Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mi-17 Chopper Crash News Update | Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಏರ್ ಮಾರ್ಷಲ್ ನೇತೃತ್ವದಲ್ಲಿ ತನಿಖೆ ಆರಂಭ

ತನಿಖೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ ನಲ್ಲಿ ಹೇಳಿಕೆ | ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿಗೆ ಶಿಫ್ಟ್ | ಅಪಘಾತಕ್ಕೀಡಾದ ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ಪತ್ತೆ‌ | ಯಾರಾಗಲಿದ್ದಾರೆ ದೇಶದ ಮುಂದಿನ ಸಿಡಿಎಸ್ ಹುದ್ದೆಗೇರುವ ಅಧಿಕಾರಿ? |

by Bengaluru Wire Desk
December 9, 2021
in News Wire
Reading Time: 2 mins read
0

ನವದೆಹಲಿ, (www.bengaluruwire.com) :
ತಮಿಳುನಾಡಿನ ನೀಲಗಿರಿ ಬೆಟ್ಟದ ಕೊನೂರು ಜಿಲ್ಲೆಯಲ್ಲಿ ಬುಧವಾರ ಸೇನಾ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದಾಗ ಜನರಲ್ ಬಿಪಿನ್ ರಾವತ್ ಸೇರಿ 13 ಮಂದಿ ಹೆಲಿಕಾಪ್ಟರ್ ದುರಂತದಿಂದ ದಾರುಣ ಸಾವನ್ನಪ್ಪಿರುವುದು ದೇಶದ ರಕ್ಷಣಾ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್

ಈ ದುರ್ಘಟನೆ ಕುರಿತಂತೆ ಮೂರು ಸ್ಟಾರ್ ಹೊಂದಿದ ಏರ್ ಮಾರ್ಷಲ್ ನೇತೃತ್ವದಲ್ಲಿ Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಜನರಲ್ ಬಿಪಿನ್ ರಾವತ್

ಜನರಲ್ ಬಿಪಿನ್ ರಾವತ್ ಅವರ ಅಂತ್ಯಸಂಸ್ಕಾರವನ್ನು ಸಕಲ ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುತ್ತದೆ. ಅದೇ ರೀತಿ ಉಳಿದ ಸೇನಾ ಸಿಬ್ಬಂದಿ ಅಂತ್ಯಸಂಸ್ಕಾರವನ್ನು ಸೂಕ್ತ ಮಿಲಿಟರಿ ಗೌರವ ದೊಂದಿಗೆ ಪೂರೈಸಲಾಗುವುದು ಎಂದು ಸಂಸತ್ ನಲ್ಲಿ ಸಚಿವ ರಾಜನಾಥ್ ಸಿಂಗ್ ವಿವರಿಸಿದ್ದಾರೆ.

ಹಲವು ಮಾಧ್ಯಮ ವರದಿಗಳ ಪ್ರಕಾರ ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಮೂರು ಪಡೆಗಳ ನೇತೃತ್ವವಹಿಸಿ ಬುಧವಾರದ ಹೆಲಿಕಾಪ್ಟರ್ ದುರಂತದ ತನಿಖೆ ನಡೆಸಲಿದ್ದಾರೆ ಎಂದು ಹೇಳಿವೆ. ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಪ್ರಸ್ತುತ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ ನ ಕಮಾಂಡರ್ ಹಾಗೂ ಹೆಲಿಕಾಪ್ಟರ್ ಪೈಲೆಟ್ ಕೂಡ ಆಗಿದ್ದಾರೆ.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿಗೆ ಶಿಫ್ಟ್

ಅಪಘಾತದಲ್ಲಿ ಬದುಕಿಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಶೌರ್ಯ ಚಕ್ರ ಪ್ರಶಸ್ತಿ ವಿಜೇತ ವರುಣ್ ಸಿಂಗ್ ಬುಧವಾರ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಲುಕಿದ್ದ 14 ಮಂದಿಯ ಪೈಕಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದಾರೆ.

ಅಪಘಾತಕ್ಕೀಡಾದ ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ಪತ್ತೆ‌ :

ಬುಧವಾರ ಮಧ್ಯಾಹ್ನ ವೆಲ್ಲಿಂಗ್ಟನ್ ಸೇನಾ ಕಾಲೇಜಿನತ್ತ ಹೊರಟಿದ್ದ Mi-17VH ಸೇನಾ ಹೆಲಿಕಾಪ್ಟರ್ ಹೊತ್ತಿಯುರಿದು ಜನರಲ್ ಬಿಪಿಎನ್ ರಾವತ್ ಸೇರಿದಂತೆ 13 ಮಂದಿಯು ಸಾವನ್ನಪಿದ್ದರು. ಆ ಹೆಲಿಕಾಪ್ಟರ್ ನಲ್ಲಿ ದುರಂತಕ್ಕೀಡಾದ ಸಮಯದಲ್ಲಿನ‌ ಮಹತ್ವದ ಮಾಹಿತಿ ಹೊಂದಿದ್ದ ಬ್ಲಾಕ್ ಬಾಕ್ಸ್ (ಕಪ್ಪು ಪೆಟ್ಟಿಗೆ) ಅನ್ನು ದುರಂತಕ್ಕೀಡಾದ ಸ್ಥಳದಿಂದ 300 ರಿಂದ 1 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಶೋಧ ನಡೆಸಿದಾಗ ಪತ್ತೆಯಾಗಿದೆ.

ಬ್ಲಾಕ್ ಬಾಕ್ಸ್ ನಲ್ಲಿ ಏನಿರುತ್ತದೆ?

ಸಾಂದರ್ಭಿಕ ಚಿತ್ರ

ಇದರ ಜೊತೆಗೆ ಸೇನಾ ಹೆಲಿಕಾಪ್ಟರ್ ನಲ್ಲಿನ ಫ್ಲೈಟ್ ಡಾಟಾ ರೆಕಾರ್ಡರ್ ಹಾಗೂ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ಅಪಘಾತ ಸ್ಥಳದಿಂದ ರಕ್ಷಣಾ ಇಲಾಖೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಬ್ಲಾಕ್ ಬಾಕ್ಸ್ ಅಥವಾ ಫ್ಲೈಟ್ ಡಾಟಾ ರೆಕಾರ್ಡರ್ ಎಂದು ಕರೆಯಲಾಗುವ ಎಲೆಕ್ಟ್ರಾನಿಕ್ ಸಾಧನದಲ್ಲಿ ಹೆಲಿಕಾಪ್ಟರ್ ಹಾರುವಾಗ ಇದ್ದ ಗಾಳಿಯ ವೇಗ, ಹಾರಾಟದ ಎತ್ತರ, ಕಾಕ್ ಪಿಟ್ ನಲ್ಲಿ ಪೈಲಟ್ ಸಂವಹನ, ಗಾಳಿಯ ಒತ್ತಡ ಸೇರಿದಂತೆ 88 ವಿವಿಧ ಬಗೆಯ ಅಂಕಿ- ಅಂಶಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಒಟ್ಟಾರೆ ದುರ್ಘಟನೆ ಕಾರಣ ಏನೆಂಬುದನ್ನು ತಿಳಿಸುವ ಮಹತ್ವದ ಮಾಹಿತಿಯನ್ನು ಒಳಗೊಂಡಿರುತ್ತದೆ.

ಯಾರಾಗಬಹುದು ಸಿಡಿಎಸ್ ಹುದ್ದೆಗೇರುವ ಅಧಿಕಾರಿ ?

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS)ರಾಗಿದ್ದ ಜನರಲ್ ಬಿಪಿನ್ ರಾವತ್ ನಿಧನದಿಂದ ಆ ಸ್ಥಾನವೀಗ ಖಾಲಿಯಾಗಿದೆ. ಆ ಸ್ಥಾನಕ್ಕೆ ಸೇನಾಪಡೆ, ವಾಯುಪಡೆ ಹಾಗೂ ನೌಕಾಪಡೆಯೊಂದಿಗೆ ಯಶಸ್ವಿಯಾಗಿ ಸಮನ್ವಯ ಸಾಧಿಸಬಲ್ಲ ಸರ್ವಸಮ್ಮತ ಹಿರಿಯ ಸೇನಾಧಿಕಾರಿಯೊಬ್ಬರನ್ನು ಆಯ್ಕೆ ಮಾಡುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರಕ್ಕೆ ಪ್ರಮುಖ ಸವಾಲಾಗಿದೆ.

ಮಾಧ್ಯಮಗಳಲ್ಲಿ ಉನ್ನತ ಮೂಲಗಳ ಆಧಾರದ ಮೇಲೆ ಬಂದಿರುವ ವರದಿಗಳ ಪ್ರಕಾರ ಮುಂದಿನ ಒಂದು ವಾರದಿಂದ 10 ದಿನಗಳಲ್ಲಿ ಖಾಲಿಯಿರುವ ಸಿಡಿಎಸ್ ಸ್ಥಾನಕ್ಕೆ ನೇಮಕ ಮಾಡಲು ಮೋದಿ ಸರ್ಕಾರ ಮುಂದಾಗಿದ್ದು, ಆರಂಭಿಕ ಪ್ರಕ್ರಿಯೆಗೆ ಚಾಲನೆ ದೊರೆತಿರುವುದಾಗಿ ತಿಳಿದುಬಂದಿದೆ.

ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದಾಗಿ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಅವರು ಬಿಪಿನ್ ರಾವತ್ ನಂತರ ಸದ್ಯ ಇರುವ ದೇಶದ ಅತ್ಯಂತ ಹಿರಿಯ ಮಿಲಿಟರಿ ಅಧಿಕಾರಿಯಾಗಿದ್ದಾರೆ. ಆರ್ಮಿ ವೈಸ್ ಚೀಫ್ ಲೆಫ್ಟಿನೆಂಟ್ ಜನರಲ್ ಸಿಪಿ ಮೊಹಂತಿ ಮತ್ತು ಉತ್ತರ ಸೇನೆಯ ಕಮಾಂಡರ್ ಲೆಫ್ಟಿನೆಂಟ್ ಜನರಲ್ ವೈ.ಕೆ ಜೋಶಿ ಅವರು ನಂತರದ ಸ್ಥಾನದಲ್ಲಿದ್ದಾರೆ.

2019 ರಲ್ಲಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಡಿಎಸ್ ಅನ್ನು ನೇಮಕ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು. 2020 ರ ಜನವರಿಯಲ್ಲಿ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲ ಸಿಡಿಎಸ್ ಮುಖ್ಯಸ್ಥರಾದರು. ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮ್ಮತಿ ಈ ಸ್ಥಾನದ ನೇಮಕಕ್ಕೆ ದೊರೆತಿತ್ತು. ರಕ್ಷಣಾ ಇಲಾಖೆಯ ಮೂರೂ ಪಡೆಗಳ ಮುಖ್ಯಸ್ಥರಾಗಿ ದೇಶದ ಮಹಾ ದಂಡನಾಯಕ ರಾಷ್ಟ್ರಪತಿಗಳಾಗಿರುತ್ತಾರೆ.

ರಾಷ್ಟ್ರಪತಿಗಳ ಅಂಕಿತ ದೊರೆತ ಮೇಲೆ ಜನರಲ್ ಬಿಪಿನ್ ಆಯ್ಕೆಯಾಗಿದ್ದರು. ಅವರ ಸೇವಾವಧಿ ಇದೇ ಡಿಸೆಂಬರ್ 31ಕ್ಕೆ ಮುಗಿಯುವುದಲ್ಲಿತ್ತು. ಆದರೆ ಅದಿಕ್ಕೆ ಮುಂಚೆಯೇ ವಿಧಿಯ ಕ್ರೂರದಾಟಕ್ಕೆ ಒಬ್ಬ ಮಹಾನ್ ವೀರಯೋಧ ಮೃತಪಟ್ಟಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮುಕುಂದ್ ನವರಣೆ ಅವರ ಸೇವಾವಧಿ ಏಪ್ರಿಲ್ 2022ರ ತನಕ ಇದೆ.

WhatsApp Join our WhatsApp Channel
Previous Post

BW EXCLUSIVE | Covid Death Componsation | ರಾಜ್ಯ ಸರ್ಕಾರದ ಘೋಷಣೆಗಷ್ಟೆ ಸೀಮಿತವಾಯ್ತಾ ಕೋವಿಡ್ ಸಾವಿನ ಪರಿಹಾರ?

Next Post

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Gen Bipin Rawat's Funeral | ಸಕಲ ಸೇನಾ ಗೌರವದೊಂದಿಗೆ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗೆ ಅಂತಿಮ ನಮನ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group