Monday, June 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

    ಸಾಂದರ್ಭಿಕ ಚಿತ್ರ

    ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

    SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

  • Bengaluru Focus

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

    GBA Head Office Image

    ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

    ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

    ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕಾರ, ಆಹ್ವಾನ ನೀಡಿದ ರಾಜ್ಯಪಾಲರು

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

    ಸಾಂದರ್ಭಿಕ ಚಿತ್ರ

    ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ: ಅಕುಶಲದಿಂದ ಅತಿಕುಶಲ ಕಾರ್ಮಿಕರಿಗೆ ಬಂಪರ್

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    2015ರ ನಂತರದ ಅರಣ್ಯ ಭೂಮಿ ಒತ್ತುವರಿ ಸಂಪೂರ್ಣ ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

    SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ; ಅರ್ಹತೆ, ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ

    ಆಪಲ್ ಐಫೋನ್ ಬಳಕೆದಾರರ ಮೇಲೆ ಸೈಬರ್ ಖದೀಮರ ಕಣ್ಣು: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

  • Bengaluru Focus

    Defence News | ಕರ್ನಾಟಕ-ಕೇರಳ ಸಬ್‌ ಏರಿಯಾ ನೂತನ ಜಿಒಸಿಯಾಗಿ ಮೇ.ಜ. ಭರತ್ ಮೆಹತಾನಿ ಅಧಿಕಾರ ಸ್ವೀಕಾರ

    ಶಾರದಾ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ರವೀಂದರ್ ಪಂಡಿತ ಅವರಿಗೆ ಮೈಸೂರಿನಲ್ಲಿ ಪ್ರತಿಷ್ಠಿತ ‘ಧರ್ಮ ಬಂಧು’ ಪ್ರಶಸ್ತಿ ಪ್ರದಾನ

    ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

    “ರಾಜ್ಯ ರಾಜಕಾರಣದಲ್ಲೇ ನನ್ನ ಕೊನೆ ಉಸಿರು”: ಸಿಎಂ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಮಹತ್ವದ ಘೋಷಣೆ

    GBA News | ಶ್ರೀರಾಮಪುರ ರೆಫರಲ್ ಆಸ್ಪತ್ರೆಯ ಹೆರಿಗೆ ಸೇವೆ ಮಹಾಲಕ್ಷ್ಮೀಪುರಂ ಆಸ್ಪತ್ರೆಗೆ ತಾತ್ಕಾಲಿಕ ಸ್ಥಳಾಂತರ

    GBA Head Office Image

    ಇ-ಖಾತಾ ವ್ಯವಸ್ಥೆ ಬಗ್ಗೆ ಅಪಪ್ರಚಾರ: ಅಕ್ರಮದಾರರ ಲಾಬಿಗೆ ಬ್ರೇಕ್ ಹಾಕಿದ ಡಿಜಿಟಲೀಕರಣ – ಮುನೀಶ್ ಮೌದ್ಗಿಲ್

    ಅನಾಥ ವಾಹನಗಳ ನಿಲುಗಡೆಗೆ ಜಾಗ ಅಂತಿಮಗೊಳಿಸಿ: ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    ಯಶವಂತಪುರ ರೈಲು ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: 66 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

    ಬೆಂಗಳೂರು: ಮೇ 31ರೊಳಗೆ ರೈಲ್ವೆ ವೆಂಟ್ ಕಾಮಗಾರಿ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ; ಮಳೆಗಾಲದ ಸಿದ್ಧತೆ ಚುರುಕು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಆಸಕ್ತಿ ತೋರಿದ ಸಿಎಂ ಬಿ.ಎಸ್.ವೈ

by Bengaluru Wire Desk
June 28, 2021
in News Wire
Reading Time: 1 min read
0

ಬೆಂಗಳೂರು ( www.bengaluruwire.com ) : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಅಧಿಕಾರಿಗಳು, ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ, ಸಿದ್ದು ಹಲಸು ತಳಿಯ ಸಸಿಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ ಸೋಮವಾರ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಿರುವುದು ಶ್ಲಾಘನೀಯ ಎಂದರು.

ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು. 

ಸಿದ್ದು ಹಲಸಿನ ತಳಿಯ ಚಿತ್ರ

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ರಾಜ್ಯವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಅವರು ಆಸಕ್ತಿ ತೋರಿದರು.

ಸಿದ್ದು ಹಲಸಿನ ವೈಶಿಷ್ಟ್ಯತೆಯೇನು?

ಭಾರತದಲ್ಲಿ ಸುಮಾರು 137 ಅಧಿಕ ತಳಿಯ ಹಲಸಿನ ಮರಗಳಿವೆ ಎನ್ನಲಾಗಿದೆ. ಆ ಪೈಕಿ ಸಿದ್ದು ಹಲಸಿನ ಹಣ್ಣುಗಳನ್ನ ಹಲಸಿನ ರಾಜ ಎಂದು ಕರೆಯಲಾಗುತ್ತದೆ, ಯಾಕಂದರೆ ಅದು ಅಷ್ಟು ಶ್ರೇಷ್ಠ ಹಲಸಿನ ಹಣ್ಣು.

ನಾಲ್ಕು ವರ್ಷಗಳ ಹಿಂದೆ ಸಿದ್ದು ಹಲಸಿನ ಹಣ್ಣನ್ನ ಪ್ರಯೋಗಕ್ಕೆ ಒಳಪಡಿಸಿದಾಗ ಅದರಲ್ಲಿ ಲಿಕೋಪಿನ್ ಹೆಚ್ಚಾಗಿರುವುದು ಗಮನಕ್ಕೆ ಬಂತು. 100 ಗ್ರಾಂ ಸಿದ್ದು ಹಲಸಿನ ಹಣ್ಣಿನಲ್ಲಿ 2 ಎಂ.ಜಿ. ಲಿಕೋಪಿನ್ ಇದೆ. ಆದರೆ ಬೇರೆ ತಳಿಗಳಲ್ಲಿ 0.2 ಮಾತ್ರ ಇರುತ್ತದೆ. ಇನ್ನು ಲಿಕೋಪಿನ್ ಅಂಶ ಹೃದಯ ಸಂಬಂದಿ ಖಾಯಿಲೆಗಳಿಗೆ ರಾಮಬಾಣವಾಗಿ ಕೆಲಸವನ್ನ ಮಾಡುತ್ತದೆ ಎಂದು ಹೇಳುತ್ತಾರೆ ಎಸ್.ಎಸ್.ಪರಮೇಶ್.

ದೇಹಕ್ಕೆ ಅತಿ ಅವಶ್ಯಕವಾದ ಆ್ಯಂಟಿ ಆಕ್ಸಿಡೆಂಟ್‌ಗಳು ಈ ಹಲಸಿನಲ್ಲಿ ಯಥೇಚ್ಛವಾಗಿವೆ ಎಂದು ವಿಜ್ಞಾನಿಗಳು ಗುರುತಿಸಿದ್ದಾರೆ. ಪರಮೇಶ್ವರ್ ಅವರ ತಂದೆ 35 ವರ್ಷಗಳ ಹಿಂದೆ ಈ ಹಲಸಿನ ಗಿಡವನ್ನು ನೆಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಿ.ಹೆಚ್.ಇಎಸ್ . ಮುಖ್ಯಸ್ಥ . ಜಿ.ಕರುಣಾಕರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

Next Post

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ...!

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

Please login to join discussion

Like Us on Facebook

Follow Us on Twitter

Recent News

ಐಪಿಎಲ್ 2026: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು; ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ

June 1, 2026

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

May 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಐಪಿಎಲ್ 2026: ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು; ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಜಯ

June 1, 2026

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

May 31, 2026

ಬೋಟ್‌ನಲ್ಲಿ ನಿಂತು ದ್ವೀಪ ದಿಟ್ಟಿಸುತ್ತಿರುವ ದರ್ಶನ್: ಪತಿಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ

May 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group