Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

ಜಿ.ಬಿ.ಎ ಚುನಾವಣೆಗಾಗಿ ಗುತ್ತಿಗೆದಾರರಿಂದ ಫಂಡ್ ಸಂಗ್ರಹದ ಆರೋಪ; | ಬಿ.ಎಸ್.ಡಬ್ಲ್ಯೂ.ಎಂ.ಎಲ್ ಹಾಗೂ ಅದರ ಸಿಇಒ ಕರೀಗೌಡ ಅವರ ಕಾರ್ಯವೈಖರಿಗೆ ಸಾರ್ವಜನಿಕರಿಂದ, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

by Bengaluru Wire Desk
May 8, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.08 www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರು ಈಗ ‘ಗಾರ್ಬೇಜ್ ಸಿಟಿ’ಯಾಗಿ ಮಾರ್ಪಡುತ್ತಿದ್ದು, ನಗರದ ಘನತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 

ಈ ಕುರಿತು ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಲೋಕಾಯುಕ್ತ ತನಿಖೆ ಮುಗಿಯುವವರೆಗೆ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

​ಅರ್ಹತೆ ಇಲ್ಲದವರಿಗೂ ಟೆಂಡರ್ ಭಾಗ್ಯ?

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ವತಿಯಿಂದ ಕರೆಯಲಾದ 33 ಪ್ಯಾಕೇಜ್‌ಗಳ ಟೆಂಡರ್‌ನಲ್ಲಿ ಕನಿಷ್ಠ ಅರ್ಹತೆ ಇಲ್ಲದ ಗುತ್ತಿಗೆದಾರರನ್ನು ತಾಂತ್ರಿಕ ಸಮಿತಿಯು ಕಾನೂನು ಬಾಹಿರವಾಗಿ ಅರ್ಹಗೊಳಿಸಿದೆ ಎಂದು ನಾರಾಯಣಸ್ವಾಮಿ ದೂರಿದ್ದಾರೆ. ಅನುಭವದ ಕೊರತೆ, ಹಣಕಾಸು ದಾಖಲೆಗಳ ಲೋಪ ಹಾಗೂ ತಾಂತ್ರಿಕ ಸಾಮರ್ಥ್ಯವಿಲ್ಲದಿದ್ದರೂ ಅಂತಹ ಕಂಪನಿಗಳಿಗೆ ಮಣೆ ಹಾಕಲಾಗಿದೆ ಎಂಬುದು ಅವರ ಪ್ರಮುಖ ಆರೋಪ.

​ಶೇ. 14ರಷ್ಟು ಹೆಚ್ಚುವರಿ ದರ: ತೆರಿಗೆ ಹಣದ ಲೂಟಿ?

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅಂದಾಜು ವೆಚ್ಚಕ್ಕಿಂತ ಶೇ. 14ರಷ್ಟು ಹೆಚ್ಚಿನ ದರಕ್ಕೆ ಟೆಂಡರ್ ನೀಡಲು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಶಿಫಾರಸ್ಸು ಮಾಡಿದೆ. ಮಾರುಕಟ್ಟೆ ಪರಿಸ್ಥಿತಿ ಹಾಗೂ ಬಿಡಿಭಾಗಗಳ ಬೆಲೆ ಏರಿಕೆಯ ನೆಪವೊಡ್ಡಿ ನೀಡಿರುವ ಈ ಸಮರ್ಥನೆಗಳು ಅತ್ಯಂತ ಬಾಲಿಶವಾಗಿದ್ದು, ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

​ಚುನಾವಣಾ ಫಂಡ್ ಸಂಗ್ರಹದ ಆರೋಪ

ಗುರುವಾರವಷ್ಟೇ ಅವರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, “ಜಿ.ಬಿ.ಎ (Greater Bengaluru Authority) ಚುನಾವಣೆ ಹತ್ತಿರ ಬರುತ್ತಿದ್ದಂತೆ ಗುತ್ತಿಗೆದಾರರಿಂದ ಫಂಡ್ ಸಂಗ್ರಹಿಸಲು ಈ ಅಕ್ರಮ ನಡೆಸಲಾಗುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 1,301 ಕೋಟಿ ರೂ. ವ್ಯಯಿಸಲಾಗಿದ್ದರೆ, 2025-26ರ ಸಾಲೊಂದರಲ್ಲೇ 1,040 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಹಣ ಎಲ್ಲಿಗೆ ಹೋಯಿತು? ನಗರದ ರಸ್ತೆಗಳು ಹೆಚ್ಚಿವೆಯೇ ಅಥವಾ ಸೌಲಭ್ಯಗಳು ಸುಧಾರಿಸಿವೆಯೇ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಪತ್ರವನ್ನು ಸರ್ಕಾರ, ಜಿಬಿಎ ಮುಖ್ಯ ಆಯುಕ್ತರು ಗಂಭೀರವಾಗಿ ತೆಗೆದುಕೊಳ್ಳಲೇಬೇಕಿದೆ.

​ಅಧಿಕಾರಿಗಳ ಅದಕ್ಷತೆ – ನಾಗರೀಕರ ಆಕ್ರೋಶ

ನಗರದ ಸ್ವತ್ತು ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಕಸದ ಶುಲ್ಕವನ್ನೂ ಸಂಗ್ರಹಿಸಲಾಗುತ್ತಿದೆ. ಆದರೂ ನಗರದ ಬೀದಿಗಳಲ್ಲಿ ಪ್ಲಾಸ್ಟಿಕ್ ಹಾಗೂ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಬಿಎಸ್ ಡಬ್ಲ್ಯೂಎಂಎಲ್ ಸಿಇಒ ಕರೀಗೌಡ ಹಾಗೂ ರಾಜೇಶ್ ಎಂಬುವರ ಕಾರ್ಯವೈಖರಿಯಿಂದಾಗಿ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ನಾಗರೀಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

​ಜಿ.ಬಿ.ಎ ವ್ಯಾಪ್ತಿಯ 369 ವಾರ್ಡ್‌ಗಳಿಗೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಈ ಕಸದ ಹಗರಣವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಕಪ್ಪುಚುಕ್ಕೆಯಾಗುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ನಗರದಲ್ಲಿ ಕಸದ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿರುವ ಬಿಎಸ್ ಡಬ್ಲ್ಯುಎಂಎಲ್ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಹಾಗೂ ಮಾಧ್ಯಮದವರು ಪ್ರಶ್ನಿಸಿದಾಗ, ಈ ಬಗ್ಗೆ ಅವರು ದ್ರಾಷ್ಟ್ಯತನದಿಂದ ಉತ್ತರಿಸುತ್ತಾರೆ. ತಮ್ಮ ವಿರುದ್ಧ ಯಾರೂ ಏನು ಮಾಡಲಾಗದು. ಮಾಧ್ಯಮದವರು ಏನಾದರೂ ಬರೆದುಕೊಳ್ಳಲಿ. ಅವರು ನನಗೇನು ಮಾಡಲಾಗದು ಎಂದು ನಿರಂಕುಶಾಧಿಕಾರಿಯ ರೀತಿ ವರ್ತಿಸುತ್ತಿದ್ದಾರೆ” ಎಂಬ ದೂರುಗಳಿವೆ. 

ಸರ್ಕಾರಿ ಹುದ್ದೆ ಸೇವೆ ಮಾಡಲು: ದರ್ಪ ತೋರುವ ಸ್ಥಳವಲ್ಲ:

ಯಾವುದೇ ಅಧಿಕಾರಿಯಾದರೂ ಸಾರ್ವಜನಿಕರ ಸೇವೆ ಮಾಡಲೆಂದೇ ಸರ್ಕಾರ ಅವರಿಗೆ ಸಂಬಳ ಕೊಡುವುದು.‌ ನಾಗರೀಕರ ಮೇಲೆ ದರ್ಪ ತೋರಲಲ್ಲ. ಹಿಂದಿನ ಬಿಬಿಎಂಪಿ ಹಾಗೂ ಈಗಿನ ಘನತ್ಯಾಜ್ಯ ನಿರ್ವಹಣಾ ಕಂಪನಿಯಲ್ಲಿ ಬೀಡುಬಿಟ್ಟಿದ್ದ 20ಕ್ಕೂ ಹೆಚ್ಚು ಪರಿಸರ ಎಂಜಿನಿಯರ್ ಗಳನ್ನು ರಾಜ್ಯ ವಿವಿಧೆಡೆ ಖಾಲಿಯಿರುವ ಅಗತ್ಯ ಹುದ್ದೆಗಳಿಗೆ ಸರ್ಕಾರ ವರ್ಗಾಯಿಸಿತ್ತು. ಆದರೆ ಈತನಕ ಎಷ್ಟೋ ಇಂಜಿನಿಯರ್ ಗಳು ಸರ್ಕಾರದ ಆದೇಶವನ್ನು ಪಾಲಿಸದೆ ಅದೇ ಹುದ್ದೆಯಲ್ಲಿ ಮುಂದುವರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. 

“ಆ ಪರಿಸರ ಇಂಜಿಯರ್ ಗಳನ್ನು ವರ್ಗಾಯಿಸದೇ ಬಿಎಸ್ ಎಬ್ಲ್ಯುಎಂಎಲ್ ಕಂಪನಿಯ ಅದೇ ಹುದ್ದೆಯಲ್ಲಿ ಮುಂದುವರೆಯಲು ಇದೇ ಸಿಇಒ ಕರೀಗೌಡ ಅವರು ಹಾಗೂ ಚೀಫ್ ಜನರಲ್ ಮ್ಯಾನೇಜರ್-2 ರಾಜೇಶ್ ಹಣ ಸಂಗ್ರಹಿಸುತ್ತಿದ್ದಾರೆ” ಎಂದು ಇತ್ತೀಚೆಗಷ್ಟೇ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಗುರುತರ ಆರೋಪ ಮಾಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

WhatsApp Join our WhatsApp Channel
Previous Post

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

Next Post

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

Next Post

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

ಬೆಂಗಳೂರು ವೈರ್ ರಿಯಾಲಿಟಿ ಚೆಕ್: "ಕಸದ ಆಫೀಸಿನ" ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group