Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

ಜ್ಞಾನಭಾರತಿ ವೃತ್ತದಿಂದ ದೀಪಾಂಜಲಿನಗರ ವೃತ್ತದವರೆಗಿನ 3 ಕಿ.ಮೀ ರಸ್ತೆ ಸಂಪೂರ್ಣ ಹಾಳಾಗಿದ್ದು, ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಪ್ರಾಣ ಭಯದಲ್ಲಿಯೇ ಸಂಚರಿಸುವಂತಾಗಿದೆ.

by Bengaluru Wire Desk
August 7, 2026
in Bengaluru Focus, BW Special, Public interest
Reading Time: 1 min read
0

​ಬೆಂಗಳೂರು, ಆ.07 www.bengaluruwire.com: ಪಶ್ಚಿಮ ದಿಕ್ಕಿನಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರವೇಶ ಕಲ್ಪಿಸುವ ಪ್ರಮುಖ ದ್ವಾರವೇ ಮೈಸೂರು ರಸ್ತೆ. ಆದರೆ, ಈ ರಸ್ತೆಯಲ್ಲಿ ಒಮ್ಮೆ ಸಂಚರಿಸಿದರೆ ಸಾಕು, ವಾಹನ ಸವಾರರ ಮೂಳೆಗಳು ಸಡಿಲವಾಗುವುದು ಗ್ಯಾರಂಟಿ. 

ಜ್ಞಾನಭಾರತಿ ವೃತ್ತದಿಂದ ದೀಪಾಂಜಲಿನಗರ ವೃತ್ತದ ತನಕದ ಸುಮಾರು ಮೂರು ಕಿಲೋಮೀಟರ್ ರಸ್ತೆಯ ಸ್ಥಿತಿ ಈಗ ಶೋಚನೀಯವಾಗಿದ್ದು, ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಕನ್ನಡಿಯಂತಿದೆ.

​ವಾಹನ ದಟ್ಟಣೆಯ (Peak Hour) ಅವಧಿಯಲ್ಲಿ ಪ್ರತಿ ಗಂಟೆಗೆ ಬರೋಬ್ಬರಿ 50,000 ವಾಹನಗಳು ಸಂಚರಿಸುವ ಈ ಮಹತ್ವದ ರಸ್ತೆಗೆ ಡಾಂಬರ್ ಭಾಗ್ಯ ಕರುಣಿಸಲು ಪಾಲಿಕೆಯ ಅಧಿಕಾರಿಗಳಿಗೆ ಸಮಯವಿಲ್ಲದಂತಾಗಿದೆ. ದಿನನಿತ್ಯ ಸಾವಿರಾರು ಭಾರೀ ವಾಹನಗಳು ಓಡಾಡುವ ಈ ರಸ್ತೆಯ ಮೇಲ್ಪದರ ಸಂಪೂರ್ಣ ಕಿತ್ತುಹೋಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಇದು ಅಕ್ಷರಶಃ ಮರಣಮೃದಂಗ ಬಾರಿಸುತ್ತಿದೆ.

​ಬಾಟಲ್ ನೆಕ್ ಆಗಿರುವ ಜ್ಞಾನಭಾರತಿ ಸೇತುವೆ:

​ಜ್ಞಾನಭಾರತಿ ವೃತ್ತದ ಬಳಿಯಿರುವ ರಾಜಕಾಲುವೆ ಸೇತುವೆ ಅತ್ಯಂತ ಹಳೆಯದಾಗಿದ್ದು, ಕಿರಿದಾಗಿದೆ. ಇದೇ ಈ ಭಾಗದ ಪ್ರಮುಖ ‘ಬಾಟಲ್ ನೆಕ್’ (Bottleneck). ವಾರಾಂತ್ಯ ಹಾಗೂ ಪೀಕ್ ಅವರ್ ಟ್ರಾಫಿಕ್‌ನಲ್ಲಿ ರಾಜರಾಜೇಶ್ವರಿ ಕಮಾನಿನಿಂದ ಜ್ಞಾನಭಾರತಿ ವೃತ್ತ ದಾಟಲು ಬರೋಬ್ಬರಿ 10ರಿಂದ 15 ನಿಮಿಷ ಬೇಕಾಗುತ್ತಿದೆ. ಇಲ್ಲಿ ರಸ್ತೆಯ ಮೇಲ್ಪದರ ಎದ್ದುಹೋಗಿರುವುದು ವಾಹನಗಳ ಆಮೆಗತಿಗೆ ಪ್ರಮುಖ ಕಾರಣ.

​ಅಪಘಾತಗಳಿಗೆ ಆಹ್ವಾನ ನೀಡುತ್ತಿರುವ ರಸ್ತೆಗುಂಡಿಗಳು:

​ರಾಜರಾಜೇಶ್ವರಿ ಕಮಾನಿನಿಂದ ನಾಯಂಡಹಳ್ಳಿ ಮೇಲ್ಸೇತುವೆ ಕಡೆಗೆ ಸಾಗುವ ಮಾರ್ಗದಲ್ಲಿ ಯಮಸ್ವರೂಪಿ ರಸ್ತೆಗುಂಡಿಗಳು ಬಾಯ್ತೆರೆದುಕೊಂಡಿವೆ. ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಪರಸ್ಪರ ಡಿಕ್ಕಿಯಾಗಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ ಎಂಬುದು ಸ್ಥಳೀಯರ ಆಕ್ರೋಶದ ನುಡಿ. ಸವಾರರ ಪ್ರಾಣ ಹೋದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳಲಿದೆಯೇ ಎಂಬುದು ಸಾರ್ವಜನಿಕರ ಪ್ರಶ್ನೆ.

​ಕಾಟಾಚಾರದ ಅಭಿವೃದ್ಧಿ, ಗುತ್ತಿಗೆದಾರನ ಹಠ:

​ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಭಾಗವಾಗಿರುವ ‘ಬಿ-ಸ್ಮೈಲ್’ (B-SMILE) ಸಂಸ್ಥೆಯು, ಬಿಎಚ್‌ಇಎಲ್‌ನಿಂದ ನಾಯಂಡಹಳ್ಳಿ ಫ್ಲೈಓವರ್ ಶುರುವಾಗುವ ತನಕದ ರಸ್ತೆಯನ್ನು ‘ಹೈಡೆನ್ಸಿಟಿ ಕಾರಿಡಾರ್’ ಎಂಬ ಕಾರಣಕ್ಕೆ ಸ್ವಲ್ಪ ಭಾಗ ಮಾತ್ರ ಅಭಿವೃದ್ಧಿಪಡಿಸಿ ಕೈತೊಳೆದುಕೊಂಡಿದೆ. ನಾಯಂಡಹಳ್ಳಿ ಬಳಿ ಫ್ಲೈಓವರ್ ಮೇಲೆ ಮಾತ್ರ ಎರಡೂ ಬದಿ ಡಾಂಬರೀಕರಣ ಮಾಡಲಾಗಿದ್ದು, ಉಳಿದ ಕಡೆಗಳಲ್ಲಿ ರಸ್ತೆಗೆ ಡಾಂಬರ್ ಬಿದ್ದು ಹಲವು ವರ್ಷಗಳೇ ಕಳೆದಿವೆ. ‘ಬಿ-ಸ್ಮೈಲ್’ ಹಾಗೂ ಪಶ್ಚಿಮ ಪಾಲಿಕೆ ನಡುವಿನ ಸಂಯೋಜನೆ ಕೊರತೆಯಿಂದ ರಸ್ತೆ ಮತ್ತಷ್ಟು ಹಾಳಾಗಿ ವಾಹನ ಸವಾರರ ಮುಖದಲ್ಲಿ “ಸ್ಮೈಲ್” ಇಲ್ಲದಂತಾಗಿದೆ.

​ಪಾಲಿಕೆಯ ಉನ್ನತ ಮೂಲಗಳ ಪ್ರಕಾರ, ಕಳೆದ ವರ್ಷವೇ ಈ ರಸ್ತೆ ಅಭಿವೃದ್ಧಿಗೆ ಗುತ್ತಿಗೆದಾರನಿಗೆ ಕಾರ್ಯಾದೇಶ (Work Order) ನೀಡಲಾಗಿತ್ತು. ಆದರೆ ಆತ ಕಾಮಗಾರಿ ಆರಂಭಿಸಲಿಲ್ಲ. ಈಗ ಕಚ್ಚಾವಸ್ತುಗಳ ದರ ಏರಿಕೆಯಾಗಿದ್ದು, ಪ್ರಸ್ತುತ ಮಾರುಕಟ್ಟೆ ದರದಂತೆ ಹಣ ನೀಡಿದರೆ ಮಾತ್ರ ಕೆಲಸ ಮಾಡುವುದಾಗಿ ಗುತ್ತಿಗೆದಾರ ಪಟ್ಟು ಹಿಡಿದಿದ್ದಾನೆ. ಗುತ್ತಿಗೆದಾರನ ಹಠ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ನಡುವೆ ಸಾರ್ವಜನಿಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಪಶ್ಚಿಮ ನಗರ ಪಾಲಿಕೆ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ.

ಊರೆಲ್ಲಾ ಪರಿಶೀಲನೆ ನಡೆಸುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡರಿಗಾಗಲಿ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಥವಾ ಅದೇ ರಸ್ತೆಯಲ್ಲಿ ಪ್ರತಿದಿನ ಓಡಾಡುವ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಕೆ.ವಿ.ರಾಜೇಂದ್ರ ಅವರಿಗಾಗಲಿ ಈ ದುಸ್ಥಿತಿ ಬಗ್ಗೆ ಕ್ರಮ ಕೈಗೊಳ್ಳಲು ಪುರುಸೊತ್ತು ಸಿಕ್ಕಿಲ್ಲ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಅವೈಜ್ಞಾನಿಕ ವಿನ್ಯಾಸ, ವಿಐಪಿಗಳ ಜಾಣಕುರುಡು:

​ಇನ್ನು ದೀಪಾಂಜಲಿನಗರ ಸರ್ಕಲ್ ಬಳಿ ನೈಸ್ ರಸ್ತೆಯಿಂದ ಬರುವ ವಾಹನಗಳು ಮೈಸೂರು ರಸ್ತೆಗೆ ಸೇರುವ ಜಾಗದಲ್ಲಿ ರಸ್ತೆ ವಿನ್ಯಾಸ ಅತ್ಯಂತ ಅವೈಜ್ಞಾನಿಕವಾಗಿದೆ. ದಟ್ಟಣೆ ಅವಧಿಯಲ್ಲಿ ಈ ಸ್ಥಳವೂ ಟ್ರಾಫಿಕ್ ಜಾಮ್‌ಗೆ ಕಾರಣವಾಗುತ್ತಿದೆ.

​ಇದೇ ರಸ್ತೆಯಲ್ಲಿ ಪ್ರತಿನಿತ್ಯ ಹಲವಾರು ವಿಐಪಿಗಳು, ಜನಪ್ರತಿನಿಧಿಗಳು ಐಷಾರಾಮಿ ಕಾರುಗಳಲ್ಲಿ ಸಂಚರಿಸುತ್ತಾರೆ. ಆದರೆ, ಜನಸಾಮಾನ್ಯರು ಅನುಭವಿಸುತ್ತಿರುವ ಈ ನರಕಯಾತನೆ ಅವರ ಕಣ್ಣಿಗೆ ಕಾಣದಿರುವುದು ಮಾತ್ರ ಪ್ರಜಾಪ್ರಭುತ್ವದ ವಿಪರ್ಯಾಸ. ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮೇಲೆಯೇ ಪಶ್ಚಿಮ ನಗರ ಪಾಲಿಕೆಗೆ ಹಿಡಿತವಿಲ್ಲದಿರುವುದು ಆಡಳಿತದ ವೈಫಲ್ಯವನ್ನು ಎತ್ತಿತೋರಿಸುತ್ತಿದೆ. ಇನ್ನಾದರೂ ಅಧಿಕಾರಿಗಳು ಎಸಿ ರೂಮ್‌ನಿಂದ ಹೊರಬಂದು, ರಸ್ತೆಗಿಳಿದು ವಾಸ್ತವ ಅರಿಯಬೇಕಿದೆ.

WhatsApp Join our WhatsApp Channel
Previous Post

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group