Tuesday, August 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

ಕುಕ್ಕೆ, ಬನಶಂಕರಿ ದೇವಸ್ಥಾನಗಳಲ್ಲಿ ಅಡುಗೆ ಅನಿಲ ಅಭಾವ; ಭಕ್ತರ ದಾಸೋಹಕ್ಕೆ ಅಡ್ಡಿಯಾಗುವ ಆತಂಕ; ಪರ್ಯಾಯವಾಗಿ ಕಟ್ಟಿಗೆ ಒಲೆ ಮೊರೆ ಹೋದ ಆಡಳಿತ ಮಂಡಳಿ.

by Bengaluru Wire Desk
March 11, 2026
in BW Special, News Wire, Public interest
Reading Time: 1 min read
0

ಬೆಂಗಳೂರು, ಮಾ.11 www.bengaluruwire.com: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿ ಮತ್ತು ಇಂಧನ ಪೂರೈಕೆಯಲ್ಲಿನ ವ್ಯತ್ಯಯ ಈಗ ರಾಜ್ಯದ ಮುಜರಾಯಿ ಇಲಾಖೆಯ ‘ಎ’ ದರ್ಜೆಯ ದೇವಸ್ಥಾನಗಳ ಮೇಲೆ ನೇರ ಪರಿಣಾಮ ಬೀರಿದೆ. 

ಭಕ್ತರಿಗೆ ಪ್ರತಿದಿನ ನೀಡಲಾಗುವ ಅನ್ನದಾಸೋಹ ಹಾಗೂ ಪ್ರಸಾದ ವಿನಿಯೋಗಕ್ಕೆ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಎದುರಾಗಿದ್ದು, ಹಲವು ದೇವಸ್ಥಾನಗಳು ಸಂಕಷ್ಟಕ್ಕೆ ಸಿಲುಕಿವೆ.

ಕುಕ್ಕೆ ಸುಬ್ರಹ್ಮಣ್ಯ: ಮೆನುವಿನಲ್ಲಿ ಕಡಿತ, ಕಟ್ಟಿಗೆ ಒಲೆಯತ್ತ ಚಿತ್ತ

ಪ್ರತಿದಿನ ಸರಾಸರಿ 10,000 ಭಕ್ತರಿಗೆ ದಾಸೋಹ ನಡೆಸುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿತ್ಯ 20 ಸಿಲಿಂಡರ್‌ಗಳ ಅಗತ್ಯವಿದೆ. ಗ್ಯಾಸ್ ಅಭಾವದಿಂದಾಗಿ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿಂದೆ ಅನ್ನ, ಸಾಂಬಾರ್ ಜೊತೆ ಇದ್ದ ಎರಡು ಪಲ್ಯಗಳನ್ನು ಒಂದಕ್ಕೆ ಸೀಮಿತಗೊಳಿಸಲಾಗಿದೆ. “ಮುಂಜಾಗ್ರತೆಯಾಗಿ ಎರಡು ಲೋಡ್ ಕಟ್ಟಿಗೆ ತರಿಸಲಾಗಿದ್ದು, ಅನಿವಾರ್ಯವಾದರೆ ಕಟ್ಟಿಗೆ ಒಲೆಯಲ್ಲೇ ಅಡುಗೆ ಮಾಡಲಾಗುವುದು” ಎಂದು ದೇವಸ್ಥಾನದ ಅಧಿಕಾರಿ ಅರವಿಂದ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಎಚ್‌ಪಿ ಗ್ಯಾಸ್ ಏಜೆನ್ಸಿಗೆ ತುರ್ತು ಪೂರೈಕೆಗೆ ಮನವಿ ಮಾಡಲಾಗಿದೆ.

ಬನಶಂಕರಿ ದೇವಸ್ಥಾನ: ಶುಕ್ರವಾರದಿಂದ ಪ್ರಸಾದ ಬಂದ್ ಭೀತಿ?:

ಬನಶಂಕರಿ ದೇವಸ್ಥಾನದಲ್ಲಿ ವಾಣಿಜ್ಯ ಅಡುಗೆ ಅನಿಲ ಪೂರೈಕೆಯಲ್ಲಿ ಕೊರತೆಯಾಗಿರುವುದರಿಂದ ಪ್ರಸಾದ ಮಾಡಲು ಗ್ಯಾಸ್(Gas) ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ 3 ಸಾವಿರದಿಂದ 4 ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಿದರೆ ಶುಕ್ರವಾರ ಹಾಗೂ ಮಂಗಳವಾರ 4 ರಿಂದ 5 ಸಾವಿರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಬೆಳಗ್ಗೆ ಭಕ್ತಾದಿಗಳಿಗೆ ಪೊಂಗಲ್, ಪುಳಿಯೊಗರೆ, ರೈಸ್ ಬಾತ್‌ಗಳನ್ನು ಪ್ರಸಾದವಾಗಿ ನೀಡಿದರೆ ಮಧ್ಯಾಹ್ನ ಅನ್ನ ಸಾಂಬರ್ ನೀಡಲಾಗುತ್ತದೆ. ಸಂಜೆಯೂ ಪ್ರಸಾದ ವಿತರಿಸಲಾಗುತ್ತದೆ.

ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ತೀವ್ರ ಅಭಾವ ತಲೆದೋರಿದೆ. ಕೇವಲ 4 ಸಿಲಿಂಡರ್‌ಗಳು ಮಾತ್ರ ಬಾಕಿ ಇವೆ. “ಇದು ನಾಳೆ ಸಂಜೆಯವರೆಗೆ ಮಾತ್ರ ಸಾಕಾಗಬಹುದು. ಸಿಲಿಂಡರ್ ಪೂರೈಕೆಯಾಗದಿದ್ದರೆ ಶುಕ್ರವಾರದಿಂದ ಪ್ರಸಾದ ವಿತರಣೆ ನಿಲ್ಲಿಸಬೇಕಾದೀತು” ಎಂದು ದೇವಸ್ಥಾನದ ಮೂಲಗಳು ಆತಂಕ ವ್ಯಕ್ತಪಡಿಸಿವೆ.

ಕೊಲ್ಲೂರು ಮತ್ತು ನಂಜನಗೂಡು: ಸದ್ಯಕ್ಕೆ ಪರಿಸ್ಥಿತಿ ಸುಸ್ಥಿತಿಯಲ್ಲಿದೆ:

ಕೊಲ್ಲೂರು ದೇವಸ್ಥಾನದಲ್ಲಿ ಸೀಸನ್ ಅಲ್ಲದ ಸಂದರ್ಭದಲ್ಲಿ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಸಂದರ್ಭದಲ್ಲಿ 10,000-12,000 ಭಕ್ತರಿಗೆ ಪ್ರಸಾದ ಹಾಗೂ ಲಡ್ಡು ವಿತರಣೆ ನೀಡಲಾಗುತ್ತೆ. ಏಪ್ರಿಲ್-ಮೇ ತಿಂಗಳಲ್ಲಿ, ಶಾಲಾ-ಕಾಲೇಜುಗಳಿಗೆ ರಜಾ ಹಾಗೂ ಹಬ್ಬದ  ಸಂದರ್ಭದಲ್ಲಿ 15,000 ರಿಂದ 16,000 ಭಕ್ತರು ಪ್ರತಿದಿನ ಊಟ ವಿತರಣೆಯಾಗುತ್ತದೆ. ಪ್ರತಿದಿನ 15-16 ಗ್ಯಾಸ್ ಸಿಲೆಂಡರ್ ಬೇಕಾಗುತ್ತದೆ, ಸೀಸನ್ ಸಮಯ 20 ಸಿಲೆಂಡರ್ ಬೇಕು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸದ್ಯ 43 ವಾಣಿಜ್ಯ ಸಿಲಿಂಡರ್‌ಗಳ ದಾಸ್ತಾನು ಇದೆ. ಅಲ್ಲದೆ, ಗೃಹ ಬಳಕೆಯ ಅನಿಲ ಸಂಪರ್ಕ ಇರುವುದರಿಂದ ಸದ್ಯಕ್ಕೆ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಹೇಳಿದ್ದಾರೆ. 

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಾರಕ್ಕೆ 20 ವಾಣಿಜ್ಯ ಗ್ಯಾಸ್ ಸಿಲೆಂಡರ್ ಬೇಕಾಗುತ್ತೆ. ಪ್ರತಿದಿನ ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಭಕ್ತರಿಗೆ ನೀಡಲಾಗುತ್ತದೆ. ಹುಣ್ಣಿಮೆ, ಭಾನುವಾರ, ಸೋಮವಾರ, ಚಿಕ್ಕ- ದೊಡ್ಡ ಜಾತ್ರೆ, ಗಿರಿಜಾ ಕಲ್ಯಾಣೋತ್ಸವ, ಸರ್ಕಾರಿ ರಜಾದಿನಗಳು, ಕಾರ್ತಿಕ ಮಾಸದಲ್ಲಿ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಭೇಟಿ ಕೊಡುತ್ತಾರೆ. 

ಶ್ರೀಕಂಠೇಶ್ವರ ದೇವಸ್ಥಾನದಲ್ಲೂ ಸದ್ಯ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಧಾರ್ಮಿಕ ದತ್ತಿ ಅಧಿಕಾರಿ ಸಿ.ಜೆ. ಕೃಷ್ಣ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 15 ದಿನಗಳ ತನಕ ಗ್ಯಾಸ್ ಸಂಗ್ರಹವಿದೆ:

ಮೈಸೂರಿನ ಚಾಮುಂಡಿ ಬೆಟ್ಟದ ಮೇಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸದ್ಯಕ್ಕೆ 15 ದಿನಗಳಿಗೆ ಆಗುವಷ್ಟು ವಾಣಿಜ್ಯ ಸಿಲಿಂಡರ್ ಸಂಗ್ರಹವಿದೆ. ಇವತ್ತು ಎಚ್ ಪಿ ಹಾಗೂ ಇಂಡೇನ್ ಗ್ಯಾಸ್ ಏಜನ್ಸಿ ಅವರಿಗೆ ಗ್ಯಾಸ್ ಸಿಲೆಂಡರ್ ಪೂರೈಸುವಂತೆ ಕೇಳಿದ್ದೇವೆ. ಪ್ರತಿದಿನ ಬೆಳಗ್ಗೆ 1,300 ಜನಕ್ಕೆ, ಮಧ್ಯಾಹ್ನ 3,000 ಜನಕ್ಕೆ, ಸಂಜೆ 1,000 ಸರಾಸರಿಯಾಗಿ ದೇವಸ್ಥಾನದಿಂದ ಪ್ರಸಾದ ವಿನಿಯೋಗ ಮಾಡುತ್ತೇವೆ. ಒಟ್ಟಾರೆ ಪ್ರತಿದಿನ ಸರಾಸರಿಯಾಗಿ 5000 ಜನರಿಗೆ ಪ್ರಸಾದ ರೂಪದಲ್ಲಿ ಊಟ ಬಡಿಸಲಾಗುತ್ತದೆ. ದೇವಿ ದೇವಸ್ಥಾನವಾದ್ದರಿಂದ ಮಂಗಳವಾರ, ಶನಿವಾರ ದಿನಗಳಲ್ಲಿ ಕನಿಷ್ಠ 10,000 ಜನಕ್ಕೆ ಪ್ರಸಾದ ವಿನಿಯೋಗ ಆಗುತ್ತೆ ಎಂದು ದೇವಸ್ಥಾನದ ಧಾರ್ಮಿಕ ದತ್ತಿ ಅಧಿಕಾರಿ ರೂಪಾ.ಎಂ.ಜೆ ಬೆಂಗಳೂರು ವೈರ್ ಗೆ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಯುದ್ಧ ಮುಂದುವರಿದರೆ, ಮುಂಬರುವ ಏಪ್ರಿಲ್-ಮೇ ತಿಂಗಳ ‘ಸೀಸನ್’ ಸಮಯದಲ್ಲಿ ಲಕ್ಷಾಂತರ ಭಕ್ತರಿಗೆ ಪ್ರಸಾದ ನೀಡಲು ಮುಜರಾಯಿ ಇಲಾಖೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. (AI Graphic Poster Courtesy : Gemini)

WhatsApp Join our WhatsApp Channel
Previous Post

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

Next Post

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

Next Post

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

Please login to join discussion

Like Us on Facebook

Follow Us on Twitter

Recent News

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Viral News | ಕಾಲುವೆ ಕೆಲಸದ ನಡುವೆ ಸಿಕ್ಕಿತು ಬರೋಬ್ಬರಿ 98 ಕೋಟಿ ರೂ. ಚಿನ್ನದ ನಿಧಿ: ಮುಂದೆ ನಡೆದಿದ್ದೇನು?

August 17, 2026

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group