Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

BW ಸಂಪಾದಕೀಯ | Bengaluru Wire 5th Anniversary| ಐದು ವರ್ಷಗಳ ಸಾರ್ಥಕ ಪಯಣ; ಸುದ್ದಿಯು ಜಿದ್ದಾಜಿದ್ದಿಗಲ್ಲ, ಸತ್ಯದ ಶೋಧಕ್ಕೆ ನಮ್ಮ ಆದ್ಯತೆ

6ನೇ ವರ್ಷಕ್ಕೆ ಪಾದಾರ್ಪಣೆ: ಗುಣಮಟ್ಟ, ನಿಖರತೆ ಮತ್ತು ಜನಪರ ಕಾಳಜಿಯೇ ನಮ್ಮ ಬದ್ಧತೆ

by Bengaluru Wire Desk
April 1, 2026
in News Wire, Public interest
Reading Time: 1 min read
0

ಕಾಲದ ಓಟದಲ್ಲಿ ಐದು ವರ್ಷಗಳು ಕೇವಲ ಒಂದು ಸಣ್ಣ ಅವಧಿಯಂತೆ ಕಾಣಬಹುದು. ಆದರೆ 60 ತಿಂಗಳು, 260 ವಾರಗಳು ಹಾಗೂ 1825 ದಿನಗಳನ್ನು ಹೊಂದಿರುವ ಈ ಮೌಲ್ಯಯುತ ಸಮಯ ನಿಜಕ್ಕೂ ನಮಗೆ High Five ಅಂದರೆ ತಪ್ಪಾಗಲಾರದು.

ಯಾವುದೇ ರಾಜಿ ಇಲ್ಲದಂತೆ ಸದಾನೈತಿಕ ಮೌಲ್ಯಗಳನ್ನು ಎತ್ತಿಹಿಡಿದು, ಜನಪರ ಕಾಳಜಿಯೊಂದಿಗೆ ಮಾಧ್ಯಮ ಕ್ಷೇತ್ರವನ್ನು ಪ್ರವೇಶಿಸಿದ ‘ಬೆಂಗಳೂರು ವೈರ್’ಗೆ (Bengaluru Wire) ಈ ಐದು ವರ್ಷಗಳು ಅತ್ಯಂತ ಸಾರ್ಥಕ ಮತ್ತು ಹೆಮ್ಮೆಯ ಪಯಣ. 2021ರ ಜನವರಿಯಲ್ಲಿ ಮೊಳಕೆಯೊಡೆದ ನಮ್ಮ ಈ ಕನಸು, ಇಂದು ಮರವಾಗಿ ಮುಂದೆ ಹೆಮ್ಮರವಾಗಿ ಬೆಳೆಯುವ ಆಶೋತ್ತರದಿಂದ 6ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ (ಜನವರಿ 14, 2026).

ಇಂದಿನ ಡಿಜಿಟಲ್ ಮಾಧ್ಯಮ ರಂಗದಲ್ಲಿ ‘ಬ್ರೇಕಿಂಗ್ ನ್ಯೂಸ್’ಗಳ ಭಾರೀ ಭರಾಟೆ ಮತ್ತು ಕ್ಷಣಕ್ಷಣದ ಸುದ್ದಿಗಳ ಪೈಪೋಟಿ ಜೋರಾಗಿದೆ. ಆದರೆ, ಆರಂಭದ ದಿನದಿಂದಲೂ ‘ಬೆಂಗಳೂರು ವೈರ್’ ಈ ರೀತಿ ಸುದ್ದಿಗಳ ರೇಸ್ ಗೆ ಇಳಿಯಲಿಲ್ಲ. ಇತರದೊಂದಿಗೆ ನಾವು ಸ್ಪರ್ಧೆಗಿಳಿದು ಸಿಕ್ಕಿದ್ದನ್ನೆಲ್ಲ ಸುದ್ದಿ ಮಾಡುವ ಕೆಲಸ ಮಾಡಲಿಲ್ಲ; ಬದಲಿಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ, ಆಳುವ ಸರ್ಕಾರಗಳನ್ನು ಎಚ್ಚರಿಸುವ ಮತ್ತು ಬೆಂಗಳೂರು ನಗರದ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಸುದ್ದಿಗಳಿಗೆ ಮಾತ್ರ ನಮ್ಮ ಡಿಜಿಟಲ್ ವೇದಿಕೆಯನ್ನು ಮೀಸಲಿಟ್ಟಿದ್ದೇವೆ.

ನಮ್ಮ ಬದ್ಧತೆ: ಗುಣಮಟ್ಟ ಮತ್ತು ವಿಶ್ವಾಸಾರ್ಹತೆ:

ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರಕ್ಕೆ ಉದ್ಯಾನ ನಗರಿ ಎನ್ನುವ ಹೆಸರು ಇನ್ನೂ ಉಳಿದಿದೆ. ಈ ಹೆಸರಿನ ಜೊತೆಗೆ ದೇಶದ  ಜ್ಞಾನ ನಗರಿ(Knowledge Capital), ಸಿಲಿಕಾನ್ ಕಣಿವೆ, ಆರೋಗ್ಯ ನಗರಿ ಇತ್ಯಾದಿ ಅಭಿದಾನಗಳೂ ಸೇರ್ಪಡೆಯಾಗಿವೆ. ನಮ್ಮದು ಇಂತಹ ಬೆಂಗಳೂರು ಮಹಾನಗರದ ಸುದ್ದಿಗಳನ್ನೇ  ಕೇಂದ್ರವಾಗಿರಿಸಿಕೊಂಡಿರುವ ನ್ಯೂಸ್ ಪೋರ್ಟಲ್. 

ಹೀಗಿದ್ದರೂ ಕೂಡ, ನಮ್ಮ ದೃಷ್ಟಿ ಸಮಗ್ರವಾಗಿದ್ದು ಇಡೀ ಕನ್ನಡ ನಾಡಿನ ನೆಲ-ಜಲ, ಭಾಷೆ ಮತ್ತು ಸ್ವಾಭಿಮಾನದ ಪರವಾಗಿದೆ. ಸುದ್ದಿಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಲ್ಲ, ಬದಲಾಗಿ ನಾವು ನೀಡುವ ಪ್ರತಿಯೊಂದು ವರದಿಯೂ ನೈಜತೆ (Fact), ನಿಖರತೆ (Accuracy) ಮತ್ತು ಗುಣಮಟ್ಟದಿಂದ (Quality) ಕೂಡಿರಬೇಕು ಎಂಬುದೇ ನಮ್ಮ ಸಿದ್ಧಾಂತ.

ವನ್ಯಜೀವಿ ಸಂರಕ್ಷಣೆ, ಪರಿಸರ ಕಾಳಜಿ, ವಿಜ್ಞಾನ-ತಂತ್ರಜ್ಞಾನದ ವಿಸ್ಮಯಗಳು, ಇಂಧನ, ಮಹಾನಗರ ಸಾರಿಗೆ ಸಂಪರ್ಕ ವ್ಯವಸ್ಥೆ, ಕಾನೂನು-ಸುವ್ಯವಸ್ಥೆ ಮತ್ತು ಹಣಕಾಸಿನಂತಹ ಗಂಭೀರ ವಿಷಯಗಳ ಮೇಲೆ ನಾವು ಬೆಳಕು ಚೆಲ್ಲುತ್ತಾ ಬಂದಿದ್ದೇವೆ. ಒಳಗೆ ಯಾವುದೇ ಹೂರಣವಿಲ್ಲದಿದ್ದರೂ ಕೇವಲ ಚಿತ್ರ-ವಿಚಿತ್ರ ಶೀರ್ಷಿಕೆ ಮೂಲಕವೇ ಓದುಗರನ್ನು ಸೆಳೆಯುವ ಆ ರೀತಿಯ ಕಸುಬಿನಿಂದ ನಾವು ತುಂಬಾ ದೂರ. ವಿಶೇಷ ವರದಿ,  ತನಿಖಾ ವರದಿಗಳು, ಆಳವಾದ ವಿಶ್ಲೇಷಣೆಗಳು, ನಗರದ ನಾಗರಿಕರಾಗಿ ತಿಳಿಯಲೇಬೇಕಾದ ಮಹತ್ವದ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಇದರ ಜೊತೆಗೆ ಕುಂಭ ಮೇಳದಂತಹ ಜಗತ್ತಿನ ಅತಿ ದೊಡ್ಡ ಉತ್ಸವಗಳನ್ನು ನೇರವಾಗಿ ಕಂಡು, ತಿಳಿದು ಅಲ್ಲಿಂದಲೇ ಪ್ರತ್ಯಕ್ಷ ವರದಿ ಮಾಡಿದ ಹೆಗ್ಗಳಿಕೆ ನಮ್ಮದು. 

ಒಟ್ಟಾರೆಯಾಗಿ ಬೆಂಗಳೂರು ಮಹಾನಗರದ ನಾಗರಿಕರ ಹಿತ ಕಾಯುವ ಕಾವಲುಗಾರನ ರೂಪದಲ್ಲಿ ಸದಾ ಶ್ರಮಿಸುತ್ತಿರುವ ನಮ್ಮ ಪ್ರಯತ್ನಕ್ಕೆ ಎಲ್ಲ ಕನ್ನಡಿಗರು ತೋರುತ್ತಿರುವ ಪ್ರೀತಿ ಮತ್ತು ವಿಶ್ವಾಸವೇ ಶ್ರೀರಕ್ಷೆ.

ನಮ್ಮ ಮುಂದಿನ ಹೆಜ್ಜೆ…

“ಸ್ವತಂತ್ರ ಮತ್ತು ವಾಸ್ತವ ಸುದ್ದಿ” ಎಂಬ ನಮ್ಮ ಮೂಲ ಮಂತ್ರಕ್ಕೆ ನಾವು ಸದಾ ಬದ್ಧ. ಮುಂದಿನ ದಿನಗಳಲ್ಲಿಯೂ ಬೆಂಗಳೂರು ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ, ಜನಸಾಮಾನ್ಯರ ಧ್ವನಿಯಾಗಿ, ಸರ್ಕಾರದ ಓರೆ, ಕೋರೆಗಳಿಗೆ ಹಿಡಿದ ಕನ್ನಡಿಯಾಗಿ ನಮ್ಮ ಜವಾಬ್ದಾರಿಯುತ ಪತ್ರಿಕೋದ್ಯಮ ಮುಂದುವರಿಯಲಿದೆ.

ನಮ್ಮ ಈ ಐದು ವರ್ಷಗಳ ಯಶಸ್ವೀ ಪಯಣದಲ್ಲಿ ಜೊತೆಯಾದ ಎಲ್ಲ ಓದುಗರಿಗೆ, ಹಿತೈಷಿಗಳಿಗೆ, ಸರ್ಕಾರ ಹಾಗೂ ಅದರ ಎಲ್ಲಾ ಅಂಗ ಸಂಸ್ಥೆಗಳಿಗೆ ಮತ್ತು ಜಾಹೀರಾತುದಾರರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು.

  • ಶ್ಯಾಮ್ ಹೆಬ್ಬಾರ್.ಎಸ್, ಸಂಪಾದಕರು,

www.bengaluruwire.com

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್/ಚಾನಲ್ ಉಚಿತವಾಗಿ Subscribe ಆಗಲು Dailyhunt, Facebook, Instagram, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಬೆಂಗಳೂರಿಗೆ ಬಂದಿಳಿದ ಜರ್ಮನಿ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ನೇತೃತ್ವದ ನಿಯೋಗ

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

Next Post

BENGALURU WIRE 5th Anniversary | BW Best Special Stories | ‘ಬೆಂಗಳೂರು ವೈರ್’ ನಲ್ಲಿ ಪ್ರಕಟವಾದ 5ನೇ ವರ್ಷದ ಬೆಸ್ಟ್ SPECIAL REPORTS : ಇಲ್ಲಿದೆ ಅವುಗಳ ಪಟ್ಟಿ ಹಾಗೂ ಲಿಂಕ್ಸ್

BENGALURU WIRE 5th Anniversary | BW News Exclusives | ಐದು ವಸಂತ ಪೂರೈಸಿದ "ಬೆಂಗಳೂರು ವೈರ್" ವರದಿ ನಾಡಿನಲ್ಲಿ ಮೂಡಿಸಿದ ಪರಿಣಾಮಗಳೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group