Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

ಅಭಿವೃದ್ಧಿಯಿಲ್ಲದೆ ಸೊರಗುತ್ತಿದೆ ಬೆಂಗಳೂರು | ಬಜೆಟ್ ಅನುಷ್ಠಾನ ವೈಫಲ್ಯಕ್ಕೆ ಕೋವಿಡ್ ಸೋಂಕಿನ ದೂಷಣೆ

by Bengaluru Wire Desk
February 16, 2021
in Bengaluru Focus, BW Special
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು : ಬೃಹತ್ ಬೆಂಗಳೂರಿನ 2020-21ನೇ ಸಾಲಿನ ಬಜೆಟ್ ಅನುಷ್ಠಾನ ಶೇ.20ರಷ್ಟು ಆಗಿಲ್ಲ. ಇದಕ್ಕೆ ಪಾಲಿಕೆ ಅಧಿಕಾರಿಗಳು ಕೊಡ್ತಿರೋ ರೆಡಿಮೇಡ್ ಉತ್ತರ ಅಂದರೆ ಅದು ಕೋವಿಡ್ ಸೋಂಕು.

2020-21ನೇ ಸಾಲಿನ 10,899 ಕೋಟಿ ರೂಪಾಯಿ ಮೊತ್ತದ ಬಜೆಟ್ ಅನ್ನು ಹಿಂದಿನ ಮೇಯರ್ ಗೌತಮ್ ಕುಮಾರ್ 2020 ಏಪ್ರಿಲ್ 24 ರಂದು ಮಂಡಿಸಿದ್ದರು. ಆದರೆ ಅದಾದ ಎರಡೇ ದಿನಕ್ಕೆ ಬಜೆಟ್ ಗಾತ್ರ ಏಕಾಏಕಿ 10,716 ಕೋಟಿ ರೂಪಾಯಿ ಮೊತ್ತಕ್ಕೆ ಕುಸಿಯಿತು. ಅದಾದ ಬಳಿಕ ದೇಶವ್ಯಾಪಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೇರಿದ ನಿರಂತರ ಲಾಕ್ ಡೌನ್, ಕೋವಿಡ್ ನಿಯಂತ್ರಣದ ನಿಯಮಾವಳಿಗಳಿಂದ ಪಾಲಿಕೆ ಆರ್ಥಿಕ ಸಂಪನ್ಮೂಲ ಒಂದು ಕಡೆ ಕುಸಿಯಿತು. ಮತ್ತೊಂದು ಕಡೆ ಪಾಲಿಕೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ ಶೇಕಡ 20ರಷ್ಟು ಅಂಶಗಳೂ ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನು ಕೇವಲ ಒಂದೂವರೆ ತಿಂಗಳಿಗಿಂತ ಕಡಿಮೆ ಅವಧಿಯಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ.

 ಪ್ರತಿ ಬಾರಿ ಆಡಳಿತ ನಡೆಸುವ ಪಕ್ಷಗಳು ಬಜೆಟ್ ಮಂಡಿಸುವಾಗಲೂ ನಾವು ವಾಸ್ತವಿಕ ಬಜೆಟ್ ಮಂಡಿಸುತ್ತೇವೆ ಅಂತಾನೆ ಹೇಳುತ್ತಾರೆ. ಆದರೆ ಪಾಲಿಕೆಯ ಆರ್ಥಿಕ ಸಂಪನ್ಮೂಲಕ್ಕಿಂತ ಹೆಚ್ಚಿನ ಬಜೆಟ್ ಮಂಡಿಸಿ ಸಂಪೂರ್ಣವಾಗಿ ಆಯವ್ಯಯ ಮಂಡನೆಯಾದ ಉದಾಹರಣೆಯೇ ಇಲ್ಲ.

ಬಜೆಟ್ ನಲ್ಲಿ ಹೇಳಿದ್ದೊಂದು ಆಗಿದ್ದೊಂದು :

ನಗರದಲ್ಲಿರುವ 19 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ ಲಕ್ಷಾಂತರ ಆಸ್ತಿಗಳು ಬಿ-ಖಾತಾ ಇರುವಂತದ್ದೇ. ಅವುಗಳನ್ನು ಸರ್ಕಾರದ ಅನುಮೋದನೆ ಪಡೆದು ಎ-ಖಾತೆಗಳಾಗಿ ಪರಿವರ್ತನೆ ಮಾಡೋದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಕಾರ್ಯರೂಪಕ್ಕೆ ಬರಲಿಲ್ಲ. ಆದರೆ ಪಾಲಿಕೆ ಕಂದಾಯ ಅಧಿಕಾರಿಗಳು ಅದರಲ್ಲೂ ಹೊಸ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳು ಲಂಚದ ಹಣ ಪಡೆದು ದುಡ್ಡಿನ ಆಸೆಗೆ ಅನಧಿಕೃತವಾಗಿ ಬಿ- ಖಾತಾ ಆಸ್ತಿಗಳಿಗೆ ಎ- ಖಾತಾ ಮಾಡಿಕೊಡುತ್ತಿದ್ದಾರೆ ಎಂಬ ಸಾಕಷ್ಟು ಆರೋಪಗಳು ಕೇಳಿಬಂದಿದೆ. ಬಾಕಿ ಸುಧಾರಣಾ ಶುಲ್ಕ ಅಂದಾಜು 300 ಕೋಟಿ ರೂಪಾಯಿ ವಸೂಲು ಮಾಡುವುದಾಗಿ ತಿಳಿಸಲಾಗಿತ್ತು. ಆ ಕಡೆಯೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಲಿಲ್ಲ. ಮೂಲಭೂತ ಸೌಕರ್ಯ, ರಸ್ತೆ ನಿರ್ವಹಣೆ, ಕೆರೆ ಅಭಿವೃದ್ಧಿ, ಉದ್ಯಾನವನ ಅಭಿವೃದ್ಧಿ ಕಾರ್ಯಕ್ರಮಗಳು ಸೂಕ್ತ ರೀತಿ ಜಾರಿಯಾಗಿಲ್ಲ.

ನೆಲಕಚ್ಚಿದ ಕಲ್ಯಾಣ ಕಾರ್ಯಕ್ರಮಗಳು :

ಪಾಲಿಕೆ ವ್ಯಾಪ್ತಿಯಲ್ಲಿರುವ 198 ವಾರ್ಡ್ ಗಳಲ್ಲಿ ಶೇ.24.10 ಅನುದಾನದ ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ಕಲ್ಯಾಣ ಇಲಾಖೆಯಲ್ಲಿ 1,025 ಕೋಟಿ ರೂಪಾಯಿ ವೆಚ್ಚ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ವಾಸ್ತವವಾಗಿ ಶೇಕಡ 20ರಷ್ಟು ಹಣವನ್ನು ಕರ್ಚುಮಾಡಿಲ್ಲ. ವಾರ್ಡ್ ನಲ್ಲಿ ಅಂಗವಿಕಲರಿಗೆ ಸೈಕಲ್ ವಿತರಣೆ, ಬಡ ಮಹಿಳೆಯರಿಗೆ ಟೈಲರಿಂಗ್ ಮಿಷಿನ್ ವಿತರಣೆ, ಒಂಟಿಮನೆ ಹೀಗೆ ಕಲ್ಯಾಣ ಕಾರ್ಯಕ್ರಮಗಳು ಯಾವುದೂ ಅನುಷ್ಠಾನವಾಗಿಲ್ಲ. ವಾರ್ಡ್ ಪ್ರಾಗ್ರಾಮ್ ಆಫ್ ವರ್ಕ್ಸ ಕೆಲಸಗಳು ಕೇವಲ ಬುಕ್ ನಲ್ಲೇ ಉಳಿದಿದೆ.

ಮೇಯರ್ ವೈದ್ಯಕೀಯ ಪರಿಹಾರ ನಿಧಿ ಅರ್ಜಿಗಳಿಗೆ ತ್ರಿಶಂಕು ಸ್ಥಿತಿ :

2020-21ರ ಬಜೆಟ್ ಮಂಡಿಸಿದ ಹಿಂದಿನ ಮೇಯರ್ ಗೌತಮ್ ಕುಮಾರ್ ಹಾಗೂ ಆಗಿದ್ದ ಕಮಿಷನರ್ ಸುನಿಲ್ ಕುಮಾರ್ ನಡುವಿನ ಶೀಥಲ ಸಮರದಿಂದಾಗಿ ಮೇಯರ್ ನಿಧಿಯಿಂದ ವೈದ್ಯಕೀಯ ಪರಿಹಾರ ನೀಡುವ ಕಡತಗಳು ವಿಲೇವಾರಿಯಾಗಲಿಲ್ಲ. ಆನಂತರ ಮೇಯರ್ ಅವಧಿ ಹಾಗೂ ಕಾರ್ಪೊರೇಟರ್ ಗಳ ಅವಧಿ ಪೂರ್ಣಗೊಂಡ ಬಳಿಕ ಕ್ಯಾನ್ಸರ್, ಕಿಡ್ನಿ ಕಾಯಿಲೆ ಯಂತಹ ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುವವರ ಚಿಕಿತ್ಸೆಗಾಗಿ ಸಲ್ಲಿಸಿದ್ದ 3 ರಿಂದ 4 ಕೋಟಿ ರೂಪಾಯಿ ಮೊತ್ತದ ಸಾವಿರಾರು ಅರ್ಜಿಗಳು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುವ ಹಂತಕ್ಕೆ ಬಂದಿತ್ತು. ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ಪಾಲಿಕೆ ಆಯುಕ್ತರು ಹಣ ಬಿಡುಗಡೆಗೆ ತಡೆ ನೀಡಿದ್ದರು. ಹೀಗಾಗಿ ಆ ಹಣವೂ ಅನಾರೋಗ್ಯ ಪೀಡಿತರಿಗೆ ಬಿಡುಗಡೆಯಾಗಿಲ್ಲ.

ಬಜೆಟ್ ಅನುಷ್ಠಾನಕ್ಕೆ ನಿರ್ಲಕ್ಷ್ಯ :

ಈ ಬಗ್ಗೆ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಪದ್ಮಾವತಿ, ಬಿಬಿಎಂಪಿಯಲ್ಲಿ ಸಾಮಾನ್ಯವಾಗಿ ಪ್ರತಿವರ್ಷ ಶೇಕಡ 40 ರಿಂದ 45ರಷ್ಟು ಬಜೆಟ್ ಅನುಷ್ಠಾನಕ್ಕೆ ಬರುತ್ತಿತ್ತು. 2020ರಲ್ಲಿ ಕೋವಿಡ್ ಸೋಂಕು ಕಂಡುಬಂದ ಕಾರಣ ಹಾಗೂ ಜನಪ್ರತಿನಿಧಿಗಳ ಆಡಳಿತ ಮುಗಿದ ಹಿನ್ನಲೆಯಲ್ಲಿ ಅಧಿಕಾರಿಗಳು ಬಜೆಟ್ ಅನುಷ್ಠಾನಕ್ಕೆ ಹೆಚ್ಚು ಗಮನ ನೀಡಿಲ್ಲ.

ಹಾಗಾಗಿ ಪಾಲಿಕೆಯಲ್ಲಿ ಈ ಬಾರಿ ಶೇ.15ರಿಂದ 20ರಷ್ಟು ಆಯವ್ಯಯದ ಕಾರ್ಯಕ್ರಮಗಳು ಜಾರಿಗೆ ಬಂದಿಲ್ಲ. ಈಗ ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆ-2020 ಅನುಷ್ಠಾನಕ್ಕೆ ತಂದು ಕೌನ್ಸಿಲರ್ ಗಳ ಅಧಿಕಾರವನ್ನು ಕಿತ್ತುಕೊಂಡಿದೆ. ಪಾಲಿಕೆ ಚುನಾವಣೆ ನಡೆಸಲು ಬೆಂಗಳೂರು ಶಾಸಕರ ಒತ್ತಡದ ಕಾರಣ ರಾಜ್ಯ ಸರ್ಕಾರ ಒಂದಲ್ಲಾ ಒಂದು ಕುಂಟುನೆಪ ಹೇಳುತ್ತಿದೆ. ಹೀಗಾದ್ರೆ ಬೆಂಗಳೂರಿನ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯೋದಾದ್ರು ಹೇಗೆ? ಎಂದು ಮಾಜಿ ಮೇಯರ್ ಪದ್ಮಾವತಿ ಬೇಸರ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರಿಗೆ ಮೊದಲು ಕಾಮಗಾರಿ ಪೂರ್ಣಗೊಳಿಸಿದ ಒಂದೂವರೆ ವರ್ಷದ ಒಳಗೆ ಪಾಲಿಕೆಯಿಂದ ಹಣ ಪಾವತಿಯಾಗುತ್ತಿತ್ತು. ಈಗ ಆ ಅವಧಿ 28 ತಿಂಗಳಿಗೆ ಏರಿಕೆಯಾಗಿದೆ. ಹೊಸ ಯೋಜನೆಗಳು ಕಾರ್ಯಗತವಾಗಲಿಲ್ಲ. ಕೋವಿಡ್ ಕಿಟ್ ಹಗರಣವೇ ಸಾಧನೆಯಾಯಿತು. 110 ಹಳ್ಳಿಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಪಾಲಿಕೆ ಆಡಳಿತ ಎಡವಿತು. ಕಸದ ಗುತ್ತಿಗೆದಾರರಿಗೆ ಆರೇಳು ತಿಂಗಳ ಹಣ ಪಾವತಿಯಾಗಿಲ್ಲ. ಆಡಳಿತಗಾರರು ಬಂದ ಮೇಲಂತೂ ಹಲವು ಕಾರ್ಯಕ್ರಮಗಳಿಗೆ ವರ್ಕ್ ಕೋಡ್ ನೀಡುವುದನ್ನೇ ನಿಲ್ಲಿಸಿದ್ದಾರೆ. ಒಟ್ಟಾರೆ 2021ರ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ ವಿರೋಧ ಪಕ್ಷದ ಮಾಜಿ ನಾಯಕ ಶಿವರಾಜ್.

2021-22ರಲ್ಲಿ ವಾಸ್ತವಿಕ ಬಜೆಟ್ ಗೆ ಒತ್ತು :

ಈ ಬಾರಿ ಕೌನ್ಸಿಲರ್ ಗಳ ಬದಲಿಗೆ ಅಧಿಕಾರಿಗಳ ಬಳಿ ಪಾಲಿಕೆ ಆಡಳಿತ ಇರುವುದರಿಂದ ಪಾಲಿಕೆ ಆದಾಯಕ್ಕೆ ತಕ್ಕಂತೆ 2021-22ರ ಆಯವ್ಯಯ ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಡಳಿತಗಾರರಾದ ಗೌರವ್ ಗುಪ್ತಾ ಹಾಗೂ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಹಲವು ಬಜೆಟ್ ಪೂರ್ವ ಚರ್ಚೆಗಳು ನಡೆಯುತ್ತಿದೆ. ಪಾಲಿಕೆಯಲ್ಲಿ ಆರ್ಥಿಕ ಶಿಸ್ತಿನ ಜಪ ಮಾಡುತ್ತಿರುವ ಮಂಜುನಾಥ್ ಪ್ರಸಾದ್ ಈ ಬಾರಿ ಶತಾಯ ಗತಾಯ 7 ಸಾವಿರ ಕೋಟಿ ರೂಪಾಯಿ ಒಳಗೆ ಬಜೆಟ್ ಮಂಡಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2021-22ರಲ್ಲಿ 7 ಸಾವಿರ ಕೋಟಿ ರೂ. ಮೀರದ ಬಜೆಟ್ ಮಂಡನೆ ನಿರೀಕ್ಷೆ :

2020-21ರ ಬಜೆಟ್ ಅನುಷ್ಠಾನ ಹಾಗೂ 2021-2022ರ ಹೊಸ ಆಯವ್ಯಯ ಮಂಡನೆ ಕುರಿತಂತೆ ಬಿಬಿಎಂಪಿ ವಿಶೇಷ ಹಣಕಾಸು ಆಯುಕ್ತರಾದ ತುಳಸಿ ಮದ್ದಿಮನಿ, ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಪಾಲಿಕೆಯ ಅಧಿಕಾರಿಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಆರ್ಥಿಕ ಸಂಕಷ್ಠ ಸೇರಿದಂತೆ ಮೊದಲಾದ ಕಾರಣಗಳಿಂದ 2020-21ನೇ ಸಾಲಿನಲ್ಲಿ ಈ ತನಕ ಶೇಕಡ 25ರಷ್ಟು ಬಜೆಟ್ ಅನುಷ್ಠಾನವಾಗಿದೆ. 2021-22ನೇ ಸಾಲಿನಲ್ಲಿ ಪಾಲಿಕೆಯ ಆದಾಯ 5 ರಿಂದ 6 ಸಾವಿರ ಕೋಟಿ ರೂಪಾಯಿಯಿದ್ದು, 7 ಸಾವಿರ ಕೋಟಿ ರೂಪಾಯಿಗಳಿಗೆ ಮೀರದಂತೆ ಬಜೆಟ್ ಮಂಡಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಾಲಿಕೆ ಚುನಾವಣೆ ಮುಂದೂಡಿಕೆಗೆ ಮುಂದುವರೆದ ತಂತ್ರ :

ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಭರದಿಂದ ಪೂರ್ವಸಿದ್ಧತೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪಾಲಿಕೆಯಲ್ಲೂ ರಾಜ್ಯ ಸರ್ಕಾರದ ಆಯವ್ಯಯದ ನಂತರ ಬಜೆಟ್ ಮಂಡಿಸಲು ತೆರೆಮರೆಯ ಕಸರತ್ತು ನಡೆಯುತ್ತಿದೆ. ಪಾಲಿಕೆಯಲ್ಲಿ ಕೌನ್ಸಿಲರ್ ಗಳು ಇಲ್ಲದ ಕಾರಣ ಅಧಿಕಾರಿಗಳ ಮೂಲಕ ಪರೋಕ್ಷವಾಗಿ ಆಡಳಿತ ನಡೆಸಲು ಬೆಂಗಳೂರು ಶಾಸಕರು ಒಂದಾಗಿ ರಾಜ್ಯ ಹಾಗೂ ಪಾಲಿಕೆ ಬಜೆಟ್ ನಲ್ಲಿ ತಮಗೆ ಬೇಕಾದಂತೆ ಯೋಜನೆಗಳಿಗೆ ಹಣ ಮೀಸಲಿಡಲು ಪ್ರಭಾವ ಬೀರುತ್ತಿದ್ದಾರೆ ಎಂದು ಗೊತ್ತಾಗಿದೆ. ಪಾಲಿಕೆ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರದ ಮೂಲಕ, ಸುಪ್ರೀಂಕೋರ್ಟ್ ನಲ್ಲಿ ಈಗಾಗಲೇ ಇರುವ ಪ್ರಕರಣದಲ್ಲಿ 243 ವಾರ್ಡ್ ಪುನರ್ ವಿಂಗಡಣೆ ಹಾಗೂ 2021ರ ಜನಗಣತಿ ಕಾರ್ಯಕ್ರಮದ ಕಾರಣ ನೀಡಿ, ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.   

WhatsApp Join our WhatsApp Channel
Previous Post

ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group