಣೆ ನಡೆಸಿದರು.

ಕಂಬನಿ ಮಿಡಿದ ಗಣ್ಯರು:

ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಚಿತ್ರದುರ್ಗ ಬಳಿ ಸಂಭವಿಸಿದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಹೀಗೆ ಅಂತ್ಯಗೊಂಡಿರುವುದು ವಿಷಾದನೀಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ,” ಎಂದು ಟ್ವೀಟ್ (X) ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೂ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಪರಿಹಾರ ಕಾರ್ಯಾಚರಣೆಗೆ ಸೂಚಿಸಿದ್ದಾರೆ. (ಚಿತ್ರಕೃಪೆ : X) ಅಪಘಾತದ ವಿಡಿಯೋಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

https://www.instagram.com/reel/DSrHl9JD2mU/?igsh=MXJyYnV6c2V2OXgyNA==

WhatsApp Join our WhatsApp Channel
Previous Post

ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ: ಡಿ.31 ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರದಾನ; 55 ಸಾಧಕರಿಗೆ ಗೌರವ : ಇಲ್ಲಿದೆ ಪಟ್ಟಿ

Next Post

Ayurveda World Summit | ಆಯುರ್ವೇದ, ಯೋಗ ಇಂದಿನ ಒತ್ತಡದ ಬದುಕಿಗೆ ಸಂಜೀವಿನಿ: ಸಚಿವ ದಿನೇಶ್ ಗುಂಡೂರಾವ್

Next Post

Ayurveda World Summit | ಆಯುರ್ವೇದ, ಯೋಗ ಇಂದಿನ ಒತ್ತಡದ ಬದುಕಿಗೆ ಸಂಜೀವಿನಿ: ಸಚಿವ ದಿನೇಶ್ ಗುಂಡೂರಾವ್

16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸುವ ಕುರಿತ ಪ್ರಾತಿನಿಧಿಕ ಚಿತ್ರ.

16 ವರ್ಷದೊಳಗಿನ ಮಕ್ಕಳಿಗೆ 'ಸೋಷಿಯಲ್ ಮೀಡಿಯಾ ಬ್ಯಾನ್': ಆಸ್ಟ್ರೇಲಿಯಾ ಮಾದರಿ ಕಾನೂನು ಜಾರಿಗೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group