Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Military Drone | ಸಾಮೂಹಿಕ ಡ್ರೋಣ್ ದಾಳಿಗೆ ಶತ್ರು ನೆಲೆ ನಾಶ…!!

ಯಲಹಂಕ ವಾಯುನೆಲೆಯಲ್ಲಿ ನಡೆಯಿತು ದೇಶೀಯ ಅತ್ಯಾಧುನಿಕ ಸಮರ ತಂತ್ರಜ್ಞಾನದ ಪ್ರಾಯೋಗಿಕ ಪ್ರದರ್ಶನ

by Bengaluru Wire Desk
October 25, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) : ಡ್ರೋಣ್ ಗಳು ಗುಂಪಾಗಿ ಆಗಸಕ್ಕೇರಿ ಶತ್ರುಪಾಳೇಯದ ಮೇಲೆ ನಿಖರವಾಗಿ ದಾಳಿ ನಡೆಸಿ, ವೈರಿ ನೆಲೆ ಧ್ವಂಸಗೊಳಿಸುವ ನೂತನ ದೇಶೀಯ ಸಮರ ತಂತ್ರಜ್ಞಾನದ ಪ್ರಾಯೋಗಿಕ ಪ್ರದರ್ಶನ ಭಾರತೀಯ ವಾಯುಪಡೆ (ಐಎಎಫ್)ಗೆ ಸೇರಿದ ಯಲಹಂಕ ವಾಯುನೆಲೆಯಲ್ಲಿ ಭಾನುವಾರ ಪ್ರದರ್ಶಿತವಾಯಿತು.

ಯುದ್ಧದ ಸಂದರ್ಭದಲ್ಲಿ ಸಾಮೂಹಿಕವಾಗಿ ಡ್ರೋಣ್ ಗಳಿಂದ ವೈಮಾನಿಕ ದಾಳಿ ನಡೆಸುವ ರೀತಿಗೆ ಪರ್ಯಾಯವಾಗಿ ಅಥವಾ ಪೂರಕವಾಗಿ ಬಳಸುವ ಮುಂದಿನ ತಲೆಮಾರಿನ ಅತ್ಯಾಧುನಿಕ ತಂತ್ರಜ್ಞಾನ ಬಳಕೆಗೆ ಸಿದ್ಧವಾಗಿದೆ.

ವಾಯುಪಡೆ ನಡೆಸಿದ ‘ಮೆಹರ್ ಬಾಬಾ ಸ್ವಾರ್ಮ್ ಡ್ರೋಣ್ ಸ್ಪರ್ಧೆ’ಯಲ್ಲಿ ಪಾಲ್ಗೊಂಡಿದ್ದ ತಂಡಗಳು ಈ ರೀತಿಯ ಆಧುನಿಕ ಸಮರ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದವು. 2018 ಅಕ್ಟೋಬರ್ ನಲ್ಲಿ ಆರಂಭವಾಗಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 154 ತಂಡಗಳು ಅರ್ಜಿ ಸಲ್ಲಿಸಿದ್ದವು. 57 ತಂಡಗಳು ಮೊದಲ ಸುತ್ತು ಪ್ರವೇಶಿಸಿದ್ದರೆ, ಕೇವಲ 20 ಟೀಮ್ ಗಳು ಎರಡನೇ ಸುತ್ತು ಪ್ರವೇಶಿಸಲು ಅರ್ಹತೆ ಪಡೆದುಕೊಂಡಿದ್ದವು.

ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಡ್ರೋಣ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸುತ್ತಿರುವುದು.

ಅಂತಿಮವಾಗಿ ಸಾಮೂಹಿಕ ಡ್ರೋಣ್ ದಾಳಿಯ ತಂತ್ರಜ್ಞಾನ ಅಭಿವೃದ್ಧಿಪಡಿಸಿದ 4 ತಂಡಗಳನ್ನು ಆಯ್ಕೆ ಮಾಡಲಾಗಿತ್ತು. ಆ ಪೈಕಿ ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯ ಮತ್ತು ದಕ್ಷ ಅನ್ ಮ್ಯಾನ್ಡ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಜಂಟಿಯಾಗಿ ರೂಪಿಸಿರುವ ಸಾಮೂಹಿಕ ಡ್ರೋಣ್ ದಾಳಿಯ ಪ್ರಾಯೋಗಿಕ ಪ್ರದರ್ಶನ ‘ಸ್ವರ್ಣಿಮ ವಿಜಯ ವರ್ಷ’ ಸಮಾರೋಪದ ಬಳಿಕ ಯಶಸ್ವಿಯಾಗಿ ನಡೆಯಿತು.

ಸಾಮೂಹಿಕ ದ್ರೋಣ್ ದಾಳಿಯ ಸಮರ ಹೇಗೆ ನಡೆಯಿತು?

ನಿಗಧಿತ ಸ್ಥಳದ ಕಣ್ಗಾವಲಿಗೆಂದು ಮೊದಲಿಗೆ ಡ್ರೋಣ್ ಒಂದು ಆಕಾಶದಲ್ಲಿ ಹಾರಾಟ ನಡೆಸುತ್ತೆ. ತನ್ನ ಸುತ್ತಮುತ್ತಲಿನ ಪ್ರದೇಶದ ಮಾಹಿತಿ ಸಂಗ್ರಹಿಸಿ, ವೈರಿ ಇರುವಿಕೆಯನ್ನು ಖಚಿತಪಡಿಸಿಕೊಂಡ ಬಳಿಕ ಆ ಮಾಹಿತಿಯನ್ನು ಇತರ ಡ್ರೋಣ್ ಗಳ ಸಮೂಹಕ್ಕೆ ರವಾನಿಸುತ್ತದೆ. ಕ್ಷಣಮಾತ್ರದಲ್ಲಿ 6 ದೊಡ್ಡ ಗಾತ್ರದ ‘ಯೋಧ’ ಡ್ರೋಣ್ ಗಳು ಹಾಗೂ 4 ಸಣ್ಣ ಗಾತ್ರದ ‘ಘಾತಕ್’ ಡ್ರೋಣ್ ಗಳು ಆಕಾಶಕ್ಕೆ ಹಾರಿದವು.

ಕೆಲ ಸಮಯ ಶತ್ರುವಿನ ಸುತ್ತ ಮೇಲಿಂದ ಹಾರಾಟ ನಡೆಸಿದ ‘ಯೋಧ’ ಡ್ರೋಣ್ ಗಳು ತನ್ನೊಳಗೆ ಅಳವಡಿಸಿದ್ದ ಬಾಂಬ್ ಗಳನ್ನು ಹಾಕಿದವು. ಇದೇ ಹೊತ್ತಿನಲ್ಲಿ ಸಣ್ಣ ಗಾತ್ರದ ‘ಘಾತಕ್’ ಡ್ರೋಣ್ ಗಳು ವೈರಿ ನೆಲೆಯತ್ತ ನುಗ್ಗಿ ತಮ್ಮನ್ನೇ ಸ್ವತಃ ಸ್ಪೋಟಿಸಿಕೊಂಡವು. ಇದರಿಂದಾಗಿ ವೈರಿ ನೆಲೆಯು ಸಂಪೂರ್ಣ ಭಸ್ಮವಾಯಿತು. ಈ ರೀತಿ ಸಾಮಾಹಿಕ ಡ್ರೋಣ್ ದಾಳಿ ಮೂಲಕ ಮೂರು ಟಾರ್ಗೆಟ್ ಗಳನ್ನು ಯಶಸ್ವಿಯಾಗಿ ಸ್ಪೋಟಿಸಲಾಯಿತು.

ವಾಯುನೆಲೆಯಲ್ಲಿ ಪ್ರದರ್ಶಿತವಾದ ಸಾಮೂಹಿಕ ಡ್ರೊಇಣ್ ದಾಳಿಯಲ್ಲಿ ಬಳಸಿದ ಮೂರು ವಿಧದ ಡ್ರೋಣ್ ಗಳು ಪರಸ್ಪರ ಸಂಪರ್ಕ ಕಲ್ಪಿಸಿದ್ದು, ಅವುಗಳು ಆಯಾ ಸಂದರ್ಭದಲ್ಲಿ ಒಂದಕ್ಕೊಂದು ಮಾಹಿತಿ ಹಂಚಿಕೆ ಮಾಡಿಕೊಂಡು ಮುಂದಿನ ನಡೆಯ ಬಗ್ಗೆ ನಿರ್ದೇಶನ ಮಾಡುತ್ತಲೇ ತಮ್ಮ ಕಾರ್ಯಾಚರಣೆ ಕೈಗೊಂಡವು. ಯಾವ ಹಂತದಲ್ಲೂ ನಿಗಧಿತ ವೈರಿ ನೆಲೆಯ ಟಾರ್ಗೆಟ್ ತಪ್ಪದಂತೆ ಕೃತಕ ಬುದ್ಧಿಮತ್ತೆ ಆಧರಿಸಿ ಈ ತಂತ್ರಜ್ಞಾನ ವನ್ನು ಅಭಿವೃದ್ಧಿಪಡಿಸಲಾಗಿತ್ತು.

ಸಾಮೂಹಿಕ ಡ್ರೋಣ್ ದಾಳಿ ಸಂದರ್ಭದಲ್ಲಿ ಈ ಮಾನವರಹಿತ ಪುಟ್ಟ ಡ್ರೋಣ್ ಗಳು ಅಕ್ಕಪಕ್ಕವೇ ಹಾರುತ್ತಿದ್ದರೂ ಒಂದಕ್ಕೊಂದು ಡಿಕ್ಕಿ ಹೊಡೆಯದ ರೀತಿ ರೂಪಿಸಲಾಗಿದೆ. ಇಷ್ಟೆಲ್ಲ ಸಾಮೂಹಿಕ ಡ್ರೋಣ್ ದಾಳಿಯನ್ನು ದೂರದ ನಿಯಂತ್ರಣ ಕೇಂದ್ರದಲ್ಲಿ ಕುಳಿತು ಸರಾಗವಾಗಿ ನಿಯಂತ್ರಿಸಲಾಗಿತ್ತು.

ಯುದ್ಧ ಸಂದರ್ಭದಲ್ಲಿ ಆಗಸದಿಂದ ಯುದ್ಧ ವಿಮಾನಗಳು ನೆಲಮಟ್ಟದಲ್ಲಿನ ವೈರಿ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿ ಶತ್ರುಗಳನ್ನು ಸಂಹರಿಸುವುದು ಸಾಮಾನ್ಯ. ಆದರೆ ಭಾನುವಾರ ಯಲಹಂಕ ವಾಯುನೆಲೆಯಲ್ಲಿ ಇದಕ್ಕೆ ವಿಭಿನ್ನವಾದಂತೆ ಸ್ಪೋಟಕಗಳನ್ನು ಹೊತ್ತ ಡ್ರೋಣ್ ಗಳ ಮೂಲಕ ಶತ್ರು ಪಾಳೇಯದ ಮೇಲೆ ದಾಳಿ ನಡೆಸಿದ ದೇಶೀಯವಾದ ಅತ್ಯಾಧುನಿಕ ಸಮರ ತಂತ್ರಜ್ಞಾನದ ಪ್ರಯೋಗ ಭವಿಷ್ಯದ ಯುದ್ಧದ ರೀತಿಗಳಿಗೆ ಸಾಕ್ಷಿಯಂತಿತ್ತು.

ಈ ಯಶಸ್ವಿ ಪ್ರದರ್ಶನವನ್ನು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಹಾಗೂ ಹಲವು ಹಿರಿಯ ಅಧಿಕಾರಿಗಳು ವೀಕ್ಷಿಸಿ ದೇಶಿಯವಾಗಿ ಅಭಿವೃದ್ಧಿಪಡಿಸಿದ ಹೊಸ ಯುದ್ಧ ತಂತ್ರಜ್ಞಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

‘ಮೆಹರ್ ಬಾಬಾ ಸ್ವಾರ್ಮ್ ಡ್ರೋನ್ ಸ್ಪರ್ಧೆ’ ನಾಲ್ಕು ತಂಡಗಳಿಗೆ ಪ್ರಶಸ್ತಿ :

• ಅತ್ಯುತ್ತಮ ಗುಂಪು ವಿನ್ಯಾಸ – ಬೆಂಗಳೂರಿನ ನ್ಯೂಸ್ಪೇಸ್ ರಿಸರ್ಚ್ ಟೆಕ್ನಾಲಜೀಸ್ ಪ್ರೈ.ಲಿ.
• ಅತ್ಯುತ್ತಮ ಸಂವಹನ ವಿನ್ಯಾಸ – ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಪ್ಲೇರ್ ಅನ್ ಮ್ಯಾನ್ಡ್ ಸಿಸ್ಟಮ್ ಪ್ರೈ. ಲಿ.
• ಅತ್ಯುತ್ತಮ ಡ್ರೋಣ್ ವಿನ್ಯಾಸ – ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯ ಮತ್ತು ದಕ್ಷ ಅನ್ ಮ್ಯಾನ್ಡ್ ಸಿಸ್ಟಮ್ಸ್ ಪ್ರೈ. ಲಿ.
• ಅತ್ಯುತ್ತಮ ಅವಿಷ್ಕಾರ ವಿನ್ಯಾಸ – ನೋಯ್ಡಾದ ವೇದಾ ಡಿಫೆನ್ಸ್ ಸಿಸ್ಟಮ್ಸ್ ಪ್ರೈ. ಲಿ.

WhatsApp Join our WhatsApp Channel
Previous Post

‘ಕನ್ನಡಕ್ಕಾಗಿ ನಾವು’ ಅಭಿಯಾನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

Next Post

Clinic Seizures | ಆಯುರ್ವೇದ ವೈದ್ಯರಿಂದ ಅಕ್ರಮವಾಗಿ ಗರ್ಭಪಾತ – ಜಿಲ್ಲಾಡಳಿತದಿಂದ ನಾರಾಯಣ ಹೆಲ್ತ್ ಕೇರ್ ಕ್ಲಿನಿಕ್ ಸೀಜ್

Next Post

Clinic Seizures | ಆಯುರ್ವೇದ ವೈದ್ಯರಿಂದ ಅಕ್ರಮವಾಗಿ ಗರ್ಭಪಾತ - ಜಿಲ್ಲಾಡಳಿತದಿಂದ ನಾರಾಯಣ ಹೆಲ್ತ್ ಕೇರ್ ಕ್ಲಿನಿಕ್ ಸೀಜ್

ಬಿಬಿಎಂಪಿಯು ಕಂಠೀರವ ಸ್ಟೇಡಿಯಂನಷ್ಟು ದೊಡ್ಡದಾದ ರಸ್ತೆಗುಂಡಿ ಮುಚ್ಚಿದೆಯಂತೆ !!

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group