Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಸವನಗುಡಿಯ ದೊಡ್ಡಗಣೇಶನಿಗೆ ಸೆ.21ರಂದು 11,664 ಸಂಖ್ಯೆಯಲ್ಲಿ 108 ಬಗೆಯ ತಿನಿಸುಗಳ ನೈವೇದ್ಯ….!

ಕೋವಿಡ್ ಮಾಹಮಾರಿ ಸೋಂಕು ನಿರ್ಮೂಲನೆ- ಜಾಗತಿಕ ಶಾಂತಿಗಾಗಿ ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕೇಂದ್ರದಿಂದ ವಿಘ್ನನಿವಾರಕನಿಗೆ ನೈವೇದ್ಯ ಸಮರ್ಪಣೆ ಕಾರ್ಯಕ್ರಮ | ಬೆಂಗಳೂರಿನ ಕನ್ನಡದ ರಾಮ- ಲಕ್ಷ್ಮಣರಿಗೆ ಕನ್ನಡವೇ ಕಾಯಕ

by Bengaluru Wire Desk
September 20, 2021
in Bengaluru Focus
Reading Time: 1 min read
0

ಬೆಂಗಳೂರು, ಸೆ.20 (www.bengaluruwire.com) : ಕೋವಿಡ್ ಮಹಾಮಾರಿ ಸೋಂಕು ನಿರ್ಮೂಲನೆ ಹಾಗೂ ಜಾಗತಿಕ ಶಾಂತಿಗಾಗಿ ಪ್ರಾರ್ಥಿಸಿ ನಗರದ ಬಸವನಗುಡಿಯ ದೊಡ್ಡಗಣೇಶನಿಗೆ ಮಂಗಳವಾರ 108 ಬಗೆಯ ನೈವೇದ್ಯವನ್ನು (ಪ್ರತಿ ಪದಾರ್ಥವು 108 ಸಂಖ್ಯೆಯಲ್ಲಿದ್ದು) ಒಟ್ಟು 11,664 ಪದಾರ್ಥಗಳು ಶ್ರೀದೇವರಿಗೆ ಸಮರ್ಪಿಸಲಾಗುತ್ತಿದೆ.

ಚಾಮರಾಜಪೇಟೆಯ ಕನ್ನಡ ಸಾಂಸ್ಕೃತಿಕ ಕೇಂದ್ರವು 108 ಬಗೆಯ ತಿನಿಸುಗಳ ನೈವೇದ್ಯ ಹಾಗೂ ವಿವಿಧ ಬಗೆಯ ಹಣ್ಣುಗಳನ್ನು ವಿಘ್ನನಿವಾರಕನಿಗೆ ಸೆಂ.21ರಂದು ಸಂಜೆ 6 ಗಂಟೆಗೆ ಸಮರ್ಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಯತಿಶ್ರೇಷ್ಠರು, ಸ್ವಾಮೀಜಿಗಳು, ಮಂತ್ರಿಗಳು ಹಾಗೂ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

ನಾಡಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ, ರಾಜ್ಯದ ಜನತೆ ಸಂಕಷ್ಠಕ್ಕೆ ಸಿಲುಕಿದಾಗ, ಭಾರತ ಕ್ರಿಕೆಟ್ ನಿರ್ಣಾಯಕ ಪಂದ್ಯ ಆಡುವಾಗ ಹೀಗೆ ನಾನಾ ಸಂದರ್ಭದಲ್ಲಿ ಚಾಮರಾಜಪೇಟೆಯ ಕನ್ನಡ ಸಾಂಸ್ಕೃತಿಕ ಕೇಂದ್ರವು ಸಮಾಜದ ಉನ್ನತಿಗಾಗಿ ಒಂದಿಲ್ಲೊಂದು ಸಮಾಜಮುಖಿ ಕಾರ್ಯವನ್ನು ಕೈಗೊಳ್ಳುತ್ತಾ ಬಂದಿದೆ. ಡಾ.ಕೆ.ವಿ.ರಾಮಚಂದ್ರ ಹಾಗೂ ಅವರ ಸಹೋದರರಾದ ಅಶ್ವಥ್ ಅವರುಗಳು ಹಲವು ವರ್ಷಗಳಿಂದ ಕನ್ನಡದ ತಿಂಡಿಕೇಂದ್ರದ ಮೂಲಕ ಹಸಿದವರಿಗೆ, ಬಡವರಿಗೆ ಅತಿ ಕಡಿಮೆ ಬೆಲೆಯಲ್ಲಿ ಹೊಟ್ಟೆ ತುಂಬುವಷ್ಟು ಊಟ- ತಿಂಡಿ ವಿತರಿಸುತ್ತಾ ಬಂದಿದೆ.

ಚಾಮರಾಜಪೇಟೆಯ ಕನ್ನಡದ ತಿಂಡಿ ಕೇಂದ್ರ

“ಕನ್ನಡ ನಾಡಿಗಾಗಿ, ಕನ್ನಡ ಭಾಷೆಗಾಗಿ ಏನಾದರೂ ಮಾಡಬೇಕೆಂಬ ತುಡಿತ ಸಹಜವಾಗಿ ನಮ್ಮ ಸಹೋದರರಲ್ಲಿತ್ತು. ಹಾಗಾಗಿ ಕಡಿಮೆ ಬೆಲೆಯಲ್ಲಿ ಕನ್ನಡ ತಿಂಡಿ ಕೇಂದ್ರದ ಮೂಲಕ ಗುಣಮಟ್ಟದ ಆಹಾರ ವಿತರಿಸುತ್ತಾ ಬಂದಿದ್ದೇವೆ. ಅದೇ ರೀತಿ ಕನ್ನಡಕ್ಕೆ ಕುತ್ತು ಬಂದಾಗಲೆಲ್ಲಾ ಈ ಎರಡೂ ಸಂಸ್ಥೆಗಳ ಮೂಲಕ ಕನ್ನಡಗರೊಂದಿಗೆ, ಕನ್ನಡದ ವಿವಿಧ ಸಂಘಟನೆಗಳೊಂದಿಗೆ ಸೇರಿ ಹೋರಾಟ ಮಾಡಿದ್ದೇವೆ. ನಾಡಿನ ಜನರ ಏಳ್ಗೆಯಾಗಬೇಕು, ಕನ್ನಡ ಭಾಷೆ ಬೆಳೆಯಬೇಕು ಎಂಬುದು ನಮ್ಮ ಉದ್ದೇಶವಷ್ಟೆ. ಕೋವಿಡ್ ಸೋಂಕಿನ ನಿವಾರಣೆ ಹಾಗೂ ಜಾಗತಿಕ ಶಾಂತಿಗಾಗಿ ಬಸವನಗುಡಿಯ ದೊಡ್ಡಗಣೇಶನಿಗೆ 108 ಬಗೆಯ ನೈವೇದ್ಯ ಹಾಗೂ ಹಣ್ಣುಗಳನ್ನು ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.”

– ಡಾ.ಕೆ.ವಿರಾಮಚಂದ್ರ, ಸಂಸ್ಥಾಪಕರು, ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕೇಂದ್ರ ಹಾಗೂ ಕನ್ನಡ ತಿಂಡಿ ಕೇಂದ್ರ

ಕೋವಿಡ್ ಸಂಕಷ್ಠ ಕಾಲದಲ್ಲೂ ಆಟೋ ಚಾಲಕರು, ಕೂಲಿ ಕಾರ್ಮಿಕರು, ಕೊಳಚೆ ನಿವಾಸಿಗಳು, ಭಿಕ್ಷುಕರು ಹೀಗೆ ಸಾವಿರಾರು ಮಂದಿಗೆ ಉಚಿತ ಊಟ- ತಿಂಡಿ ಪೊಟ್ಟಣಗಳನ್ನು ವಿತರಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಜೊತೆಗೆ ಬಿಬಿಎಂಪಿ ಸಹಯೋಗದಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮ, ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದ್ದಾರೆ.

“ಸಮಾಜಮುಖಿ ಸೇವೆ ಮಾಡುವುದರಲ್ಲೇ ನಮಗೊಂಥರಾ ಆತ್ಮತೃಪ್ತಿ ಹಾಗೂ ನೆಮ್ಮಿದಿಯಿದೆ. ಬೆಲೆ ಏರಿಕೆಯ ದಿನಗಳಲ್ಲೂ ಬಡವರಿಗೆ ಕಡಿಮೆ ಬೆಲೆಯಲ್ಲಿ ಊಟ- ತಿಂಡಿ ನೀಡುವುದು ನಮಗೆ ಸಾಮಾಜಿಕ ಕರ್ತವ್ಯ ನೆರವೇರಿಸುತ್ತಿದ್ದೇವೆ ಎಂಬ ಹೆಮ್ಮೆಯನ್ನು ಹೆಚ್ಚಿಸುತ್ತದೆ. ಕನ್ನಡ ನಾಡಿನ ಗಣ್ಯರೆಲ್ಲರೂ ಕನ್ನಡ ತಿಂಡಿ ಕೇಂದ್ರಕ್ಕೆ ಭೇಟಿಕೊಟ್ಟು ಇಲ್ಲಿನ ಕೆಲಸ ಕಾರ್ಯಗಳ ಬಗ್ಗೆ ನಾಲ್ಕು ಒಳ್ಳೆ ಮಾತನಾಡಿದ್ದಾರೆ. ಇದು ನಮ್ಮ ಕೆಲಸಕ್ಕೆ ಮತ್ತಷ್ಟು ಸ್ಪೂರ್ತಿ ಕೊಟ್ಟಿದೆ.”

– ಅಶ್ವಥ್, ಸಂಸ್ಥಾಪಕರು, ಚಾಮರಾಜಪೇಟೆ ಕನ್ನಡ ಸಾಂಸ್ಕೃತಿಕ ಕೇಂದ್ರ ಹಾಗೂ ಕನ್ನಡ ತಿಂಡಿ ಕೇಂದ್ರ

ಚಾಮರಾಜಪೇಟೆಯಂತಹ ನಗರದ ಅತಿ ಹಳೆಯ ಪ್ರದೇಶದಲ್ಲಿ ಕನ್ನಡ ಕಂಪನ್ನು ಸಾರುತ್ತಾ, ಇದೇ ವೇಳೆ ಬೆಂಗಳೂರಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ತಿಂಡಿಕೇಂದ್ರ ಹಾಗೂ ಕನ್ನಡ ಸಾಂಸ್ಕೃತಿಕ ಕೇಂದ್ರವು ಕನ್ನಡಿಗರ ಸಾಕ್ಷಿಪ್ರಜ್ಞೆಯಂತೆ ಕೆಲಸ ಮಾಡುತ್ತಾ ಬಂದಿದೆ. ಕನ್ನಡದ ಕವಿಗಳ ಚಿತ್ರಗಳು ಕನ್ನಡ ತಿಂಡಿ ಕೇಂದ್ರದ ತುಂಬಾ ನಿರಂತರವಾಗಿ ರಾರಾಜಿಸುತ್ತಿರುತ್ತೆ. ಪ್ರಮುಖ ಕವಿಗಳ ಹುಟ್ಟುಹಬ್ಬವನ್ನು ನಾಡಹಬ್ಬದಂತೆ ಆಚರಿಸುವುದು ಇಲ್ಲಿನ ವಾಡಿಕೆ.

ಈ ಎರಡೂ ಕೇಂದ್ರಗಳ ಮೂಲಕ ಡಾ.ಕೆ.ವಿ.ರಾಮಚಂದ್ರ ಹಾಗೂ ಅಶ್ವಥ್ ಮಾಡುತ್ತಿರುವ ನಿಸ್ವಾರ್ಥ ಸಮಾಜ ಸೇವೆಗೆ ನಾಡಿನ ಪ್ರಮುಖ ಸಂಘ ಸಂಸ್ಥೆಗಳು, ಗಣ್ಯರು ಶ್ಲಾಘನೆ ವ್ಯಕ್ತಪಡಿಸುತ್ತಾ, ಸದಾ ಬೆಂಬಲ ನೀಡುತ್ತಾ ಬಂದಿದ್ದಾರೆ.

WhatsApp Join our WhatsApp Channel
Previous Post

MP Sadananda Gowda Morphed Video | ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ : ಸಂಸದ ಸದಾನಂದಗೌಡ ಸ್ಪಷ್ಟನೆ

Next Post

KSRTC NEWS | ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಐದು ಪ್ರಶಸ್ತಿಗಳಿಗೆ ಪಾತ್ರವಾದ ಕೆಎಸ್ ಆರ್ ಟಿಸಿ

Next Post
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

KSRTC NEWS | ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಐದು ಪ್ರಶಸ್ತಿಗಳಿಗೆ ಪಾತ್ರವಾದ ಕೆಎಸ್ ಆರ್ ಟಿಸಿ

NAMMA METRO 2ND PHASE TUNNEL | ಭೂಮಿಯಡಿಯ ಮೆಟ್ರೊ ಸುರಂಗಮಾರ್ಗದಿಂದ ಹೊರಬರಲಿದೆ ಊರ್ಜಾ ಟಿಬಿಎಮ್ ಯಂತ್ರ....!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group