Sunday, June 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

    ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

    ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್

    Agriculture Farming

    ರಾಗಿ ಬೆಳೆಗಾರರ ₹1,611 ಕೋಟಿ ಬಾಕಿ ಉಳಿಸಿಕೊಂಡ ಕಾಂಗ್ರೆಸ್‌: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

    ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

    Vidhana Soudha

    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

  • Bengaluru Focus

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

    ಬ್ರ್ಯಾಂಡ್ ಬೆಂಗಳೂರು ಸಾಕಾರ: ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಹೊರಹೊಮ್ಮಲಿದೆ ಸಿಲಿಕಾನ್ ಸಿಟಿ

    ​ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಬೆಂಗಳೂರಿಗರ ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆ: ಐಐಎಸ್ಸಿ (IISc) ಅಧ್ಯಯನದ ವರದಿ ಬಹಿರಂಗ

    ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

    ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

    ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

    ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್

    Agriculture Farming

    ರಾಗಿ ಬೆಳೆಗಾರರ ₹1,611 ಕೋಟಿ ಬಾಕಿ ಉಳಿಸಿಕೊಂಡ ಕಾಂಗ್ರೆಸ್‌: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

    ನಾಳೆ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೊತೆ ಈ ಎಲ್ಲಾ ನಾಯಕರು ಪ್ರಮಾಣವಚನ ಸ್ವೀಕರಿಸುವರು

    Vidhana Soudha

    ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸಾರ್ವತ್ರಿಕ ವರ್ಗಾವಣೆ ಅವಧಿ ಜೂನ್ 30ರವರೆಗೆ ವಿಸ್ತರಣೆ

  • Bengaluru Focus

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

    ಬ್ರ್ಯಾಂಡ್ ಬೆಂಗಳೂರು ಸಾಕಾರ: ಜಾಗತಿಕ ‘ಜಲ-ನಾವೀನ್ಯತಾ’ ಕೇಂದ್ರವಾಗಿ ಹೊರಹೊಮ್ಮಲಿದೆ ಸಿಲಿಕಾನ್ ಸಿಟಿ

    ​ನಮ್ಮ ಮೆಟ್ರೋ ಹಳದಿ ಮಾರ್ಗದಿಂದ ಬೆಂಗಳೂರಿಗರ ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆ: ಐಐಎಸ್ಸಿ (IISc) ಅಧ್ಯಯನದ ವರದಿ ಬಹಿರಂಗ

    ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್

    ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

BW Special | ಬೆಂಗಳೂರು ಕಸ ವಿಲೇವಾರಿ ಟೆಂಡರ್ ಅಕ್ರಮ ಆರೋಪ: ತನಿಖೆಗೆ 4 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

ಬಿಎಸ್‌ಡಬ್ಲ್ಯುಎಂಎಲ್‌ನ 33 ಪ್ಯಾಕೇಜ್‌ಗಳ ಟೆಂಡರ್‌ನಲ್ಲಿ ಭಾರೀ ಅವ್ಯವಹಾರ ಆರೋಪ; ಅಂಜುಂ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚನೆ, 7 ದಿನಗಳಲ್ಲಿ ವರದಿ ನೀಡಲು ಸೂಚನೆ.

by Bengaluru Wire Desk
June 6, 2026
in Others
Reading Time: 1 min read
0

ಬೆಂಗಳೂರು, ಜೂ.06 www.bengaluruwire.com: ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ನಗರವು ಇತ್ತೀಚೆಗೆ ‘ಗಾರ್ಬೇಜ್ ಸಿಟಿ’ (ಕಸದ ನಗರಿ) ಯಾಗಿ ಮಾರ್ಪಡುತ್ತಿದ್ದು, ನಗರದ ಘನತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಭಾರೀ ಅವ್ಯವಹಾರದ ಆರೋಪದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರವು ನಾಲ್ವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. 

ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರ ನೇತೃತ್ವದಲ್ಲಿ ಈ ಸಮಿತಿಯನ್ನು ರಚಿಸಿ ಸರ್ಕಾರ ಜೂನ್ 4 ರಂದು ಅಧಿಕೃತ ಆದೇಶ ಹೊರಡಿಸಿದೆ.

ವಿಪಕ್ಷ ನಾಯಕರ ಗಂಭೀರ ಆರೋಪ:

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (BSWML) ವತಿಯಿಂದ ಕರೆಯಲಾಗಿದ್ದ 33 ಪ್ಯಾಕೇಜ್‌ಗಳ ಟೆಂಡರ್‌ನಲ್ಲಿ ಕನಿಷ್ಠ ಅರ್ಹತೆ ಇಲ್ಲದ ಗುತ್ತಿಗೆದಾರರನ್ನು ತಾಂತ್ರಿಕ ಸಮಿತಿಯು ಕಾನೂನುಬಾಹಿರವಾಗಿ ಅರ್ಹಗೊಳಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಅನುಭವದ ಕೊರತೆ, ಹಣಕಾಸು ದಾಖಲೆಗಳ ಲೋಪ ಹಾಗೂ ತಾಂತ್ರಿಕ ಸಾಮರ್ಥ್ಯವಿಲ್ಲದ ಕಂಪನಿಗಳಿಗೆ ಮಣೆ ಹಾಕಲಾಗಿದೆ ಎಂದು ಅವರು ದೂರಿದ್ದರು. ಅಲ್ಲದೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಲೋಕಾಯುಕ್ತ ತನಿಖೆ ಮುಗಿಯುವವರೆಗೆ ಟೆಂಡರ್ ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

ಸರ್ಕಾರ ನಾಲ್ವರು ಅಧಿಕಾರಿಗಳ ಉನ್ನತ ಮಟ್ಟದ ಸಮಿತಿ ರಚಿಸಿ ಆದೇಶಿಸಿದ ದಾಖಲೆ ಪ್ರತಿ.

ಮೇ.08ರಂದು ಬೆಂಗಳೂರು ವೈರ್ ಈ ಕುರಿತಂತೆ “BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ” ಎಂಬ ಶೀರ್ಷಿಕೆಯಡಿ ಎಕ್ಸ್ ಕ್ಲೀಸಿವ್ ಸುದ್ದಿ ಪ್ರಕಟಿಸಿತ್ತು.

ಮಾಧ್ಯಮಗಳ ವರದಿ ಹಾಗೂ ಸರ್ಕಾರದ ಎಚ್ಚರಿಕೆ:

ಬೆಂಗಳೂರಿನಲ್ಲಿ ಕಸದ ಅವೈಜ್ಞಾನಿಕ ನಿರ್ವಹಣೆ ಹಾಗೂ ಘನತ್ಯಾಜ್ಯ ವಿಲೇವಾರಿಯಲ್ಲಿನ ಅಕ್ರಮಗಳ ಬಗ್ಗೆ ಮಾಧ್ಯಮಗಳಲ್ಲಿಯೂ ಸಾಲು ಸಾಲಾಗಿ ವರದಿಗಳು ಪ್ರಕಟವಾಗಿದ್ದವು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರವು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆಯಲಾಗಿರುವ ಟೆಂಡರ್‌ಗಳ ಸಮಗ್ರ ಪರಿಶೀಲನೆಗೆ ಮುಂದಾಗಿದೆ.

ಸಮಿತಿಯ ರಚನೆ ಮತ್ತು ಜವಾಬ್ದಾರಿ:

ಸರ್ಕಾರದ ಆದೇಶದ (ಸಂಖ್ಯೆ: ನಅಇ 335 ಎಂಎನ್‌ವೈ 2026 (ಇ), ದಿನಾಂಕ: 04-06-2026) ಪ್ರಕಾರ, ಸಮಿತಿಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಅಂಜುಂ ಪರ್ವೇಜ್ ಅವರನ್ನು ನೇಮಿಸಲಾಗಿದೆ. ಉಳಿದಂತೆ ಸಮಿತಿಯ ಇತರ ಸದಸ್ಯರು ಹೀಗಿದ್ದಾರೆ:

 * ಡಾ. ಪಿ.ಸಿ. ಜಾಫರ್ (ಸರ್ಕಾರದ ಕಾರ್ಯದರ್ಶಿ, ಆರ್ಥಿಕ ಇಲಾಖೆ) – ಸದಸ್ಯರು.

 * ಮುಖ್ಯ ಅಭಿಯಂತರರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಸದಸ್ಯರು.

 * ಶ್ರೀ ಎಂ. ಮಹೇಶ್ವರ ರಾವ್ (ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ) – ಸದಸ್ಯ ಕಾರ್ಯದರ್ಶಿ.

ವರದಿ ನೀಡಲು 7 ದಿನಗಳ ಗಡುವು:

ಈ ಸಮಿತಿಯು ಆರ್ಥಿಕ ಇಲಾಖೆ ತಿಳಿಸಿರುವ ಎಲ್ಲಾ ಅಂಶಗಳನ್ನು ಒಳಗೊಂಡಂತೆ ಟೆಂಡರ್ ಪ್ರಸ್ತಾವನೆಯನ್ನು ಸಮಗ್ರವಾಗಿ ಪರಿಶೀಲಿಸಿ 7 ದಿನಗಳ ಒಳಗಾಗಿ ಸರ್ಕಾರಕ್ಕೆ (ನಗರಾಭಿವೃದ್ಧಿ ಇಲಾಖೆಗೆ) ವರದಿಯನ್ನು ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಸಮಿತಿಗೆ ಅಗತ್ಯವಿರುವ ಎಲ್ಲಾ ರೀತಿಯ ಆಡಳಿತಾತ್ಮಕ ನೆರವು, ಮಾಹಿತಿ ಹಾಗೂ ದಾಖಲೆಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಸಂಸ್ಥೆಯು ಒದಗಿಸಬೇಕೆಂದು ಸೂಚಿಸಲಾಗಿದೆ.

ಲೋಕಾಯುಕ್ತರಿಂದ ಬಿಎಸ್ ಡಬ್ಲ್ಯುಎಂಎಲ್ ಗೆ ಕ್ಲಾಸ್:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸೂಕ್ತ ರೀತಿಯಲ್ಲಿ ನಿರ್ವಹಿಸದೇ ಇರುವುದರಿಂದ ದಿನದಿಂದ ದಿನಕ್ಕೆ ಬ್ಲಾಕ್ ಸ್ಪಾಟ್‌ಗಳು ಹೆಚ್ಚಾಗುತ್ತಿರುವ ಬಗ್ಗೆ ಲೋಕಾಯುಕ್ತ ಸಂಸ್ಥೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಶುಕ್ರವಾರವಷ್ಟೇ (ಜೂ.05) ಲೋಕಾಯುಕ್ತರು ಖುದ್ದಾಗಿ ನಗರದಲ್ಲಿ ಸಂಚರಿಸಿ ಕಸದ ಬ್ಲಾಕ್ ಸ್ಪಾಟ್ ಗಳನ್ನು ಗುರ್ತಿಸಿ ಬಿಎಸ್ ಡಬ್ಲ್ಯುಎಂಎಲ್ ಹಾಗೂ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

WhatsApp Join our WhatsApp Channel
Previous Post

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

Please login to join discussion

Like Us on Facebook

Follow Us on Twitter

Recent News

BW Special | ಬೆಂಗಳೂರು ಕಸ ವಿಲೇವಾರಿ ಟೆಂಡರ್ ಅಕ್ರಮ ಆರೋಪ: ತನಿಖೆಗೆ 4 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

June 6, 2026

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

June 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Special | ಬೆಂಗಳೂರು ಕಸ ವಿಲೇವಾರಿ ಟೆಂಡರ್ ಅಕ್ರಮ ಆರೋಪ: ತನಿಖೆಗೆ 4 ಸದಸ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

June 6, 2026

BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

June 6, 2026

ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

June 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group