Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Puneeth Rajkumar Death Mystery | ಪುನೀತ್ ಸಾವಿಗೆ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವಾಯ್ತಾ!!?

ಪುನೀತ್ ಸಾಯುವ 2 ದಿನ ಮುನ್ನ ಪಾಲ್ಗೊಂಡ ಸ್ನೇಹಕೂಟಗಳಲ್ಲಿ Slow Poision ಆಗಿರುವ ಸಾಧ್ಯತೆ ಬಗ್ಗೆ ತನಿಖೆಗೆ ಆಗ್ರಹ | ಡಾ.ರಮಣರಾವ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು | ಪುನೀತ್ ಗೆ ಚಿಕಿತ್ಸೆ ನೀಡಿದ ವೈದ್ಯರ ನೆರವಿಗೆ ಧಾವಿಸಿದ ಫನಾ - ಮುಖ್ಯಮಂತ್ರಿಗಳಿಗೆ ಪತ್ರ | ವೈದ್ಯರಿಗೆ ಪೊಲೀಸ್ ರಕ್ಷಣೆ |

by Bengaluru Wire Desk
November 7, 2021
in BW Special, News Wire
Reading Time: 2 mins read
2
ಪುನೀತ್ ರಾಜಕುಮಾರ್ ಸಾಂದರ್ಭಿಕ ಚಿತ್ರ

ಪುನೀತ್ ರಾಜಕುಮಾರ್ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಸಾವಿನ ಬಗ್ಗೆ ದಿನಕ್ಕೊಂದು ತಿರುವುಗಳು ಪಡೆಯುತ್ತಿರುವ ಹೊತ್ತಿನಲ್ಲಿ ಅಪ್ಪು ಸಾಯುವ ಎರಡು ದಿನಗಳ ಹಿಂದೆ ಸ್ನೇಹಕೂಟಗಳಲ್ಲಿ ಭಾಗವಹಿಸಿ ಅಲ್ಲಿ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವು ಸಂಭವಿಸಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಈ ಸಂಬಂಧ ದೂರು ದಾಖಲಾಗಿದೆ.

“ನಟ ಪುನೀತ್ ರಾಜ್ ಕುಮಾರ್ ಅ.29ರಂದು ಸಂಭವಿಸಿದ ಸಾವು ಅಸಹಜ ಹಾಗೂ ಎರಡು ದಿನಗಳ ಮುನ್ನ ಬರ್ತಡೆ ಪಾರ್ಟಿ ಸೇರಿದಂತೆ ಸ್ನೇಹಕೂಟಗಳಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಸೇವಿಸಿದ ಊಟ- ನೀರಿನಿಂದ Slow Poision (ನಿಧಾನಗತಿಯ ವಿಷ) ಸಂಭವಿಸಿರುವ ಕುರಿತಂತೆ ಸತ್ಯಾಸತ್ಯೆಗಳ ಬಗ್ಗೆ ತನಿಖೆ ನಡೆಸಿ ನಾಡಿನ ಜನತೆಗೆ ಸತ್ಯ ಏನೆಂಬುದನ್ನು ತಿಳಿಸಿ” ಎಂದು ಕನ್ನಡ ಅನುಷ್ಠಾನ ಮಂಡಳಿಯ ಅಧ್ಯಕ್ಷ ಹಾಗೂ ಕನ್ನಡ ಜನಪರ ಚಿಂತಕ ಡಾ.ಆರ್.ಎ.ಪ್ರಸಾದ್ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ನಾಡಜನರ ಪರವಾಗಿ ಕಾನೂನಾತ್ಮಕ ದೂರು ತುರ್ತು ದಾಖಲಿಸಿ ನಾಡಿಗೆ ನಿಜ ತಿಳಿಸುವಂತೆ ದೂರರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪುನೀತ್ ರಾಜಕುಮಾರ್ ಅವರಿಗೆ ತುರ್ತು ಹೃದಯಾಘಾತವಾಗುವ ಸೂಚನೆ ಕಂಡರೂ ವೈದ್ಯ ಡಾ.ರಮಣರಾವ್ ವೈದ್ಯ ವೃತ್ತಿಯಲ್ಲಿ ಕರ್ತವ್ಯ ಲೋಪ ಎಸಗಿದ್ದು ಪುನೀತ್ ರಾಜಕುಮಾರ್ ಅಸಹಜ ಸಾವಿಗೆ ಕಾರಣರಾಗಿರುವ ಡಾ.ರಮಣರಾವ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಸಹ ದೂರಿನಲ್ಲಿ ಡಾ.ಆರ್.ಎ.ಪ್ರಸಾದ್ ತಿಳಿಸಿದ್ದಾರೆ.

ಈ ದೂರಿನ ಪ್ರತಿಯು ಬೆಂಗಳೂರು ವೈರ್ ಗೆ ಲಭಿಸಿದ್ದು, ಆ ದೂರಿನಲ್ಲಿ “ದಿನಾಂಕ 29-10-2021 ರಂದು ಬೆಳಗ್ಗೆ 11ರ ನಂತರ ಸದಾಶಿವನಗರದ 13ನೇ ಮೈನ್, ನಂ.94/H, ರಾಜಮಹಲ್ ವಿಲಾಸ ಬಡಾವಣೆ, ಅರಮನೆ ನಗರ, ಸದಾಶಿವನಗರ, ಬೆಂಗಳೂರು ಇಲ್ಲಿಗೆ ನಟ ಪುನೀತ್ ರಾಜಕುಮಾರ್, ಡಾ.ರಮಣರಾವ್ ಕ್ಲಿನಿಕ್ ಗೆ ಪ್ರಥಮವಾಗಿ ಭೇಟಿಕೊಟ್ಟಿದ್ದರು. ಅಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಕ್ಕೆ ತುರ್ತು ಆಘಾತವಾಗಿದ್ದು, ಈ ವಿಷಯ ತಿಳಿದೂ ಡಾ.ರಮಣರಾವ್ ಪ್ರತ್ಯೇಕವಾಗಿ ಹೃದಯದ ಆರೈಕೆ ಘಟಕದ ಸೌಲಭ್ಯವಿರುವ ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸದೆ, ಕನ್ಸಲ್ಟೆಂಟ್ ಡಾಕ್ಟರ್ ಗಳಿರುವ ಹೃದಯ ಸಂಬಂಧಿ ಆರೈಕೆಗೆ ಪ್ರತ್ಯೇಕ ವಿಭಾಗವಿರದ ವಿಕ್ರಮ್ ಆಸ್ಪತ್ರೆಗೆ ಏಕೆ ಕಳುಹಿಸಿದರು? “

“ಹೃದಯ ಸಂಬಂಧಿ ತುರ್ತು ವಿಚಾರ ಬಂದಾಗ ಹತ್ತಿರದ ಆಸಪತ್ರೆಗೆ ಕಳುಹಿಸುವ ವೈದ್ಯಕೀಯ ಪ್ರಜ್ಞೆ ಪ್ರದರ್ಶಿಸಿ ಕರ್ತವ್ಯ ನಿರ್ವಹಸಿದೆ ಡಾ.ರಮಣರಾವ್ ನಿರ್ಲಕ್ಷ್ಯ ತಾಳಿದರು. ಇದರಿಂದಾಗಿ ನಟ ಪುನೀತ್ ರಾಜಕುಮಾರ್ ಪ್ರಾಣಹೋಗಲು ಕಾರಣಕರ್ತರಾಗಿದ್ದಾರೆ.”

ಸದಾಶಿವನಗರ ಪೊಲೀಸ್ ಠಾಣೆಗೆ ಕಾರ್ಯಕರ್ತರೊಂದಿಗೆ ತೆರಳಿ ದೂರು ನೀಡಿದ ಕನ್ನಡ ಅನುಷ್ಠಾನ ಮಂಡಳಿ ಅಧ್ಯಕ್ಷ ಡಾ.ಆರ್.ಎ.ಪ್ರಸಾದ್ (ಎಡದಿಂದ ಎರಡನೆಯವರು)

“ಈ ಎಲ್ಲಾ ಹಿನ್ನಲೆ ನೋಡಿದಾಗ ಪುನೀತ್ ರಾಜ್ ಕುಮಾರ್ 2 ದಿನಗಳಿಂದ ತಡರಾತ್ರಿ ಸ್ನೇಹಕೂಟಗಳಲ್ಲಿ ಭಾಗವಹಿಸಿದ್ದರು. ಅದರಲ್ಲೂ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲಿ ಅಥವಾ ಬೇರೆಡೆ ಊಟ- ತಿಂಡಿ, ನೀರು ಕುಡಿದು ಆರೋಗ್ಯದಲ್ಲಿ ನಿಧಾನ ವಿಷಾಹಾರ (Slow Poison) ಆಗಿ ತುರ್ತು ವೈದ್ಯಕೀಯ ಘಟನೆ ಆಗಿರುವ ಸಾಧ್ಯತೆಗಳಿದೆ. ಒಟ್ಟಾರೆ ಈ ಎಲ್ಲಾ ಘಟನೆಗಳ ಸತ್ಯಾಸತ್ಯತೆ ಹೊರಬರಬೇಕಾಗಿದೆ. ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಿ, ನಾಡಿಗೆ ಬೇಕಾಗಿದ್ದ ಒಬ್ಬ ಹೃದಯಸ್ಪರ್ಶಿ ವ್ಯಕ್ತಿಯ ಸಾವಿನ ಬಗ್ಗೆ ರಹಸ್ಯಗಳು ಉಳಿಯಬಾರದು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ.”

“ಈ ಹಿನ್ನಲೆಯಲ್ಲಿ ಈ ಬಗೆಗಿನ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಲು ಈ ದೂರನ್ನು ನಾಡಿನ ಜನತೆಯ ಪರವಾಗಿ ನೀಡಲಾಗಿದೆ” ಎಂದು ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಅವರು ತಿಳಿಸಿದ್ದಾರೆ.

ಪುನೀತ್ ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಪೊಲೀಸ್ ರಕ್ಷಣೆ :

ಇನ್ನೊಂದೆಡೆ ಪುನೀತ್ ರಾಜ್ ಕುಮಾರ್ ಸಾಯುವ ಮುನ್ನ ವೈದ್ಯಕೀಯ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಳಿಬರುತ್ತಿರುವ ಆರೋಪ ಹಾಗೂ ಅಪ್ಪು ಅಭಿಮಾನಿಗಳ ಆಕ್ರೋಶದ ಹಿನ್ನಲೆಯಲ್ಲಿ, ಈ ವೈದ್ಯರ ನೆರವಿಗೆ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಸಂಘಟನೆ (ಫನಾ) ಧಾವಿಸಿದ್ದು, ಇವರುಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಕೋರಿದ್ದು, ಅದರಂತೆ ಬೆಂಗಳೂರು ನಗರ ಪೊಲೀಸರು ಡಾ.ರಮಣರಾವ್ ಹಾಗೂ ಪುನೀತ್ ಗೆ ಚಿಕಿತ್ಸೆ ನೀಡಿದ ಇತರ ವೈದ್ಯರಿಗೆ ಭದ್ರತೆ ಒದಗಿಸಿದ್ದಾಗಿ ತಿಳಿಸಿದ್ದಾರೆ.

ವೈದ್ಯರ ನೆರವಿಗೆ ಧಾವಿಸಿದ ಫನಾ – ಮುಖ್ಯಮಂತ್ರಿಗಳಿಗೆ ಪತ್ರ :

ಫನಾ ಸಂಘಟನೆಯು ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಪ್ರತಿ

ಫನಾ ಸಂಘಟನೆಯ ಅಧ್ಯಕ್ಷ ಡಾ.ಎಚ್.ಎಂ.ಪ್ರಸನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನ.6ರಂದು ಪತ್ರ ಬರೆದಿದ್ದು, ಪುನೀತ್ ರಾಜ್ ಕುಮಾರ್ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಸಾರ್ವಜನಿಕರು, ದೃಶ್ಯ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುತ್ತಿರುವ ಆರೋಪಗಳು ಸಮಾಜದಲ್ಲಿ ವೈದ್ಯರ ಮೇಲೆ ಅಪನಂಬಿಕೆ ಮೂಡಲು ಕಾರಣವಾಗುತ್ತಿದೆ. ಅಲ್ಲದೆ ಪುನೀತ್ ಗೆ ಚಿಕಿತ್ಸೆ ನೀಡಿದ ವೈದ್ಯರ ಜೀವಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ನಟ ಪುನೀತ್ ಅಭಿಮಾನಿಗಳು ಹಾಗೂ ಹಿತೈಷಿಗಳು ಪುನೀತ್ ಆರೋಗ್ಯದ ಬಗ್ಗೆ ನಡೆಸುತ್ತಿರುವ ಚರ್ಚೆಗಳು ವೈದ್ಯಕೀಯ ಆರೈಕೆ ಕುರಿತಂತೆ ವೈಯುಕ್ತಿಕ ವ್ಯಕ್ತಿ ಅಥವಾ ಆತನ ಕುಟುಂಬದ ಖಾಸಗಿತನದ ಉಲ್ಲಂಘನೆ ಮಾಡಿದಂತಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಪುನೀತ್ ಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಆಸ್ಪತ್ರೆಯ ಮೇಲೆ ಎಫ್ ಐಆರ್ ಅಥವಾ ದೂರು ದಾಖಲಿಸುವ ಪ್ರಯತ್ನಗಳು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಹಾಗೂ ಕಾನೂನು ವ್ಯಾಪ್ತಿಯಲ್ಲಿ ನಡೆಯಬೇಕಿದೆ. ಅಪ್ಪು ಅಭಿಮಾನಿಗಳು ಹಾಗೂ ಅಥವಾ ಅವರ ಕುಟುಂಬದವರು ಕಾನೂನು ಪಾಲಿಸುವ ಸಂಸ್ಥೆಗಳ ಮೇಲೆ ಒತ್ತಡ ಹೇರುವ ಅಥವಾ ಸಾರ್ವಜನಿಕ ಅಶಾಂತಿ ಮೂಡಿಸುವ ವಿಚಾರದಲ್ಲಿ ನೀವು ಮಧ್ಯಸ್ಥಿಕೆ ವಹಿಸಬೇಕು. ಇದೇ ಸಂದರ್ಭದಲ್ಲಿ ಸಾರ್ವಜನಿಕರು ಪುನೀತ್ ಗೆ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಅದರಲ್ಲೂ ತಮ್ಮ ಕೈಲಾದ ಮಟ್ಟಿಗೆ ಚಿಕಿತ್ಸೆ ನೀಡಿದ ಡಾ.ರಮಣರಾವ್ ಮೇಲೆ ಆರೋಪ ಮಾಡುತ್ತಿರುವುದನ್ನು ಫನಾ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ” ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

“ವೈದ್ಯಕೀಯ ವೃತ್ತಿಯಲ್ಲೂ ಕೆಲವೊಂದು ಮಿತಿಗಳಿವೆ ಹಾಗೂ ಯಾವಾಗಲೂ ಜೀವವನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಒಂದೊಮ್ಮೆ ಯಾವಾಗಲೂ ಜೀವ ಉಳಿಸಲು ಸಾಧ್ಯವಾಗಿದ್ದರೆ ಯಾರೂ ಸಾಯುತ್ತಿರಲಿಲ್ಲ. ಹೀಗಾಗಿ ಈ ನಿಟ್ಟಿನಲ್ಲಿ ತಾವು ಸಾರ್ವಜನಿಕವಾಗಿ ಹೇಳಿಕೆ ನೀಡಿದರೆ ವೈದ್ಯ ಸಮೂಹದ ನೈತಿಕತೆ ಹೆಚ್ಚಾಗಲಿದೆ.” ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

Next Post

Auto Fare Hike | ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ದರದಲ್ಲಿ ಏರಿಕೆ – ಡಿ.1 ನೂತನ ಪರಿಷ್ಕೃತ ದರ ಜಾರಿ

Next Post

Auto Fare Hike | ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ದರದಲ್ಲಿ ಏರಿಕೆ - ಡಿ.1 ನೂತನ ಪರಿಷ್ಕೃತ ದರ ಜಾರಿ

Hotel Food Rate Hike | ಹೋಟೆಲ್ ಊಟ-ತಿಂಡಿ ಬೆಲೆ ಸರಾಸರಿ ಶೇ.10ರಷ್ಟು ಏರಿಕೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group