Saturday, May 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

    ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

    ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

    ​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

  • Bengaluru Focus

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

ಕೇಂದ್ರದಿಂದ ಒಪ್ಪಿಗೆಯ ಮುದ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹರ್ಷ; ಗ್ರಾಮೀಣ ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಕೆಇಎ ಮೂಲಕ ಹಳೇ ಸಿಇಟಿ ಮಾದರಿ ಮರುಜಾರಿಗೆ ಒತ್ತಾಯ

by Bengaluru Wire Desk
May 16, 2026
in News Wire, Public interest
Reading Time: 1 min read
0

ಬೆಂಗಳೂರು, ಮೇ.16 www.bengaluruwire.com: ರಾಜ್ಯದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಅತ್ಯಂತ ಸಂತಸದ ಸುದ್ದಿಯೊಂದು ಸಿಕ್ಕಿದೆ. ಕರ್ನಾಟಕದಲ್ಲಿ ವೈದ್ಯಕೀಯ ಪದವಿ (MBBS) ಹಾಗೂ ಸ್ನಾತಕೋತ್ತರ ಪದವಿ (PG) ಸೀಟುಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೇ 15 ರಂದು ಅಂತಿಮ ಮುದ್ರೆ ಒತ್ತಿದೆ. 

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯಕ್ಕೆ ಹೆಚ್ಚುವರಿಯಾಗಿ ಒಟ್ಟು 1,122 ಯುಜಿ ಮತ್ತು ಪಿಜಿ ಸೀಟುಗಳು ಲಭ್ಯವಾಗಲಿವೆ. ​ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ, ಖಾಸಗಿ, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ಒಟ್ಟು 72 ವೈದ್ಯಕೀಯ ಕಾಲೇಜುಗಳಿವೆ. ಇವುಗಳಲ್ಲಿ 13,945 ಯುಜಿ ಹಾಗೂ 7,727 ಪಿಜಿ ಸೀಟುಗಳು ಲಭ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದ್ದಾರೆ. 

ಇದೀಗ ಕೇಂದ್ರ ಸರ್ಕಾರದ “ಭಾರತದಲ್ಲಿನ ಅಸ್ತಿತ್ವದಲ್ಲಿರುವ ವೈದ್ಯಕೀಯ ಕಾಲೇಜುಗಳ ಬಲವರ್ಧನೆ ಮತ್ತು ಮೇಲ್ದರ್ಜೆಗೇರಿಸುವಿಕೆ” ಯೋಜನೆಯಡಿ ಸೀಟುಗಳ ಹೆಚ್ಚಳಕ್ಕೆ ನಮ್ಮ ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರನ್ವಯ 11 ವೈದ್ಯಕೀಯ ಸಂಸ್ಥೆಗಳಲ್ಲಿ 550 ಎಂಬಿಬಿಎಸ್ (UG) ಸೀಟುಗಳು ಹಾಗೂ 23 ಸಂಸ್ಥೆಗಳಲ್ಲಿ 572 ಪಿಜಿ ಸೀಟುಗಳನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

​ಪ್ರತಿ ಸೀಟು ಹೆಚ್ಚಳಕ್ಕೆ ತಗಲುವ 1.5 ಕೋಟಿ ರೂಪಾಯಿ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ಭರಿಸಲಿವೆ. ಯುಜಿ ಸೀಟುಗಳ ಹೆಚ್ಚಳಕ್ಕಾಗಿ ಒಟ್ಟು 825 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ ಕೇಂದ್ರದ ಪಾಲು 495 ಕೋಟಿ ರೂ. ಹಾಗೂ ರಾಜ್ಯದ ಪಾಲು 330 ಕೋಟಿ ರೂ. ಆಗಿದೆ. 

ಅದೇ ರೀತಿ ಪಿಜಿ ಸೀಟುಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ 20 ವೈದ್ಯಕೀಯ ಕಾಲೇಜುಗಳ 528 ಸೀಟುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಧನಸಹಾಯ ನೀಡಲಿವೆ. ಇನ್ನುಳಿದ 4 ಸ್ವತಂತ್ರ ಸ್ನಾತಕೋತ್ತರ ಸಂಸ್ಥೆಗಳ 44 ಪಿಜಿ ಸೀಟುಗಳಿಗೆ ಕೇಂದ್ರ ಸರ್ಕಾರವೇ ಶೇ. 100 ರಷ್ಟು ಸಂಪೂರ್ಣ ಧನಸಹಾಯ ನೀಡಲಿದೆ. ಈ ಪ್ರಕ್ರಿಯೆಯನ್ನು ಮುಂದುವರಿಸಲು ಶೀಘ್ರದಲ್ಲೇ ಒಪ್ಪಂದಕ್ಕೆ (MOU) ಸಹಿ ಹಾಕಲಾಗುವುದು ಮತ್ತು ಎಸ್‌ಎನ್‌ಎ-ಸ್ಪರ್ಶ್ (SNA-Sparsh) ಖಾತೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

​ನೀಟ್ (NEET-UG) ಪರೀಕ್ಷೆ ರದ್ದತಿಗೆ ಸಚಿವರ ಮತ್ತೊಮ್ಮೆ ಬಲವಾದ ಒತ್ತಾಯ:

​ಈ ಮಹತ್ವದ ವೈದ್ಯಕೀಯ ಸೀಟುಗಳ ಹೆಚ್ಚಳದ ಬೆನ್ನಲ್ಲೇ, ರಾಜ್ಯ ಸರ್ಕಾರವು ವೈದ್ಯಕೀಯ ಪ್ರವೇಶಾತಿ ಪ್ರಕ್ರಿಯೆಯಲ್ಲಿನ ಮತ್ತೊಂದು ದೊಡ್ಡ ಸುಧಾರಣೆಗೆ ಧ್ವನಿ ಎತ್ತಿದೆ. 2026ನೇ ಸಾಲಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET-UG) ಸಂಪೂರ್ಣವಾಗಿ ರದ್ದುಪಡಿಸಬೇಕು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ನಡೆಸಲು ಮುಕ್ತ ಅವಕಾಶ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಬಲವಾಗಿ ಆಗ್ರಹಿಸಿದ್ದಾರೆ.

​ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅತ್ಯಂತ ಪಾರದರ್ಶಕ, ನ್ಯಾಯಸಮ್ಮತ ಮತ್ತು ವಿದ್ಯಾರ್ಥಿ ಸ್ನೇಹಿ ರೀತಿಯಲ್ಲಿ ಹಳೆಯ ಸಿಇಟಿ ವ್ಯವಸ್ಥೆಯನ್ನು ಪುನಃ ಜಾರಿಗೆ ತರಲು ಕೇಂದ್ರ ಸರ್ಕಾರ ಕೂಡಲೇ ಕಾನೂನುಬದ್ಧ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

​ಕೆಇಎ ಮಾದರಿ ಅತ್ಯಂತ ವಿಶ್ವಾಸಾರ್ಹ ಮತ್ತು ಪಾರದರ್ಶಕ:

​ಕರ್ನಾಟಕವು ಕಳೆದ ಹಲವು ದಶಕಗಳಿಂದ ಕೆಇಎ ಪ್ರಾಧಿಕಾರದ ಮೂಲಕ ಅತ್ಯಂತ ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಿಕೊಂಡು ಬಂದ ಇತಿಹಾಸವನ್ನು ಹೊಂದಿದೆ. ರಾಜ್ಯದ ಈ ಸಿಇಟಿ ವ್ಯವಸ್ಥೆಯು ಗ್ರಾಮೀಣ, ಮಧ್ಯಮ ವರ್ಗದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಇದು ಕೇವಲ ಪರೀಕ್ಷೆಯಾಗಿರದೆ, ಶುದ್ಧ ಪ್ರತಿಭೆ ಮತ್ತು ಕಠಿಣ ಪರಿಶ್ರಮಕ್ಕೆ ಮನ್ನಣೆ ನೀಡುವ ಅತ್ಯಂತ ವಿಶ್ವಾಸಾರ್ಹ ಮಾದರಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.

​ಆದರೆ, ಪ್ರಸ್ತುತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ‘ನೀಟ್’ ಪರೀಕ್ಷೆಯು ದೇಶಾದ್ಯಂತ ಭಾರೀ ವಿವಾದಗಳನ್ನು ಸೃಷ್ಟಿಸುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಅಭ್ಯರ್ಥಿಗಳಿಂದ ಪರೀಕ್ಷೆ ಬರೆಯಿಸುವುದು, ಸಂಘಟಿತ ಅಕ್ರಮ ಜಾಲಗಳು, ಅಂಕಗಳ ತಿರುಚಾಟ ಹಾಗೂ ತಾಂತ್ರಿಕ ದೋಷಗಳು ನಿರಂತರವಾಗಿ ಕೇಳಿಬರುತ್ತಿವೆ. ಇವೆಲ್ಲವೂ ನೀಟ್ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಸಂಪೂರ್ಣವಾಗಿ ಕುಸಿಯುವಂತೆ ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

​ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಮಾನಸಿಕ ಒತ್ತಡ: ಕೇಂದ್ರದ ವೈಫಲ್ಯ:

​ಇತ್ತೀಚಿನ ವರ್ಷಗಳಲ್ಲಿ ನೀಟ್ ಪರೀಕ್ಷೆಯ ಸುತ್ತ ನಡೆದಿರುವ ಸಾಲು ಸಾಲು ಅಕ್ರಮಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಮಾನಸಿಕ ಒತ್ತಡ, ಆತಂಕ ಹಾಗೂ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡಿದೆ. ರಾಷ್ಟ್ರ ಮಟ್ಟದಲ್ಲಿ ಇಷ್ಟು ದೊಡ್ಡ ಪರೀಕ್ಷೆಯನ್ನು ದೋಷರಹಿತವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ಕಟುವಾಗಿ ಟೀಕಿಸಿದರು.

​ವೈದ್ಯಕೀಯ ಕ್ಷೇತ್ರವು ದೇಶದ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿದೆ. ಇಂತಹ ಪವಿತ್ರ ಕ್ಷೇತ್ರಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಸಂಪೂರ್ಣ ಭ್ರಷ್ಟಾಚಾರರಹಿತವಾಗಿರಬೇಕು. ಈಗಾಗಲೇ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿರುವ ರಾಜ್ಯಗಳ ಮೇಲೆ ಇಂತಹ ದೋಷಪೂರಿತ ಕೇಂದ್ರೀಕೃತ ವ್ಯವಸ್ಥೆಯನ್ನು ಬಲವಂತವಾಗಿ ಹೇರುವುದು ಸರಿಯಲ್ಲ. 

ರಾಜ್ಯಗಳ ಭಾಷಾ ವೈವಿಧ್ಯತೆ, ಪಠ್ಯಕ್ರಮ ಮತ್ತು ವಿದ್ಯಾರ್ಥಿಗಳ ಸಾಮಾಜಿಕ-ಆರ್ಥಿಕ ಹಿನ್ನೆಲೆಗಳನ್ನು ಆಯಾ ರಾಜ್ಯ ಸರ್ಕಾರಗಳೇ ಉತ್ತಮವಾಗಿ ಅರ್ಥಮಾಡಿಕೊಳ್ಳಬಲ್ಲವು.

​ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಗಳ ಪಾತ್ರ ಮತ್ತು ಹಕ್ಕುಗಳನ್ನು ಗೌರವಿಸುವುದು ಭಾರತದ ಸಂವಿಧಾನದ ಫೆಡರಲ್ ವ್ಯವಸ್ಥೆಯ ಆತ್ಮವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್ ರದ್ದುಪಡಿಸಿ ಸಿಇಟಿ ಮರುಜಾರಿಗೆ ತರಲು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಅಧಿಕೃತ ಪತ್ರ ಬರೆದಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ಪರೀಕ್ಷಾ ಅವ್ಯವಸ್ಥೆಗಳ ಕಾರಣಕ್ಕೆ ಹಾಳುಮಾಡಲು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

WhatsApp Join our WhatsApp Channel
Previous Post

ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

Please login to join discussion

Like Us on Facebook

Follow Us on Twitter

Recent News

ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

May 16, 2026

ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

May 16, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ

May 16, 2026

ಮಾಲಿನ್ಯಕ್ಕೆ ಬ್ರೇಕ್: ದೆಹಲಿಯಲ್ಲಿ ಇನ್ನು ಮುಂದೆ ಇ-ಆಟೋಗಳದ್ದೇ ಪಾರುಪತ್ಯ

May 16, 2026

​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

May 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group