Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

  • Bengaluru Focus

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

  • Bengaluru Focus

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Land Conversion | ಮಾಸ್ಟರ್ ಪ್ಲಾನ್ ಪ್ರದೇಶಗಳಲ್ಲಿ ಇನ್ನು ‘ಭೂ ಪರಿವರ್ತನೆ’ ರದ್ದು: ಜಿಬಿಎ ವ್ಯಾಪ್ತಿಯ ‘ಬಿ’ ಖಾತಾ ಮಾಲೀಕರಿಗೆ ಮಹತ್ವದ ಕೊಡುಗೆ!

ಮಧ್ಯವರ್ತಿಗಳ ಕಾಟಕ್ಕೆ ಮುಕ್ತಿ: ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ಬದಲಾವಣೆ | ಎ-ಖಾತಾ ಪಡೆಯುವ ಹಾದಿ ಸುಗಮ: ಸಚಿವ ಕೃಷ್ಣ ಬೈರೇಗೌಡ ಘೋಷಣೆ

by Bengaluru Wire Desk
February 7, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಫೆ.07 www.bengaluruwire.com : ರಾಜ್ಯದ ರಿಯಲ್ ಎಸ್ಟೇಟ್ ಮತ್ತು ಕಂದಾಯ ಇಲಾಖೆಯ ಇತಿಹಾಸದಲ್ಲೇ ಪ್ರಮುಖ ಬದಲಾವಣೆಯನ್ನು ಸರ್ಕಾರ ಮಾಡಿದೆ. 

ಇನ್ನು ಮುಂದೆ ಮಾಸ್ಟರ್ ಪ್ಲಾನ್ (CDP) ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೂಮಿಯನ್ನು ಪ್ರತ್ಯೇಕವಾಗಿ ಪರಿವರ್ತನೆ (Land Conversion) ಮಾಡುವ ಅಗತ್ಯವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಭೂಮಿ ‘ಸ್ವಯಂ ಪರಿವರ್ತನೆ’ (Land Auto Conversion) ನೂತನ ತಂತ್ರಾಂಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ನಿರ್ಧಾರದಿಂದ ಬೆಂಗಳೂರಿನ ಲಕ್ಷಾಂತರ ‘ಬಿ’ ಖಾತಾ ಸೈಟ್ ಮಾಲೀಕರಿಗೆ ನೇರ ಪ್ರಯೋಜನವಾಗಲಿದ್ದು, ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿದ್ದ ದೊಡ್ಡ ಕಾನೂನು ತೊಡಕು ನಿವಾರಣೆಯಾದಂತಾಗಿದೆ.

ಏನಿದು ಹೊಸ ಬದಲಾವಣೆ?:

ಇಲ್ಲಿಯವರೆಗೂ ಮಾಸ್ಟರ್ ಪ್ಲಾನ್ ಅಥವಾ ಸಿಡಿಪಿ (CDP) ವ್ಯಾಪ್ತಿಯಲ್ಲಿರುವ ಜಮೀನಿನ ಅಭಿವೃದ್ಧಿಗೆ ಕಡ್ಡಾಯವಾಗಿ ಭೂ ಪರಿವರ್ತನೆ ಮಾಡಿಸಬೇಕಿತ್ತು. ‘ಡೀಮ್ಡ್ ಕನ್ವರ್ಷನ್’ ಇದ್ದರೂ ಸಹ, ಈ ಪ್ರಕ್ರಿಯೆಯು ಕನಿಷ್ಠ 4 ರಿಂದ 6 ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಈ ವಿಳಂಬ ನೀತಿಯಿಂದಾಗಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿ, ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತಿತ್ತು. ಆದರೆ, ನೂತನ ತಂತ್ರಾಂಶದ ಅಡಿಯಲ್ಲಿ, ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನಾ ಅನುಮೋದನೆ ಪಡೆಯಬಹುದು. ಯೋಜನೆಯ ಅನುಮೋದನೆಯ ಭಾಗವಾಗಿಯೇ ಭೂ ಪರಿವರ್ತನೆಯನ್ನು ಪರಿಗಣಿಸಲಾಗುತ್ತದೆ.

‘ಬಿ’ ಖಾತಾ ಮಾಲೀಕರಿಗೆ ಸಿಹಿ ಸುದ್ದಿ:

ಬೆಂಗಳೂರಿನಲ್ಲಿ ಲಕ್ಷಾಂತರ ಜನರು ಅನಧಿಕೃತ ಲೇಔಟ್‌ಗಳಲ್ಲಿ ನಿವೇಶನ ಖರೀದಿಸಿ, ‘ಬಿ’ ಖಾತಾ ಇಟ್ಟುಕೊಂಡು ಪರದಾಡುತ್ತಿದ್ದಾರೆ. ಅಂತಹ ಮಾಲೀಕರಿಗೆ ಈ ಹೊಸ ಆದೇಶ ವರದಾನವಾಗಲಿದೆ. “ಸ್ವಯಂ ಪರಿವರ್ತನೆ ನಿಯಮ ಜಾರಿಯಾಗುವುದರಿಂದ ಬಿ-ಖಾತಾ ನಿವೇಶನಗಳನ್ನು ಎ-ಖಾತಾ (A-Khata) ಆಗಿ ಪರಿವರ್ತಿಸಲು ಜಿಬಿಎ ಕಾನೂನು ಚೌಕಟ್ಟನ್ನು ಸರಳಗೊಳಿಸಿದೆ. ಇದರಿಂದ ನಿಮ್ಮ ಆಸ್ತಿಗೆ ಸಂಪೂರ್ಣ ಕಾನೂನು ಬಲ ಸಿಗಲಿದ್ದು, ಬ್ಯಾಂಕ್ ಸಾಲ ಸೌಲಭ್ಯ ಪಡೆಯಲು ಮತ್ತು ಆಸ್ತಿ ಮಾರಾಟ ಮಾಡಲು ಇದ್ದ ಅಡೆತಡೆಗಳು ನಿವಾರಣೆಯಾಗಲಿವೆ,” ಎಂದು ಸಚಿವರು ಭರವಸೆ ನೀಡಿದರು.

ಭ್ರಷ್ಟಾಚಾರಕ್ಕೆ ಬ್ರೇಕ್, ಜನಸಾಮಾನ್ಯರಿಗೆ ನೆಮ್ಮದಿ

ಹಳೇ ಪದ್ಧತಿಯಿಂದಾಗಿ ಡೆವಲಪರ್‌ಗಳು ಮತ್ತು ಸಾಮಾನ್ಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಅನಗತ್ಯ ವಿಳಂಬದಿಂದಾಗಿ ವೆಚ್ಚವೂ ಹೆಚ್ಚಾಗುತ್ತಿತ್ತು. ಅಂತಿಮವಾಗಿ ಈ ಹೊರೆ ನಿವೇಶನ ಖರೀದಿದಾರರ ತಲೆಗೆ ಬೀಳುತ್ತಿತ್ತು. ಆದರೆ, ನೂತನ ‘ಸ್ವಯಂ ಪರಿವರ್ತನೆ’ ವ್ಯವಸ್ಥೆಯು ಪಾರದರ್ಶಕವಾಗಿದ್ದು, ಆನ್‌ಲೈನ್ ಮೂಲಕ ಸಮಯಮಿತಿಯೊಳಗೆ ಕೆಲಸವಾಗಲಿದೆ. ಇದು ಆಡಳಿತದಲ್ಲಿ ಸುಧಾರಣೆ ತರುವುದಲ್ಲದೆ, ಕಂದಾಯ ಇಲಾಖೆಯ ಮೇಲಿದ್ದ ಅಪಖ್ಯಾತಿಯನ್ನು ತೊಡೆದುಹಾಕಲು ನೆರವಾಗಲಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇ-ಖಾತಾ ಜೊತೆ ಜೋಡಣೆ:

ಕೇವಲ ಪರಿವರ್ತನೆ ಸುಲಭ ಮಾಡುವುದಷ್ಟೇ ಅಲ್ಲದೆ, ಈ ಪ್ರಕ್ರಿಯೆಯನ್ನು ಇ-ಖಾತಾ (E-Khata) ಜೊತೆಗೆ ಇಂಟಿಗ್ರೇಷನ್ ಮಾಡಲಾಗಿದೆ. ಇದರಿಂದಾಗಿ ಆಸ್ತಿಯ ದಾಖಲೆಗಳು ಡಿಜಿಟಲೀಕರಣಗೊಂಡು, ಮಾಲೀಕತ್ವಕ್ಕೆ ಹೆಚ್ಚಿನ ಭದ್ರತೆ ದೊರೆಯಲಿದೆ. ಭವಿಷ್ಯದಲ್ಲಿ ಯಾವುದೇ ಕಾನೂನು ತಕರಾರುಗಳು ಉಂಟಾಗದಂತೆ ಇದು ತಡೆಯಲಿದೆ.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಸರ್ಕಾರದ ಪ್ರಧಾನ ಕಾರ್ದರ್ಶಿಗಳಾದ (ವಿಪತ್ತು ನಿವರ್ಹಣೆ) ಮೌನೀಶ್ ಮುದ್ಗಿಲ್, ಕಂದಾಯ ಆಯುಕ್ತರಾದ ಮೀನಾ ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಒಟ್ಟಾರೆಯಾಗಿ, ಸ್ವಂತ ಸೂರು ಹೊಂದುವ ಕನಸು ಕಾಣುತ್ತಿರುವ ಜನಸಾಮಾನ್ಯರಿಗೆ ಮತ್ತು ಕಾನೂನು ತೊಡಕಿನಲ್ಲಿ ಸಿಲುಕಿದ್ದ ನಿವೇಶನದಾರರಿಗೆ ರಾಜ್ಯ ಸರ್ಕಾರ ಈ ಮೂಲಕ ದೊಡ್ಡ ಉಡುಗೊರೆ ನೀಡಿದಂತಾಗಿದೆ.

WhatsApp Join our WhatsApp Channel
Previous Post

Boards & Corporations | ವಿವಿಧ 54 ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿದ ರಾಜ್ಯ ಸರ್ಕಾರ – ಇಲ್ಲಿದೆ ಪಟ್ಟಿ

Next Post

Health News | ಬಲಿಷ್ಠ ರೋಗ ನಿರೋಧಕ ಶಕ್ತಿಗೆ ರಾಮಬಾಣ ‘ವಿಟಮಿನ್ ಸಿ’: ನಿಮ್ಮ ಡಯಟ್‌ನಲ್ಲಿರಲಿ ಈ 8 ನೈಸರ್ಗಿಕ ಆಹಾರಗಳು

Next Post

Health News | ಬಲಿಷ್ಠ ರೋಗ ನಿರೋಧಕ ಶಕ್ತಿಗೆ ರಾಮಬಾಣ 'ವಿಟಮಿನ್ ಸಿ': ನಿಮ್ಮ ಡಯಟ್‌ನಲ್ಲಿರಲಿ ಈ 8 ನೈಸರ್ಗಿಕ ಆಹಾರಗಳು

ಭಾರತದ ಕ್ಯಾಥೊಲಿಕ್ ಬಿಷಪ್‌ಗಳ ಮಂಡಳಿ (ಸಿಬಿಸಿಐ) ನೂತನ ಅಧ್ಯಕ್ಷರಾಗಿ ಕಾರ್ಡಿನಲ್ ಪೂಲಾ ಆಂಥೋನಿ ಆಯ್ಕೆ

Please login to join discussion

Like Us on Facebook

Follow Us on Twitter

Recent News

Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

August 18, 2026

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

August 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

August 18, 2026

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

August 18, 2026

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group